AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL ​ಗಿಂತಲೂ ಕಡಿಮೆ ಪಾಕಿಸ್ತಾನ್ ಸೂಪರ್ ಲೀಗ್​ನ ಬಹುಮಾನ ಮೊತ್ತ..!

IPL 2024 - PSL 2024: ಇಂಡಿಯನ್ ಪ್ರೀಮಿಯರ್ ಲೀಗ್​ಗೆ (ಐಪಿಎಲ್​) ಪರ್ಯಾಯವಾಗಿ ಪಾಕ್​ನಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್​ಎಲ್) ಅನ್ನು ಶುರು ಮಾಡಲಾಗಿತ್ತು. ಆದರೆ 2008 ರಲ್ಲಿ ಆರಂಭವಾದ ಐಪಿಎಲ್ ಬಹುಮಾನ ಮೊತ್ತ 20 ಕೋಟಿ ರೂ,ಗೆ ತಲುಪಿದರೆ, ಪಿಎಸ್​ಎಲ್​ ಪ್ರೈಸ್ ಮನಿ ಇನ್ನೂ ಕೂಡ 5 ಕೋಟಿ ರೂ. ದಾಟಿಲ್ಲ ಎಂಬುದೇ ವಿಶೇಷ.

TV9 Web
| Edited By: |

Updated on: Mar 19, 2024 | 9:53 AM

Share
ಒಂದೆಡೆ ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಮುಕ್ತಾಯವಾಗಿದೆ. ಮತ್ತೊಂದೆಡೆ ಪಾಕಿಸ್ತಾನ್ ಸೂಪರ್ ಲೀಗ್​ಗೆ (PSL 2024) ತೆರೆಬಿದ್ದಿದೆ. ಇತ್ತ ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಿರೀಟ ಮುಡಿಗೇರಿಸಿಕೊಂಡರೆ, ಅತ್ತ ಪಾಕಿಸ್ತಾನದಲ್ಲಿ ಇಸ್ಲಾಮಾಬಾದ್ ಯುನೈಟೆಡ್ (IU) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಒಂದೆಡೆ ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಮುಕ್ತಾಯವಾಗಿದೆ. ಮತ್ತೊಂದೆಡೆ ಪಾಕಿಸ್ತಾನ್ ಸೂಪರ್ ಲೀಗ್​ಗೆ (PSL 2024) ತೆರೆಬಿದ್ದಿದೆ. ಇತ್ತ ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಿರೀಟ ಮುಡಿಗೇರಿಸಿಕೊಂಡರೆ, ಅತ್ತ ಪಾಕಿಸ್ತಾನದಲ್ಲಿ ಇಸ್ಲಾಮಾಬಾದ್ ಯುನೈಟೆಡ್ (IU) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 6
ಇದರ ಬೆನ್ನಲ್ಲೇ ಉಭಯ ಲೀಗ್​ಗಳ ಬಹುಮಾನ ಮೊತ್ತ ಕೂಡ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಪಾಕಿಸ್ತಾನ್ ಸೂಪರ್ ಲೀಗ್​ಗಿಂತಲೂ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅಧಿಕ ಬಹುಮಾನ ಮೊತ್ತವನ್ನು ಪಾವತಿಸಲಾಗುತ್ತಿದೆ.

ಇದರ ಬೆನ್ನಲ್ಲೇ ಉಭಯ ಲೀಗ್​ಗಳ ಬಹುಮಾನ ಮೊತ್ತ ಕೂಡ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಪಾಕಿಸ್ತಾನ್ ಸೂಪರ್ ಲೀಗ್​ಗಿಂತಲೂ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅಧಿಕ ಬಹುಮಾನ ಮೊತ್ತವನ್ನು ಪಾವತಿಸಲಾಗುತ್ತಿದೆ.

2 / 6
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಪಾಕಿಸ್ತಾನ್ ಸೂಪರ್ ಲೀಗ್ ಶುರುವಾಗಿ 9 ವರ್ಷಗಳೇ ಕಳೆದಿವೆ. ಇದಾಗ್ಯೂ ಪಿಎಸ್​ಎಲ್​ನ ಬಹುಮಾನ ಮೊತ್ತ ಇನ್ನೂ ಕೂಡ 9 ಕೋಟಿಯ ಅಸುಪಾಸಿಗೂ ತಲುಪಿಲ್ಲ. ಆದರೆ ಕೇವಲ 2 ಸೀಸನ್​ ಪೂರೈಸಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪಿಎಸ್​ಎಲ್​ಗಿಂತಲೂ ಹೆಚ್ಚಿನ ಬಹುಮಾನ ಮೊತ್ತ ನೀಡಲಾಗುತ್ತಿದೆ.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಪಾಕಿಸ್ತಾನ್ ಸೂಪರ್ ಲೀಗ್ ಶುರುವಾಗಿ 9 ವರ್ಷಗಳೇ ಕಳೆದಿವೆ. ಇದಾಗ್ಯೂ ಪಿಎಸ್​ಎಲ್​ನ ಬಹುಮಾನ ಮೊತ್ತ ಇನ್ನೂ ಕೂಡ 9 ಕೋಟಿಯ ಅಸುಪಾಸಿಗೂ ತಲುಪಿಲ್ಲ. ಆದರೆ ಕೇವಲ 2 ಸೀಸನ್​ ಪೂರೈಸಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪಿಎಸ್​ಎಲ್​ಗಿಂತಲೂ ಹೆಚ್ಚಿನ ಬಹುಮಾನ ಮೊತ್ತ ನೀಡಲಾಗುತ್ತಿದೆ.

3 / 6
ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-2 ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಡೆದಿರುವ ಬಹುಮಾನ ಮೊತ್ತ ಬರೋಬ್ಬರಿ 6 ಕೋಟಿ ರೂ. ಇನ್ನು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ಕೋಟಿ ರೂ. ಪಡೆದುಕೊಂಡಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-2 ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಡೆದಿರುವ ಬಹುಮಾನ ಮೊತ್ತ ಬರೋಬ್ಬರಿ 6 ಕೋಟಿ ರೂ. ಇನ್ನು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ಕೋಟಿ ರೂ. ಪಡೆದುಕೊಂಡಿದೆ.

4 / 6
ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-9 ರ ಫೈನಲ್​ನಲ್ಲಿ ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಇಸ್ಲಾಮಾಬಾದ್ ಯುನೈಟೆಡ್ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿರುವ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಸಿಕ್ಕಿರುವ ಬಹುಮಾನ ಮೊತ್ತ 4.15 ಕೋಟಿ ರೂ. ಹಾಗೆಯೇ ರನ್ನರ್ ಅಪ್ ಮುಲ್ತಾನ್ ಸುಲ್ತಾನ್ಸ್ ತಂಡಕ್ಕೆ ಕೇವಲ 1.6 ಕೋಟಿ ರೂ. ನೀಡಲಾಗಿದೆ.

ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-9 ರ ಫೈನಲ್​ನಲ್ಲಿ ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಇಸ್ಲಾಮಾಬಾದ್ ಯುನೈಟೆಡ್ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿರುವ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಸಿಕ್ಕಿರುವ ಬಹುಮಾನ ಮೊತ್ತ 4.15 ಕೋಟಿ ರೂ. ಹಾಗೆಯೇ ರನ್ನರ್ ಅಪ್ ಮುಲ್ತಾನ್ ಸುಲ್ತಾನ್ಸ್ ತಂಡಕ್ಕೆ ಕೇವಲ 1.6 ಕೋಟಿ ರೂ. ನೀಡಲಾಗಿದೆ.

5 / 6
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಹೋಲಿಸಿದರೆ ಪಾಕಿಸ್ತಾನ್ ಸೂಪರ್ ಲೀಗ್​ ಬಹುಮಾನ ಮೊತ್ತ 1.85 ಕೋಟಿ ರೂ. ಕಡಿಮೆ ಇದೆ. ಇನ್ನು ಐಪಿಎಲ್​ಗೆ ಹೋಲಿಸುವುದೇ ಬೇಡ, ಏಕೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಬಹುಮಾನ ಮೊತ್ತ ಬರೋಬ್ಬರಿ 20 ಕೋಟಿ ರೂ.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಹೋಲಿಸಿದರೆ ಪಾಕಿಸ್ತಾನ್ ಸೂಪರ್ ಲೀಗ್​ ಬಹುಮಾನ ಮೊತ್ತ 1.85 ಕೋಟಿ ರೂ. ಕಡಿಮೆ ಇದೆ. ಇನ್ನು ಐಪಿಎಲ್​ಗೆ ಹೋಲಿಸುವುದೇ ಬೇಡ, ಏಕೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಬಹುಮಾನ ಮೊತ್ತ ಬರೋಬ್ಬರಿ 20 ಕೋಟಿ ರೂ.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್