AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ಆರ್​ಸಿಬಿ ತಂಡ ಸೇರಿದ ಸ್ಮೃತಿ ಮಂಧಾನ: ಬೆಂಗಳೂರು ಮೊದಲ ಪಂದ್ಯ ಯಾವಾಗ?

WPL 2023, RCB: ಮಹಿಳಾ ಪ್ರೀಮಿಯರ್ ಲೀಗ್​ಗಾಗಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ತಂಡ ಸೇರಿಕೊಂಡಿದ್ದಾರೆ. ಈ ಬಗ್ಗೆ ಆರ್​ಸಿಬಿ ತನ್ನ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದೆ. ಡಬ್ಲ್ಯೂಪಿಎಲ್ 2023 ಮಾರ್ಚ್ 4 ರಿಂದ ಶುರುವಾಗಲಿದೆ.

Vinay Bhat
|

Updated on:Mar 02, 2023 | 10:33 AM

Share
ಚೊಚ್ಚಲ ಆವೃತ್ತಿಯ ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ ಡಬ್ಲ್ಯೂಪಿಎಲ್ 2023 ಆರಂಭಕ್ಕೆ ಎರಡು ದಿನಗಳಷ್ಟೇ ಬಾಕಿಯಿದೆ. ಮಾರ್ಚ್ 4 ರಂದು ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದ್ದು ಮಾರ್ಚ್ 26ರವರೆಗೆ ನಡೆಯಲಿದೆ. ಮೊದಲ ಆವೃತ್ತಿಯ ಟೂರ್ನಿಯಲ್ಲಿ ಐದು ಫ್ರಾಂಚೈಸಿಗಳು ಒಂದು ಕಪ್​ಗಾಗಿ ಪೈಪೋಟಿ ನಡೆಸಲಿದೆ.

ಚೊಚ್ಚಲ ಆವೃತ್ತಿಯ ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ ಡಬ್ಲ್ಯೂಪಿಎಲ್ 2023 ಆರಂಭಕ್ಕೆ ಎರಡು ದಿನಗಳಷ್ಟೇ ಬಾಕಿಯಿದೆ. ಮಾರ್ಚ್ 4 ರಂದು ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದ್ದು ಮಾರ್ಚ್ 26ರವರೆಗೆ ನಡೆಯಲಿದೆ. ಮೊದಲ ಆವೃತ್ತಿಯ ಟೂರ್ನಿಯಲ್ಲಿ ಐದು ಫ್ರಾಂಚೈಸಿಗಳು ಒಂದು ಕಪ್​ಗಾಗಿ ಪೈಪೋಟಿ ನಡೆಸಲಿದೆ.

1 / 9
ಡೆಲ್ಲಿ ಕ್ಯಾಪಿಟಲ್ಸ್‌, ಗುಜರಾತ್‌ ಜಯಂಟ್ಸ್‌, ಮುಂಬೈ ಇಂಡಿಯನ್ಸ್‌, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಯು.ಪಿ ವಾರಿಯರ್ಸ್‌ ಹೀಗೆ ಐದು ತಂಡಗಳ ನಡುವೆ ಪಂದ್ಯಗಳು ನಡೆಯಲಿದ್ದು, ಈಗಾಗಲೇ ಎಲ್ಲ ಟೀಮ್ ಭರ್ಜರಿ ಅಭ್ಯಾಸ ನಡೆಸುತ್ತಿದೆ.

ಡೆಲ್ಲಿ ಕ್ಯಾಪಿಟಲ್ಸ್‌, ಗುಜರಾತ್‌ ಜಯಂಟ್ಸ್‌, ಮುಂಬೈ ಇಂಡಿಯನ್ಸ್‌, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಯು.ಪಿ ವಾರಿಯರ್ಸ್‌ ಹೀಗೆ ಐದು ತಂಡಗಳ ನಡುವೆ ಪಂದ್ಯಗಳು ನಡೆಯಲಿದ್ದು, ಈಗಾಗಲೇ ಎಲ್ಲ ಟೀಮ್ ಭರ್ಜರಿ ಅಭ್ಯಾಸ ನಡೆಸುತ್ತಿದೆ.

2 / 9
ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿಯರು ಕೂಡ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ಆರ್​ಸಿಬಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಆಟಗಾರ್ತಿಯರು ಬ್ಯಾಟಿಂಗ್, ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿತ್ತು.

ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿಯರು ಕೂಡ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ಆರ್​ಸಿಬಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಆಟಗಾರ್ತಿಯರು ಬ್ಯಾಟಿಂಗ್, ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿತ್ತು.

3 / 9
ಇದೀಗ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ತಂಡ ಸೇರಿಕೊಂಡಿದ್ದಾರೆ. ಈ ಬಗ್ಗೆ ಆರ್​ಸಿಬಿ ತನ್ನ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದು, ಸ್ಮೃತಿ ಮಂಧಾನ ನಮ್ಮ ಮನೆಗೆ ತಲುಪಿದ್ದಾರೆ, ಅವರಿಗೆ ಸ್ವಾಗತ ಎಂದು ಬರೆದು ಫೋಟೋ ಹಂಚಿಕೊಂಡಿದೆ.

ಇದೀಗ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ತಂಡ ಸೇರಿಕೊಂಡಿದ್ದಾರೆ. ಈ ಬಗ್ಗೆ ಆರ್​ಸಿಬಿ ತನ್ನ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದು, ಸ್ಮೃತಿ ಮಂಧಾನ ನಮ್ಮ ಮನೆಗೆ ತಲುಪಿದ್ದಾರೆ, ಅವರಿಗೆ ಸ್ವಾಗತ ಎಂದು ಬರೆದು ಫೋಟೋ ಹಂಚಿಕೊಂಡಿದೆ.

4 / 9
ಸ್ಮೃತಿ ಮಂಧಾನ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ.

ಸ್ಮೃತಿ ಮಂಧಾನ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ.

5 / 9
ಮಾರ್ಚ್ 4 ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಮಾರ್ಚ್ 4 ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

6 / 9
ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮಹಿಳಾ ತಂಡವು ಮಾರ್ಚ್ 5 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.  ಟೂರ್ನಿಯಲ್ಲಿ ಒಟ್ಟು 20 ಲೀಗ್‌ ಪಂದ್ಯಗಳು ಮತ್ತು 2 ಪ್ಲೇ-ಆಫ್ಸ್‌ ಪಂದ್ಯಗಳು ಸೇರಿ 23 ದಿನ ನಡೆಯಲಿದೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮಹಿಳಾ ತಂಡವು ಮಾರ್ಚ್ 5 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಟೂರ್ನಿಯಲ್ಲಿ ಒಟ್ಟು 20 ಲೀಗ್‌ ಪಂದ್ಯಗಳು ಮತ್ತು 2 ಪ್ಲೇ-ಆಫ್ಸ್‌ ಪಂದ್ಯಗಳು ಸೇರಿ 23 ದಿನ ನಡೆಯಲಿದೆ.

7 / 9
ಆರ್​ಸಿಬಿ ಮಹಿಳಾ ತಂಡ ಸಾಕಷ್ಟು ಬಲಿಷ್ಠವಾಗಿದ್ದು ಸ್ಟಾರ್ ಆಟಗಾರ್ತಿಯರಿಂದ ಕೂಡಿದೆ. ಸ್ಮೃತಿ ಮಂದಾನ, ಎಲಿಸ್ ಪೆರ್ರಿ, ರಿಚಾ ಘೋಷ್, ಸೋಫಿ ಡಿವೈನ್, ರೇಣುಕಾ ಸಿಂಗ್, ಎರಿನ್ ಬರ್ನ್ಸ್ ಅವರಂತಹ ಅಪಾಯಕಾರಿ ಪ್ಲೇಯರ್ಸ್ ತಂಡದಲ್ಲಿದ್ದಾರೆ.

ಆರ್​ಸಿಬಿ ಮಹಿಳಾ ತಂಡ ಸಾಕಷ್ಟು ಬಲಿಷ್ಠವಾಗಿದ್ದು ಸ್ಟಾರ್ ಆಟಗಾರ್ತಿಯರಿಂದ ಕೂಡಿದೆ. ಸ್ಮೃತಿ ಮಂದಾನ, ಎಲಿಸ್ ಪೆರ್ರಿ, ರಿಚಾ ಘೋಷ್, ಸೋಫಿ ಡಿವೈನ್, ರೇಣುಕಾ ಸಿಂಗ್, ಎರಿನ್ ಬರ್ನ್ಸ್ ಅವರಂತಹ ಅಪಾಯಕಾರಿ ಪ್ಲೇಯರ್ಸ್ ತಂಡದಲ್ಲಿದ್ದಾರೆ.

8 / 9
ಆರ್​ಸಿಬಿ ಮಹಿಳಾ ತಂಡ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲಿಸ್ಸಾ ಪೆರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಆಶಾ ಶೋಬನಾ, ಹೆದರ್ ನೈಟ್, ಡೇನ್ ವ್ಯಾನ್ ನೀಕರ್ಕ್, ಪ್ರೀತಿ ಬೋಸ್, ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ಸಹನಾ ಪವಾರ್, ಮೇಗನ್ ಶುಟ್, ಕೋಮಲ್ ಝಂಜಾದ್, ಪೂನಮ್ ಖೇಮ್ನಾರ್.

ಆರ್​ಸಿಬಿ ಮಹಿಳಾ ತಂಡ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲಿಸ್ಸಾ ಪೆರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಆಶಾ ಶೋಬನಾ, ಹೆದರ್ ನೈಟ್, ಡೇನ್ ವ್ಯಾನ್ ನೀಕರ್ಕ್, ಪ್ರೀತಿ ಬೋಸ್, ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ಸಹನಾ ಪವಾರ್, ಮೇಗನ್ ಶುಟ್, ಕೋಮಲ್ ಝಂಜಾದ್, ಪೂನಮ್ ಖೇಮ್ನಾರ್.

9 / 9

Published On - 10:33 am, Thu, 2 March 23

ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ