AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಮಿಮಾ ರೊಡ್ರಿಗಸ್​ಗೆ 12 ಲಕ್ಷ ರೂ. ದಂಡ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ 20 ಓವರ್​ಗಳಲ್ಲಿ 174 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 171 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಸೋಲಿನ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 28, 2026 | 10:34 AM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್​ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್​ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ.

1 / 5
ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

2 / 5
ಅದರಂತೆ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಜೆಮಿಮಾ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಈ ಸ್ಲೋ ಓವರ್ ರೇಟ್ ತಪ್ಪಿಗಾಗಿ ಜೆಮಿಮಾ ರೊಡ್ರಿಗಸ್​ 12 ಲಕ್ಷ ರೂ. ಪಾವತಿಸಬೇಕಾಗಿ ಬಂದಿದೆ.

ಅದರಂತೆ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಜೆಮಿಮಾ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಈ ಸ್ಲೋ ಓವರ್ ರೇಟ್ ತಪ್ಪಿಗಾಗಿ ಜೆಮಿಮಾ ರೊಡ್ರಿಗಸ್​ 12 ಲಕ್ಷ ರೂ. ಪಾವತಿಸಬೇಕಾಗಿ ಬಂದಿದೆ.

3 / 5
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಿದ್ದಾರೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಿದ್ದಾರೆ.

4 / 5
ಒಂದು ವೇಳೆ ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕಿಗೆ 30 ಲಕ್ಷ ದಂಡ ವಿಧಿಸಲಿದ್ದಾರೆ. ಅಲ್ಲದೆ ನಾಯಕಿಯು ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡ ಪಾವತಿಸಬೇಕಾಗುತ್ತದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಜೆಮಿಮಾ ರೊಡ್ರಿಗಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸ್ಲೋ ಓವರ್ ರೇಟ್ ತಪ್ಪು ಮಾಡದಂತೆ ಎಚ್ಚರಿಕೆವಹಿಸಬೇಕಾಗುತ್ತದೆ.

ಒಂದು ವೇಳೆ ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕಿಗೆ 30 ಲಕ್ಷ ದಂಡ ವಿಧಿಸಲಿದ್ದಾರೆ. ಅಲ್ಲದೆ ನಾಯಕಿಯು ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡ ಪಾವತಿಸಬೇಕಾಗುತ್ತದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಜೆಮಿಮಾ ರೊಡ್ರಿಗಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸ್ಲೋ ಓವರ್ ರೇಟ್ ತಪ್ಪು ಮಾಡದಂತೆ ಎಚ್ಚರಿಕೆವಹಿಸಬೇಕಾಗುತ್ತದೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ