AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಬೆಂಗಳೂರಿನಲ್ಲಿ ಮತ್ತೊಮ್ಮೆ ಅಬ್ಬರಿಸಿದ ಎಲ್ಲಿಸ್ ಪೆರ್ರಿ; ಶತಕ ಜಸ್ಟ್ ಮಿಸ್

Ellyse Perry: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಲ್ಲಿಸ್ ಪೆರ್ರಿ ಅವರು ಯುಪಿ ವಾರಿಯರ್ಸ್ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಅಜೇಯ 90 ರನ್‌ಗಳ ಇನ್ನಿಂಗ್ಸ್‌ ಆಡಿದರು. ಡ್ಯಾನಿ ವ್ಯಾಟ್-ಹಾಡ್ಜ್ ಅವರ 57 ರನ್‌ಗಳ ಕೊಡುಗೆಯೊಂದಿಗೆ, ಆರ್‌ಸಿಬಿ 180 ರನ್‌ಗಳ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿದೆ.

ಪೃಥ್ವಿಶಂಕರ
|

Updated on: Feb 24, 2025 | 9:24 PM

Share
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟರ್ ಎಲ್ಲಿಸ್ ಪೆರ್ರಿ ಯುಪಿ ವಾರಿಯರ್ಸ್​ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟರ್ ಎಲ್ಲಿಸ್ ಪೆರ್ರಿ ಯುಪಿ ವಾರಿಯರ್ಸ್​ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

1 / 5
ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಬಂದ ಎಲ್ಲಿಸ್ ಪೆರ್ರಿ ತಂಡವನ್ನು ಸಂಕಷ್ಟದಿಂದ ಹೊರತಂದಿದಲ್ಲದೆ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 56 ಎಸೆತಗಳನ್ನು ಎದುರಿಸದ ಪೆರ್ರಿ 9 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಹಿತ ಅಜೇಯ 90 ರನ್ ಬಾರಿಸಿದರು.

ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಬಂದ ಎಲ್ಲಿಸ್ ಪೆರ್ರಿ ತಂಡವನ್ನು ಸಂಕಷ್ಟದಿಂದ ಹೊರತಂದಿದಲ್ಲದೆ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 56 ಎಸೆತಗಳನ್ನು ಎದುರಿಸದ ಪೆರ್ರಿ 9 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಹಿತ ಅಜೇಯ 90 ರನ್ ಬಾರಿಸಿದರು.

2 / 5
ಕೊನೆಯ ಓವರ್​ನಲ್ಲಿ ಪೆರ್ರಿ ಶತಕ ಬಾರಿಸುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಎದುರಾಳಿ ತಂಡದ ಅನುಭವಿ ಬೌಲರ್ ಸೋಫಿ ಎಕ್ಲೆಸ್ಟೋನ್ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ಪೆರ್ರಿ ಕೇವಲ 10 ರನ್​ಗಳಿಂದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಶತಕದಿಂದ ವಂಚಿತರಾದರು.

ಕೊನೆಯ ಓವರ್​ನಲ್ಲಿ ಪೆರ್ರಿ ಶತಕ ಬಾರಿಸುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಎದುರಾಳಿ ತಂಡದ ಅನುಭವಿ ಬೌಲರ್ ಸೋಫಿ ಎಕ್ಲೆಸ್ಟೋನ್ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ಪೆರ್ರಿ ಕೇವಲ 10 ರನ್​ಗಳಿಂದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಶತಕದಿಂದ ವಂಚಿತರಾದರು.

3 / 5
ಎಲ್ಲಿಸ್ ಪೆರ್ರಿ ಅವರ ಸ್ಫೋಟಕ 90 ರನ್ ಹಾಗೂ ಡ್ಯಾನಿ ವ್ಯಾಟ್-ಹಾಡ್ಜ್ ಅವರ 57 ರನ್​​ಗಳ ಕಾಣಿಕೆಯಿಂದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 180 ರನ್​ಗಳನ್ನು ಕಲೆಹಾಕಿದೆ. ಪೆರ್ರಿ ಹೊರತಾಗಿ ಡ್ಯಾನಿ ವ್ಯಾಟ್ ಕೂಡ 41 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಹಿತ 57 ರನ್ ಬಾರಿಸಿದರು.

ಎಲ್ಲಿಸ್ ಪೆರ್ರಿ ಅವರ ಸ್ಫೋಟಕ 90 ರನ್ ಹಾಗೂ ಡ್ಯಾನಿ ವ್ಯಾಟ್-ಹಾಡ್ಜ್ ಅವರ 57 ರನ್​​ಗಳ ಕಾಣಿಕೆಯಿಂದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 180 ರನ್​ಗಳನ್ನು ಕಲೆಹಾಕಿದೆ. ಪೆರ್ರಿ ಹೊರತಾಗಿ ಡ್ಯಾನಿ ವ್ಯಾಟ್ ಕೂಡ 41 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಹಿತ 57 ರನ್ ಬಾರಿಸಿದರು.

4 / 5
ಈ ಇಬ್ಬರನ್ನು ಬ್ಯಾಟರ್​ಗಳನ್ನು ಹೊರತುಪಡಿಸಿ ಆರ್​ಸಿಬಿ ಪಾಳಯದಿಂದ ಮತ್ತ್ಯಾರು ಮಿಂಚಲಿಲ್ಲ. ನಾಯಕಿ ಸ್ಮೃತಿ ಮಂಧಾನ 6 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಸ್ಫೋಟಕ ಬ್ಯಾಟರ್ ರಿಚಾ ಘೋಷ್ ಕೂಡ ಸತತ ಎರಡನೇ ಪಂದ್ಯದಲ್ಲೂ ವಿಫಲರಾಗಿ 8 ರನ್​ಗಳಿಗೆ ಸುಸ್ತಾದರು. ಕನಿಕಾ ಅವರ ಇನ್ನಿಂಗ್ಸ್ ಕೂಡ 5 ರನ್​ಗಳಿಗೆ ಅಂತ್ಯವಾಯಿತು.

ಈ ಇಬ್ಬರನ್ನು ಬ್ಯಾಟರ್​ಗಳನ್ನು ಹೊರತುಪಡಿಸಿ ಆರ್​ಸಿಬಿ ಪಾಳಯದಿಂದ ಮತ್ತ್ಯಾರು ಮಿಂಚಲಿಲ್ಲ. ನಾಯಕಿ ಸ್ಮೃತಿ ಮಂಧಾನ 6 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಸ್ಫೋಟಕ ಬ್ಯಾಟರ್ ರಿಚಾ ಘೋಷ್ ಕೂಡ ಸತತ ಎರಡನೇ ಪಂದ್ಯದಲ್ಲೂ ವಿಫಲರಾಗಿ 8 ರನ್​ಗಳಿಗೆ ಸುಸ್ತಾದರು. ಕನಿಕಾ ಅವರ ಇನ್ನಿಂಗ್ಸ್ ಕೂಡ 5 ರನ್​ಗಳಿಗೆ ಅಂತ್ಯವಾಯಿತು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ