AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: RCB ತಂಡದ ನೂತನ ಜೆರ್ಸಿ ಅನಾವರಣ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 23 ರಿಂದ ಟೂರ್ನಿ ಶುರುವಾಗಲಿದ್ದು, ಫೈನಲ್ ಪಂದ್ಯ ಮಾರ್ಚ್ 17 ರಂದು ನಡೆಯಲಿದೆ. ಇನ್ನು ಈ ಬಾರಿಯ ಟೂರ್ನಿಯು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹಾಗೂ ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವುದು ವಿಶೇಷ.

TV9 Web
| Edited By: |

Updated on:Feb 19, 2024 | 3:09 PM

Share
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 (WPL 2024) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 23 ರಿಂದ ಶುರುವಾಗಲಿರುವ ಮಹಿಳಾ ಟಿ20 ಲೀಗ್​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 (WPL 2024) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 23 ರಿಂದ ಶುರುವಾಗಲಿರುವ ಮಹಿಳಾ ಟಿ20 ಲೀಗ್​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ.

1 / 7
ಕಳೆದ ಬಾರಿಯಂತೆ ಈ ಸಲ ಕೂಡ ಆರ್​ಸಿಬಿ ಕೆಂಪು-ಕಪ್ಪು ಬಣ್ಣದ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ನೂತನ ಜೆರ್ಸಿಯ ವಿನ್ಯಾಸದಲ್ಲೂ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ. ಅಂದರೆ ಕಳೆದ ಸೀಸನ್​ನಲ್ಲಿ ಕಾಣಿಸಿಕೊಂಡಿದ್ದ ಅದೇ ವಿನ್ಯಾಸದ ಸಮವಸ್ತ್ರದಲ್ಲಿ ಆರ್​ಸಿಬಿ ವನಿತೆಯರು ಈ ಬಾರಿ ಕಣಕ್ಕಿಳಿಯಲಿದ್ದಾರೆ.

ಕಳೆದ ಬಾರಿಯಂತೆ ಈ ಸಲ ಕೂಡ ಆರ್​ಸಿಬಿ ಕೆಂಪು-ಕಪ್ಪು ಬಣ್ಣದ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ನೂತನ ಜೆರ್ಸಿಯ ವಿನ್ಯಾಸದಲ್ಲೂ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ. ಅಂದರೆ ಕಳೆದ ಸೀಸನ್​ನಲ್ಲಿ ಕಾಣಿಸಿಕೊಂಡಿದ್ದ ಅದೇ ವಿನ್ಯಾಸದ ಸಮವಸ್ತ್ರದಲ್ಲಿ ಆರ್​ಸಿಬಿ ವನಿತೆಯರು ಈ ಬಾರಿ ಕಣಕ್ಕಿಳಿಯಲಿದ್ದಾರೆ.

2 / 7
ಈ ಬಾರಿಯ WPL ಟೂರ್ನಿಯು ಫೆಬ್ರವರಿ 23 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 24 ರಂದು ಯುಪಿ ವಾರಿಯರ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ WPL ಅಭಿಯಾನ ಆರಂಭಿಸಲಿದೆ.

ಈ ಬಾರಿಯ WPL ಟೂರ್ನಿಯು ಫೆಬ್ರವರಿ 23 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 24 ರಂದು ಯುಪಿ ವಾರಿಯರ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ WPL ಅಭಿಯಾನ ಆರಂಭಿಸಲಿದೆ.

3 / 7
ವಿಶೇಷ ಎಂದರೆ ಈ ಬಾರಿಯ ಟೂರ್ನಿಯು ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಅಂದರೆ ಟೂರ್ನಿಯ ಮೊದಲಾರ್ಧವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ದ್ವಿತೀಯಾರ್ಧದ ಪಂದ್ಯಗಳಿಗೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಪ್ಲೇಆಫ್ಸ್ ಮತ್ತು ಫೈನಲ್ ಪಂದ್ಯಗಳು ಕೂಡ ದೆಹಲಿಯಲ್ಲೇ ನಡೆಯಲಿದೆ.

ವಿಶೇಷ ಎಂದರೆ ಈ ಬಾರಿಯ ಟೂರ್ನಿಯು ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಅಂದರೆ ಟೂರ್ನಿಯ ಮೊದಲಾರ್ಧವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ದ್ವಿತೀಯಾರ್ಧದ ಪಂದ್ಯಗಳಿಗೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಪ್ಲೇಆಫ್ಸ್ ಮತ್ತು ಫೈನಲ್ ಪಂದ್ಯಗಳು ಕೂಡ ದೆಹಲಿಯಲ್ಲೇ ನಡೆಯಲಿದೆ.

4 / 7
ಮೊದಲಾರ್ಧದ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನ ಅಭಿಮಾನಿಗಳ ಭರಪೂರ ಬೆಂಬಲ ಸಿಗಲಿದೆ. ಇದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದ್ದು, ಇದರಿಂದಾಗಿ ಈ ಬಾರಿ ರಾಯಲ್ ಗರ್ಲ್ಸ್​ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಮೊದಲಾರ್ಧದ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನ ಅಭಿಮಾನಿಗಳ ಭರಪೂರ ಬೆಂಬಲ ಸಿಗಲಿದೆ. ಇದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದ್ದು, ಇದರಿಂದಾಗಿ ಈ ಬಾರಿ ರಾಯಲ್ ಗರ್ಲ್ಸ್​ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

5 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

6 / 7
ವುಮೆನ್ಸ್ ಪ್ರೀಮಿಯರ್ ಲೀಗ್ 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಜೆರ್ಸಿಯಲ್ಲಿ ಫೋಟೋಗೆ ಫೋಸ್ಟ್ ನೀಡಿದ ನಾಯಕಿ ಸ್ಮೃತಿ ಮಂಧಾನ.

ವುಮೆನ್ಸ್ ಪ್ರೀಮಿಯರ್ ಲೀಗ್ 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಜೆರ್ಸಿಯಲ್ಲಿ ಫೋಟೋಗೆ ಫೋಸ್ಟ್ ನೀಡಿದ ನಾಯಕಿ ಸ್ಮೃತಿ ಮಂಧಾನ.

7 / 7

Published On - 3:08 pm, Mon, 19 February 24

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು