AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ವಿಶ್ವಕಪ್​ನಲ್ಲಿ ಪಾಕ್ ತಂಡ ಭಾಗವಹಿಸುವ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಪಾಕ್ ಸರ್ಕಾರ

World Cup 2023: ಪಾಕ್ ತಂಡ ವಿಶ್ವಕಪ್​ಗಾಗಿ ಭಾರತಕ್ಕೆ ಬರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಮುಮ್ತಾಜ್ ಬಲೂಚ್, ಭಾರತದಲ್ಲಿ ಪಾಕಿಸ್ತಾನ ತಂಡದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಪರಿಶೀಲಿಸುತ್ತಿರುವುದಾಗಿ ಹೇಳಿದ್ದಾರೆ.

ಪೃಥ್ವಿಶಂಕರ
|

Updated on:Jun 23, 2023 | 2:53 PM

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಾಕ್ ತಂಡ ಭಾಗವಹಿಸುವ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಖಚಿತತೆ ಸಿಕ್ಕಿಲ್ಲ. ಏಷ್ಯಾಕಪ್ ಆಡಲು ಭಾರತ ಪಾಕ್ ನೆಲಕ್ಕೆ ಬರದಿದ್ದರೆ, ಪಾಕ್ ತಂಡ ಕೂಡ ಭಾರತಕ್ಕೆ ವಿಶ್ವಕಪ್ ಆಡಲು ಹೋಗುವುದಿಲ್ಲ ಎಂದು ಈ ಹಿಂದೆಯೇ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷರು ತಿಳಿಸಿದ್ದರು.

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಾಕ್ ತಂಡ ಭಾಗವಹಿಸುವ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಖಚಿತತೆ ಸಿಕ್ಕಿಲ್ಲ. ಏಷ್ಯಾಕಪ್ ಆಡಲು ಭಾರತ ಪಾಕ್ ನೆಲಕ್ಕೆ ಬರದಿದ್ದರೆ, ಪಾಕ್ ತಂಡ ಕೂಡ ಭಾರತಕ್ಕೆ ವಿಶ್ವಕಪ್ ಆಡಲು ಹೋಗುವುದಿಲ್ಲ ಎಂದು ಈ ಹಿಂದೆಯೇ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷರು ತಿಳಿಸಿದ್ದರು.

1 / 7
ಆಗಿನಿಂದಲೂ ಉಭಯ ದೇಶಗಳ ಕ್ರಿಕೆಟ್ ಮಂಡಳಿಗಳ ಹಗ್ಗಜಗ್ಗಾಟ ಪ್ರತಿ ದಿನ ಒಂದೊಂದು ರೂಪ ಪಡೆದುಕೊಳ್ಳುತ್ತಿದೆ. ಅಂತಿಮವಾಗಿ ವಿಶ್ವಕಪ್ ಆಡುವ ಬಗ್ಗೆ ಒಲವು ತೋರಿದ್ದ ಪಾಕ್ ಕ್ರಿಕೆಟ್ ಮೊದಲು ಅಹಮದಾಬಾದ್​ನಲ್ಲಿ ಪಂದ್ಯವನ್ನಾಡುವುದಿಲ್ಲ ಎಂದಿತ್ತು.

ಆಗಿನಿಂದಲೂ ಉಭಯ ದೇಶಗಳ ಕ್ರಿಕೆಟ್ ಮಂಡಳಿಗಳ ಹಗ್ಗಜಗ್ಗಾಟ ಪ್ರತಿ ದಿನ ಒಂದೊಂದು ರೂಪ ಪಡೆದುಕೊಳ್ಳುತ್ತಿದೆ. ಅಂತಿಮವಾಗಿ ವಿಶ್ವಕಪ್ ಆಡುವ ಬಗ್ಗೆ ಒಲವು ತೋರಿದ್ದ ಪಾಕ್ ಕ್ರಿಕೆಟ್ ಮೊದಲು ಅಹಮದಾಬಾದ್​ನಲ್ಲಿ ಪಂದ್ಯವನ್ನಾಡುವುದಿಲ್ಲ ಎಂದಿತ್ತು.

2 / 7
ಆನಂತರ ತನ್ನ ನಿಲುವು ಬದಲಿಸಿದ್ದ ಪಾಕ್, ವಿಶ್ವಕಪ್ ವೇಳಾಪಟ್ಟಿಯಲ್ಲಿ 2 ಪಂದ್ಯಗಳ ಸ್ಥಳಗಳನ್ನು ಬದಲಿಸಬೇಕು ಎಂದಿತ್ತು. ಆದರೆ ಪಾಕ್ ಮನವಿಗೆ ಬಿಸಿಸಿಐ ಹಾಗೂ ಐಸಿಸಿ ಸೊಪ್ಪು ಹಾಕಲಿಲ್ಲ. ಹೀಗಾಗಿ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗುವುದು ತಡವಾಗುತ್ತಿದೆ. ಇಷ್ಷು ದಿನ ಪಾಕ್ ತಂಡ ವಿಶ್ವಕಪ್​ನಲ್ಲಿ ಆಡುವ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಮಾತ್ರ ಪ್ರತಿಕ್ರಿಯೆ ನೀಡುತ್ತಿತ್ತು. ಇದೀಗ ಪಾಕ್ ಸರ್ಕಾರ ಮೊದಲ ಬಾರಿಗೆ ವಿಶ್ವಕಪ್​ನಲ್ಲಿ ಭಾಗವಹಿಸುವ ಬಗ್ಗೆ ಮಾತನಾಡಿದೆ.

ಆನಂತರ ತನ್ನ ನಿಲುವು ಬದಲಿಸಿದ್ದ ಪಾಕ್, ವಿಶ್ವಕಪ್ ವೇಳಾಪಟ್ಟಿಯಲ್ಲಿ 2 ಪಂದ್ಯಗಳ ಸ್ಥಳಗಳನ್ನು ಬದಲಿಸಬೇಕು ಎಂದಿತ್ತು. ಆದರೆ ಪಾಕ್ ಮನವಿಗೆ ಬಿಸಿಸಿಐ ಹಾಗೂ ಐಸಿಸಿ ಸೊಪ್ಪು ಹಾಕಲಿಲ್ಲ. ಹೀಗಾಗಿ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗುವುದು ತಡವಾಗುತ್ತಿದೆ. ಇಷ್ಷು ದಿನ ಪಾಕ್ ತಂಡ ವಿಶ್ವಕಪ್​ನಲ್ಲಿ ಆಡುವ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಮಾತ್ರ ಪ್ರತಿಕ್ರಿಯೆ ನೀಡುತ್ತಿತ್ತು. ಇದೀಗ ಪಾಕ್ ಸರ್ಕಾರ ಮೊದಲ ಬಾರಿಗೆ ವಿಶ್ವಕಪ್​ನಲ್ಲಿ ಭಾಗವಹಿಸುವ ಬಗ್ಗೆ ಮಾತನಾಡಿದೆ.

3 / 7
ಪಾಕ್ ತಂಡ ವಿಶ್ವಕಪ್​ಗಾಗಿ ಭಾರತಕ್ಕೆ ಬರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಮುಮ್ತಾಜ್ ಬಲೂಚ್, ಭಾರತದಲ್ಲಿ ಪಾಕಿಸ್ತಾನ ತಂಡದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಪರಿಶೀಲಿಸುತ್ತಿರುವುದಾಗಿ ಹೇಳಿದ್ದಾರೆ.

ಪಾಕ್ ತಂಡ ವಿಶ್ವಕಪ್​ಗಾಗಿ ಭಾರತಕ್ಕೆ ಬರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಮುಮ್ತಾಜ್ ಬಲೂಚ್, ಭಾರತದಲ್ಲಿ ಪಾಕಿಸ್ತಾನ ತಂಡದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಪರಿಶೀಲಿಸುತ್ತಿರುವುದಾಗಿ ಹೇಳಿದ್ದಾರೆ.

4 / 7
ಅಲ್ಲದೆ ಮುಂಬರುವ ದಿನಗಳಲ್ಲಿ ನಾವು ವಿಶ್ವಕಪ್​ನಲ್ಲಿ ಭಾಗವಹಿಸುವ ಬಗ್ಗೆ ಮಾಹಿತಿ ನೀಡಲಿದ್ದೇವೆ. ಭಾರತದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿ, ಸರ್ಕಾರವು ತನ್ನ ನಿರ್ಧಾರವನ್ನು ಶೀಘ್ರದಲ್ಲೇ ಪಿಸಿಬಿಗೆ ತಿಳಿಸಲಿದೆ ಎಂದರು. ಇದರೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಏಷ್ಯಾಕಪ್‌ಗಾಗಿ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ನಿರ್ಧರಿಸಿರುವುದು ಬೇಸರ ತಂದಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ ಮುಂಬರುವ ದಿನಗಳಲ್ಲಿ ನಾವು ವಿಶ್ವಕಪ್​ನಲ್ಲಿ ಭಾಗವಹಿಸುವ ಬಗ್ಗೆ ಮಾಹಿತಿ ನೀಡಲಿದ್ದೇವೆ. ಭಾರತದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿ, ಸರ್ಕಾರವು ತನ್ನ ನಿರ್ಧಾರವನ್ನು ಶೀಘ್ರದಲ್ಲೇ ಪಿಸಿಬಿಗೆ ತಿಳಿಸಲಿದೆ ಎಂದರು. ಇದರೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಏಷ್ಯಾಕಪ್‌ಗಾಗಿ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ನಿರ್ಧರಿಸಿರುವುದು ಬೇಸರ ತಂದಿದೆ ಎಂದು ಅವರು ಹೇಳಿದ್ದಾರೆ.

5 / 7
ಕ್ರೀಡೆಯೊಂದಿಗೆ ರಾಜಕೀಯವನ್ನು ಬೆರೆಸಬಾರದು. ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡದಿರುವ ಭಾರತದ ನೀತಿ ನಿರಾಶಾದಾಯಕವಾಗಿದೆ. ನಾವು ಭದ್ರತಾ ಪರಿಸ್ಥಿತಿ ಸೇರಿದಂತೆ ವಿಶ್ವಕಪ್‌ನಲ್ಲಿ ನಮ್ಮ ಭಾಗವಹಿಸುವಿಕೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಗಮನಿಸುತ್ತಿದ್ದೇವೆ ಮತ್ತು ಮೌಲ್ಯಮಾಪನ ಮಾಡುತ್ತಿದ್ದೇವೆ. ಕ್ರಿಕೆಟಿಗರು ಮತ್ತು ನಾವು ಸರಿಯಾದ ಸಮಯದಲ್ಲಿ ಪಿಸಿಬಿಗೆ ನಮ್ಮ ಅಭಿಪ್ರಾಯಗಳನ್ನು ನೀಡುತ್ತೇವೆ ಎಂದು ವಕ್ತಾರರು ಹೇಳಿದರು.

ಕ್ರೀಡೆಯೊಂದಿಗೆ ರಾಜಕೀಯವನ್ನು ಬೆರೆಸಬಾರದು. ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡದಿರುವ ಭಾರತದ ನೀತಿ ನಿರಾಶಾದಾಯಕವಾಗಿದೆ. ನಾವು ಭದ್ರತಾ ಪರಿಸ್ಥಿತಿ ಸೇರಿದಂತೆ ವಿಶ್ವಕಪ್‌ನಲ್ಲಿ ನಮ್ಮ ಭಾಗವಹಿಸುವಿಕೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಗಮನಿಸುತ್ತಿದ್ದೇವೆ ಮತ್ತು ಮೌಲ್ಯಮಾಪನ ಮಾಡುತ್ತಿದ್ದೇವೆ. ಕ್ರಿಕೆಟಿಗರು ಮತ್ತು ನಾವು ಸರಿಯಾದ ಸಮಯದಲ್ಲಿ ಪಿಸಿಬಿಗೆ ನಮ್ಮ ಅಭಿಪ್ರಾಯಗಳನ್ನು ನೀಡುತ್ತೇವೆ ಎಂದು ವಕ್ತಾರರು ಹೇಳಿದರು.

6 / 7
ಭಾರತ ಮತ್ತು ಪಾಕಿಸ್ತಾನ ನಡುವೆ 2012-13ರಲ್ಲಿ ಕೊನೆಯ ದ್ವಿಪಕ್ಷೀಯ ಸರಣಿ ನಡೆದಿತ್ತು. ಅಂದಿನಿಂದ ಎರಡೂ ದೇಶಗಳು ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ.

ಭಾರತ ಮತ್ತು ಪಾಕಿಸ್ತಾನ ನಡುವೆ 2012-13ರಲ್ಲಿ ಕೊನೆಯ ದ್ವಿಪಕ್ಷೀಯ ಸರಣಿ ನಡೆದಿತ್ತು. ಅಂದಿನಿಂದ ಎರಡೂ ದೇಶಗಳು ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ.

7 / 7

Published On - 2:51 pm, Fri, 23 June 23

Follow us
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ