AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: RCB ನಾಲ್ವರನ್ನು ಮಾತ್ರ ಉಳಿಸಿಕೊಳ್ಳಲು ಇದುವೇ ಅಸಲಿ ಕಾರಣ..!

WPL 2026 Retention List: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ಗಾಗಿ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಗರಿಷ್ಠ ಐವರನ್ನು ಉಳಿಸಿ, ಉಳಿದ ಆಟಗಾರ್ತಿಯರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಅದರಂತೆ ಆರ್​ಸಿಬಿ ತಂಡವು ಉಳಿಸಿಕೊಂಡಿರುವ ಆಟಗಾರ್ತಿಯರ ಪಟ್ಟಿಯೊಂದು ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: Nov 06, 2025 | 8:24 AM

Share
WPL 2026:  ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು ನಾಲ್ವರು ಆಟಗಾರ್ತಿಯರನ್ನು ರಿಟೈನ್ ಮಾಡಿಕೊಂಡಿದೆ. ಗರಿಷ್ಠ ಐವರನ್ನು ಉಳಿಸಿಕೊಳ್ಳುವ ಅವಕಾಶವಿದ್ದರೂ ಆರ್​ಸಿಬಿ ನಾಲ್ವರನ್ನು ಮಾತ್ರ ಏಕೆ ರಿಟೈನ್ ಮಾಡಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

WPL 2026:  ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಒಟ್ಟು ನಾಲ್ವರು ಆಟಗಾರ್ತಿಯರನ್ನು ರಿಟೈನ್ ಮಾಡಿಕೊಂಡಿದೆ. ಗರಿಷ್ಠ ಐವರನ್ನು ಉಳಿಸಿಕೊಳ್ಳುವ ಅವಕಾಶವಿದ್ದರೂ ಆರ್​ಸಿಬಿ ನಾಲ್ವರನ್ನು ಮಾತ್ರ ಏಕೆ ರಿಟೈನ್ ಮಾಡಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

1 / 7
ವುಮೆನ್ಸ್ ಪ್ರೀಮಿಯರ್ ಲೀಗ್ ರಿಟೆನ್ಷನ್ ನಿಯಮದ ಪ್ರಕಾರ, ಒಂದು ಫ್ರಾಂಚೈಸಿ ಗರಿಷ್ಠ ಐವರನ್ನು ಉಳಿಸಿಕೊಳ್ಳಲು ಬಯಸಿದರೆ ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್​ ಆಟಗಾರ್ತಿ ಇರಬೇಕು. ಅಂದರೆ ರಾಷ್ಟ್ರೀಯ ತಂಡದ ಪರ ಆಡಿರದ ಆಟಗಾರ್ತಿಯನ್ನು ಒಳಗೊಂಡಂತೆ ಐವರನ್ನು ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ರಿಟೆನ್ಷನ್ ನಿಯಮದ ಪ್ರಕಾರ, ಒಂದು ಫ್ರಾಂಚೈಸಿ ಗರಿಷ್ಠ ಐವರನ್ನು ಉಳಿಸಿಕೊಳ್ಳಲು ಬಯಸಿದರೆ ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್​ ಆಟಗಾರ್ತಿ ಇರಬೇಕು. ಅಂದರೆ ರಾಷ್ಟ್ರೀಯ ತಂಡದ ಪರ ಆಡಿರದ ಆಟಗಾರ್ತಿಯನ್ನು ಒಳಗೊಂಡಂತೆ ಐವರನ್ನು ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

2 / 7
ಇತ್ತ ಆರ್​ಸಿಬಿ ತಂಡದಲ್ಲಿರುವವರು ಬಹುತೇಕರು ರಾಷ್ಟ್ರೀಯ ತಂಡದ ಪರ ಆಡಿದ ಆಟಗಾರ್ತಿಯರು. ಇನ್ನು ಅನ್​ಕ್ಯಾಪ್ಡ್​ ಆಗಿರುವ ಪ್ಲೇಯರ್ಸ್ ಕಳೆದ ಸೀಸನ್​ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ವರು ಸ್ಟಾರ್ ಆಟಗಾರ್ತಿಯರನ್ನು ಮಾತ್ರ ಉಳಿಸಿಕೊಂಡಿದೆ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಗೆ ಓರ್ವ ಆಟಗಾರ್ತಿ ಮೇಲೆ ಆರ್​ಟಿಎಂ ಕಾರ್ಡ್ ಬಳಸಲು ಕೂಡ ಅವಕಾಶವಿದೆ. ಇನ್ನು ಆರ್​ಸಿಬಿ ತಂಡದಲ್ಲಿ ರಿಟೈನ್ ಆಗಿರುವ ನೋಡುವುದಾದರೆ...

ಇತ್ತ ಆರ್​ಸಿಬಿ ತಂಡದಲ್ಲಿರುವವರು ಬಹುತೇಕರು ರಾಷ್ಟ್ರೀಯ ತಂಡದ ಪರ ಆಡಿದ ಆಟಗಾರ್ತಿಯರು. ಇನ್ನು ಅನ್​ಕ್ಯಾಪ್ಡ್​ ಆಗಿರುವ ಪ್ಲೇಯರ್ಸ್ ಕಳೆದ ಸೀಸನ್​ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ವರು ಸ್ಟಾರ್ ಆಟಗಾರ್ತಿಯರನ್ನು ಮಾತ್ರ ಉಳಿಸಿಕೊಂಡಿದೆ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಗೆ ಓರ್ವ ಆಟಗಾರ್ತಿ ಮೇಲೆ ಆರ್​ಟಿಎಂ ಕಾರ್ಡ್ ಬಳಸಲು ಕೂಡ ಅವಕಾಶವಿದೆ. ಇನ್ನು ಆರ್​ಸಿಬಿ ತಂಡದಲ್ಲಿ ರಿಟೈನ್ ಆಗಿರುವ ನೋಡುವುದಾದರೆ...

3 / 7
ಸ್ಮೃತಿ ಮಂಧಾನ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡಿದೆ. ಅದರಂತೆ ಸ್ಮೃತಿ ಮಂಧಾನ ಅವರಿಗೆ ಆರ್​ಸಿಬಿ 3.50 ಕೋಟಿ ರೂ. ಪಾವತಿಸಲಿದೆ.

ಸ್ಮೃತಿ ಮಂಧಾನ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡಿದೆ. ಅದರಂತೆ ಸ್ಮೃತಿ ಮಂಧಾನ ಅವರಿಗೆ ಆರ್​ಸಿಬಿ 3.50 ಕೋಟಿ ರೂ. ಪಾವತಿಸಲಿದೆ.

4 / 7
ಎಲ್ಲಿಸ್ ಪೆರ್ರಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ದ್ವಿತೀಯ ರಿಟೆನ್ಷನ್ ಆಗಿ ಆಸ್ಟ್ರೇಲಿಯನ್ ಆಲ್​ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಆಯ್ಕೆ ಮಾಡಿದೆ. ಅದರಂತೆ ಎಲ್ಲಿಸ್ ಪೆರ್ರಿಗೆ ಆರ್​​ಸಿಬಿ ಫ್ರಾಂಚೈಸಿ 2.5 ಕೋಟಿ ರೂ. ಸಂಭಾವನೆ ನೀಡಲಿದೆ.

ಎಲ್ಲಿಸ್ ಪೆರ್ರಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ದ್ವಿತೀಯ ರಿಟೆನ್ಷನ್ ಆಗಿ ಆಸ್ಟ್ರೇಲಿಯನ್ ಆಲ್​ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಆಯ್ಕೆ ಮಾಡಿದೆ. ಅದರಂತೆ ಎಲ್ಲಿಸ್ ಪೆರ್ರಿಗೆ ಆರ್​​ಸಿಬಿ ಫ್ರಾಂಚೈಸಿ 2.5 ಕೋಟಿ ರೂ. ಸಂಭಾವನೆ ನೀಡಲಿದೆ.

5 / 7
ರಿಚಾ ಘೋಷ್: ಆರ್​ಸಿಬಿ ತಂಡವು ಮೂರನೇ ರಿಟೈನ್ ಆಗಿ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಆಯ್ಕೆಯಾಗಿದ್ದಾರೆ. ಕಳೆದ ಮೂರು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ರಿಚಾ ಘೋಷ್​ಗೆ ಆರ್​ಸಿಬಿ 1.75 ಕೋಟಿ ರೂ. ಪಾವತಿಸಲಿದೆ.

ರಿಚಾ ಘೋಷ್: ಆರ್​ಸಿಬಿ ತಂಡವು ಮೂರನೇ ರಿಟೈನ್ ಆಗಿ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಆಯ್ಕೆಯಾಗಿದ್ದಾರೆ. ಕಳೆದ ಮೂರು ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ರಿಚಾ ಘೋಷ್​ಗೆ ಆರ್​ಸಿಬಿ 1.75 ಕೋಟಿ ರೂ. ಪಾವತಿಸಲಿದೆ.

6 / 7
ಶ್ರೇಯಾಂಕಾ ಪಾಟೀಲ್: ಕರುನಾಡ ಕುವರಿ ಶ್ರೇಯಾಂಕಾ ಪಾಟೀಲ್ ಅವರನ್ನು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ಕನೇ ಆಟಗಾರ್ತಿಯಾಗಿ ಆಯ್ಕೆ ಮಾಡಿಕೊಂಡಿದೆ. ಅದರಂತೆ ಶ್ರೇಯಾಂಕಾ ಆರ್​ಸಿಬಿ ಪಾವತಿಸಲಿರುವ ಮೊತ್ತ 1 ಕೋಟಿ ರೂ.

ಶ್ರೇಯಾಂಕಾ ಪಾಟೀಲ್: ಕರುನಾಡ ಕುವರಿ ಶ್ರೇಯಾಂಕಾ ಪಾಟೀಲ್ ಅವರನ್ನು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ಕನೇ ಆಟಗಾರ್ತಿಯಾಗಿ ಆಯ್ಕೆ ಮಾಡಿಕೊಂಡಿದೆ. ಅದರಂತೆ ಶ್ರೇಯಾಂಕಾ ಆರ್​ಸಿಬಿ ಪಾವತಿಸಲಿರುವ ಮೊತ್ತ 1 ಕೋಟಿ ರೂ.

7 / 7
ದೆಹಲಿ ಸ್ಫೋಟ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಓರ್ವ ಶಂಕಿತ ಪೊಲೀಸ್ ವಶಕ್ಕೆ
ದೆಹಲಿ ಸ್ಫೋಟ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಓರ್ವ ಶಂಕಿತ ಪೊಲೀಸ್ ವಶಕ್ಕೆ
ಕೆಂಪುಕೋಟೆ ಬಳಿಯೇ ಸ್ಫೋಟ: ಒಂದೊಂದು ದೃಶ್ಯವೂ ಭಯಾನಕ!
ಕೆಂಪುಕೋಟೆ ಬಳಿಯೇ ಸ್ಫೋಟ: ಒಂದೊಂದು ದೃಶ್ಯವೂ ಭಯಾನಕ!
ಬ್ರ್ಯಾಟ್ ಸಿನಿಮಾ ನೋಡಿ ಸಿಕ್ಕಾಪಟ್ಟೆ ಮೆಚ್ಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ
ಬ್ರ್ಯಾಟ್ ಸಿನಿಮಾ ನೋಡಿ ಸಿಕ್ಕಾಪಟ್ಟೆ ಮೆಚ್ಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ
ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: ಕನಿಷ್ಠ 9 ಜನ ಸಾವು, ಎಲ್ಲೆಡೆ ಹೈಅಲರ್ಟ್​
ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: ಕನಿಷ್ಠ 9 ಜನ ಸಾವು, ಎಲ್ಲೆಡೆ ಹೈಅಲರ್ಟ್​
ದೆಹಲಿಯಲ್ಲಿ ಕಾರು ಸ್ಫೋಟ; ಧಗಧಗನೆ ಹೊತ್ತಿ ಉರಿದ ವಾಹನಗಳು
ದೆಹಲಿಯಲ್ಲಿ ಕಾರು ಸ್ಫೋಟ; ಧಗಧಗನೆ ಹೊತ್ತಿ ಉರಿದ ವಾಹನಗಳು
ರಕ್ಷಿತಾ ಶೆಟ್ಟಿಗೆ ಕನ್ನಡ ಬರಲ್ಲ ಅನ್ನೋದು ನಾಟಕನಾ? ಉತ್ತರಿಸಿದ ಚಂದ್ರಪ್ರಭ
ರಕ್ಷಿತಾ ಶೆಟ್ಟಿಗೆ ಕನ್ನಡ ಬರಲ್ಲ ಅನ್ನೋದು ನಾಟಕನಾ? ಉತ್ತರಿಸಿದ ಚಂದ್ರಪ್ರಭ
ಜೆಡಿಎಸ್​​ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: HDK ಹೇಳಿದ್ದಿಷ್ಟು
ಜೆಡಿಎಸ್​​ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: HDK ಹೇಳಿದ್ದಿಷ್ಟು
ಹೆಣ್ಮಕ್ಕಳ ಬಗ್ಗೆ ಬೇರೆ ರೀತಿ ಮಾತಾಡಿದ ಧ್ರುವಂತ್: ಗ್ರಹಚಾರ ಬಿಡಿಸಿದ ಕಾವ್ಯ
ಹೆಣ್ಮಕ್ಕಳ ಬಗ್ಗೆ ಬೇರೆ ರೀತಿ ಮಾತಾಡಿದ ಧ್ರುವಂತ್: ಗ್ರಹಚಾರ ಬಿಡಿಸಿದ ಕಾವ್ಯ
ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು ಹಾಲು: ಲಕ್ಷ್ಮಣ ಸವದಿ ಖುಷ್
ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು ಹಾಲು: ಲಕ್ಷ್ಮಣ ಸವದಿ ಖುಷ್
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ