AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: 2 ನಗರಗಳಲ್ಲಿ ನಡೆಯಲಿದೆ ವುಮೆನ್ಸ್ ಪ್ರೀಮಿಯರ್ ಲೀಗ್

Women's Premier League 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇನ್ನು ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದ್ದರು.

ಝಾಹಿರ್ ಯೂಸುಫ್
|

Updated on:Nov 18, 2025 | 10:05 AM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಅನ್ನು ಎರಡು ನಗರಗಳಲ್ಲಿ ಆಯೋಜಿಸಲು ಚಿಂತಿಸಲಾಗಿದೆ. ಅದರಂತೆ WPL 2026 ಮುಂಬೈ ಮತ್ತು ಬರೋಡಾದಲ್ಲಿ ನಡೆಯುವ ಸಾಧ್ಯತೆಯಿದೆ. ಮುಂಬರುವ ಟಿ20 ವಿಶ್ವಕಪ್​​​ಗೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ಅನ್ನು ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಅನ್ನು ಎರಡು ನಗರಗಳಲ್ಲಿ ಆಯೋಜಿಸಲು ಚಿಂತಿಸಲಾಗಿದೆ. ಅದರಂತೆ WPL 2026 ಮುಂಬೈ ಮತ್ತು ಬರೋಡಾದಲ್ಲಿ ನಡೆಯುವ ಸಾಧ್ಯತೆಯಿದೆ. ಮುಂಬರುವ ಟಿ20 ವಿಶ್ವಕಪ್​​​ಗೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ಅನ್ನು ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

1 / 5
ಏಕೆಂದರೆ 2026ರ ಟಿ20 ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯವಹಿಸಲಿದೆ. ಈ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್​​ ಅನ್ನು ಆಯೋಜಿಸಲು ಭಾರತೀಯ ಕ್ರಿಕೆಟ್ ಮಂಡಳಿ ಪ್ಲ್ಯಾನ್ ರೂಪಿಸುತ್ತಿದೆ.

ಏಕೆಂದರೆ 2026ರ ಟಿ20 ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯವಹಿಸಲಿದೆ. ಈ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್​​ ಅನ್ನು ಆಯೋಜಿಸಲು ಭಾರತೀಯ ಕ್ರಿಕೆಟ್ ಮಂಡಳಿ ಪ್ಲ್ಯಾನ್ ರೂಪಿಸುತ್ತಿದೆ.

2 / 5
ಅದರಂತೆ ವುಮೆನ್ಸ್ ಪ್ರೀಮಿಯರ್ ಲೀಗ್ 2026 ಜನವರಿ 7 ರಿಂದ ಶುರುವಾಗಲಿದ್ದು, ಫೆಬ್ರವರಿ 3 ರಂದು ಕೊನೆಗೊಳ್ಳಲಿದೆ ಎಂದು ತಿಳಿದು ಬಂದಿದೆ. ಅಂದರೆ ಫೆಬ್ರವರಿಯ ಮೊದಲ ವಾರದಲ್ಲೇ WPL ಟೂರ್ನಿಗೆ ತೆರೆ ಎಳೆಯಲು ಬಿಸಿಸಿಐ ನಿರ್ಧರಿಸಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳಲಿದೆ.

ಅದರಂತೆ ವುಮೆನ್ಸ್ ಪ್ರೀಮಿಯರ್ ಲೀಗ್ 2026 ಜನವರಿ 7 ರಿಂದ ಶುರುವಾಗಲಿದ್ದು, ಫೆಬ್ರವರಿ 3 ರಂದು ಕೊನೆಗೊಳ್ಳಲಿದೆ ಎಂದು ತಿಳಿದು ಬಂದಿದೆ. ಅಂದರೆ ಫೆಬ್ರವರಿಯ ಮೊದಲ ವಾರದಲ್ಲೇ WPL ಟೂರ್ನಿಗೆ ತೆರೆ ಎಳೆಯಲು ಬಿಸಿಸಿಐ ನಿರ್ಧರಿಸಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳಲಿದೆ.

3 / 5
ಇನ್ನು ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ರಿಟೈನ್ ಪಟ್ಟಿಯನ್ನು ಸಲ್ಲಿಸಿದ್ದು, ಇನ್ನುಳಿದ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಸಲಿದೆ. ಈ ಹರಾಜು ಪ್ರಕ್ರಿಯೆಯು ನವೆಂಬರ್ 27 ರಂದು ದೆಹಲಿಯಲ್ಲಿ ನಡೆಯಲಿದೆ.

ಇನ್ನು ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ರಿಟೈನ್ ಪಟ್ಟಿಯನ್ನು ಸಲ್ಲಿಸಿದ್ದು, ಇನ್ನುಳಿದ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಸಲಿದೆ. ಈ ಹರಾಜು ಪ್ರಕ್ರಿಯೆಯು ನವೆಂಬರ್ 27 ರಂದು ದೆಹಲಿಯಲ್ಲಿ ನಡೆಯಲಿದೆ.

4 / 5
ವುಮೆನ್ಸ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಕೇವಲ 73 ಆಟಗಾರ್ತಿಯರಿಗೆ ಮಾತ್ರ ಅವಕಾಶ ದೊರೆಯಲಿದೆ. ಏಕೆಂದರೆ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರ್ತಿಯರನ್ನು ತಂಡದಲ್ಲೇ ಉಳಿಸಿಕೊಂಡಿದ್ದು, ಇದೀಗ  73 ಸ್ಲಾಟ್​ಗಳು ಮಾತ್ರ ಖಾಲಿಯಿದೆ. ಈ ಸ್ಥಾನಗಳಿಗಾಗಿ ನವೆಂಬರ್ 27 ರಂದು ಹರಾಜು ನಡೆಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಕೇವಲ 73 ಆಟಗಾರ್ತಿಯರಿಗೆ ಮಾತ್ರ ಅವಕಾಶ ದೊರೆಯಲಿದೆ. ಏಕೆಂದರೆ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರ್ತಿಯರನ್ನು ತಂಡದಲ್ಲೇ ಉಳಿಸಿಕೊಂಡಿದ್ದು, ಇದೀಗ  73 ಸ್ಲಾಟ್​ಗಳು ಮಾತ್ರ ಖಾಲಿಯಿದೆ. ಈ ಸ್ಥಾನಗಳಿಗಾಗಿ ನವೆಂಬರ್ 27 ರಂದು ಹರಾಜು ನಡೆಯಲಿದೆ.

5 / 5

Published On - 10:04 am, Tue, 18 November 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ