AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: 2 ತಂಡಗಳಿಗೆ ಹೊಸ ಕ್ಯಾಪ್ಟನ್ಸ್: 5 ಟೀಮ್​ಗಳ ನಾಯಕಿಯರ ಪಟ್ಟಿ ಇಲ್ಲಿದೆ

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ ಫೆಬ್ರವರಿ 14 ರಿಂದ ಶುರುವಾಗಲಿದೆ. 5 ತಂಡಗಳ ನಡುವಣ ಈ ಕದನದ ಫೈನಲ್ ಪಂದ್ಯವು ಮಾರ್ಚ್ 15 ರಂದು ನಡೆಯಲಿದೆ. ಇನ್ನು ಈ ಟೂರ್ನಿಯ ಉದ್ಘಾಟನಾ ಪಂದ್ಯವು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದರೆ, ಫೈನಲ್ ಪಂದ್ಯವು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Feb 11, 2025 | 9:04 AM

Share
ವುಮೆನ್ಸ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಫೆಬ್ರವರಿ 14 ರಿಂದ ಶುರುವಾಗಲಿರುವ WPL ಸೀಸನ್-3 ಗಾಗಿ ಎಲ್ಲಾ ಫ್ರಾಂಚೈಸಿಗಳು ತಮ್ಮ ನಾಯಕಿಯರನ್ನು ಘೋಷಿಸಿದೆ. ಅದರಂತೆ ಈ ಬಾರಿ 2 ತಂಡಗಳನ್ನು ಹೊಸ ಕ್ಯಾಪ್ಟನ್​ಗಳು ಮುನ್ನಡೆಸಲಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕಿ ಎಂದು ನೋಡೋಣ...

ವುಮೆನ್ಸ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಫೆಬ್ರವರಿ 14 ರಿಂದ ಶುರುವಾಗಲಿರುವ WPL ಸೀಸನ್-3 ಗಾಗಿ ಎಲ್ಲಾ ಫ್ರಾಂಚೈಸಿಗಳು ತಮ್ಮ ನಾಯಕಿಯರನ್ನು ಘೋಷಿಸಿದೆ. ಅದರಂತೆ ಈ ಬಾರಿ 2 ತಂಡಗಳನ್ನು ಹೊಸ ಕ್ಯಾಪ್ಟನ್​ಗಳು ಮುನ್ನಡೆಸಲಿದ್ದಾರೆ. ಹಾಗಿದ್ರೆ ಯಾವ ತಂಡಕ್ಕೆ ಯಾರು ನಾಯಕಿ ಎಂದು ನೋಡೋಣ...

1 / 6
ಮುಂಬೈ ಇಂಡಿಯನ್ಸ್: ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಕಳೆದ ಎರಡು ಸೀಸನ್​ಗಳಲ್ಲಿ ಹರ್ಮನ್​ಪ್ರೀತ್ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಹೀಗಾಗಿ ಈ ಬಾರಿ ಕೂಡ ಅವರನ್ನೇ ನಾಯಕಿಯಾಗಿ ಮುಂದುವರೆಸಲಾಗಿದೆ.

ಮುಂಬೈ ಇಂಡಿಯನ್ಸ್: ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಕಳೆದ ಎರಡು ಸೀಸನ್​ಗಳಲ್ಲಿ ಹರ್ಮನ್​ಪ್ರೀತ್ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಹೀಗಾಗಿ ಈ ಬಾರಿ ಕೂಡ ಅವರನ್ನೇ ನಾಯಕಿಯಾಗಿ ಮುಂದುವರೆಸಲಾಗಿದೆ.

2 / 6
ಯುಪಿ ವಾರಿಯರ್ಸ್​: ಉತ್ತರ ಪ್ರದೇಶ ವಾರಿಯರ್ಸ್ ತಂಡವನ್ನು ಕಳೆದ ಬಾರಿ ಅಲಿಸ್ಸಾ ಹೀಲಿ ಮುನ್ನಡೆಸಿದ್ದರು. ಆದರೆ ಗಾಯದ ಕಾರಣ ಈ ಬಾರಿಯ ಟೂರ್ನಿಯಿಂದ ಹೀಲಿ ಹೊರಗುಳಿದಿದ್ದಾರೆ. ಅದರಂತೆ ಇದೀಗ ಯುಪಿ ವಾರಿಯರ್ಸ್ ತಂಡದ ಹೊಸ ನಾಯಕಿಯಾಗಿ ದೀಪ್ತಿ ಶರ್ಮಾ ಆಯ್ಕೆಯಾಗಿದ್ದಾರೆ.

ಯುಪಿ ವಾರಿಯರ್ಸ್​: ಉತ್ತರ ಪ್ರದೇಶ ವಾರಿಯರ್ಸ್ ತಂಡವನ್ನು ಕಳೆದ ಬಾರಿ ಅಲಿಸ್ಸಾ ಹೀಲಿ ಮುನ್ನಡೆಸಿದ್ದರು. ಆದರೆ ಗಾಯದ ಕಾರಣ ಈ ಬಾರಿಯ ಟೂರ್ನಿಯಿಂದ ಹೀಲಿ ಹೊರಗುಳಿದಿದ್ದಾರೆ. ಅದರಂತೆ ಇದೀಗ ಯುಪಿ ವಾರಿಯರ್ಸ್ ತಂಡದ ಹೊಸ ನಾಯಕಿಯಾಗಿ ದೀಪ್ತಿ ಶರ್ಮಾ ಆಯ್ಕೆಯಾಗಿದ್ದಾರೆ.

3 / 6
ಡೆಲ್ಲಿ ಕ್ಯಾಪಿಟಲ್ಸ್: ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ್ತಿ ಮೆಗ್ ಲ್ಯಾನಿಂಗ್ ಈ ಬಾರಿ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ. ಕಳೆದ ಎರಡು ಸೀಸನ್​ಗಳಲ್ಲಿ ಲ್ಯಾನಿಂಗ್ ಮುಂದಾಳತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್​ಗೆ ಪ್ರವೇಶಿಸಿತ್ತು. ಹಾಗಾಗಿ ಈ ಬಾರಿ ಸಹ ಅನುಭವಿ ಆಟಗಾರ್ತಿಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್: ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ್ತಿ ಮೆಗ್ ಲ್ಯಾನಿಂಗ್ ಈ ಬಾರಿ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ. ಕಳೆದ ಎರಡು ಸೀಸನ್​ಗಳಲ್ಲಿ ಲ್ಯಾನಿಂಗ್ ಮುಂದಾಳತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್​ಗೆ ಪ್ರವೇಶಿಸಿತ್ತು. ಹಾಗಾಗಿ ಈ ಬಾರಿ ಸಹ ಅನುಭವಿ ಆಟಗಾರ್ತಿಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

4 / 6
ಗುಜರಾತ್ ಜೈಂಟ್ಸ್: ಈ ಬಾರಿಯ ಟೂರ್ನಿಗಾಗಿ ಗುಜರಾತ್ ಜೈಂಟ್ಸ್ ತಂಡ ನಾಯಕಿಯನ್ನು ಬದಲಿಸಿದೆ. ಆಸ್ಟ್ರೇಲಿಯಾ ಆಟಗಾರ್ತಿ ಬೆತ್ ಮೂನಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಿರುವ ಗುಜರಾತ್ ಜೈಂಟ್ಸ್ ಫ್ರಾಂಚೈಸಿ, ಆಸೀಸ್ ಆಲ್​ರೌಂಡರ್ ಆಶ್ಲೀ ಗಾರ್ಡ್ನರ್​ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಿದ್ದಾರೆ.

ಗುಜರಾತ್ ಜೈಂಟ್ಸ್: ಈ ಬಾರಿಯ ಟೂರ್ನಿಗಾಗಿ ಗುಜರಾತ್ ಜೈಂಟ್ಸ್ ತಂಡ ನಾಯಕಿಯನ್ನು ಬದಲಿಸಿದೆ. ಆಸ್ಟ್ರೇಲಿಯಾ ಆಟಗಾರ್ತಿ ಬೆತ್ ಮೂನಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಿರುವ ಗುಜರಾತ್ ಜೈಂಟ್ಸ್ ಫ್ರಾಂಚೈಸಿ, ಆಸೀಸ್ ಆಲ್​ರೌಂಡರ್ ಆಶ್ಲೀ ಗಾರ್ಡ್ನರ್​ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಿದ್ದಾರೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹಾಲಿ ಚಾಂಪಿಯನ್ ಆರ್​ಸಿಬಿ ತಂಡವನ್ನು ಈ ಬಾರಿ ಕೂಡ ಸ್ಮೃತಿ ಮಂಧಾನ ಅವರೇ ಮುನ್ನಡೆಸಲಿದ್ದಾರೆ. ಕಳೆದ ಬಾರಿ ರಾಯಲ್ ಪಡೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವ ಸ್ಮೃತಿ ಈ ಸಲ ಕೂಡ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹಾಲಿ ಚಾಂಪಿಯನ್ ಆರ್​ಸಿಬಿ ತಂಡವನ್ನು ಈ ಬಾರಿ ಕೂಡ ಸ್ಮೃತಿ ಮಂಧಾನ ಅವರೇ ಮುನ್ನಡೆಸಲಿದ್ದಾರೆ. ಕಳೆದ ಬಾರಿ ರಾಯಲ್ ಪಡೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವ ಸ್ಮೃತಿ ಈ ಸಲ ಕೂಡ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ