AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಭಾರತ- ಪಾಕ್ ವಿಶ್ವಕಪ್ ಫೈಟ್; ಹೋಟೆಲ್​ಗಳು ಭರ್ತಿ, ಆಸ್ಪತ್ರೆಗಳತ್ತ ಮುಖ ಮಾಡಿದ ಫ್ಯಾನ್ಸ್!

India vs Pakistan World Cup 2023 Clash: ಉಭಯ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

ಪೃಥ್ವಿಶಂಕರ
|

Updated on: Jul 22, 2023 | 7:55 AM

2023ರ ಏಕದಿನ ವಿಶ್ವಕಪ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಹತ್ತು ತಂಡಗಳು ಇದಕ್ಕಾಗಿ ಸಿದ್ಧತೆ ಆರಂಭಿಸಿವೆ. ಭಾರತ ಈ ವರ್ಷದ ವಿಶ್ವಕಪ್‌ನ ಆತಿಥ್ಯ ವಹಿಸಿದ್ದು, ಇದಕ್ಕಾಗಿ ಬಿಸಿಸಿಐ ಭರ್ಜರಿ ತಯಾರಿ ಕೂಡ ನಡೆಸಿದೆ.ಈ ನಡುವೆ ಅಹಮದಾಬಾದ್​ನಲ್ಲಿ ನಡೆಯಲ್ಲಿರುವ ಭಾರತ- ಪಾಕ್ ಫೈಟ್ ನೋಡಲು ಕ್ರಿಕೆಟ್ ಅಭಿಮಾನಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

2023ರ ಏಕದಿನ ವಿಶ್ವಕಪ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಹತ್ತು ತಂಡಗಳು ಇದಕ್ಕಾಗಿ ಸಿದ್ಧತೆ ಆರಂಭಿಸಿವೆ. ಭಾರತ ಈ ವರ್ಷದ ವಿಶ್ವಕಪ್‌ನ ಆತಿಥ್ಯ ವಹಿಸಿದ್ದು, ಇದಕ್ಕಾಗಿ ಬಿಸಿಸಿಐ ಭರ್ಜರಿ ತಯಾರಿ ಕೂಡ ನಡೆಸಿದೆ.ಈ ನಡುವೆ ಅಹಮದಾಬಾದ್​ನಲ್ಲಿ ನಡೆಯಲ್ಲಿರುವ ಭಾರತ- ಪಾಕ್ ಫೈಟ್ ನೋಡಲು ಕ್ರಿಕೆಟ್ ಅಭಿಮಾನಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

1 / 9
ಈಗಾಗಲೇ ನಿರ್ಧಾರವಾಗಿರುವಂತೆ ಪಂದ್ಯಗಳು ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿವೆ. ಆದ್ದರಿಂದ ಪ್ರತಿ ತಂಡವು ತನ್ನ ಗುಂಪಿನ ಇತರ ತಂಡದೆದುರು ಪರಸ್ಪರ ಪಂದ್ಯವನ್ನಾಡುತ್ತದೆ. ವಾಡಿಕೆಯಂತೆ ಈ ಬಾರಿಯೂ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಉಭಯ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

ಈಗಾಗಲೇ ನಿರ್ಧಾರವಾಗಿರುವಂತೆ ಪಂದ್ಯಗಳು ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿವೆ. ಆದ್ದರಿಂದ ಪ್ರತಿ ತಂಡವು ತನ್ನ ಗುಂಪಿನ ಇತರ ತಂಡದೆದುರು ಪರಸ್ಪರ ಪಂದ್ಯವನ್ನಾಡುತ್ತದೆ. ವಾಡಿಕೆಯಂತೆ ಈ ಬಾರಿಯೂ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಉಭಯ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

2 / 9
ಭಾರತ- ಪಾಕಿಸ್ತಾನ ನಡುವಿನ ಹದಗೆಟ್ಟ ಸಂಬಂಧದಿಂದಾಗಿ ಉಭಯ ದೇಶಗಳ ಕ್ರಿಕೆಟ್ ತಂಡಗಳು ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಉಭಯ ದೇಶಗಳ ಈ ಕಾಳಗವನ್ನು ಕಣ್ತುಂಬಿಕೊಳ್ಳಲು ಉಭಯ ದೇಶಗಳ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುತ್ತಾರೆ.

ಭಾರತ- ಪಾಕಿಸ್ತಾನ ನಡುವಿನ ಹದಗೆಟ್ಟ ಸಂಬಂಧದಿಂದಾಗಿ ಉಭಯ ದೇಶಗಳ ಕ್ರಿಕೆಟ್ ತಂಡಗಳು ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಉಭಯ ದೇಶಗಳ ಈ ಕಾಳಗವನ್ನು ಕಣ್ತುಂಬಿಕೊಳ್ಳಲು ಉಭಯ ದೇಶಗಳ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುತ್ತಾರೆ.

3 / 9
ಇದನ್ನು ಆದಾಯದ ರೂಪವಾಗಿ ಬಳಸಿಕೊಳ್ಳುವ ಐಸಿಸಿ ಹಾಗೂ ಬಿಸಿಸಿಐ ಈ ಒಂದು ಪಂದ್ಯದಿಂದಲೇ ಸಾಕಷ್ಟು ಆದಾಯ ಗಳಿಸುತ್ತವೆ. ಇದೀಗ ವಿಶ್ವಕಪ್​ನಲ್ಲಿ ಈ ಎರಡೂ ತಂಡಗಳ ಮುಖಾಮುಖಿಗಾಗಿ ಬಿಸಿಸಿಐ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನವಾದ ನರೇಂದ್ರ ಮೋದಿ ಮೈದಾನವನ್ನು ಸಜ್ಜುಗೊಳಿಸಿದೆ.

ಇದನ್ನು ಆದಾಯದ ರೂಪವಾಗಿ ಬಳಸಿಕೊಳ್ಳುವ ಐಸಿಸಿ ಹಾಗೂ ಬಿಸಿಸಿಐ ಈ ಒಂದು ಪಂದ್ಯದಿಂದಲೇ ಸಾಕಷ್ಟು ಆದಾಯ ಗಳಿಸುತ್ತವೆ. ಇದೀಗ ವಿಶ್ವಕಪ್​ನಲ್ಲಿ ಈ ಎರಡೂ ತಂಡಗಳ ಮುಖಾಮುಖಿಗಾಗಿ ಬಿಸಿಸಿಐ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನವಾದ ನರೇಂದ್ರ ಮೋದಿ ಮೈದಾನವನ್ನು ಸಜ್ಜುಗೊಳಿಸಿದೆ.

4 / 9
ಅಕ್ಟೋಬರ್ 15 ರಂದು ನಡೆಯಲ್ಲಿರುವ ಈ ಕ್ರಿಕೆಟ್ ಕಾಳಗದ ಕೂಗು ಈಗಾಗಲೇ ಜೋರಾಗಿದೆ. ಅಹಮದಾಬಾದ್​ನಲ್ಲಿ ಈ ಪಂದ್ಯ ನಡೆಯುವುದರಿಂದ ಪಂದ್ಯದ ದಿನಕ್ಕೆ ಇಡೀ ನಗರದ ಹೋಟೆಲ್​ಗಳು ಈಗಾಗಲೇ ಭರ್ತಿಗೊಂಡಿವೆ.  ಅಲ್ಲದೆ ಪಂದ್ಯದ ದಿನದಂದು ಹೋಟೆಲ್​ಗಳ ದರವನ್ನು ಸಹ ಗಗನಕ್ಕೆ ಏರಿಸಲಾಗಿದೆ.

ಅಕ್ಟೋಬರ್ 15 ರಂದು ನಡೆಯಲ್ಲಿರುವ ಈ ಕ್ರಿಕೆಟ್ ಕಾಳಗದ ಕೂಗು ಈಗಾಗಲೇ ಜೋರಾಗಿದೆ. ಅಹಮದಾಬಾದ್​ನಲ್ಲಿ ಈ ಪಂದ್ಯ ನಡೆಯುವುದರಿಂದ ಪಂದ್ಯದ ದಿನಕ್ಕೆ ಇಡೀ ನಗರದ ಹೋಟೆಲ್​ಗಳು ಈಗಾಗಲೇ ಭರ್ತಿಗೊಂಡಿವೆ. ಅಲ್ಲದೆ ಪಂದ್ಯದ ದಿನದಂದು ಹೋಟೆಲ್​ಗಳ ದರವನ್ನು ಸಹ ಗಗನಕ್ಕೆ ಏರಿಸಲಾಗಿದೆ.

5 / 9
ಆದರೂ ಕ್ರಿಕೆಟ್ ಅಭಿಮಾನಿಗಳಿಗೆ ಅಹಮದಾಬಾದ್​ನಲ್ಲಿ ಹೋಟೆಲ್​ಗಳ ರೂಂಗಳು ಸಿಗುತ್ತಿಲ್ಲ. ಹೀಗಾಗಿ ಪಂದ್ಯ ವೀಕ್ಷಣೆಗಾಗಿ ನಾನಾ ಕಸರತ್ತು ಮಾಡುತ್ತಿರುವ ಫ್ಯಾನ್ಸ್, ಇದೀಗ ಹೋಟೆಲ್​ಗಳ ಬದಲು ಆಸ್ಪತ್ರೆ ಬೆಡ್​ಗಳತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ.

ಆದರೂ ಕ್ರಿಕೆಟ್ ಅಭಿಮಾನಿಗಳಿಗೆ ಅಹಮದಾಬಾದ್​ನಲ್ಲಿ ಹೋಟೆಲ್​ಗಳ ರೂಂಗಳು ಸಿಗುತ್ತಿಲ್ಲ. ಹೀಗಾಗಿ ಪಂದ್ಯ ವೀಕ್ಷಣೆಗಾಗಿ ನಾನಾ ಕಸರತ್ತು ಮಾಡುತ್ತಿರುವ ಫ್ಯಾನ್ಸ್, ಇದೀಗ ಹೋಟೆಲ್​ಗಳ ಬದಲು ಆಸ್ಪತ್ರೆ ಬೆಡ್​ಗಳತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ.

6 / 9
ವಾಸ್ತವವಾಗಿ ಪಂದ್ಯದ ದಿನದಂದು ಅಹಮದಾಬಾದ್‌ನ ಹೋಟೆಲ್‌ಗಳ ದಿನದ ಬಾಡಿಗೆ ಲಕ್ಷ ಮೀರಿದೆ. ಅಷ್ಟು ಹಣ ನೀಡುತ್ತೇವೆ ಎಂದರು ರೂಂಗಳು ಸಿಗುತ್ತಿಲ್ಲ. ಹೀಗಾಗಿ ವಿಭಿನ್ನ ಪ್ಲಾನ್ ಮಾಡಿರುವ ಫ್ಯಾನ್ಸ್, ಪಂದ್ಯದ ದಿನದಂದು ಆಸ್ಪತ್ರೆಗಳ ಬೆಡ್ ಬುಕ್ ಮಾಡಲು ಮುಂದಾಗಿದ್ದಾರೆ.

ವಾಸ್ತವವಾಗಿ ಪಂದ್ಯದ ದಿನದಂದು ಅಹಮದಾಬಾದ್‌ನ ಹೋಟೆಲ್‌ಗಳ ದಿನದ ಬಾಡಿಗೆ ಲಕ್ಷ ಮೀರಿದೆ. ಅಷ್ಟು ಹಣ ನೀಡುತ್ತೇವೆ ಎಂದರು ರೂಂಗಳು ಸಿಗುತ್ತಿಲ್ಲ. ಹೀಗಾಗಿ ವಿಭಿನ್ನ ಪ್ಲಾನ್ ಮಾಡಿರುವ ಫ್ಯಾನ್ಸ್, ಪಂದ್ಯದ ದಿನದಂದು ಆಸ್ಪತ್ರೆಗಳ ಬೆಡ್ ಬುಕ್ ಮಾಡಲು ಮುಂದಾಗಿದ್ದಾರೆ.

7 / 9
ಪಂದ್ಯದ ದಿನದಂದು ಅಹಮದಾಬಾದ್​ನಲ್ಲಿ ಹೋಟೆಲ್​ಗಳ ಬೆಲೆ ದಿನವೊಂದಕ್ಕೆ ಲಕ್ಷ ದಾಟಿದೆ. ಆದರೆ ಆಸ್ಪತ್ರೆಯಲ್ಲಿ ಒಂದು ಹಾಸಿಗೆಗೆ 3ರಿಂದ 25 ಸಾವಿರ ರೂ. ಬಿಲ್ ಮಾಡಲಾಗುತ್ತಿದೆ. ಈ ದರ ಹೋಟೆಲ್‌ಗೆ ಹೋಲಿಸಿದರೆ ಅರ್ಧಕ್ಕಿಂತ ತೀರ ಕಡಿಮೆ. ಹಾಗಾಗಿ ಕ್ರೀಡಾ ಪ್ರೇಮಿಗಳು ಪಂದ್ಯ ವೀಕ್ಷಿಸಲು ಈ ದಾರಿ ಹಿಡಿದಿದ್ದಾರೆ.

ಪಂದ್ಯದ ದಿನದಂದು ಅಹಮದಾಬಾದ್​ನಲ್ಲಿ ಹೋಟೆಲ್​ಗಳ ಬೆಲೆ ದಿನವೊಂದಕ್ಕೆ ಲಕ್ಷ ದಾಟಿದೆ. ಆದರೆ ಆಸ್ಪತ್ರೆಯಲ್ಲಿ ಒಂದು ಹಾಸಿಗೆಗೆ 3ರಿಂದ 25 ಸಾವಿರ ರೂ. ಬಿಲ್ ಮಾಡಲಾಗುತ್ತಿದೆ. ಈ ದರ ಹೋಟೆಲ್‌ಗೆ ಹೋಲಿಸಿದರೆ ಅರ್ಧಕ್ಕಿಂತ ತೀರ ಕಡಿಮೆ. ಹಾಗಾಗಿ ಕ್ರೀಡಾ ಪ್ರೇಮಿಗಳು ಪಂದ್ಯ ವೀಕ್ಷಿಸಲು ಈ ದಾರಿ ಹಿಡಿದಿದ್ದಾರೆ.

8 / 9
ಮಾಧ್ಯಮ ವರದಿಗಳ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕಾಗಿ ಎಲ್ಲಾ ಹೋಟೆಲ್‌ಗಳನ್ನು ಕಾಯ್ದಿರಿಸಲಾಗಿದೆ. ಹೀಗಾಗಿ ಕ್ರೀಡಾ ಪ್ರೇಮಿಗಳು ಇದೀಗ ಆಸ್ಪತ್ರೆಗಳಲ್ಲಿ ಬೆಡ್ ಬುಕ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮನಿ ಕಂಟ್ರೋಲ್ ಈ ಬಗ್ಗೆ ವರದಿ ಮಾಡಿದ್ದು, ಪೂರ್ಣ ದೇಹ ತಪಾಸಣೆಗಾಗಿ ಜನರು ಪಂದ್ಯದ ದಿನದಂದು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸುತ್ತಿದ್ದಾರೆ ಎಂದು ಅಹಮದಾಬಾದ್‌ನ ವೈದ್ಯರು ಹೇಳಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕಾಗಿ ಎಲ್ಲಾ ಹೋಟೆಲ್‌ಗಳನ್ನು ಕಾಯ್ದಿರಿಸಲಾಗಿದೆ. ಹೀಗಾಗಿ ಕ್ರೀಡಾ ಪ್ರೇಮಿಗಳು ಇದೀಗ ಆಸ್ಪತ್ರೆಗಳಲ್ಲಿ ಬೆಡ್ ಬುಕ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮನಿ ಕಂಟ್ರೋಲ್ ಈ ಬಗ್ಗೆ ವರದಿ ಮಾಡಿದ್ದು, ಪೂರ್ಣ ದೇಹ ತಪಾಸಣೆಗಾಗಿ ಜನರು ಪಂದ್ಯದ ದಿನದಂದು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸುತ್ತಿದ್ದಾರೆ ಎಂದು ಅಹಮದಾಬಾದ್‌ನ ವೈದ್ಯರು ಹೇಳಿದ್ದಾರೆ.

9 / 9
Follow us
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ