Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: RCB ತಂಡಕ್ಕೆ ಟೀಮ್ ಇಂಡಿಯಾ ಆಟಗಾರ್ತಿ ಎಂಟ್ರಿ

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ 2025 ರಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಹೊರಬಿದ್ದಿದ್ದಾರೆ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ 15 ಪಂದ್ಯಗಳನ್ನಾಡಿರುವ ಶ್ರೇಯಾಂಕಾ 19 ವಿಕೆಟ್ ಹಾಗೂ 81 ರನ್ ಕಲೆಹಾಕಿದ್ದರು. ಅದರಲ್ಲೂ ಕಳೆದ ಸೀಸನ್​ನಲ್ಲಿ ಪರ್ಪಲ್ ಕ್ಯಾಪ್ ಗೆಲ್ಲುವ ಮೂಲಕ ಆರ್​ಸಿಬಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಶ್ರೇಯಾಂಕಾ ಪಾಟೀಲ್ ಪ್ರಮುಖ ಪಾತ್ರವಹಿಸಿದ್ದರು.

ಝಾಹಿರ್ ಯೂಸುಫ್
|

Updated on: Feb 16, 2025 | 9:04 AM

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2025) ಮೊದಲ ಪಂದ್ಯದ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಈ ಬಾರಿಯ WPL ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಟೀಮ್ ಇಂಡಿಯಾದ ಅನುಭವಿ ಆಟಗಾರ್ತಿ ಸ್ನೇಹ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2025) ಮೊದಲ ಪಂದ್ಯದ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಈ ಬಾರಿಯ WPL ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಟೀಮ್ ಇಂಡಿಯಾದ ಅನುಭವಿ ಆಟಗಾರ್ತಿ ಸ್ನೇಹ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

1 / 5
ಈ ಬಗ್ಗೆ ಆರ್​ಸಿಬಿ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ಅದರಂತೆ ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಶ್ರೇಯಾಂಕಾ ಪಾಟೀಲ್ ಬದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಲ್​ರೌಂಡರ್​ ಸ್ನೇಹ್ ರಾಣಾ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.

ಈ ಬಗ್ಗೆ ಆರ್​ಸಿಬಿ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ಅದರಂತೆ ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಶ್ರೇಯಾಂಕಾ ಪಾಟೀಲ್ ಬದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಲ್​ರೌಂಡರ್​ ಸ್ನೇಹ್ ರಾಣಾ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.

2 / 5
ಆರ್​ಸಿಬಿ ತಂಡದ ಖಾಯಂ ಸದಸ್ಯೆಯಾಗಿರುವ ಶ್ರೇಯಾಂಕಾ ಪಾಟೀಲ್ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಅವರು 2024ರ ಮಹಿಳಾ ಟಿ20 ವಿಶ್ವಕಪ್ ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಅಲ್ಲದೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗಳಿಂದಲೂ ಹೊರಗುಳಿದಿದ್ದರು.

ಆರ್​ಸಿಬಿ ತಂಡದ ಖಾಯಂ ಸದಸ್ಯೆಯಾಗಿರುವ ಶ್ರೇಯಾಂಕಾ ಪಾಟೀಲ್ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಅವರು 2024ರ ಮಹಿಳಾ ಟಿ20 ವಿಶ್ವಕಪ್ ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಅಲ್ಲದೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗಳಿಂದಲೂ ಹೊರಗುಳಿದಿದ್ದರು.

3 / 5
ಇದೀಗ ಇದೇ ಕಾರಣ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-3 ಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅದರೊಂದಿಗೆ ಆರ್​ಸಿಬಿ ತಂಡದಿಂದ ಕನ್ನಡತಿ ಹೊರಬಿದ್ದಿರುವುದು ಖಚಿತವಾಗಿದೆ. ಅತ್ತ ಶ್ರೇಯಾಂಕಾ ಬದಲಿಗೆ ಸ್ನೇಹ್ ರಾಣಾ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇದೀಗ ಇದೇ ಕಾರಣ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-3 ಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅದರೊಂದಿಗೆ ಆರ್​ಸಿಬಿ ತಂಡದಿಂದ ಕನ್ನಡತಿ ಹೊರಬಿದ್ದಿರುವುದು ಖಚಿತವಾಗಿದೆ. ಅತ್ತ ಶ್ರೇಯಾಂಕಾ ಬದಲಿಗೆ ಸ್ನೇಹ್ ರಾಣಾ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

4 / 5
ಕಳೆದ ಸೀಸನ್​ನಲ್ಲಿ ಗುಜರಾತ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಸ್ನೇಹ್ ರಾಣಾ, ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 12 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 47 ರನ್​ ಜೊತೆ 6 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಆರ್​ಸಿಬಿ ತಂಡದಲ್ಲಿ ಸ್ಥಾನ ಪಡೆದಿರುವ 30 ವರ್ಷ ಸ್ನೇಹ್ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

ಕಳೆದ ಸೀಸನ್​ನಲ್ಲಿ ಗುಜರಾತ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಸ್ನೇಹ್ ರಾಣಾ, ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 12 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 47 ರನ್​ ಜೊತೆ 6 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಆರ್​ಸಿಬಿ ತಂಡದಲ್ಲಿ ಸ್ಥಾನ ಪಡೆದಿರುವ 30 ವರ್ಷ ಸ್ನೇಹ್ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ