Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL ನಲ್ಲಿ ಹೊಸ ಇತಿಹಾಸ ಬರೆದ RCB ಸ್ಪಿನ್ನರ್

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಕೇವಲ 2 ರನ್​ಗಳ ರೋಚಕ ಗೆಲುವು ದಾಖಲಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 25, 2024 | 8:10 AM

WPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ (UPW)​ ವಿರುದ್ಧದ ರಣರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 2 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಆರ್​ಸಿಬಿ ಸ್ಪಿನ್ನರ್ ಆಶಾ ಸೋಭನಾ. ಈ ಪಂದ್ಯದಲ್ಲಿ ನಾಲ್ಕು ಓವರ್​ಗಳನ್ನು ಎಸೆದಿದ್ದ ಆಶಾ ಕೇವಲ 22 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.

WPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ (UPW)​ ವಿರುದ್ಧದ ರಣರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 2 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಆರ್​ಸಿಬಿ ಸ್ಪಿನ್ನರ್ ಆಶಾ ಸೋಭನಾ. ಈ ಪಂದ್ಯದಲ್ಲಿ ನಾಲ್ಕು ಓವರ್​ಗಳನ್ನು ಎಸೆದಿದ್ದ ಆಶಾ ಕೇವಲ 22 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.

1 / 6
ಈ ಐದು ವಿಕೆಟ್​ಗಳೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಐದು ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎಂಬ ದಾಖಲೆ ಬರೆದರು. ಹಾಗೆಯೇ ಈ ಸಾಧನೆ ಮಾಡಿದ ಮೊದಲ ಆರ್​ಸಿಬಿ ಬೌಲರ್​ ಎಂಬ ಹಿರಿಮೆಗೂ ಪಾತ್ರರಾದರು. ಇದಲ್ಲದೆ RCB ಫ್ರಾಂಚೈಸಿ ಪರ ಈ ಸಾಧನೆ ಮಾಡಿದ 5ನೇ ಬೌಲರ್ ಎನಿಸಿಕೊಂಡರು.

ಈ ಐದು ವಿಕೆಟ್​ಗಳೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಐದು ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎಂಬ ದಾಖಲೆ ಬರೆದರು. ಹಾಗೆಯೇ ಈ ಸಾಧನೆ ಮಾಡಿದ ಮೊದಲ ಆರ್​ಸಿಬಿ ಬೌಲರ್​ ಎಂಬ ಹಿರಿಮೆಗೂ ಪಾತ್ರರಾದರು. ಇದಲ್ಲದೆ RCB ಫ್ರಾಂಚೈಸಿ ಪರ ಈ ಸಾಧನೆ ಮಾಡಿದ 5ನೇ ಬೌಲರ್ ಎನಿಸಿಕೊಂಡರು.

2 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪರ 5 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದೆ. 2009 ರಲ್ಲಿ ಕುಂಬ್ಳೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪರ 5 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದೆ. 2009 ರಲ್ಲಿ ಕುಂಬ್ಳೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು.

3 / 6
ಇದಾದ ಬಳಿಕ 2013 ರಲ್ಲಿ ಜಯದೇವ್ ಉನಾದ್ಕಟ್, 2021 ರಲ್ಲಿ ಹರ್ಷಲ್ ಪಟೇಲ್ ಹಾಗೂ 2022 ರಲ್ಲಿ ವನಿಂದು ಹಸರಂಗ ಆರ್​ಸಿಬಿ ಪರ 5 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಈ ನಾಲ್ವರನ್ನು ಹೊರತುಪಡಿಸಿ ಆರ್​ಸಿಬಿ ಪುರುಷರ ತಂಡದ ಪರ ಯಾವುದೇ ಬೌಲರ್ 5 ವಿಕೆಟ್​ಗಳನ್ನು ಕಬಳಿಸಿಲ್ಲ.

ಇದಾದ ಬಳಿಕ 2013 ರಲ್ಲಿ ಜಯದೇವ್ ಉನಾದ್ಕಟ್, 2021 ರಲ್ಲಿ ಹರ್ಷಲ್ ಪಟೇಲ್ ಹಾಗೂ 2022 ರಲ್ಲಿ ವನಿಂದು ಹಸರಂಗ ಆರ್​ಸಿಬಿ ಪರ 5 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಈ ನಾಲ್ವರನ್ನು ಹೊರತುಪಡಿಸಿ ಆರ್​ಸಿಬಿ ಪುರುಷರ ತಂಡದ ಪರ ಯಾವುದೇ ಬೌಲರ್ 5 ವಿಕೆಟ್​ಗಳನ್ನು ಕಬಳಿಸಿಲ್ಲ.

4 / 6
ಇದೀಗ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್ ಉರುಳಿಸಿ ಆಶಾ ಸೋಭನಾ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಆರ್​ಸಿಬಿ ಮಹಿಳಾ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಇದೀಗ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್ ಉರುಳಿಸಿ ಆಶಾ ಸೋಭನಾ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಆರ್​ಸಿಬಿ ಮಹಿಳಾ ಆಟಗಾರ್ತಿ ಎನಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 6 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ತಂಡಕ್ಕೆ ಕೊನೆಯ ಓವರ್​ನಲ್ಲಿ 11 ರನ್​ಗಳ ಅವಶ್ಯಕತೆಯಿತ್ತು. ಆದರೆ ಅಂತಿಮ ಓವರ್​ನಲ್ಲಿ ಕೇವಲ 8 ರನ್ ನೀಡುವ ಮೂಲಕ ಆರ್​ಸಿಬಿ ತಂಡವು 2 ರನ್​ಗಳ ರೋಚಕ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 6 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ತಂಡಕ್ಕೆ ಕೊನೆಯ ಓವರ್​ನಲ್ಲಿ 11 ರನ್​ಗಳ ಅವಶ್ಯಕತೆಯಿತ್ತು. ಆದರೆ ಅಂತಿಮ ಓವರ್​ನಲ್ಲಿ ಕೇವಲ 8 ರನ್ ನೀಡುವ ಮೂಲಕ ಆರ್​ಸಿಬಿ ತಂಡವು 2 ರನ್​ಗಳ ರೋಚಕ ಜಯ ಸಾಧಿಸಿದೆ.

6 / 6
Follow us
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್