AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: ಸತತ 3 ಎಸೆತಗಳಲ್ಲಿ 3 ವಿಕೆಟ್‌ ಉರುಳಿಸಿದ ಆರ್​ಸಿಬಿ; ಆದರೂ ಹ್ಯಾಟ್ರಿಕ್ ಸಿಗಲಿಲ್ಲ

WPL 2026 RCB vs UP Warriors: ಮಹಿಳಾ ಪ್ರೀಮಿಯರ್ ಲೀಗ್ 2026 ರಲ್ಲಿ ಆರ್​ಸಿಬಿ ಯುಪಿ ವಾರಿಯರ್ಸ್ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದೆ. ಯುಪಿ ತಂಡವನ್ನು 144 ರನ್‌ಗಳಿಗೆ ಕಟ್ಟಿಹಾಕಿದ ಆರ್​ಸಿಬಿ, 50 ರನ್‌ಗಳ ಒಳಗೇ 5 ವಿಕೆಟ್ ಪಡೆದು ಪ್ರಾಬಲ್ಯ ಮೆರೆಯಿತು. ಪ್ರಮುಖವಾಗಿ 3 ಎಸೆತಗಳಲ್ಲಿ 3 ವಿಕೆಟ್‌ಗಳು ಪತನಗೊಂಡರೂ, ಎರಡು ವಿಭಿನ್ನ ಓವರ್‌ಗಳಲ್ಲಿ ಬಿದ್ದ ಕಾರಣ ಹ್ಯಾಟ್ರಿಕ್ ಸಾಧಿಸಲಾಗಲಿಲ್ಲ. ಇದು ಪಂದ್ಯದ ಪ್ರಮುಖ ತಿರುವು.

ಪೃಥ್ವಿಶಂಕರ
|

Updated on: Jan 12, 2026 | 9:57 PM

Share
ಮಹಿಳಾ ಪ್ರೀಮಿಯರ್ ಲೀಗ್ 2026 ರ ಸೀಸನ್​ಗೆ ಅದ್ಭುತ ಆರಂಭ ಸಿಕ್ಕಿದೆ. ಮೊದಲ ಪಂದ್ಯವನ್ನು ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಗೆದ್ದುಕೊಂಡಿದ್ದ ಆರ್​ಸಿಬಿ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿದ ಆರ್​ಸಿಬಿ, ಯುಪಿ ತಂಡವನ್ನು 144 ರನ್​ಗಳಿಗೆ ಸೀಮಿತಗೊಳಿಸಿದೆ.

ಮಹಿಳಾ ಪ್ರೀಮಿಯರ್ ಲೀಗ್ 2026 ರ ಸೀಸನ್​ಗೆ ಅದ್ಭುತ ಆರಂಭ ಸಿಕ್ಕಿದೆ. ಮೊದಲ ಪಂದ್ಯವನ್ನು ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಗೆದ್ದುಕೊಂಡಿದ್ದ ಆರ್​ಸಿಬಿ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿದ ಆರ್​ಸಿಬಿ, ಯುಪಿ ತಂಡವನ್ನು 144 ರನ್​ಗಳಿಗೆ ಸೀಮಿತಗೊಳಿಸಿದೆ.

1 / 8
ಈ ಪಂದ್ಯದಲ್ಲಿ ಆರಂಭದಿಂದಲೂ ಯುಪಿ ಬ್ಯಾಟಿಂಗ್ ವಿಭಾಗವನ್ನು ಕಾಡಿದ ಆರ್​ಸಿಬಿ ಬೌಲರ್​ಗಳು 50 ರನ್​ಗಳ ಒಳಗೆ ತಂಡದ ಪ್ರಮುಖ 5 ವಿಕೆಟ್ ಉರುಳಿಸಿದರು. ಇದಕ್ಕೆ ಪೂರಕವಾಗಿ ಈ ಪಂದ್ಯದಲ್ಲಿ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳು ಪತನಗೊಂಡವು. ಆದರೆ ಈ ಬಾರಿ ಹ್ಯಾಟ್ರಿಕ್ ಸಾಧಿಸಲಾಗಲಿಲ್ಲ. ಇದಕ್ಕೆ ಕಾರಣ ಏನೆಂದರೆ?

ಈ ಪಂದ್ಯದಲ್ಲಿ ಆರಂಭದಿಂದಲೂ ಯುಪಿ ಬ್ಯಾಟಿಂಗ್ ವಿಭಾಗವನ್ನು ಕಾಡಿದ ಆರ್​ಸಿಬಿ ಬೌಲರ್​ಗಳು 50 ರನ್​ಗಳ ಒಳಗೆ ತಂಡದ ಪ್ರಮುಖ 5 ವಿಕೆಟ್ ಉರುಳಿಸಿದರು. ಇದಕ್ಕೆ ಪೂರಕವಾಗಿ ಈ ಪಂದ್ಯದಲ್ಲಿ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳು ಪತನಗೊಂಡವು. ಆದರೆ ಈ ಬಾರಿ ಹ್ಯಾಟ್ರಿಕ್ ಸಾಧಿಸಲಾಗಲಿಲ್ಲ. ಇದಕ್ಕೆ ಕಾರಣ ಏನೆಂದರೆ?

2 / 8
ಜನವರಿ 12, ಸೋಮವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಡಬ್ಲ್ಯೂಪಿಎಲ್ 2026 ಪಂದ್ಯದಲ್ಲಿ, ಸ್ಮೃತಿ ಮಂಧಾನ ನಾಯಕತ್ವದ ಬೆಂಗಳೂರು ತಂಡ ಮೊದಲು ಬೌಲಿಂಗ್ ಮಾಡಿತು. ಮತ್ತೊಮ್ಮೆ, ಇಂಗ್ಲೆಂಡ್‌ನ ಸ್ಟಾರ್ ವೇಗಿ ಲಾರೆನ್ ಬೆಲ್ ಇನ್ನಿಂಗ್ಸ್‌ನ ಮೂರನೇ ಓವರ್‌ನಲ್ಲಿ ತಮ್ಮ ಮೊದಲ ವಿಕೆಟ್ ಪಡೆದರು.

ಜನವರಿ 12, ಸೋಮವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಡಬ್ಲ್ಯೂಪಿಎಲ್ 2026 ಪಂದ್ಯದಲ್ಲಿ, ಸ್ಮೃತಿ ಮಂಧಾನ ನಾಯಕತ್ವದ ಬೆಂಗಳೂರು ತಂಡ ಮೊದಲು ಬೌಲಿಂಗ್ ಮಾಡಿತು. ಮತ್ತೊಮ್ಮೆ, ಇಂಗ್ಲೆಂಡ್‌ನ ಸ್ಟಾರ್ ವೇಗಿ ಲಾರೆನ್ ಬೆಲ್ ಇನ್ನಿಂಗ್ಸ್‌ನ ಮೂರನೇ ಓವರ್‌ನಲ್ಲಿ ತಮ್ಮ ಮೊದಲ ವಿಕೆಟ್ ಪಡೆದರು.

3 / 8
ಆರ್‌ಸಿಬಿಯ ಬಿಗಿಯಾದ ಬೌಲಿಂಗ್‌ನಿಂದಾಗಿ, ಯುಪಿ ವಾರಿಯರ್ಸ್ ಮುಕ್ತವಾಗಿ ರನ್​ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡ ಒತ್ತಡಕ್ಕೊಳಗಾಯಿತು. ಇದರ ಪರಿಣಾಮವಾಗಿ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಸೇರಿದಂತೆ ಬ್ಯಾಟಿಂಗ್ ಜೀವಾಳ ಎನಿಸಿಕೊಂಡಿದ್ದ ಪ್ರಮುಖ ಆಟಗಾರ್ತಿಯರು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು.

ಆರ್‌ಸಿಬಿಯ ಬಿಗಿಯಾದ ಬೌಲಿಂಗ್‌ನಿಂದಾಗಿ, ಯುಪಿ ವಾರಿಯರ್ಸ್ ಮುಕ್ತವಾಗಿ ರನ್​ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡ ಒತ್ತಡಕ್ಕೊಳಗಾಯಿತು. ಇದರ ಪರಿಣಾಮವಾಗಿ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಸೇರಿದಂತೆ ಬ್ಯಾಟಿಂಗ್ ಜೀವಾಳ ಎನಿಸಿಕೊಂಡಿದ್ದ ಪ್ರಮುಖ ಆಟಗಾರ್ತಿಯರು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು.

4 / 8
ಎಂಟನೇ ಓವರ್‌ನ ಮೊದಲ ಎಸೆತದಲ್ಲಿ ಶ್ರೇಯಾಂಕ ಪಾಟೀಲ್ ಯುಪಿ ನಾಯಕಿ ಲ್ಯಾನಿಂಗ್ ಅವರನ್ನು ಔಟ್ ಮಾಡಿದರೆ, ಫೋಬೆ ಲಿಚ್‌ಫೀಲ್ಡ್ ಮತ್ತು ಕಿರಣ್ ನವ್‌ಗಿರೆ ಆ ಓವರ್‌ನಲ್ಲಿ ಒಂದು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿದರು. ಆದಾಗ್ಯೂ ಯುಪಿ ಆ ಬಳಿಕ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.

ಎಂಟನೇ ಓವರ್‌ನ ಮೊದಲ ಎಸೆತದಲ್ಲಿ ಶ್ರೇಯಾಂಕ ಪಾಟೀಲ್ ಯುಪಿ ನಾಯಕಿ ಲ್ಯಾನಿಂಗ್ ಅವರನ್ನು ಔಟ್ ಮಾಡಿದರೆ, ಫೋಬೆ ಲಿಚ್‌ಫೀಲ್ಡ್ ಮತ್ತು ಕಿರಣ್ ನವ್‌ಗಿರೆ ಆ ಓವರ್‌ನಲ್ಲಿ ಒಂದು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿದರು. ಆದಾಗ್ಯೂ ಯುಪಿ ಆ ಬಳಿಕ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.

5 / 8
ಮೊದಲು, ಲಿಚ್‌ಫೀಲ್ಡ್ ಔಟಾದರೆ, ನಂತರ ಮುಂದಿನ ಎಸೆತದಲ್ಲಿ ನವ್‌ಗಿರೆ ಔಟ್ ಆದರು. ಹೊಸ ಬ್ಯಾಟ್ಸ್‌ಮನ್ ಶ್ವೇತಾ ಸೆಹ್ರಾವತ್ ಮೊದಲ ಎಸೆತದಲ್ಲೇ ಖಾತೆ ತೆರೆಯದೆಯೇ ಔಟಾದರು. ಹೀಗಾಗಿ, ಯುಪಿ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.

ಮೊದಲು, ಲಿಚ್‌ಫೀಲ್ಡ್ ಔಟಾದರೆ, ನಂತರ ಮುಂದಿನ ಎಸೆತದಲ್ಲಿ ನವ್‌ಗಿರೆ ಔಟ್ ಆದರು. ಹೊಸ ಬ್ಯಾಟ್ಸ್‌ಮನ್ ಶ್ವೇತಾ ಸೆಹ್ರಾವತ್ ಮೊದಲ ಎಸೆತದಲ್ಲೇ ಖಾತೆ ತೆರೆಯದೆಯೇ ಔಟಾದರು. ಹೀಗಾಗಿ, ಯುಪಿ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.

6 / 8
ಆದರೆ ಇದರ ಹೊರತಾಗಿಯೂ, ಹ್ಯಾಟ್ರಿಕ್ ಆಗಲಿಲ್ಲ. ವಾಸ್ತವವಾಗಿ ಯುಪಿ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತ್ತಾದರೂ ಆ 3 ವಿಕೆಟ್​ಗಳು ಎರಡು ವಿಭಿನ್ನ ಓವರ್‌ಗಳಲ್ಲಿ ಪತನಗೊಂಡವು. ಶ್ರೇಯಾಂಕ ಪಾಟೀಲ್ ಅವರ ಓವರ್‌ನ ಕೊನೆಯ ಎಸೆತದಲ್ಲಿ ಲಿಚ್‌ಫೀಲ್ಡ್ ಅವರ ವಿಕೆಟ್ ಪತನವಾದರೆ, ಮುಂದಿನ ಓವರ್‌ನಲ್ಲಿ ನಾಡಿನ್ ಡಿ ಕ್ಲರ್ಕ್ ಮೊದಲ ಎರಡು ಎಸೆತಗಳಲ್ಲಿ ನವ್‌ಗಿರೆ ಮತ್ತು ಸೆಹ್ರಾವತ್ ಅವರನ್ನು ಔಟ್ ಮಾಡಿದರು.

ಆದರೆ ಇದರ ಹೊರತಾಗಿಯೂ, ಹ್ಯಾಟ್ರಿಕ್ ಆಗಲಿಲ್ಲ. ವಾಸ್ತವವಾಗಿ ಯುಪಿ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತ್ತಾದರೂ ಆ 3 ವಿಕೆಟ್​ಗಳು ಎರಡು ವಿಭಿನ್ನ ಓವರ್‌ಗಳಲ್ಲಿ ಪತನಗೊಂಡವು. ಶ್ರೇಯಾಂಕ ಪಾಟೀಲ್ ಅವರ ಓವರ್‌ನ ಕೊನೆಯ ಎಸೆತದಲ್ಲಿ ಲಿಚ್‌ಫೀಲ್ಡ್ ಅವರ ವಿಕೆಟ್ ಪತನವಾದರೆ, ಮುಂದಿನ ಓವರ್‌ನಲ್ಲಿ ನಾಡಿನ್ ಡಿ ಕ್ಲರ್ಕ್ ಮೊದಲ ಎರಡು ಎಸೆತಗಳಲ್ಲಿ ನವ್‌ಗಿರೆ ಮತ್ತು ಸೆಹ್ರಾವತ್ ಅವರನ್ನು ಔಟ್ ಮಾಡಿದರು.

7 / 8
ಡಿ ಕ್ಲರ್ಕ್ ತಮ್ಮ ಓವರ್​ನಲ್ಲಿ ಹ್ಯಾಟ್ರಿಕ್ ಪೂರ್ಣಗೊಳಿಸುವ ಅವಕಾಶವನ್ನು ಹೊಂದಿದ್ದರು, ಆದರೆ ಅದು ಆಗಲಿಲ್ಲ. ಈ ಇನ್ನಿಂಗ್ಸ್‌ನಲ್ಲಿ ಹ್ಯಾಟ್ರಿಕ್ ಸಾಧಿಸದಿದ್ದರೂ, ಆರ್‌ಸಿಬಿ ಕೇವಲ ಎಂಟು ಎಸೆತಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ಯುಪಿ ವಾರಿಯರ್ಸ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿತು.

ಡಿ ಕ್ಲರ್ಕ್ ತಮ್ಮ ಓವರ್​ನಲ್ಲಿ ಹ್ಯಾಟ್ರಿಕ್ ಪೂರ್ಣಗೊಳಿಸುವ ಅವಕಾಶವನ್ನು ಹೊಂದಿದ್ದರು, ಆದರೆ ಅದು ಆಗಲಿಲ್ಲ. ಈ ಇನ್ನಿಂಗ್ಸ್‌ನಲ್ಲಿ ಹ್ಯಾಟ್ರಿಕ್ ಸಾಧಿಸದಿದ್ದರೂ, ಆರ್‌ಸಿಬಿ ಕೇವಲ ಎಂಟು ಎಸೆತಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ಯುಪಿ ವಾರಿಯರ್ಸ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿತು.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ