AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲು… RCBಗೆ ನೇರವಾಗಿ ಫೈನಲ್​ಗೇರಲು ಇರೋದು ಇದೊಂದೇ ದಾರಿ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 184 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 15 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jan 27, 2026 | 7:34 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​​ ಸೀಸನ್​-4 ರಲ್ಲಿ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಇತಿಹಾಸ ಬರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್​ಗಳಿಂದ ಪರಾಜಯಗೊಂಡಿದ್ದ ಆರ್​ಸಿಬಿ ತಂಡವು ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 15 ರನ್​ಗಳಿಂದ ಮುಗ್ಗರಿಸಿದೆ.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​​ ಸೀಸನ್​-4 ರಲ್ಲಿ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಇತಿಹಾಸ ಬರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್​ಗಳಿಂದ ಪರಾಜಯಗೊಂಡಿದ್ದ ಆರ್​ಸಿಬಿ ತಂಡವು ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 15 ರನ್​ಗಳಿಂದ ಮುಗ್ಗರಿಸಿದೆ.

1 / 6
ಈ ಎರಡು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಡೈರೆಕ್ಟ್ ಫೈನಲ್​ ಎಂಟ್ರಿಗೆ ತೊಡಕುಂಟಾಗಿದೆ. ಅಂದರೆ ಆರ್​ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್​​ಗೆ ಪ್ರವೇಶಿಸುತ್ತಿತ್ತು. ಈ ಮೂಲಕ ಎಲಿಮಿನೇಟರ್ ಪಂದ್ಯವಾಡುವ ರಿಸ್ಕ್​ನಿಂದ ಪರಾಗಬಹುದಿತ್ತು.

ಈ ಎರಡು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಡೈರೆಕ್ಟ್ ಫೈನಲ್​ ಎಂಟ್ರಿಗೆ ತೊಡಕುಂಟಾಗಿದೆ. ಅಂದರೆ ಆರ್​ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್​​ಗೆ ಪ್ರವೇಶಿಸುತ್ತಿತ್ತು. ಈ ಮೂಲಕ ಎಲಿಮಿನೇಟರ್ ಪಂದ್ಯವಾಡುವ ರಿಸ್ಕ್​ನಿಂದ ಪರಾಗಬಹುದಿತ್ತು.

2 / 6
ಇದೀಗ ಎರಡು ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಂದರೆ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಗೆದ್ದರೆ ಮಾತ್ರ ಆರ್​ಸಿಬಿ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

ಇದೀಗ ಎರಡು ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಂದರೆ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಗೆದ್ದರೆ ಮಾತ್ರ ಆರ್​ಸಿಬಿ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

3 / 6
ಆರ್​ಸಿಬಿ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಜನವರಿ 29 ರಂದು ನಡೆಯಲಿರುವ ಈ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಗೆದ್ದರೆ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಯುಪಿ ವಾರಿಯರ್ಸ್ ವಿರುದ್ಧ ಕೂಡ ಸೋತರೆ ನೆಟ್​ ರನ್ ರೇಟ್​ ಲೆಕ್ಕಾಚಾರ ಪರಿಗಣನೆಗೆ ಬರಲಿದೆ.

ಆರ್​ಸಿಬಿ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಜನವರಿ 29 ರಂದು ನಡೆಯಲಿರುವ ಈ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಗೆದ್ದರೆ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಯುಪಿ ವಾರಿಯರ್ಸ್ ವಿರುದ್ಧ ಕೂಡ ಸೋತರೆ ನೆಟ್​ ರನ್ ರೇಟ್​ ಲೆಕ್ಕಾಚಾರ ಪರಿಗಣನೆಗೆ ಬರಲಿದೆ.

4 / 6
ಏಕೆಂದರೆ ಮುಂದಿನ ಪಂದ್ಯಗಳ ಮೂಲಕ ಉಳಿದ ನಾಲ್ಕು ತಂಡಗಳಿಗೂ 10 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ. ಹೀಗೆ ಟಾಪ್-3 ತಂಡಗಳು 10 ಅಂಕಗಳನ್ನು ಪಡೆದುಕೊಂಡರೆ, ಅತ್ಯುತ್ತಮ ನೆಟ್​ ರನ್ ರೇಟ್​ ಹೊಂದಿರುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಅಂದರೆ ಲೀಗ್ ಹಂತದ ಪಂದ್ಯದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವು  ಫೈನಲ್​ಗೇರಲಿದೆ.

ಏಕೆಂದರೆ ಮುಂದಿನ ಪಂದ್ಯಗಳ ಮೂಲಕ ಉಳಿದ ನಾಲ್ಕು ತಂಡಗಳಿಗೂ 10 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ. ಹೀಗೆ ಟಾಪ್-3 ತಂಡಗಳು 10 ಅಂಕಗಳನ್ನು ಪಡೆದುಕೊಂಡರೆ, ಅತ್ಯುತ್ತಮ ನೆಟ್​ ರನ್ ರೇಟ್​ ಹೊಂದಿರುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಅಂದರೆ ಲೀಗ್ ಹಂತದ ಪಂದ್ಯದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವು  ಫೈನಲ್​ಗೇರಲಿದೆ.

5 / 6
ಇದೀಗ 10 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ 12 ಅಂಕಗಳನ್ನು ಪಡೆಯಬಹುದು. ಈ ಮೂಲಕ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು. ಅಂದರೆ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಗೆದ್ದರೆ ಮಾತ್ರ ನೇರವಾಗಿ ಫೈನಲ್​ಗೆ ಪ್ರವೇಶಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.

ಇದೀಗ 10 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ 12 ಅಂಕಗಳನ್ನು ಪಡೆಯಬಹುದು. ಈ ಮೂಲಕ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು. ಅಂದರೆ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಗೆದ್ದರೆ ಮಾತ್ರ ನೇರವಾಗಿ ಫೈನಲ್​ಗೆ ಪ್ರವೇಶಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.

6 / 6
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ