AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಪ್ಲೇಆಫ್​ಗೆ ಪ್ರವೇಶಿಸಬೇಕಿದ್ದರೆ ಇಷ್ಟು ಪಂದ್ಯ ಗೆಲ್ಲಲೇಬೇಕು..!

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ 6 ವಿಕೆಟ್​ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB), ಎರಡನೇ ಪಂದ್ಯದಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಆದರೆ ಇದಾದ ಬಳಿಕ ಮುಂಬೈ ಇಂಡಿಯನ್ಸ್ ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ವಿರುದ್ಧ ಸೋಲುಂಡಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇನ್ನೂ ಮೂರು ಮ್ಯಾಚ್​ಗಳಿದ್ದು, ಈ ಪಂದ್ಯಗಳು ಸ್ಮೃತಿ ಮಂಧಾನ ಪಡೆಗೆ ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Mar 01, 2025 | 9:55 AM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆ ಬಳಿಕ ಹ್ಯಾಟ್ರಿಕ್ ಸೋಲುಂಡಿದೆ. ಅದು ಸಹ ತವರು ಮೈದಾನದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಈ ಮೂರು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಕೂಡ ತುಸು ಕಠಿಣವಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆ ಬಳಿಕ ಹ್ಯಾಟ್ರಿಕ್ ಸೋಲುಂಡಿದೆ. ಅದು ಸಹ ತವರು ಮೈದಾನದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಈ ಮೂರು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಕೂಡ ತುಸು ಕಠಿಣವಾಗಿದೆ.

1 / 7
ಅಂದರೆ ಆರ್​ಸಿಬಿ ತಂಡಕ್ಕೆ ಇನ್ನುಳಿದಿರುವುದು ಕೇವಲ ಮೂರು ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳಲ್ಲೂ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.

ಅಂದರೆ ಆರ್​ಸಿಬಿ ತಂಡಕ್ಕೆ ಇನ್ನುಳಿದಿರುವುದು ಕೇವಲ ಮೂರು ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳಲ್ಲೂ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.

2 / 7
ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ, ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧ ಜಯ ಸಾಧಿಸಿದರೆ ಒಟ್ಟು 10 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ, ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧ ಜಯ ಸಾಧಿಸಿದರೆ ಒಟ್ಟು 10 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

3 / 7
ಒಂದು ವೇಳೆ ಆರ್​ಸಿಬಿ ತಂಡವು ಕೊನೆಯ ಮೂರು ಪಂದ್ಯಗಳಲ್ಲಿ 2 ಗೆಲುವು ಮಾತ್ರ ಸಾಧಿಸಿದರೆ, ಒಟ್ಟು 8 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲೇ ಉಳಿಯಲಿದೆ. ಆದರೆ ಇಲ್ಲಿ ನೆಟ್ ರನ್ ರೇಟ್ ಕೂಡ ಗಣನೆಗೆ ಬರುತ್ತದೆ. ಹೀಗಾಗಿ ಆರ್​ಸಿಬಿ ಮುಂದಿನ ಪಂದ್ಯಗಳ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಕೂಡ ಗಮನಹರಿಸಬೇಕಾಗುತ್ತದೆ.

ಒಂದು ವೇಳೆ ಆರ್​ಸಿಬಿ ತಂಡವು ಕೊನೆಯ ಮೂರು ಪಂದ್ಯಗಳಲ್ಲಿ 2 ಗೆಲುವು ಮಾತ್ರ ಸಾಧಿಸಿದರೆ, ಒಟ್ಟು 8 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲೇ ಉಳಿಯಲಿದೆ. ಆದರೆ ಇಲ್ಲಿ ನೆಟ್ ರನ್ ರೇಟ್ ಕೂಡ ಗಣನೆಗೆ ಬರುತ್ತದೆ. ಹೀಗಾಗಿ ಆರ್​ಸಿಬಿ ಮುಂದಿನ ಪಂದ್ಯಗಳ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಕೂಡ ಗಮನಹರಿಸಬೇಕಾಗುತ್ತದೆ.

4 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಮೂರು ಲೀಗ್ ಹಂತದ ಪಂದ್ಯಗಳಲ್ಲಿ ಒಂದು ಜಯ ಮಾತ್ರ ಸಾಧಿಸಿದರೆ, ಪ್ಲೇಆಫ್​ಗೆ ಅರ್ಹತೆ ಪಡೆಯಲು ಇತರೆ ತಂಡಗಳ ಫಲಿತಾಂಶಗಳನ್ನು ಅವಲಂಭಿಸಬೇಕಾಗುತ್ತದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಮೂರು ಲೀಗ್ ಹಂತದ ಪಂದ್ಯಗಳಲ್ಲಿ ಒಂದು ಜಯ ಮಾತ್ರ ಸಾಧಿಸಿದರೆ, ಪ್ಲೇಆಫ್​ಗೆ ಅರ್ಹತೆ ಪಡೆಯಲು ಇತರೆ ತಂಡಗಳ ಫಲಿತಾಂಶಗಳನ್ನು ಅವಲಂಭಿಸಬೇಕಾಗುತ್ತದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ.

5 / 7
ಇನ್ನು ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲೂ ಸೋತರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬೀಳಲಿದೆ. ಏಕೆಂದರೆ ಆರ್​ಸಿಬಿ ವಿರುದ್ಧ ಗೆಲ್ಲುವ ಡೆಲ್ಲಿ ಕ್ಯಾಪಿಟಲ್ಸ್ 10 ಅಂಕಗಳನ್ನು, ಮುಂಬೈ ಇಂಡಿಯನ್ಸ್ 8 ಅಂಕಗಳನ್ನು ಹಾಗೂ ಯುಪಿ ವಾರಿಯರ್ಸ್ 6 ಅಂಕಗಳನ್ನು ಹೊಂದಲಿದೆ. ಇತ್ತ ಆರ್​ಸಿಬಿ ತಂಡದ ಅಂಕವು 4 ರಲ್ಲೇ ಉಳಿಯಲಿದೆ.

ಇನ್ನು ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲೂ ಸೋತರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬೀಳಲಿದೆ. ಏಕೆಂದರೆ ಆರ್​ಸಿಬಿ ವಿರುದ್ಧ ಗೆಲ್ಲುವ ಡೆಲ್ಲಿ ಕ್ಯಾಪಿಟಲ್ಸ್ 10 ಅಂಕಗಳನ್ನು, ಮುಂಬೈ ಇಂಡಿಯನ್ಸ್ 8 ಅಂಕಗಳನ್ನು ಹಾಗೂ ಯುಪಿ ವಾರಿಯರ್ಸ್ 6 ಅಂಕಗಳನ್ನು ಹೊಂದಲಿದೆ. ಇತ್ತ ಆರ್​ಸಿಬಿ ತಂಡದ ಅಂಕವು 4 ರಲ್ಲೇ ಉಳಿಯಲಿದೆ.

6 / 7
ಹೀಗಾಗಿ ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್​-3 ರ ಪ್ಲೇಆಫ್​ಗೆ ನೇರವಾಗಿ ಎಂಟ್ರಿ ಕೊಡಬೇಕಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಅದರಲ್ಲೂ ಎಲ್ಲಾ ಪಂದ್ಯಗಳಲ್ಲೂ ನೆಟ್​ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕಿರುವುದು ಅನಿವಾರ್ಯ.

ಹೀಗಾಗಿ ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್​-3 ರ ಪ್ಲೇಆಫ್​ಗೆ ನೇರವಾಗಿ ಎಂಟ್ರಿ ಕೊಡಬೇಕಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಅದರಲ್ಲೂ ಎಲ್ಲಾ ಪಂದ್ಯಗಳಲ್ಲೂ ನೆಟ್​ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕಿರುವುದು ಅನಿವಾರ್ಯ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ