AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲು… RCBಗೆ ನೇರವಾಗಿ ಫೈನಲ್​ಗೇರಲು ಇರೋದು ಇದೊಂದೇ ದಾರಿ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 184 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 15 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jan 27, 2026 | 7:34 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​​ ಸೀಸನ್​-4 ರಲ್ಲಿ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಇತಿಹಾಸ ಬರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್​ಗಳಿಂದ ಪರಾಜಯಗೊಂಡಿದ್ದ ಆರ್​ಸಿಬಿ ತಂಡವು ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 15 ರನ್​ಗಳಿಂದ ಮುಗ್ಗರಿಸಿದೆ.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​​ ಸೀಸನ್​-4 ರಲ್ಲಿ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಇತಿಹಾಸ ಬರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್​ಗಳಿಂದ ಪರಾಜಯಗೊಂಡಿದ್ದ ಆರ್​ಸಿಬಿ ತಂಡವು ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 15 ರನ್​ಗಳಿಂದ ಮುಗ್ಗರಿಸಿದೆ.

1 / 6
ಈ ಎರಡು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಡೈರೆಕ್ಟ್ ಫೈನಲ್​ ಎಂಟ್ರಿಗೆ ತೊಡಕುಂಟಾಗಿದೆ. ಅಂದರೆ ಆರ್​ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್​​ಗೆ ಪ್ರವೇಶಿಸುತ್ತಿತ್ತು. ಈ ಮೂಲಕ ಎಲಿಮಿನೇಟರ್ ಪಂದ್ಯವಾಡುವ ರಿಸ್ಕ್​ನಿಂದ ಪರಾಗಬಹುದಿತ್ತು.

ಈ ಎರಡು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಡೈರೆಕ್ಟ್ ಫೈನಲ್​ ಎಂಟ್ರಿಗೆ ತೊಡಕುಂಟಾಗಿದೆ. ಅಂದರೆ ಆರ್​ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್​​ಗೆ ಪ್ರವೇಶಿಸುತ್ತಿತ್ತು. ಈ ಮೂಲಕ ಎಲಿಮಿನೇಟರ್ ಪಂದ್ಯವಾಡುವ ರಿಸ್ಕ್​ನಿಂದ ಪರಾಗಬಹುದಿತ್ತು.

2 / 6
ಇದೀಗ ಎರಡು ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಂದರೆ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಗೆದ್ದರೆ ಮಾತ್ರ ಆರ್​ಸಿಬಿ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

ಇದೀಗ ಎರಡು ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಂದರೆ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಗೆದ್ದರೆ ಮಾತ್ರ ಆರ್​ಸಿಬಿ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

3 / 6
ಆರ್​ಸಿಬಿ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಜನವರಿ 29 ರಂದು ನಡೆಯಲಿರುವ ಈ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಗೆದ್ದರೆ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಯುಪಿ ವಾರಿಯರ್ಸ್ ವಿರುದ್ಧ ಕೂಡ ಸೋತರೆ ನೆಟ್​ ರನ್ ರೇಟ್​ ಲೆಕ್ಕಾಚಾರ ಪರಿಗಣನೆಗೆ ಬರಲಿದೆ.

ಆರ್​ಸಿಬಿ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಜನವರಿ 29 ರಂದು ನಡೆಯಲಿರುವ ಈ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಗೆದ್ದರೆ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಯುಪಿ ವಾರಿಯರ್ಸ್ ವಿರುದ್ಧ ಕೂಡ ಸೋತರೆ ನೆಟ್​ ರನ್ ರೇಟ್​ ಲೆಕ್ಕಾಚಾರ ಪರಿಗಣನೆಗೆ ಬರಲಿದೆ.

4 / 6
ಏಕೆಂದರೆ ಮುಂದಿನ ಪಂದ್ಯಗಳ ಮೂಲಕ ಉಳಿದ ನಾಲ್ಕು ತಂಡಗಳಿಗೂ 10 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ. ಹೀಗೆ ಟಾಪ್-3 ತಂಡಗಳು 10 ಅಂಕಗಳನ್ನು ಪಡೆದುಕೊಂಡರೆ, ಅತ್ಯುತ್ತಮ ನೆಟ್​ ರನ್ ರೇಟ್​ ಹೊಂದಿರುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಅಂದರೆ ಲೀಗ್ ಹಂತದ ಪಂದ್ಯದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವು  ಫೈನಲ್​ಗೇರಲಿದೆ.

ಏಕೆಂದರೆ ಮುಂದಿನ ಪಂದ್ಯಗಳ ಮೂಲಕ ಉಳಿದ ನಾಲ್ಕು ತಂಡಗಳಿಗೂ 10 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ. ಹೀಗೆ ಟಾಪ್-3 ತಂಡಗಳು 10 ಅಂಕಗಳನ್ನು ಪಡೆದುಕೊಂಡರೆ, ಅತ್ಯುತ್ತಮ ನೆಟ್​ ರನ್ ರೇಟ್​ ಹೊಂದಿರುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಅಂದರೆ ಲೀಗ್ ಹಂತದ ಪಂದ್ಯದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವು  ಫೈನಲ್​ಗೇರಲಿದೆ.

5 / 6
ಇದೀಗ 10 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ 12 ಅಂಕಗಳನ್ನು ಪಡೆಯಬಹುದು. ಈ ಮೂಲಕ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು. ಅಂದರೆ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಗೆದ್ದರೆ ಮಾತ್ರ ನೇರವಾಗಿ ಫೈನಲ್​ಗೆ ಪ್ರವೇಶಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.

ಇದೀಗ 10 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ 12 ಅಂಕಗಳನ್ನು ಪಡೆಯಬಹುದು. ಈ ಮೂಲಕ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು. ಅಂದರೆ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಗೆದ್ದರೆ ಮಾತ್ರ ನೇರವಾಗಿ ಫೈನಲ್​ಗೆ ಪ್ರವೇಶಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.

6 / 6
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ