ವಿಂಡೀಸ್ ವಿರುದ್ಧ ಸೋತು ವಿಶ್ವಕಪ್‌ನಿಂದ ಹೊರಬಿದ್ದ ಇಂಗ್ಲೆಂಡ್‌; ಸೆಮೀಸ್​ಗೇರಿದ 4 ತಂಡಗಳು

Women’s T20 World Cup 2024: ಯುಎಇಯಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಲೀಗ್ ಹಂತ ಮುಕ್ತಾಯವಾಗಿದೆ. ಇದೀಗ ಸೆಮಿಫೈನಲ್ ಸುತ್ತು ಆರಂಭವಾಗಲಿದ್ದು, ಈ ಸುತ್ತಿಗೆ ಎ ಗುಂಪಿನಿಂದ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದರೆ, ಬಿ ಗುಂಪಿನಿಂದ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ಸೆಮೀಸ್ ಟಿಕೆಟ್ ಪಡೆದುಕೊಂಡಿವೆ.

|

Updated on: Oct 16, 2024 | 6:32 PM

ಯುಎಇಯಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಲೀಗ್ ಹಂತ ಮುಕ್ತಾಯವಾಗಿದೆ. ನಿನ್ನೆ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಲ್ಲಿ 6 ವಿಕೆಟ್​ಗಳಿಂದ ಸೋತ ಇಂಗ್ಲೆಂಡ್‌ ವನಿತಾ ಪಡೆ ಲೀಗ್ ಹಂತದಲೇ ತನ್ನ ಪ್ರಯಾಣ ಮುಗಿಸಿತು. ಇದರೊಂದಿಗೆ ಸೆಮಿ ಪೈನಲ್​ಗೆ ಟಿಕೆಟ್ ಪಡೆದುಕೊಂಡ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ.

ಯುಎಇಯಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ ಲೀಗ್ ಹಂತ ಮುಕ್ತಾಯವಾಗಿದೆ. ನಿನ್ನೆ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಲ್ಲಿ 6 ವಿಕೆಟ್​ಗಳಿಂದ ಸೋತ ಇಂಗ್ಲೆಂಡ್‌ ವನಿತಾ ಪಡೆ ಲೀಗ್ ಹಂತದಲೇ ತನ್ನ ಪ್ರಯಾಣ ಮುಗಿಸಿತು. ಇದರೊಂದಿಗೆ ಸೆಮಿ ಪೈನಲ್​ಗೆ ಟಿಕೆಟ್ ಪಡೆದುಕೊಂಡ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ.

1 / 5
ಅದರಂತೆ ಎ ಗುಂಪಿನಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದರೆ, ಬಿ ಗುಂಪಿನಿಂದ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ಸೆಮೀಸ್ ಟಿಕೆಟ್ ಪಡೆದುಕೊಂಡಿವೆ.

ಅದರಂತೆ ಎ ಗುಂಪಿನಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದರೆ, ಬಿ ಗುಂಪಿನಿಂದ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ಸೆಮೀಸ್ ಟಿಕೆಟ್ ಪಡೆದುಕೊಂಡಿವೆ.

2 / 5
ಇನ್ನು ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ಆಸ್ಟ್ರೇಲಿಯಾ ತಂಡ, ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ತಂಡವನ್ನು ಸೆಮಿಫೈನಲ್​ನಲ್ಲಿ ಎದುರಿಸಲಿದೆ. ಅದರಂತೆ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ.

ಇನ್ನು ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ಆಸ್ಟ್ರೇಲಿಯಾ ತಂಡ, ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ತಂಡವನ್ನು ಸೆಮಿಫೈನಲ್​ನಲ್ಲಿ ಎದುರಿಸಲಿದೆ. ಅದರಂತೆ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ.

3 / 5
ಹಾಗೆಯೇ ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ವೆಸ್ಟ್ ಇಂಡೀಸ್ ತಂಡ, ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 18 ರಂದು ಸಂಜೆ 6 ಗಂಟೆಗೆ ಆರಂಭವಾಗಲಿದೆ.

ಹಾಗೆಯೇ ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ವೆಸ್ಟ್ ಇಂಡೀಸ್ ತಂಡ, ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 18 ರಂದು ಸಂಜೆ 6 ಗಂಟೆಗೆ ಆರಂಭವಾಗಲಿದೆ.

4 / 5
ಈ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಗೆದ್ದ ತಂಡಗಳು ಅಕ್ಟೋಬರ್ 20 ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಈ ಪಂದ್ಯವೂ ಸಹ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಸೆಮೀಸ್​ಗೆ ಆಯ್ಕೆಯಾಗಿರುವ 4 ತಂಡಗಳೂ ಬಲಿಷ್ಠವಾಗಿರುವುದರಿಂದ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಬಹುದಾಗಿದೆ.

ಈ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಗೆದ್ದ ತಂಡಗಳು ಅಕ್ಟೋಬರ್ 20 ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಈ ಪಂದ್ಯವೂ ಸಹ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಸೆಮೀಸ್​ಗೆ ಆಯ್ಕೆಯಾಗಿರುವ 4 ತಂಡಗಳೂ ಬಲಿಷ್ಠವಾಗಿರುವುದರಿಂದ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಬಹುದಾಗಿದೆ.

5 / 5
Follow us
ಜಗಳಗಳವೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳವೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ