AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4,4,4,4,4,4,4: ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಹರ್ಮನ್​ಪ್ರೀತ್ ಕೌರ್

WPL 2023: ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಗುಜರಾತ್ ಜೈಂಟ್ಸ್ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದರು. ಅದರಲ್ಲೂ ಒಟ್ಟು 14 ಫೋರ್​ಗಳನ್ನು ಬಾರಿಸುವ ಮೂಲಕ ಅಬ್ಬರಿಸಿದರು.

TV9 Web
| Edited By: |

Updated on: Mar 04, 2023 | 11:08 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್​ಪ್ರೀತ್ ಕೌರ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ 7 ಫೋರ್​ಗಳನ್ನು ಬಾರಿಸುವ ಮೂಲಕ ಎಂಬುದೇ ವಿಶೇಷ.

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್​ಪ್ರೀತ್ ಕೌರ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ 7 ಫೋರ್​ಗಳನ್ನು ಬಾರಿಸುವ ಮೂಲಕ ಎಂಬುದೇ ವಿಶೇಷ.

1 / 7
ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಗುಜರಾತ್ ಜೈಂಟ್ಸ್ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದರು. ಅದರಲ್ಲೂ ಒಟ್ಟು 14 ಫೋರ್​ಗಳನ್ನು ಬಾರಿಸುವ ಮೂಲಕ ಅಬ್ಬರಿಸಿದರು.

ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಗುಜರಾತ್ ಜೈಂಟ್ಸ್ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದರು. ಅದರಲ್ಲೂ ಒಟ್ಟು 14 ಫೋರ್​ಗಳನ್ನು ಬಾರಿಸುವ ಮೂಲಕ ಅಬ್ಬರಿಸಿದರು.

2 / 7
ಈ ಸಿಡಿಲಬ್ಬರದ ನಡುವೆ ಹರ್ಮನ್​ಪ್ರೀತ್ ಕೌರ್ ಬ್ಯಾಟ್​ನಿಂದ ಸತತವಾಗಿ 7 ಬೌಂಡರಿಗಳು ಮೂಡಿಬಂದಿರುವುದು ವಿಶೇಷ. ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್‌ನ 15ನೇ ಓವರ್‌ನಲ್ಲಿ ಫೋರ್​ಗಳ ಸುರಿಮಳೆ ಪ್ರಾರಂಭವಾಯಿತು.

ಈ ಸಿಡಿಲಬ್ಬರದ ನಡುವೆ ಹರ್ಮನ್​ಪ್ರೀತ್ ಕೌರ್ ಬ್ಯಾಟ್​ನಿಂದ ಸತತವಾಗಿ 7 ಬೌಂಡರಿಗಳು ಮೂಡಿಬಂದಿರುವುದು ವಿಶೇಷ. ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್‌ನ 15ನೇ ಓವರ್‌ನಲ್ಲಿ ಫೋರ್​ಗಳ ಸುರಿಮಳೆ ಪ್ರಾರಂಭವಾಯಿತು.

3 / 7
23 ವರ್ಷದ ಎಡಗೈ ವೇಗದ ಬೌಲರ್ ಮೋನಿಕಾ ಪಟೇಲ್ ಅವರನ್ನು ಗುರಿಯಾಗಿಸಿದ ಹರ್ಮನ್​ಪ್ರೀತ್ ಕೌರ್ ಕೊನೆಯ 4 ಎಸೆತಗಳಲ್ಲಿ ಸತತ ಬೌಂಡರಿಗಳನ್ನು ಬಾರಿಸಿದರು. ಇದಾದ ನಂತರ ಗುಜರಾತ್ ತಂಡದ ನಾಯಕಿ ಬೆತ್ ಮೂನಿ ಅವರು ಆಶ್ ಗಾರ್ಡ್ನರ್​ಗೆ ಚೆಂಡನ್ನು ನೀಡಿದರು.

23 ವರ್ಷದ ಎಡಗೈ ವೇಗದ ಬೌಲರ್ ಮೋನಿಕಾ ಪಟೇಲ್ ಅವರನ್ನು ಗುರಿಯಾಗಿಸಿದ ಹರ್ಮನ್​ಪ್ರೀತ್ ಕೌರ್ ಕೊನೆಯ 4 ಎಸೆತಗಳಲ್ಲಿ ಸತತ ಬೌಂಡರಿಗಳನ್ನು ಬಾರಿಸಿದರು. ಇದಾದ ನಂತರ ಗುಜರಾತ್ ತಂಡದ ನಾಯಕಿ ಬೆತ್ ಮೂನಿ ಅವರು ಆಶ್ ಗಾರ್ಡ್ನರ್​ಗೆ ಚೆಂಡನ್ನು ನೀಡಿದರು.

4 / 7
ಆದರೆ, ಅನುಭವಿ ಆಟಗಾರ್ತಿ ಗಾರ್ಡ್ನರ್​ರನ್ನು ಕೂಡ ಲೀಲಾಜಾಲವಾಗಿ ಎದುರಿಸಿದ ಹರ್ಮನ್​ಪ್ರೀತ್ ಕೌರ್ ಹ್ಯಾಟ್ರಿಕ್ ಬೌಂಡರಿ ಬಾರಿಸಿದರು.​ ಓವರ್‌ನ ಮೊದಲ ಎಸೆತದಲ್ಲಿ, ಅಮೆಲಿಯಾ ಕೆರ್ ಸಿಂಗಲ್ ತೆಗೆದರೆ, ಆ ಬಳಿಕ ಸ್ಟ್ರೈಕ್​ಗೆ ಬಂದ ಹರ್ಮನ್​ ಬ್ಯಾಕ್ ಟು ಬ್ಯಾಕ್ 3 ಬೌಂಡರಿ ಬಾರಿಸಿದರು. ಇದರೊಂದಿಗೆ ಎದುರಿಸಿದ 7 ಎಸೆತಗಳಲ್ಲಿ ಸತತವಾಗಿ 7 ಬೌಂಡರಿಗಳನ್ನು ಬಾರಿಸಿದ ವಿಶೇಷ ದಾಖಲೆಯೊಂದು ಹರ್ಮನ್​ಪ್ರೀತ್ ಕೌರ್ ಪಾಲಾಯಿತು.

ಆದರೆ, ಅನುಭವಿ ಆಟಗಾರ್ತಿ ಗಾರ್ಡ್ನರ್​ರನ್ನು ಕೂಡ ಲೀಲಾಜಾಲವಾಗಿ ಎದುರಿಸಿದ ಹರ್ಮನ್​ಪ್ರೀತ್ ಕೌರ್ ಹ್ಯಾಟ್ರಿಕ್ ಬೌಂಡರಿ ಬಾರಿಸಿದರು.​ ಓವರ್‌ನ ಮೊದಲ ಎಸೆತದಲ್ಲಿ, ಅಮೆಲಿಯಾ ಕೆರ್ ಸಿಂಗಲ್ ತೆಗೆದರೆ, ಆ ಬಳಿಕ ಸ್ಟ್ರೈಕ್​ಗೆ ಬಂದ ಹರ್ಮನ್​ ಬ್ಯಾಕ್ ಟು ಬ್ಯಾಕ್ 3 ಬೌಂಡರಿ ಬಾರಿಸಿದರು. ಇದರೊಂದಿಗೆ ಎದುರಿಸಿದ 7 ಎಸೆತಗಳಲ್ಲಿ ಸತತವಾಗಿ 7 ಬೌಂಡರಿಗಳನ್ನು ಬಾರಿಸಿದ ವಿಶೇಷ ದಾಖಲೆಯೊಂದು ಹರ್ಮನ್​ಪ್ರೀತ್ ಕೌರ್ ಪಾಲಾಯಿತು.

5 / 7
ಅಷ್ಟೇ ಅಲ್ಲದೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಆಟಗಾರ್ತಿ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸ್ಮೃತಿ ಮಂಧಾನ (23 ಎಸೆತ) ಹೆಸರಿನಲ್ಲಿತ್ತು.

ಅಷ್ಟೇ ಅಲ್ಲದೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಆಟಗಾರ್ತಿ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸ್ಮೃತಿ ಮಂಧಾನ (23 ಎಸೆತ) ಹೆಸರಿನಲ್ಲಿತ್ತು.

6 / 7
ಇನ್ನು ಈ ಪಂದ್ಯದಲ್ಲಿ 30 ಎಸೆತಗಳನ್ನು ಎದುರಿಸಿದ ಹರ್ಮನ್​ಪ್ರೀತ್ ಕೌರ್ 14 ಫೋರ್​ನೊಂದಿಗೆ 65 ರನ್​ ಬಾರಿಸಿದರು. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಮೊದಲ ಅರ್ಧಶತಕ ಬಾರಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇನ್ನು ಈ ಪಂದ್ಯದಲ್ಲಿ 30 ಎಸೆತಗಳನ್ನು ಎದುರಿಸಿದ ಹರ್ಮನ್​ಪ್ರೀತ್ ಕೌರ್ 14 ಫೋರ್​ನೊಂದಿಗೆ 65 ರನ್​ ಬಾರಿಸಿದರು. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಮೊದಲ ಅರ್ಧಶತಕ ಬಾರಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

7 / 7
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ