AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಬಾರಿ ವಿಫಲ… ಐದನೇ ಬಾರಿ ಇತಿಹಾಸ ನಿರ್ಮಿಸಿದ RCB

WPL 2024: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕಳೆದ ಹದಿನಾರು ವರ್ಷಗಳ ಟ್ರೋಫಿ ಗೆಲ್ಲುವ ಕನಸನ್ನು ಆರ್​ಸಿಬಿ ಫ್ರಾಂಚೈಸಿ ಈಡೇರಿಸಿಕೊಂಡಿದೆ.

TV9 Web
| Edited By: |

Updated on:Mar 18, 2024 | 7:24 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಕನಸು ಕೊನೆಗೂ ಈಡೇರಿದೆ. ಕಳೆದ 17 ಸೀಸನ್​ಗಳಿಂದ ಮರೀಚಿಕೆಯಾಗಿದ್ದ ಚಾಂಪಿಯನ್ ಪಟ್ಟ ಕೊನೆಗೂ ಆರ್​ಸಿಬಿಗೆ ಒಲಿದಿದೆ. ಅದು ಕೂಡ ಮಹಿಳಾ ತಂಡದ ಮೂಲಕ ಎಂಬುದು ವಿಶೇಷ. ಅಂದರೆ ಆರ್​ಸಿಬಿ ಫ್ರಾಂಚೈಸಿ ಇದೇ ಮೊದಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಕನಸು ಕೊನೆಗೂ ಈಡೇರಿದೆ. ಕಳೆದ 17 ಸೀಸನ್​ಗಳಿಂದ ಮರೀಚಿಕೆಯಾಗಿದ್ದ ಚಾಂಪಿಯನ್ ಪಟ್ಟ ಕೊನೆಗೂ ಆರ್​ಸಿಬಿಗೆ ಒಲಿದಿದೆ. ಅದು ಕೂಡ ಮಹಿಳಾ ತಂಡದ ಮೂಲಕ ಎಂಬುದು ವಿಶೇಷ. ಅಂದರೆ ಆರ್​ಸಿಬಿ ಫ್ರಾಂಚೈಸಿ ಇದೇ ಮೊದಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 6
2008 ರಲ್ಲಿ ಅಂಗಳಕ್ಕಿಳಿದ ಆರ್​ಸಿಬಿ ಫ್ರಾಂಚೈಸಿಯು ಒಟ್ಟು 17 ಸೀಸನ್​ಗಳಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 16 ಸೀಸನ್ ಆಡಿದ್ರೆ, ​ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ 1 ಸೀಸನ್ ಆಡಿತ್ತು. ಆದರೆ ಈ ಹದಿನೇಳು ಸೀಸನ್​ಗಳಲ್ಲಿ ಒಮ್ಮೆಯೂ ಟ್ರೋಫಿ ಮುಡಿಗೇರಿಸಿಕೊಂಡಿರಲಿಲ್ಲ.

2008 ರಲ್ಲಿ ಅಂಗಳಕ್ಕಿಳಿದ ಆರ್​ಸಿಬಿ ಫ್ರಾಂಚೈಸಿಯು ಒಟ್ಟು 17 ಸೀಸನ್​ಗಳಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 16 ಸೀಸನ್ ಆಡಿದ್ರೆ, ​ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ 1 ಸೀಸನ್ ಆಡಿತ್ತು. ಆದರೆ ಈ ಹದಿನೇಳು ಸೀಸನ್​ಗಳಲ್ಲಿ ಒಮ್ಮೆಯೂ ಟ್ರೋಫಿ ಮುಡಿಗೇರಿಸಿಕೊಂಡಿರಲಿಲ್ಲ.

2 / 6
ಆದರೀಗ ಆರ್​ಸಿಬಿ ಫ್ರಾಂಚೈಸಿಯ 18ನೇ ಸೀಸನ್​ನಲ್ಲಿ ಮಹಿಳಾ ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ತಂದುಕೊಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಬರೋಬ್ಬರಿ 16 ವರ್ಷಗಳ​ ಬಳಿಕ ಆರ್​ಸಿಬಿ ಫ್ರಾಂಚೈಸಿ ತನ್ನ ಪ್ರಶಸ್ತಿ ಖಾತೆಯನ್ನು ತೆರೆದಿದೆ.

ಆದರೀಗ ಆರ್​ಸಿಬಿ ಫ್ರಾಂಚೈಸಿಯ 18ನೇ ಸೀಸನ್​ನಲ್ಲಿ ಮಹಿಳಾ ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ತಂದುಕೊಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಬರೋಬ್ಬರಿ 16 ವರ್ಷಗಳ​ ಬಳಿಕ ಆರ್​ಸಿಬಿ ಫ್ರಾಂಚೈಸಿ ತನ್ನ ಪ್ರಶಸ್ತಿ ಖಾತೆಯನ್ನು ತೆರೆದಿದೆ.

3 / 6
ಇದಕ್ಕೂ ಮುನ್ನ ಆರ್​ಸಿಬಿ ಪುರುಷರ ತಂಡವು ಐಪಿಎಲ್ 2009 ರಲ್ಲಿ ಮೊದಲ ಬಾರಿ ಫೈನಲ್​ಗೆ ಪ್ರವೇಶಿಸಿ ಸೋಲನುಭವಿಸಿತ್ತು. ಇದಾದ ಬಳಿಕ 2011 ಮತ್ತು 2016 ರಲ್ಲಿ ಐಪಿಎಲ್​ ಫೈನಲ್ ಆಡಿದ್ದರೂ ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿತ್ತು. ಇದರ ನಡುವೆ 2011 ರ ಚಾಂಪಿಯನ್ಸ್​ ಟ್ರೋಫಿ ಫೈನಲ್​ನಲ್ಲೂ ಸೋಲನುಭವಿಸಿತು.

ಇದಕ್ಕೂ ಮುನ್ನ ಆರ್​ಸಿಬಿ ಪುರುಷರ ತಂಡವು ಐಪಿಎಲ್ 2009 ರಲ್ಲಿ ಮೊದಲ ಬಾರಿ ಫೈನಲ್​ಗೆ ಪ್ರವೇಶಿಸಿ ಸೋಲನುಭವಿಸಿತ್ತು. ಇದಾದ ಬಳಿಕ 2011 ಮತ್ತು 2016 ರಲ್ಲಿ ಐಪಿಎಲ್​ ಫೈನಲ್ ಆಡಿದ್ದರೂ ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿತ್ತು. ಇದರ ನಡುವೆ 2011 ರ ಚಾಂಪಿಯನ್ಸ್​ ಟ್ರೋಫಿ ಫೈನಲ್​ನಲ್ಲೂ ಸೋಲನುಭವಿಸಿತು.

4 / 6
ಮತ್ತೊಂದೆಡೆ 2023 ರಲ್ಲಿ ಕಣಕ್ಕಿಳಿದ ಆರ್​ಸಿಬಿ ಮಹಿಳಾ ತಂಡವು ಚೊಚ್ಚಲ ಟೂರ್ನಿಯಲ್ಲೇ ಕಳಪೆ ಪ್ರದರ್ಶನ ನೀಡಿತ್ತು. ಆದರೆ ಈ ಬಾರಿ ಸಾಂಘಿಕ ಪ್ರದರ್ಶನದೊಂದಿಗೆ ಗಮನ ಸೆಳೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಮತ್ತೊಂದೆಡೆ 2023 ರಲ್ಲಿ ಕಣಕ್ಕಿಳಿದ ಆರ್​ಸಿಬಿ ಮಹಿಳಾ ತಂಡವು ಚೊಚ್ಚಲ ಟೂರ್ನಿಯಲ್ಲೇ ಕಳಪೆ ಪ್ರದರ್ಶನ ನೀಡಿತ್ತು. ಆದರೆ ಈ ಬಾರಿ ಸಾಂಘಿಕ ಪ್ರದರ್ಶನದೊಂದಿಗೆ ಗಮನ ಸೆಳೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

5 / 6
ಈ ಮೂಲಕ ಆರ್​ಸಿಬಿ ಅಭಿಮಾನಿಗಳ ಬಹುದಿನಗಳ ಕಪ್ ಗೆಲ್ಲುವ ಆಸೆಯನ್ನು ಸ್ಮೃತಿ ಮಂಧಾನ ಪಡೆ ಈಡೇರಿಸಿದೆ. ಇನ್ನು ಉಳಿದಿರುವುದು ವಿರಾಟ್ ಕೊಹ್ಲಿ ಬಳಗದ ಕಪ್ ಗೆಲ್ಲುವ ಕನಸು. ಈ ಕನಸು ಈ ಬಾರಿಯ ಐಪಿಎಲ್ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

ಈ ಮೂಲಕ ಆರ್​ಸಿಬಿ ಅಭಿಮಾನಿಗಳ ಬಹುದಿನಗಳ ಕಪ್ ಗೆಲ್ಲುವ ಆಸೆಯನ್ನು ಸ್ಮೃತಿ ಮಂಧಾನ ಪಡೆ ಈಡೇರಿಸಿದೆ. ಇನ್ನು ಉಳಿದಿರುವುದು ವಿರಾಟ್ ಕೊಹ್ಲಿ ಬಳಗದ ಕಪ್ ಗೆಲ್ಲುವ ಕನಸು. ಈ ಕನಸು ಈ ಬಾರಿಯ ಐಪಿಎಲ್ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

6 / 6

Published On - 7:23 am, Mon, 18 March 24

Web contact
Web contact

TV9 Kannada

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್