AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026 Final: ಡೆಲ್ಲಿ ವಿರುದ್ಧ ಆರ್​ಸಿಬಿ ದಾಖಲೆ ಹೇಗಿದೆ? ಇತಿಹಾಸ ಬದಲಿಸುತ್ತಾ ಸ್ಮೃತಿ ಪಡೆ?

RCB vs DC WPL 2026 Final: 2026ರ WPL ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಡೋದರಾದಲ್ಲಿ ಕಾದಾಡಲಿವೆ. 2024ರ ಫೈನಲ್‌ನಲ್ಲಿ RCB ಗೆದ್ದಿತ್ತು, ಈಗ ಡೆಲ್ಲಿ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. DC ತನ್ನ ಮೊದಲ ಟ್ರೋಫಿ ಗೆಲ್ಲುವ ಗುರಿಯಲ್ಲಿದ್ದರೆ, RCB ಎರಡನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ. ಆದರೆ ನೇರವಾಗಿ ಫೈನಲ್ ತಲುಪಿದ ತಂಡವು ಈವರೆಗೆ WPL ಟ್ರೋಫಿ ಗೆದ್ದಿಲ್ಲ ಎಂಬ ಇತಿಹಾಸವನ್ನು RCB ಬದಲಿಸಬೇಕಿದೆ.

ಪೃಥ್ವಿಶಂಕರ
|

Updated on: Feb 05, 2026 | 3:51 PM

Share
2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ವಡೋದರಾದಲ್ಲಿ ನಡೆಯಲಿದೆ. ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಗೆ. ಇದಕ್ಕೂ ಮುನ್ನ ಎರಡೂ ತಂಡಗಳ ನಡುವೆ 2024 ರಲ್ಲಿ ಫೈನಲ್ ಪಂದ್ಯ ನಡೆದಿತ್ತು. ಆ ಪಂದ್ಯವನ್ನು ಆರ್​ಸಿಬಿ ಗೆದ್ದುಕೊಂಡಿತ್ತು.

2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ವಡೋದರಾದಲ್ಲಿ ನಡೆಯಲಿದೆ. ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಗೆ. ಇದಕ್ಕೂ ಮುನ್ನ ಎರಡೂ ತಂಡಗಳ ನಡುವೆ 2024 ರಲ್ಲಿ ಫೈನಲ್ ಪಂದ್ಯ ನಡೆದಿತ್ತು. ಆ ಪಂದ್ಯವನ್ನು ಆರ್​ಸಿಬಿ ಗೆದ್ದುಕೊಂಡಿತ್ತು.

1 / 5
ಇದೀಗ ಅದೇ ಇತಿಹಾಸವನ್ನು ಪುನರಾವರ್ತಿಸಲು ಆರ್​ಸಿಬಿ ಎದುರು ನೋಡುತ್ತಿದ್ದರೆ, ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಮಾತ್ರವಲ್ಲದೆ ಡೆಲ್ಲಿ ತಂಡ ಸತತ ನಾಲ್ಕನೇ ಬಾರಿಗೆ ಫೈನಲ್ ಆಡುತ್ತಿದ್ದು, ಮೊದಲ ಬಾರಿಗೆ ಟ್ರೋಫಿ ಗೆಲ್ಲುವ ಗುರಿ ಹೊಂದಿದೆ. ಆದರೆ ಆರ್​ಸಿಬಿ ತನ್ನ ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿದೆಯಾದರೂ ಇತಿಹಾಸ ಬದಲಿಸುವ ಸವಾಲು ಸ್ಮೃತಿ ಪಡೆಗಿದೆ.

ಇದೀಗ ಅದೇ ಇತಿಹಾಸವನ್ನು ಪುನರಾವರ್ತಿಸಲು ಆರ್​ಸಿಬಿ ಎದುರು ನೋಡುತ್ತಿದ್ದರೆ, ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಮಾತ್ರವಲ್ಲದೆ ಡೆಲ್ಲಿ ತಂಡ ಸತತ ನಾಲ್ಕನೇ ಬಾರಿಗೆ ಫೈನಲ್ ಆಡುತ್ತಿದ್ದು, ಮೊದಲ ಬಾರಿಗೆ ಟ್ರೋಫಿ ಗೆಲ್ಲುವ ಗುರಿ ಹೊಂದಿದೆ. ಆದರೆ ಆರ್​ಸಿಬಿ ತನ್ನ ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿದೆಯಾದರೂ ಇತಿಹಾಸ ಬದಲಿಸುವ ಸವಾಲು ಸ್ಮೃತಿ ಪಡೆಗಿದೆ.

2 / 5
ವಾಸ್ತವವಾಗಿ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ನೇರವಾಗಿ ಫೈನಲ್ ತಲುಪಿರುವ ತಂಡವು ಇದುವರೆಗೆ ಒಮ್ಮೆಯೂ ಚಾಂಪಿಯನ್ ಆಗಿಲ್ಲ. ಅಂದರೆ ಇದುವರೆಗೆ ಚಾಂಪಿಯನ್ ಆಗಿರುವ ತಂಡಗಳೆಲ್ಲ ಎಲಿಮಿನೇಟರ್ ಆಡಿ ಬಂದ ತಂಡಗಳಾಗಿವೆ. ಹೀಗಾಗಿ ಈ ಬಾರಿ ನೇರವಾಗಿ ಫೈನಲ್​ಗೇರಿರುವ ಆರ್​ಸಿಬಿ ಇತಿಹಾಸ ಬದಲಿಸಿ ಟ್ರೋಪಿ ಎತ್ತಿ ಹಿಡಿಯಬೇಕಿದೆ.

ವಾಸ್ತವವಾಗಿ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ನೇರವಾಗಿ ಫೈನಲ್ ತಲುಪಿರುವ ತಂಡವು ಇದುವರೆಗೆ ಒಮ್ಮೆಯೂ ಚಾಂಪಿಯನ್ ಆಗಿಲ್ಲ. ಅಂದರೆ ಇದುವರೆಗೆ ಚಾಂಪಿಯನ್ ಆಗಿರುವ ತಂಡಗಳೆಲ್ಲ ಎಲಿಮಿನೇಟರ್ ಆಡಿ ಬಂದ ತಂಡಗಳಾಗಿವೆ. ಹೀಗಾಗಿ ಈ ಬಾರಿ ನೇರವಾಗಿ ಫೈನಲ್​ಗೇರಿರುವ ಆರ್​ಸಿಬಿ ಇತಿಹಾಸ ಬದಲಿಸಿ ಟ್ರೋಪಿ ಎತ್ತಿ ಹಿಡಿಯಬೇಕಿದೆ.

3 / 5
ಈ ಫೈನಲ್ ಪಂದ್ಯ ನಡೆಯಲಿರುವ ವಡೋದರಾದಲ್ಲಿ ಎರಡು ತಂಡಗಳ ದಾಖಲೆಯ ಬಗ್ಗೆ ಹೇಳುವುದಾದರೆ.. ಆರ್‌ಸಿಬಿ ಇಲ್ಲಿ ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದರೆ, ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ಎಂಟು ಪಂದ್ಯಗಳಲ್ಲಿ ಆರರಲ್ಲಿ ಗೆದ್ದಿದೆ. ಇನ್ನು ಡಬ್ಲ್ಯೂಪಿಎಲ್ 2026 ರಲ್ಲಿ ಆರ್‌ಸಿಬಿ ವಡೋದರಾದಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆದ್ದಿದ್ದರೆ, ಎರಡರಲ್ಲಿ ಸೋತಿದೆ. ಇನ್ನು ಡೆಲ್ಲಿ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದೆ.

ಈ ಫೈನಲ್ ಪಂದ್ಯ ನಡೆಯಲಿರುವ ವಡೋದರಾದಲ್ಲಿ ಎರಡು ತಂಡಗಳ ದಾಖಲೆಯ ಬಗ್ಗೆ ಹೇಳುವುದಾದರೆ.. ಆರ್‌ಸಿಬಿ ಇಲ್ಲಿ ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದರೆ, ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ಎಂಟು ಪಂದ್ಯಗಳಲ್ಲಿ ಆರರಲ್ಲಿ ಗೆದ್ದಿದೆ. ಇನ್ನು ಡಬ್ಲ್ಯೂಪಿಎಲ್ 2026 ರಲ್ಲಿ ಆರ್‌ಸಿಬಿ ವಡೋದರಾದಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆದ್ದಿದ್ದರೆ, ಎರಡರಲ್ಲಿ ಸೋತಿದೆ. ಇನ್ನು ಡೆಲ್ಲಿ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದೆ.

4 / 5
ಇನ್ನು ಈ ಫೈನಲ್‌ ಪಂದ್ಯಕ್ಕೂ ಮೊದಲು ಆರ್​ಸಿಬಿ ಮತ್ತು ಡೆಲ್ಲಿ ತಂಡಗಳ ನಡುವಿನ ಮುಖಾಮುಖಿ ದಾಖಲೆಯನ್ನು ನೋಡಿದರೆ, ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ಮೇಲೆ ಮೇಲುಗೈ ಸಾಧಿಸಿದೆ. ಇದುವರೆಗೆ ಎರಡು ತಂಡಗಳು ಒಂಬತ್ತು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಆರರಲ್ಲಿ ಗೆದ್ದಿದ್ದರೆ, ಆರ್​ಸಿಬಿ ಉಳಿದ ಪಂದ್ಯಗಳನ್ನು ಗೆದ್ದಕೊಂಡಿದೆ.

ಇನ್ನು ಈ ಫೈನಲ್‌ ಪಂದ್ಯಕ್ಕೂ ಮೊದಲು ಆರ್​ಸಿಬಿ ಮತ್ತು ಡೆಲ್ಲಿ ತಂಡಗಳ ನಡುವಿನ ಮುಖಾಮುಖಿ ದಾಖಲೆಯನ್ನು ನೋಡಿದರೆ, ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ಮೇಲೆ ಮೇಲುಗೈ ಸಾಧಿಸಿದೆ. ಇದುವರೆಗೆ ಎರಡು ತಂಡಗಳು ಒಂಬತ್ತು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಆರರಲ್ಲಿ ಗೆದ್ದಿದ್ದರೆ, ಆರ್​ಸಿಬಿ ಉಳಿದ ಪಂದ್ಯಗಳನ್ನು ಗೆದ್ದಕೊಂಡಿದೆ.

5 / 5
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್