World Cup 2023: ಏಕದಿನ ವಿಶ್ವಕಪ್​ನಿಂದ ನ್ಯೂಜಿಲೆಂಡ್​ ತಂಡದ ಸ್ಟಾರ್ ಆಲ್​ರೌಂಡರ್ ಔಟ್..!

World Cup 2023: ನ್ಯೂಜಿಲೆಂಡ್‌ ತಂಡದ ಸ್ಟಾರ್ ಆಲ್ ರೌಂಡರ್ ಮೈಕಲ್ ಬ್ರೇಸ್​ವೆಲ್ ಏಕದಿನ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

|

Updated on: Jun 14, 2023 | 9:21 AM

ಈ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಇನ್ನೂ 4 ತಿಂಗಳು ಬಾಕಿ ಇರುವಾಗಲೇ ನ್ಯೂಜಿಲೆಂಡ್‌ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಆಲ್ ರೌಂಡರ್ ಮೈಕಲ್ ಬ್ರೇಸ್​ವೆಲ್ ಏಕದಿನ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಈ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಇನ್ನೂ 4 ತಿಂಗಳು ಬಾಕಿ ಇರುವಾಗಲೇ ನ್ಯೂಜಿಲೆಂಡ್‌ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಆಲ್ ರೌಂಡರ್ ಮೈಕಲ್ ಬ್ರೇಸ್​ವೆಲ್ ಏಕದಿನ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

1 / 7
ಬ್ರೇಸ್‌ವೆಲ್‌ ಇಂಜುರಿಗೆ ತುತ್ತಾಗಿದ್ದು, ಇಷ್ಟರಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಬ್ರೇಸ್‌ವೆಲ್‌ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಇದೇ ಕಾರಣಕ್ಕೆ ಮೈಕಲ್ ಬ್ರೇಸ್‌ವೆಲ್ ಏಕದಿನ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ.

ಬ್ರೇಸ್‌ವೆಲ್‌ ಇಂಜುರಿಗೆ ತುತ್ತಾಗಿದ್ದು, ಇಷ್ಟರಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಬ್ರೇಸ್‌ವೆಲ್‌ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಇದೇ ಕಾರಣಕ್ಕೆ ಮೈಕಲ್ ಬ್ರೇಸ್‌ವೆಲ್ ಏಕದಿನ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ.

2 / 7
ಇಂಗ್ಲೆಂಡ್‌ನ ಟಿ20 ಬ್ಲಾಸ್ಟ್‌ನಲ್ಲಿ ವೋರ್ಸೆಸ್ಟರ್‌ಶೈರ್ ರಾಪಿಡ್ಸ್ ಪರ ಆಡಿದ್ದ ಬ್ರೇಸ್‌ವೆಲ್‌ ಇಂಜುರಿಗೆ ತುತ್ತಾಗಿದ್ದರು. ಆ ಬಳಿಕ ಬ್ರೇಸ್‌ವೆಲ್‌ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ಇಂಜುರಿಗೊಳಗಾಗಿರುವ ಬ್ರೇಸ್‌ವೆಲ್​ಗೆ ಬ್ರಿಟನ್‌ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಇಂಗ್ಲೆಂಡ್‌ನ ಟಿ20 ಬ್ಲಾಸ್ಟ್‌ನಲ್ಲಿ ವೋರ್ಸೆಸ್ಟರ್‌ಶೈರ್ ರಾಪಿಡ್ಸ್ ಪರ ಆಡಿದ್ದ ಬ್ರೇಸ್‌ವೆಲ್‌ ಇಂಜುರಿಗೆ ತುತ್ತಾಗಿದ್ದರು. ಆ ಬಳಿಕ ಬ್ರೇಸ್‌ವೆಲ್‌ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ಇಂಜುರಿಗೊಳಗಾಗಿರುವ ಬ್ರೇಸ್‌ವೆಲ್​ಗೆ ಬ್ರಿಟನ್‌ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

3 / 7
ಬ್ರೇಸ್‌ವೆಲ್ ಇಂಜುರಿ ಬಗ್ಗೆ ಹೇಳಿಕೆ ನೀಡಿರುವ ನ್ಯೂಜಿಲೆಂಡ್ ಕ್ರಿಕೆಟ್, ಇಂಜುರಿಗೊಳಗಾಗಿರುವ ಮೈಕೆಲ್ ಬ್ರೇಸ್‌ವೆಲ್ ಅವರಿಗೆ ಯುಕೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಆ ಬಳಿಕ ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸುಮಾರು 6ರಿಂದ 8 ತಿಂಗಳು ಬೇಕಾಗುತ್ತದೆ ಎಂದು ಹೇಳಿಕೊಂಡಿದೆ.

ಬ್ರೇಸ್‌ವೆಲ್ ಇಂಜುರಿ ಬಗ್ಗೆ ಹೇಳಿಕೆ ನೀಡಿರುವ ನ್ಯೂಜಿಲೆಂಡ್ ಕ್ರಿಕೆಟ್, ಇಂಜುರಿಗೊಳಗಾಗಿರುವ ಮೈಕೆಲ್ ಬ್ರೇಸ್‌ವೆಲ್ ಅವರಿಗೆ ಯುಕೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಆ ಬಳಿಕ ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸುಮಾರು 6ರಿಂದ 8 ತಿಂಗಳು ಬೇಕಾಗುತ್ತದೆ ಎಂದು ಹೇಳಿಕೊಂಡಿದೆ.

4 / 7
ಬ್ರೇಸ್‌ವೆಲ್ ಅಲಭ್ಯತೆಯೊಂದಿಗೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪ್ರಮುಖ ಇಬ್ಬರು ಆಟಗಾರರನ್ನು ಏಕದಿನ ವಿಶ್ವಕಪ್​ಗೆ ಕಳೆದುಕೊಂಡಂತ್ತಾಗಿದೆ. ಬ್ರೇಸ್‌ವೆಲ್​ಗೂ ಮೊದಲು ತಂಡದ ನಾಯಕ ಕೇನ್ ವಿಲಿಯಮ್ಸನ್ ಕೂಡ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುವಾಗ ಗಾಯಗೊಂಡಿದ್ದರು. ಹೀಗಾಗಿ ನಾಯಕ ಕೇನ್ ವಿಲಿಯಮ್ಸನ್ ಕೂಡ ಏಕದಿನ ವಿಶ್ವಕಪ್​ನಲ್ಲಿ ಆಡುವುದು ಅನುಮಾನವಾಗಿದೆ.

ಬ್ರೇಸ್‌ವೆಲ್ ಅಲಭ್ಯತೆಯೊಂದಿಗೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪ್ರಮುಖ ಇಬ್ಬರು ಆಟಗಾರರನ್ನು ಏಕದಿನ ವಿಶ್ವಕಪ್​ಗೆ ಕಳೆದುಕೊಂಡಂತ್ತಾಗಿದೆ. ಬ್ರೇಸ್‌ವೆಲ್​ಗೂ ಮೊದಲು ತಂಡದ ನಾಯಕ ಕೇನ್ ವಿಲಿಯಮ್ಸನ್ ಕೂಡ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುವಾಗ ಗಾಯಗೊಂಡಿದ್ದರು. ಹೀಗಾಗಿ ನಾಯಕ ಕೇನ್ ವಿಲಿಯಮ್ಸನ್ ಕೂಡ ಏಕದಿನ ವಿಶ್ವಕಪ್​ನಲ್ಲಿ ಆಡುವುದು ಅನುಮಾನವಾಗಿದೆ.

5 / 7
ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಮೈಕಲ್ ಬ್ರೇಸ್‌ವೆಲ್​ಗೆ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶ ಸಿಗಲಿಲ್ಲ. ಸಿಕ್ಕ ಅವಕಾಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಬ್ರೇಸ್‌ವೆಲ್ 5 ಪಂದ್ಯಗಳಲ್ಲಿ 6 ಪ್ರಮುಖ ವಿಕೆಟ್ ಪಡೆದರು. ಹಾಗೆಯೇ ಬ್ಯಾಟಿಂಗ್​ನಲ್ಲೂ 6 ಬೌಂಡರಿ, 1 ಸಿಕ್ಸರ್ ಸಹಿತ 58 ರನ್ ಕಲೆಹಾಕಿದರು.

ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಮೈಕಲ್ ಬ್ರೇಸ್‌ವೆಲ್​ಗೆ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶ ಸಿಗಲಿಲ್ಲ. ಸಿಕ್ಕ ಅವಕಾಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಬ್ರೇಸ್‌ವೆಲ್ 5 ಪಂದ್ಯಗಳಲ್ಲಿ 6 ಪ್ರಮುಖ ವಿಕೆಟ್ ಪಡೆದರು. ಹಾಗೆಯೇ ಬ್ಯಾಟಿಂಗ್​ನಲ್ಲೂ 6 ಬೌಂಡರಿ, 1 ಸಿಕ್ಸರ್ ಸಹಿತ 58 ರನ್ ಕಲೆಹಾಕಿದರು.

6 / 7
ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್ ಮೊದಲ ವಾರದಿಂದ ಪ್ರಾರಂಭವಾಗಲಿದ್ದು, ನವೆಂಬರ್ ಮಧ್ಯದವರೆಗೆ ನಡೆಯಲಿದೆ. ಇದು ಸಂಪೂರ್ಣ 45 ದಿನಗಳ ಕಾರ್ಯಕ್ರಮವಾಗಿದ್ದು, ಇದರ ಆರಂಭಿಕ ಮತ್ತು ಅಂತಿಮ ಪಂದ್ಯಗಳನ್ನು ಅಹಮದಾಬಾದ್‌ನಲ್ಲಿ ಆಡಲು ತೀರ್ಮಾನಿಸಲಾಗಿದೆ.

ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್ ಮೊದಲ ವಾರದಿಂದ ಪ್ರಾರಂಭವಾಗಲಿದ್ದು, ನವೆಂಬರ್ ಮಧ್ಯದವರೆಗೆ ನಡೆಯಲಿದೆ. ಇದು ಸಂಪೂರ್ಣ 45 ದಿನಗಳ ಕಾರ್ಯಕ್ರಮವಾಗಿದ್ದು, ಇದರ ಆರಂಭಿಕ ಮತ್ತು ಅಂತಿಮ ಪಂದ್ಯಗಳನ್ನು ಅಹಮದಾಬಾದ್‌ನಲ್ಲಿ ಆಡಲು ತೀರ್ಮಾನಿಸಲಾಗಿದೆ.

7 / 7
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್