AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: 71/4..! ಆಸೀಸ್ ಬೌಲಿಂಗ್ ದಾಳಿಗೆ ಪತರುಗುಟ್ಟಿದ ವಿಶ್ವ ಕ್ರಿಕೆಟ್​ನ ಸೂಪರ್ ಸ್ಟಾರ್ಸ್..!​

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೂ ಮುನ್ನ ಅಭಿಮಾನಿಗಳು ಹಾಗೂ ಕ್ರಿಕೆಟ್ ದಿಗ್ಗಜರು ಟೀಂ ಇಂಡಿಯಾದ ಮೇಲೆ ಎಷ್ಟೆಲ್ಲ ನಿರೀಕ್ಷೆ ಇಟ್ಟಿದ್ದರೋ ಅದೆಲ್ಲ ಹುಸಿಯಾಗಿದೆ.

ಪೃಥ್ವಿಶಂಕರ
|

Updated on: Jun 08, 2023 | 9:33 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೂ ಮುನ್ನ ಅಭಿಮಾನಿಗಳು ಹಾಗೂ ಕ್ರಿಕೆಟ್ ದಿಗ್ಗಜರು ಟೀಂ ಇಂಡಿಯಾದ ಮೇಲೆ ಎಷ್ಟೆಲ್ಲ ನಿರೀಕ್ಷೆ ಇಟ್ಟಿದ್ದರೋ ಅದೆಲ್ಲ ಹುಸಿಯಾಗಿದೆ. ಆಸೀಸ್ ಬೌಲರ್​ಗಳ ದಾಳಿಗೆ ನಲುಗಿದ ಟೀಂ ಇಂಡಿಯಾದ ದಿಗ್ಗಜ ಬ್ಯಾಟರ್​ಗಳು ಬಂದಷ್ಟೆ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೂ ಮುನ್ನ ಅಭಿಮಾನಿಗಳು ಹಾಗೂ ಕ್ರಿಕೆಟ್ ದಿಗ್ಗಜರು ಟೀಂ ಇಂಡಿಯಾದ ಮೇಲೆ ಎಷ್ಟೆಲ್ಲ ನಿರೀಕ್ಷೆ ಇಟ್ಟಿದ್ದರೋ ಅದೆಲ್ಲ ಹುಸಿಯಾಗಿದೆ. ಆಸೀಸ್ ಬೌಲರ್​ಗಳ ದಾಳಿಗೆ ನಲುಗಿದ ಟೀಂ ಇಂಡಿಯಾದ ದಿಗ್ಗಜ ಬ್ಯಾಟರ್​ಗಳು ಬಂದಷ್ಟೆ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 7
ಆಸೀಸ್ ನೀಡಿರುವ 469 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತದ ಇನ್ನಿಂಗ್ಸ್ ಆಸೀಸ್ ಬೌಲರ್​ಗಳ ಮುಂದೆ ತತ್ತರಿಸಿ ಹೋಗಿದೆ. ಸದ್ಯ ತಮ್ಮ ಅದ್ಭುತ ಕ್ರಿಕೆಟ್ ಪ್ರತಿಭೆಯಿಂದ ವಿಶ್ವ ಕ್ರಿಕೆಟ್​ನಲ್ಲಿ ಮನೆ ಮಾತಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕೇವಲ ಎರಡಂಕ್ಕಿಗೆ ವಿಕೆಟ್ ಒಪ್ಪಿಸಿ, ಪೆವಿಲಿಯನ್ ಸೇರಿಕೊಂಡಿದ್ದಾರೆ.

ಆಸೀಸ್ ನೀಡಿರುವ 469 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತದ ಇನ್ನಿಂಗ್ಸ್ ಆಸೀಸ್ ಬೌಲರ್​ಗಳ ಮುಂದೆ ತತ್ತರಿಸಿ ಹೋಗಿದೆ. ಸದ್ಯ ತಮ್ಮ ಅದ್ಭುತ ಕ್ರಿಕೆಟ್ ಪ್ರತಿಭೆಯಿಂದ ವಿಶ್ವ ಕ್ರಿಕೆಟ್​ನಲ್ಲಿ ಮನೆ ಮಾತಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕೇವಲ ಎರಡಂಕ್ಕಿಗೆ ವಿಕೆಟ್ ಒಪ್ಪಿಸಿ, ಪೆವಿಲಿಯನ್ ಸೇರಿಕೊಂಡಿದ್ದಾರೆ.

2 / 7
ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಹಾಗೂ ಗಿಲ್ ಮೊದಲ ಕೆಲವು ಓವರ್​ಗಳಲ್ಲಿ ಉತ್ತಮವಾಗಿ ಬ್ಯಾಟ್ ಬೀಸುತ್ತಾ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡುವ ಭರವಸೆ ಹುಟ್ಟುಹಾಕಿದರಾದರೂ ಆ ಭರವಸೆಯನ್ನು ದೀರ್ಘಕಾಲ ಉಳಿಸಿಕೊಳ್ಳುವಲ್ಲಿ ಎಡವಿದರು.

ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಹಾಗೂ ಗಿಲ್ ಮೊದಲ ಕೆಲವು ಓವರ್​ಗಳಲ್ಲಿ ಉತ್ತಮವಾಗಿ ಬ್ಯಾಟ್ ಬೀಸುತ್ತಾ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡುವ ಭರವಸೆ ಹುಟ್ಟುಹಾಕಿದರಾದರೂ ಆ ಭರವಸೆಯನ್ನು ದೀರ್ಘಕಾಲ ಉಳಿಸಿಕೊಳ್ಳುವಲ್ಲಿ ಎಡವಿದರು.

3 / 7
ನಾಯಕನಾಗಿ ತಂಡದ ಇನ್ನಿಂಗ್ಸ್ ನಿಭಾಯಿಸಬೇಕಾದ ಜವಬ್ದಾರಿವಹಿಸಿಕೊಳ್ಳಬೇಕಾಗಿದ್ದ ರೋಹಿತ್ ಶರ್ಮಾ ಕೇವಲ 15 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಎಸೆದ ಇನ್​ಸ್ವಿಂಗ್ ಎಸೆತವನ್ನು ಅರ್ಥಮಾಡಿಕೊಳ್ಳದ ರೋಹಿತ್ ಕ್ಲಿನ್ ಎಲ್​ಬಿಗೆ ಬಲಿಯಾದರು. ಹೀಗಾಗಿ ಕೇವಲ 30 ರನ್​ಗಳಿಗೆ ಭಾರತದ ಮೊದಲ ವಿಕೆಟ್ ಪತನವಾಯಿತು.

ನಾಯಕನಾಗಿ ತಂಡದ ಇನ್ನಿಂಗ್ಸ್ ನಿಭಾಯಿಸಬೇಕಾದ ಜವಬ್ದಾರಿವಹಿಸಿಕೊಳ್ಳಬೇಕಾಗಿದ್ದ ರೋಹಿತ್ ಶರ್ಮಾ ಕೇವಲ 15 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಎಸೆದ ಇನ್​ಸ್ವಿಂಗ್ ಎಸೆತವನ್ನು ಅರ್ಥಮಾಡಿಕೊಳ್ಳದ ರೋಹಿತ್ ಕ್ಲಿನ್ ಎಲ್​ಬಿಗೆ ಬಲಿಯಾದರು. ಹೀಗಾಗಿ ಕೇವಲ 30 ರನ್​ಗಳಿಗೆ ಭಾರತದ ಮೊದಲ ವಿಕೆಟ್ ಪತನವಾಯಿತು.

4 / 7
ಇನ್ನು ಈ ಆವೃತ್ತಿಯ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಅತ್ಯಧಿಕ ರನ್ ಬಾರಿಸುವುದರೊಂದಿಗೆ ಅತ್ಯಧಿಕ ರನ್ ಕಲೆಹಾಕುವುದರೊಂದಿಗೆ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್​ ಗಿಲ್ ಕೂಡ ಈ ಪಂದ್ಯದಲ್ಲಿ ವಿಶೇಷವಾದುದ್ದನ್ನು ಮಾಡಲಿಲ್ಲ. ಈ ಪಂದ್ಯಕ್ಕೂ ಮುನ್ನ ಗಿಲ್ ಮೇಲೆ ಅಪಾರ ನಿರೀಕ್ಷೆ ಇಡಲಾಗಿತ್ತು. ಆದರೆ ಈ ನಿರೀಕ್ಷೆಯನ್ನು ಹುಸಿಗೊಳಿಸಿದ ಗಿಲ್, ಬೋಲ್ಯಾಂಡ್ ಎಸೆದ ಇನ್ಸ್​ವಿಂಗ್ ಎಸೆತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಕೇವಲ 13 ರನ್​ಗಳಿಗೆ ಕ್ಲೀನ್ ಬೌಲ್ಡ್ ಆದರು.

ಇನ್ನು ಈ ಆವೃತ್ತಿಯ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಅತ್ಯಧಿಕ ರನ್ ಬಾರಿಸುವುದರೊಂದಿಗೆ ಅತ್ಯಧಿಕ ರನ್ ಕಲೆಹಾಕುವುದರೊಂದಿಗೆ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್​ ಗಿಲ್ ಕೂಡ ಈ ಪಂದ್ಯದಲ್ಲಿ ವಿಶೇಷವಾದುದ್ದನ್ನು ಮಾಡಲಿಲ್ಲ. ಈ ಪಂದ್ಯಕ್ಕೂ ಮುನ್ನ ಗಿಲ್ ಮೇಲೆ ಅಪಾರ ನಿರೀಕ್ಷೆ ಇಡಲಾಗಿತ್ತು. ಆದರೆ ಈ ನಿರೀಕ್ಷೆಯನ್ನು ಹುಸಿಗೊಳಿಸಿದ ಗಿಲ್, ಬೋಲ್ಯಾಂಡ್ ಎಸೆದ ಇನ್ಸ್​ವಿಂಗ್ ಎಸೆತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಕೇವಲ 13 ರನ್​ಗಳಿಗೆ ಕ್ಲೀನ್ ಬೌಲ್ಡ್ ಆದರು.

5 / 7
ಆರಂಭಿಕರಿಬ್ಬರ ವಿಕೆಟ್ ಬಳಿಕ ಇನ್ನಿಂಗ್ಸ್ ಜವಬ್ದಾರಿ ಹೊರಬೇಕಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಕೂಡ ಸೈಲೆಂಟ್ ಆಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಪೂಜಾರ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿತ್ತು. ಏಕೆಂದರೆ, ಭಾರತದ ಉಳಿದ ಆಟಗಾರರು ಐಪಿಎಲ್ ಆಡುತ್ತಿದ್ದರೆ, ಪೂಜಾರ ಮಾತ್ರ ಈ ಫೈನಲ್ ಗಮನದಲ್ಲಿಟ್ಟುಕೊಂಡು ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಆಡಲು ಆರಂಭಿಸಿದ್ದರು. ಕೌಂಟಿ ಕ್ರಿಕೆಟ್​ನಲ್ಲಿ ರನ್​ಗಳ ಶಿಖರ ಕಟ್ಟಿದ ಪೂಜಾರ ಆಸೀಸ್ ವಿರುದ್ಧದ ಫೈನಲ್​ ಪಂದ್ಯದಲ್ಲಿ 14 ರನ್​ಗಳಿಗೆ ಪೆವಿಲಿಯನ್ ಅತ್ತ ಮುಖ ಮಾಡಿದರು.

ಆರಂಭಿಕರಿಬ್ಬರ ವಿಕೆಟ್ ಬಳಿಕ ಇನ್ನಿಂಗ್ಸ್ ಜವಬ್ದಾರಿ ಹೊರಬೇಕಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಕೂಡ ಸೈಲೆಂಟ್ ಆಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಪೂಜಾರ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿತ್ತು. ಏಕೆಂದರೆ, ಭಾರತದ ಉಳಿದ ಆಟಗಾರರು ಐಪಿಎಲ್ ಆಡುತ್ತಿದ್ದರೆ, ಪೂಜಾರ ಮಾತ್ರ ಈ ಫೈನಲ್ ಗಮನದಲ್ಲಿಟ್ಟುಕೊಂಡು ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಆಡಲು ಆರಂಭಿಸಿದ್ದರು. ಕೌಂಟಿ ಕ್ರಿಕೆಟ್​ನಲ್ಲಿ ರನ್​ಗಳ ಶಿಖರ ಕಟ್ಟಿದ ಪೂಜಾರ ಆಸೀಸ್ ವಿರುದ್ಧದ ಫೈನಲ್​ ಪಂದ್ಯದಲ್ಲಿ 14 ರನ್​ಗಳಿಗೆ ಪೆವಿಲಿಯನ್ ಅತ್ತ ಮುಖ ಮಾಡಿದರು.

6 / 7
ಇನ್ನು ಮಾಜಿ ನಾಯಕ ಕೊಹ್ಲಿ ಕೂಡ ಈ ಮೂವರಿಗಿಂತ ವಿಭಿನ್ನವಾಗಿಲ್ಲ. ಆಸೀಸ್ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸುವ ಚಾಣಾಕ್ಷತೆ ಹೊಂದಿದ್ದ ಕೊಹ್ಲಿ ಕೂಡ ಕೇವಲ 14 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಈ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸುತ್ತಾರೆ ಎಂಬುದು ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯಾಗಿತ್ತು. ಏಕೆಂದರೆ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕದೊಂದಿಗೆ ಕೊಹ್ಲಿ ಈ ಫೈನಲ್​ಗೆ ಎಂಟ್ರಿಕೊಟ್ಟಿದ್ದರು. ಆದರೆ ಈ ಪಂದ್ಯದಲ್ಲಿ ಕೊಹ್ಲಿಗೆ ವಿಶೇಷವಾಗಿ ಏನ್ನನ್ನು ಮಾಡಲು ಸಾಧ್ಯವಾಗಲಿಲ್ಲ.

ಇನ್ನು ಮಾಜಿ ನಾಯಕ ಕೊಹ್ಲಿ ಕೂಡ ಈ ಮೂವರಿಗಿಂತ ವಿಭಿನ್ನವಾಗಿಲ್ಲ. ಆಸೀಸ್ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸುವ ಚಾಣಾಕ್ಷತೆ ಹೊಂದಿದ್ದ ಕೊಹ್ಲಿ ಕೂಡ ಕೇವಲ 14 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಈ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸುತ್ತಾರೆ ಎಂಬುದು ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯಾಗಿತ್ತು. ಏಕೆಂದರೆ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕದೊಂದಿಗೆ ಕೊಹ್ಲಿ ಈ ಫೈನಲ್​ಗೆ ಎಂಟ್ರಿಕೊಟ್ಟಿದ್ದರು. ಆದರೆ ಈ ಪಂದ್ಯದಲ್ಲಿ ಕೊಹ್ಲಿಗೆ ವಿಶೇಷವಾಗಿ ಏನ್ನನ್ನು ಮಾಡಲು ಸಾಧ್ಯವಾಗಲಿಲ್ಲ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ