AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 x 2 = 4: ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

WPL 2025: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಳೆದ 4 ಮ್ಯಾಚ್​ಗಳಲ್ಲೂ ಸ್ಮೃತಿ ಮಂಧಾನ ಪಡೆ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಝಾಹಿರ್ ಯೂಸುಫ್
|

Updated on: Mar 02, 2025 | 9:53 AM

Share
ವುಮೆನ್ಸ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ RCB ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕಳೆದ 4 ಪಂದ್ಯಗಳಲ್ಲೂ ಆರ್​ಸಿಬಿ ತಂಡ ಮುಗ್ಗರಿಸಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ RCB ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕಳೆದ 4 ಪಂದ್ಯಗಳಲ್ಲೂ ಆರ್​ಸಿಬಿ ತಂಡ ಮುಗ್ಗರಿಸಿದೆ.

1 / 5
ಈ ಸತತ ಸೋಲುಗಳೇ ಈಗ ಆರ್​ಸಿಬಿ ಪಾಲಿಗೆ ಮುಳುವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ 2 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 8 ಅಂಕಗಳನ್ನು ಪಡೆದರೂ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಸಾಧ್ಯವಾಗುವುದಿಲ್ಲ.

ಈ ಸತತ ಸೋಲುಗಳೇ ಈಗ ಆರ್​ಸಿಬಿ ಪಾಲಿಗೆ ಮುಳುವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ 2 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 8 ಅಂಕಗಳನ್ನು ಪಡೆದರೂ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಸಾಧ್ಯವಾಗುವುದಿಲ್ಲ.

2 / 5
ಬದಲಾಗಿ  ಪ್ಲೇಆಫ್ ರೇಸ್ ನಲ್ಲಿರುವ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಮೂರು ತಂಡಗಳ ಫಲಿತಾಂಶವನ್ನು ಅವಲಂಭಿಸಿ ಆರ್​ಸಿಬಿ ಮುಂದಿನ ಹಂತಕ್ಕೇರಬಹುದು.

ಬದಲಾಗಿ ಪ್ಲೇಆಫ್ ರೇಸ್ ನಲ್ಲಿರುವ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಮೂರು ತಂಡಗಳ ಫಲಿತಾಂಶವನ್ನು ಅವಲಂಭಿಸಿ ಆರ್​ಸಿಬಿ ಮುಂದಿನ ಹಂತಕ್ಕೇರಬಹುದು.

3 / 5
ಇಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್‌ ವಿರುದ್ದ ಗೆದ್ದರೂ, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಸೋಲನ್ನು ಎದುರಿಸುವುದು ಎದುರು ನೋಡಬೇಕು. ಅಂದರೆ ಈ ಎರಡು ತಂಡಗಳು 8 ಅಂಕಗಳನ್ನು ಪಡೆಯದಿದ್ದರೆ, ಆರ್​ಸಿಬಿ 8 ಪಾಯಿಂಟ್ಸ್ ನೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಇಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್‌ ವಿರುದ್ದ ಗೆದ್ದರೂ, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಸೋಲನ್ನು ಎದುರಿಸುವುದು ಎದುರು ನೋಡಬೇಕು. ಅಂದರೆ ಈ ಎರಡು ತಂಡಗಳು 8 ಅಂಕಗಳನ್ನು ಪಡೆಯದಿದ್ದರೆ, ಆರ್​ಸಿಬಿ 8 ಪಾಯಿಂಟ್ಸ್ ನೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

4 / 5
ಒಂದು ವೇಳೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್‌ ತಂಡಗಳು 8 ಅಂಕಗಳನ್ನು ಪಡೆದುಕೊಂಡರೆ, ಆರ್​ಸಿಬಿ ತಂಡವು ಮೂರನೇ ಸ್ಥಾನ ಪಡೆಯಲು ಉತ್ತಮ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯದೊಂದಿಗೆ ನೆಟ್ ರನ್ ರೇಟ್ ಉತ್ತಮಗೊಳಿಸುವುದು ಕೂಡ ಅನಿವಾರ್ಯ. ಹೀಗಾದಲ್ಲಿ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಲಿದೆ.

ಒಂದು ವೇಳೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್‌ ತಂಡಗಳು 8 ಅಂಕಗಳನ್ನು ಪಡೆದುಕೊಂಡರೆ, ಆರ್​ಸಿಬಿ ತಂಡವು ಮೂರನೇ ಸ್ಥಾನ ಪಡೆಯಲು ಉತ್ತಮ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯದೊಂದಿಗೆ ನೆಟ್ ರನ್ ರೇಟ್ ಉತ್ತಮಗೊಳಿಸುವುದು ಕೂಡ ಅನಿವಾರ್ಯ. ಹೀಗಾದಲ್ಲಿ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಲಿದೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು