AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: RCB ನಾಲ್ವರನ್ನು ಮಾತ್ರ ಉಳಿಸಿಕೊಳ್ಳಲು ಇದುವೇ ಅಸಲಿ ಕಾರಣ..!

WPL 2026 Retention List: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ಗಾಗಿ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಗರಿಷ್ಠ ಐವರನ್ನು ಉಳಿಸಿ, ಉಳಿದ ಆಟಗಾರ್ತಿಯರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಅದರಂತೆ ಆರ್​ಸಿಬಿ ತಂಡವು ಉಳಿಸಿಕೊಂಡಿರುವ ಆಟಗಾರ್ತಿಯರ ಪಟ್ಟಿಯೊಂದು ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: Nov 06, 2025 | 8:24 AM

Share
WPL 2026:  ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು ನಾಲ್ವರು ಆಟಗಾರ್ತಿಯರನ್ನು ರಿಟೈನ್ ಮಾಡಿಕೊಂಡಿದೆ. ಗರಿಷ್ಠ ಐವರನ್ನು ಉಳಿಸಿಕೊಳ್ಳುವ ಅವಕಾಶವಿದ್ದರೂ ಆರ್​ಸಿಬಿ ನಾಲ್ವರನ್ನು ಮಾತ್ರ ಏಕೆ ರಿಟೈನ್ ಮಾಡಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

WPL 2026:  ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು ನಾಲ್ವರು ಆಟಗಾರ್ತಿಯರನ್ನು ರಿಟೈನ್ ಮಾಡಿಕೊಂಡಿದೆ. ಗರಿಷ್ಠ ಐವರನ್ನು ಉಳಿಸಿಕೊಳ್ಳುವ ಅವಕಾಶವಿದ್ದರೂ ಆರ್​ಸಿಬಿ ನಾಲ್ವರನ್ನು ಮಾತ್ರ ಏಕೆ ರಿಟೈನ್ ಮಾಡಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

1 / 7
ವುಮೆನ್ಸ್ ಪ್ರೀಮಿಯರ್ ಲೀಗ್ ರಿಟೆನ್ಷನ್ ನಿಯಮದ ಪ್ರಕಾರ, ಒಂದು ಫ್ರಾಂಚೈಸಿ ಗರಿಷ್ಠ ಐವರನ್ನು ಉಳಿಸಿಕೊಳ್ಳಲು ಬಯಸಿದರೆ ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್​ ಆಟಗಾರ್ತಿ ಇರಬೇಕು. ಅಂದರೆ ರಾಷ್ಟ್ರೀಯ ತಂಡದ ಪರ ಆಡಿರದ ಆಟಗಾರ್ತಿಯನ್ನು ಒಳಗೊಂಡಂತೆ ಐವರನ್ನು ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ರಿಟೆನ್ಷನ್ ನಿಯಮದ ಪ್ರಕಾರ, ಒಂದು ಫ್ರಾಂಚೈಸಿ ಗರಿಷ್ಠ ಐವರನ್ನು ಉಳಿಸಿಕೊಳ್ಳಲು ಬಯಸಿದರೆ ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್​ ಆಟಗಾರ್ತಿ ಇರಬೇಕು. ಅಂದರೆ ರಾಷ್ಟ್ರೀಯ ತಂಡದ ಪರ ಆಡಿರದ ಆಟಗಾರ್ತಿಯನ್ನು ಒಳಗೊಂಡಂತೆ ಐವರನ್ನು ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

2 / 7
ಇತ್ತ ಆರ್​ಸಿಬಿ ತಂಡದಲ್ಲಿರುವವರು ಬಹುತೇಕರು ರಾಷ್ಟ್ರೀಯ ತಂಡದ ಪರ ಆಡಿದ ಆಟಗಾರ್ತಿಯರು. ಇನ್ನು ಅನ್​ಕ್ಯಾಪ್ಡ್​ ಆಗಿರುವ ಪ್ಲೇಯರ್ಸ್ ಕಳೆದ ಸೀಸನ್​ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ವರು ಸ್ಟಾರ್ ಆಟಗಾರ್ತಿಯರನ್ನು ಮಾತ್ರ ಉಳಿಸಿಕೊಂಡಿದೆ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಗೆ ಓರ್ವ ಆಟಗಾರ್ತಿ ಮೇಲೆ ಆರ್​ಟಿಎಂ ಕಾರ್ಡ್ ಬಳಸಲು ಕೂಡ ಅವಕಾಶವಿದೆ. ಇನ್ನು ಆರ್​ಸಿಬಿ ತಂಡದಲ್ಲಿ ರಿಟೈನ್ ಆಗಿರುವ ನೋಡುವುದಾದರೆ...

ಇತ್ತ ಆರ್​ಸಿಬಿ ತಂಡದಲ್ಲಿರುವವರು ಬಹುತೇಕರು ರಾಷ್ಟ್ರೀಯ ತಂಡದ ಪರ ಆಡಿದ ಆಟಗಾರ್ತಿಯರು. ಇನ್ನು ಅನ್​ಕ್ಯಾಪ್ಡ್​ ಆಗಿರುವ ಪ್ಲೇಯರ್ಸ್ ಕಳೆದ ಸೀಸನ್​ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ವರು ಸ್ಟಾರ್ ಆಟಗಾರ್ತಿಯರನ್ನು ಮಾತ್ರ ಉಳಿಸಿಕೊಂಡಿದೆ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಗೆ ಓರ್ವ ಆಟಗಾರ್ತಿ ಮೇಲೆ ಆರ್​ಟಿಎಂ ಕಾರ್ಡ್ ಬಳಸಲು ಕೂಡ ಅವಕಾಶವಿದೆ. ಇನ್ನು ಆರ್​ಸಿಬಿ ತಂಡದಲ್ಲಿ ರಿಟೈನ್ ಆಗಿರುವ ನೋಡುವುದಾದರೆ...

3 / 7
ಸ್ಮೃತಿ ಮಂಧಾನ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡಿದೆ. ಅದರಂತೆ ಸ್ಮೃತಿ ಮಂಧಾನ ಅವರಿಗೆ ಆರ್​ಸಿಬಿ 3.50 ಕೋಟಿ ರೂ. ಪಾವತಿಸಲಿದೆ.

ಸ್ಮೃತಿ ಮಂಧಾನ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡಿದೆ. ಅದರಂತೆ ಸ್ಮೃತಿ ಮಂಧಾನ ಅವರಿಗೆ ಆರ್​ಸಿಬಿ 3.50 ಕೋಟಿ ರೂ. ಪಾವತಿಸಲಿದೆ.

4 / 7
ಎಲ್ಲಿಸ್ ಪೆರ್ರಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ದ್ವಿತೀಯ ರಿಟೆನ್ಷನ್ ಆಗಿ ಆಸ್ಟ್ರೇಲಿಯನ್ ಆಲ್​ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಆಯ್ಕೆ ಮಾಡಿದೆ. ಅದರಂತೆ ಎಲ್ಲಿಸ್ ಪೆರ್ರಿಗೆ ಆರ್​​ಸಿಬಿ ಫ್ರಾಂಚೈಸಿ 2.5 ಕೋಟಿ ರೂ. ಸಂಭಾವನೆ ನೀಡಲಿದೆ.

ಎಲ್ಲಿಸ್ ಪೆರ್ರಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ದ್ವಿತೀಯ ರಿಟೆನ್ಷನ್ ಆಗಿ ಆಸ್ಟ್ರೇಲಿಯನ್ ಆಲ್​ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಆಯ್ಕೆ ಮಾಡಿದೆ. ಅದರಂತೆ ಎಲ್ಲಿಸ್ ಪೆರ್ರಿಗೆ ಆರ್​​ಸಿಬಿ ಫ್ರಾಂಚೈಸಿ 2.5 ಕೋಟಿ ರೂ. ಸಂಭಾವನೆ ನೀಡಲಿದೆ.

5 / 7
ರಿಚಾ ಘೋಷ್: ಆರ್​ಸಿಬಿ ತಂಡವು ಮೂರನೇ ರಿಟೈನ್ ಆಗಿ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಆಯ್ಕೆಯಾಗಿದ್ದಾರೆ. ಕಳೆದ ಮೂರು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ರಿಚಾ ಘೋಷ್​ಗೆ ಆರ್​ಸಿಬಿ 1.75 ಕೋಟಿ ರೂ. ಪಾವತಿಸಲಿದೆ.

ರಿಚಾ ಘೋಷ್: ಆರ್​ಸಿಬಿ ತಂಡವು ಮೂರನೇ ರಿಟೈನ್ ಆಗಿ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಆಯ್ಕೆಯಾಗಿದ್ದಾರೆ. ಕಳೆದ ಮೂರು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ರಿಚಾ ಘೋಷ್​ಗೆ ಆರ್​ಸಿಬಿ 1.75 ಕೋಟಿ ರೂ. ಪಾವತಿಸಲಿದೆ.

6 / 7
ಶ್ರೇಯಾಂಕಾ ಪಾಟೀಲ್: ಕರುನಾಡ ಕುವರಿ ಶ್ರೇಯಾಂಕಾ ಪಾಟೀಲ್ ಅವರನ್ನು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ಕನೇ ಆಟಗಾರ್ತಿಯಾಗಿ ಆಯ್ಕೆ ಮಾಡಿಕೊಂಡಿದೆ. ಅದರಂತೆ ಶ್ರೇಯಾಂಕಾ ಆರ್​ಸಿಬಿ ಪಾವತಿಸಲಿರುವ ಮೊತ್ತ 1 ಕೋಟಿ ರೂ.

ಶ್ರೇಯಾಂಕಾ ಪಾಟೀಲ್: ಕರುನಾಡ ಕುವರಿ ಶ್ರೇಯಾಂಕಾ ಪಾಟೀಲ್ ಅವರನ್ನು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ಕನೇ ಆಟಗಾರ್ತಿಯಾಗಿ ಆಯ್ಕೆ ಮಾಡಿಕೊಂಡಿದೆ. ಅದರಂತೆ ಶ್ರೇಯಾಂಕಾ ಆರ್​ಸಿಬಿ ಪಾವತಿಸಲಿರುವ ಮೊತ್ತ 1 ಕೋಟಿ ರೂ.

7 / 7
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್