AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಪ್ಲೇಆಫ್​ಗೆ ಪ್ರವೇಶಿಸಬೇಕಿದ್ದರೆ ಇಷ್ಟು ಪಂದ್ಯ ಗೆಲ್ಲಲೇಬೇಕು..!

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ 6 ವಿಕೆಟ್​ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB), ಎರಡನೇ ಪಂದ್ಯದಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಆದರೆ ಇದಾದ ಬಳಿಕ ಮುಂಬೈ ಇಂಡಿಯನ್ಸ್ ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ವಿರುದ್ಧ ಸೋಲುಂಡಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇನ್ನೂ ಮೂರು ಮ್ಯಾಚ್​ಗಳಿದ್ದು, ಈ ಪಂದ್ಯಗಳು ಸ್ಮೃತಿ ಮಂಧಾನ ಪಡೆಗೆ ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Mar 01, 2025 | 9:55 AM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆ ಬಳಿಕ ಹ್ಯಾಟ್ರಿಕ್ ಸೋಲುಂಡಿದೆ. ಅದು ಸಹ ತವರು ಮೈದಾನದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಈ ಮೂರು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಕೂಡ ತುಸು ಕಠಿಣವಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆ ಬಳಿಕ ಹ್ಯಾಟ್ರಿಕ್ ಸೋಲುಂಡಿದೆ. ಅದು ಸಹ ತವರು ಮೈದಾನದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಈ ಮೂರು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಕೂಡ ತುಸು ಕಠಿಣವಾಗಿದೆ.

1 / 7
ಅಂದರೆ ಆರ್​ಸಿಬಿ ತಂಡಕ್ಕೆ ಇನ್ನುಳಿದಿರುವುದು ಕೇವಲ ಮೂರು ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳಲ್ಲೂ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.

ಅಂದರೆ ಆರ್​ಸಿಬಿ ತಂಡಕ್ಕೆ ಇನ್ನುಳಿದಿರುವುದು ಕೇವಲ ಮೂರು ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳಲ್ಲೂ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.

2 / 7
ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ, ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧ ಜಯ ಸಾಧಿಸಿದರೆ ಒಟ್ಟು 10 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ, ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧ ಜಯ ಸಾಧಿಸಿದರೆ ಒಟ್ಟು 10 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

3 / 7
ಒಂದು ವೇಳೆ ಆರ್​ಸಿಬಿ ತಂಡವು ಕೊನೆಯ ಮೂರು ಪಂದ್ಯಗಳಲ್ಲಿ 2 ಗೆಲುವು ಮಾತ್ರ ಸಾಧಿಸಿದರೆ, ಒಟ್ಟು 8 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲೇ ಉಳಿಯಲಿದೆ. ಆದರೆ ಇಲ್ಲಿ ನೆಟ್ ರನ್ ರೇಟ್ ಕೂಡ ಗಣನೆಗೆ ಬರುತ್ತದೆ. ಹೀಗಾಗಿ ಆರ್​ಸಿಬಿ ಮುಂದಿನ ಪಂದ್ಯಗಳ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಕೂಡ ಗಮನಹರಿಸಬೇಕಾಗುತ್ತದೆ.

ಒಂದು ವೇಳೆ ಆರ್​ಸಿಬಿ ತಂಡವು ಕೊನೆಯ ಮೂರು ಪಂದ್ಯಗಳಲ್ಲಿ 2 ಗೆಲುವು ಮಾತ್ರ ಸಾಧಿಸಿದರೆ, ಒಟ್ಟು 8 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲೇ ಉಳಿಯಲಿದೆ. ಆದರೆ ಇಲ್ಲಿ ನೆಟ್ ರನ್ ರೇಟ್ ಕೂಡ ಗಣನೆಗೆ ಬರುತ್ತದೆ. ಹೀಗಾಗಿ ಆರ್​ಸಿಬಿ ಮುಂದಿನ ಪಂದ್ಯಗಳ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಕೂಡ ಗಮನಹರಿಸಬೇಕಾಗುತ್ತದೆ.

4 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಮೂರು ಲೀಗ್ ಹಂತದ ಪಂದ್ಯಗಳಲ್ಲಿ ಒಂದು ಜಯ ಮಾತ್ರ ಸಾಧಿಸಿದರೆ, ಪ್ಲೇಆಫ್​ಗೆ ಅರ್ಹತೆ ಪಡೆಯಲು ಇತರೆ ತಂಡಗಳ ಫಲಿತಾಂಶಗಳನ್ನು ಅವಲಂಭಿಸಬೇಕಾಗುತ್ತದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಮೂರು ಲೀಗ್ ಹಂತದ ಪಂದ್ಯಗಳಲ್ಲಿ ಒಂದು ಜಯ ಮಾತ್ರ ಸಾಧಿಸಿದರೆ, ಪ್ಲೇಆಫ್​ಗೆ ಅರ್ಹತೆ ಪಡೆಯಲು ಇತರೆ ತಂಡಗಳ ಫಲಿತಾಂಶಗಳನ್ನು ಅವಲಂಭಿಸಬೇಕಾಗುತ್ತದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ.

5 / 7
ಇನ್ನು ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲೂ ಸೋತರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬೀಳಲಿದೆ. ಏಕೆಂದರೆ ಆರ್​ಸಿಬಿ ವಿರುದ್ಧ ಗೆಲ್ಲುವ ಡೆಲ್ಲಿ ಕ್ಯಾಪಿಟಲ್ಸ್ 10 ಅಂಕಗಳನ್ನು, ಮುಂಬೈ ಇಂಡಿಯನ್ಸ್ 8 ಅಂಕಗಳನ್ನು ಹಾಗೂ ಯುಪಿ ವಾರಿಯರ್ಸ್ 6 ಅಂಕಗಳನ್ನು ಹೊಂದಲಿದೆ. ಇತ್ತ ಆರ್​ಸಿಬಿ ತಂಡದ ಅಂಕವು 4 ರಲ್ಲೇ ಉಳಿಯಲಿದೆ.

ಇನ್ನು ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲೂ ಸೋತರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬೀಳಲಿದೆ. ಏಕೆಂದರೆ ಆರ್​ಸಿಬಿ ವಿರುದ್ಧ ಗೆಲ್ಲುವ ಡೆಲ್ಲಿ ಕ್ಯಾಪಿಟಲ್ಸ್ 10 ಅಂಕಗಳನ್ನು, ಮುಂಬೈ ಇಂಡಿಯನ್ಸ್ 8 ಅಂಕಗಳನ್ನು ಹಾಗೂ ಯುಪಿ ವಾರಿಯರ್ಸ್ 6 ಅಂಕಗಳನ್ನು ಹೊಂದಲಿದೆ. ಇತ್ತ ಆರ್​ಸಿಬಿ ತಂಡದ ಅಂಕವು 4 ರಲ್ಲೇ ಉಳಿಯಲಿದೆ.

6 / 7
ಹೀಗಾಗಿ ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್​-3 ರ ಪ್ಲೇಆಫ್​ಗೆ ನೇರವಾಗಿ ಎಂಟ್ರಿ ಕೊಡಬೇಕಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಅದರಲ್ಲೂ ಎಲ್ಲಾ ಪಂದ್ಯಗಳಲ್ಲೂ ನೆಟ್​ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕಿರುವುದು ಅನಿವಾರ್ಯ.

ಹೀಗಾಗಿ ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್​-3 ರ ಪ್ಲೇಆಫ್​ಗೆ ನೇರವಾಗಿ ಎಂಟ್ರಿ ಕೊಡಬೇಕಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಅದರಲ್ಲೂ ಎಲ್ಲಾ ಪಂದ್ಯಗಳಲ್ಲೂ ನೆಟ್​ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕಿರುವುದು ಅನಿವಾರ್ಯ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ