Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಓವಲ್ ಮೈದಾನದಲ್ಲಿ ರೋಹಿತ್ ಶರ್ಮಾ ದಾಖಲೆ ಹೇಗಿದೆ ಗೊತ್ತಾ?

Rohit Sharma: 2021 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಾಗ ರೋಹಿತ್ ಶರ್ಮಾ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಟೆಸ್ಟ್ ಆಡಿದ್ದರು.

ಪೃಥ್ವಿಶಂಕರ
|

Updated on: Jun 03, 2023 | 4:48 PM

ಜೂನ್ 7 ರಿಂದ ಓವಲ್ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯುತ್ತಿದ್ದರೆ, ಇತ್ತ ಪ್ಯಾಟ್ ಕಮಿನ್ಸ್ ನೇತೃತ್ವದಲ್ಲಿ ಆಸೀಸ್ ಆಡುತ್ತಿದೆ. ನಾಯಕನಾಗಿ ರೋಹಿತ್​ಗೆ ಈ ಪಂದ್ಯ ಬಹಳ ಮುಖ್ಯವಾಗಿದ್ದು, ಈ ಪಂದ್ಯದ ಫಲಿತಾಂಶದ ಮೇಲೆ ರೋಹಿತ್ ಟೆಸ್ಟ್ ನಾಯಕತ್ವದ ಭವಿಷ್ಯ ನಿಂತಿದೆ.

ಜೂನ್ 7 ರಿಂದ ಓವಲ್ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯುತ್ತಿದ್ದರೆ, ಇತ್ತ ಪ್ಯಾಟ್ ಕಮಿನ್ಸ್ ನೇತೃತ್ವದಲ್ಲಿ ಆಸೀಸ್ ಆಡುತ್ತಿದೆ. ನಾಯಕನಾಗಿ ರೋಹಿತ್​ಗೆ ಈ ಪಂದ್ಯ ಬಹಳ ಮುಖ್ಯವಾಗಿದ್ದು, ಈ ಪಂದ್ಯದ ಫಲಿತಾಂಶದ ಮೇಲೆ ರೋಹಿತ್ ಟೆಸ್ಟ್ ನಾಯಕತ್ವದ ಭವಿಷ್ಯ ನಿಂತಿದೆ.

1 / 5
ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಓವಲ್ ಮೈದಾನದಲ್ಲಿ ಯಾವ ರೀತಿಯ ಪ್ರದರ್ಶನ ನೀಡಿದ್ದಾರೆ ಎಂಬುದನ್ನು ನೋಡುವುದಾದರೆ, ಆಟಗಾರನಾಗಿ ಓವಲ್ ಮೈದಾನದಲ್ಲಿ ಏಕೈಕ ಪಂದ್ಯವನ್ನಾಡಿರುವ ರೋಹಿತ್, ಅದ್ಭುತ ಶತಕ ಸಿಡಿಸಿ ಮಿಂಚಿದ್ದಾರೆ.

ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಓವಲ್ ಮೈದಾನದಲ್ಲಿ ಯಾವ ರೀತಿಯ ಪ್ರದರ್ಶನ ನೀಡಿದ್ದಾರೆ ಎಂಬುದನ್ನು ನೋಡುವುದಾದರೆ, ಆಟಗಾರನಾಗಿ ಓವಲ್ ಮೈದಾನದಲ್ಲಿ ಏಕೈಕ ಪಂದ್ಯವನ್ನಾಡಿರುವ ರೋಹಿತ್, ಅದ್ಭುತ ಶತಕ ಸಿಡಿಸಿ ಮಿಂಚಿದ್ದಾರೆ.

2 / 5
2021 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಾಗ ರೋಹಿತ್ ಶರ್ಮಾ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಟೆಸ್ಟ್ ಆಡಿದ್ದರು. ಉಭಯ ತಂಡಗಳ ನಡುವಿನ ಆ ನಾಲ್ಕನೇ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 256 ಎಸೆತಗಳನ್ನು ಎದುರಿಸಿದ್ದ ರೋಹಿತ್ 14 ಬೌಂಡರಿ ಮತ್ತು ಒಂದು ಸಿಕ್ಸರ್‌ ಸಹಿತ 127 ರನ್ ಬಾರಿಸಿದ್ದರು.

2021 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಾಗ ರೋಹಿತ್ ಶರ್ಮಾ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಟೆಸ್ಟ್ ಆಡಿದ್ದರು. ಉಭಯ ತಂಡಗಳ ನಡುವಿನ ಆ ನಾಲ್ಕನೇ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 256 ಎಸೆತಗಳನ್ನು ಎದುರಿಸಿದ್ದ ರೋಹಿತ್ 14 ಬೌಂಡರಿ ಮತ್ತು ಒಂದು ಸಿಕ್ಸರ್‌ ಸಹಿತ 127 ರನ್ ಬಾರಿಸಿದ್ದರು.

3 / 5
ರೋಹಿತ್ ಶರ್ಮಾ ಅವರ ನಿರ್ಣಾಯಕ ಇನ್ನಿಂಗ್ಸ್​ನಿಂದ ಭಾರತ ತಂಡವು ಎರಡನೇ ಇನ್ನಿಂಗ್ಸ್‌ನಲ್ಲಿ 466 ರನ್ ಕಲೆಹಾಕಿತು. ಕೊನೆಯ ದಿನದಂದು ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್‌ ತಂಡವನ್ನು 210 ರನ್‌ಗಳಿಗೆ ಆಲೌಟ್ ಮಾಡಿದರು. ಅಂತಿಮವಾಗಿ ಟೀಂ ಇಂಡಿಯಾ 157 ರನ್‌ಗಳಿಂದ ಟೆಸ್ಟ್ ಪಂದ್ಯ ಗೆದ್ದರೆ, ಇತ್ತ ಮ್ಯಾಚ್ ವಿನ್ನಿಂಗ್ಸ್ ಆಡಿದ್ದ ರೋಹಿತ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ರೋಹಿತ್ ಶರ್ಮಾ ಅವರ ನಿರ್ಣಾಯಕ ಇನ್ನಿಂಗ್ಸ್​ನಿಂದ ಭಾರತ ತಂಡವು ಎರಡನೇ ಇನ್ನಿಂಗ್ಸ್‌ನಲ್ಲಿ 466 ರನ್ ಕಲೆಹಾಕಿತು. ಕೊನೆಯ ದಿನದಂದು ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್‌ ತಂಡವನ್ನು 210 ರನ್‌ಗಳಿಗೆ ಆಲೌಟ್ ಮಾಡಿದರು. ಅಂತಿಮವಾಗಿ ಟೀಂ ಇಂಡಿಯಾ 157 ರನ್‌ಗಳಿಂದ ಟೆಸ್ಟ್ ಪಂದ್ಯ ಗೆದ್ದರೆ, ಇತ್ತ ಮ್ಯಾಚ್ ವಿನ್ನಿಂಗ್ಸ್ ಆಡಿದ್ದ ರೋಹಿತ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

4 / 5
ಇನ್ನು ಆಂಗ್ಲರ ನಾಡಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿರುವ ರೋಹಿತ್ ಶರ್ಮಾ, 2021 ರ ಇಂಗ್ಲೆಂಡ್ ಪ್ರವಾಸದಲ್ಲಿ ಆಡಿದ ನಾಲ್ಕು-ಟೆಸ್ಟ್‌ ಪಂದ್ಯಗಳಲ್ಲಿ 52.27 ರ ಸರಾಸರಿಯಲ್ಲಿ 368 ರನ್ ಕಲೆಹಾಕಿದ್ದರು. ಈಗ ಅದೇ ಪ್ರದರ್ಶನವನ್ನು ನಾಯಕನಾಗಿ ರೋಹಿತ್ ಕಾಂಗರೂಗಳ ವಿರುದ್ಧ ತೋರಿಸಬೇಕಾಗಿದೆ.

ಇನ್ನು ಆಂಗ್ಲರ ನಾಡಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿರುವ ರೋಹಿತ್ ಶರ್ಮಾ, 2021 ರ ಇಂಗ್ಲೆಂಡ್ ಪ್ರವಾಸದಲ್ಲಿ ಆಡಿದ ನಾಲ್ಕು-ಟೆಸ್ಟ್‌ ಪಂದ್ಯಗಳಲ್ಲಿ 52.27 ರ ಸರಾಸರಿಯಲ್ಲಿ 368 ರನ್ ಕಲೆಹಾಕಿದ್ದರು. ಈಗ ಅದೇ ಪ್ರದರ್ಶನವನ್ನು ನಾಯಕನಾಗಿ ರೋಹಿತ್ ಕಾಂಗರೂಗಳ ವಿರುದ್ಧ ತೋರಿಸಬೇಕಾಗಿದೆ.

5 / 5
Follow us
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ