AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: 71/4..! ಆಸೀಸ್ ಬೌಲಿಂಗ್ ದಾಳಿಗೆ ಪತರುಗುಟ್ಟಿದ ವಿಶ್ವ ಕ್ರಿಕೆಟ್​ನ ಸೂಪರ್ ಸ್ಟಾರ್ಸ್..!​

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೂ ಮುನ್ನ ಅಭಿಮಾನಿಗಳು ಹಾಗೂ ಕ್ರಿಕೆಟ್ ದಿಗ್ಗಜರು ಟೀಂ ಇಂಡಿಯಾದ ಮೇಲೆ ಎಷ್ಟೆಲ್ಲ ನಿರೀಕ್ಷೆ ಇಟ್ಟಿದ್ದರೋ ಅದೆಲ್ಲ ಹುಸಿಯಾಗಿದೆ.

ಪೃಥ್ವಿಶಂಕರ
|

Updated on: Jun 08, 2023 | 9:33 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೂ ಮುನ್ನ ಅಭಿಮಾನಿಗಳು ಹಾಗೂ ಕ್ರಿಕೆಟ್ ದಿಗ್ಗಜರು ಟೀಂ ಇಂಡಿಯಾದ ಮೇಲೆ ಎಷ್ಟೆಲ್ಲ ನಿರೀಕ್ಷೆ ಇಟ್ಟಿದ್ದರೋ ಅದೆಲ್ಲ ಹುಸಿಯಾಗಿದೆ. ಆಸೀಸ್ ಬೌಲರ್​ಗಳ ದಾಳಿಗೆ ನಲುಗಿದ ಟೀಂ ಇಂಡಿಯಾದ ದಿಗ್ಗಜ ಬ್ಯಾಟರ್​ಗಳು ಬಂದಷ್ಟೆ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೂ ಮುನ್ನ ಅಭಿಮಾನಿಗಳು ಹಾಗೂ ಕ್ರಿಕೆಟ್ ದಿಗ್ಗಜರು ಟೀಂ ಇಂಡಿಯಾದ ಮೇಲೆ ಎಷ್ಟೆಲ್ಲ ನಿರೀಕ್ಷೆ ಇಟ್ಟಿದ್ದರೋ ಅದೆಲ್ಲ ಹುಸಿಯಾಗಿದೆ. ಆಸೀಸ್ ಬೌಲರ್​ಗಳ ದಾಳಿಗೆ ನಲುಗಿದ ಟೀಂ ಇಂಡಿಯಾದ ದಿಗ್ಗಜ ಬ್ಯಾಟರ್​ಗಳು ಬಂದಷ್ಟೆ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 7
ಆಸೀಸ್ ನೀಡಿರುವ 469 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತದ ಇನ್ನಿಂಗ್ಸ್ ಆಸೀಸ್ ಬೌಲರ್​ಗಳ ಮುಂದೆ ತತ್ತರಿಸಿ ಹೋಗಿದೆ. ಸದ್ಯ ತಮ್ಮ ಅದ್ಭುತ ಕ್ರಿಕೆಟ್ ಪ್ರತಿಭೆಯಿಂದ ವಿಶ್ವ ಕ್ರಿಕೆಟ್​ನಲ್ಲಿ ಮನೆ ಮಾತಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕೇವಲ ಎರಡಂಕ್ಕಿಗೆ ವಿಕೆಟ್ ಒಪ್ಪಿಸಿ, ಪೆವಿಲಿಯನ್ ಸೇರಿಕೊಂಡಿದ್ದಾರೆ.

ಆಸೀಸ್ ನೀಡಿರುವ 469 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತದ ಇನ್ನಿಂಗ್ಸ್ ಆಸೀಸ್ ಬೌಲರ್​ಗಳ ಮುಂದೆ ತತ್ತರಿಸಿ ಹೋಗಿದೆ. ಸದ್ಯ ತಮ್ಮ ಅದ್ಭುತ ಕ್ರಿಕೆಟ್ ಪ್ರತಿಭೆಯಿಂದ ವಿಶ್ವ ಕ್ರಿಕೆಟ್​ನಲ್ಲಿ ಮನೆ ಮಾತಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕೇವಲ ಎರಡಂಕ್ಕಿಗೆ ವಿಕೆಟ್ ಒಪ್ಪಿಸಿ, ಪೆವಿಲಿಯನ್ ಸೇರಿಕೊಂಡಿದ್ದಾರೆ.

2 / 7
ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಹಾಗೂ ಗಿಲ್ ಮೊದಲ ಕೆಲವು ಓವರ್​ಗಳಲ್ಲಿ ಉತ್ತಮವಾಗಿ ಬ್ಯಾಟ್ ಬೀಸುತ್ತಾ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡುವ ಭರವಸೆ ಹುಟ್ಟುಹಾಕಿದರಾದರೂ ಆ ಭರವಸೆಯನ್ನು ದೀರ್ಘಕಾಲ ಉಳಿಸಿಕೊಳ್ಳುವಲ್ಲಿ ಎಡವಿದರು.

ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಹಾಗೂ ಗಿಲ್ ಮೊದಲ ಕೆಲವು ಓವರ್​ಗಳಲ್ಲಿ ಉತ್ತಮವಾಗಿ ಬ್ಯಾಟ್ ಬೀಸುತ್ತಾ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡುವ ಭರವಸೆ ಹುಟ್ಟುಹಾಕಿದರಾದರೂ ಆ ಭರವಸೆಯನ್ನು ದೀರ್ಘಕಾಲ ಉಳಿಸಿಕೊಳ್ಳುವಲ್ಲಿ ಎಡವಿದರು.

3 / 7
ನಾಯಕನಾಗಿ ತಂಡದ ಇನ್ನಿಂಗ್ಸ್ ನಿಭಾಯಿಸಬೇಕಾದ ಜವಬ್ದಾರಿವಹಿಸಿಕೊಳ್ಳಬೇಕಾಗಿದ್ದ ರೋಹಿತ್ ಶರ್ಮಾ ಕೇವಲ 15 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಎಸೆದ ಇನ್​ಸ್ವಿಂಗ್ ಎಸೆತವನ್ನು ಅರ್ಥಮಾಡಿಕೊಳ್ಳದ ರೋಹಿತ್ ಕ್ಲಿನ್ ಎಲ್​ಬಿಗೆ ಬಲಿಯಾದರು. ಹೀಗಾಗಿ ಕೇವಲ 30 ರನ್​ಗಳಿಗೆ ಭಾರತದ ಮೊದಲ ವಿಕೆಟ್ ಪತನವಾಯಿತು.

ನಾಯಕನಾಗಿ ತಂಡದ ಇನ್ನಿಂಗ್ಸ್ ನಿಭಾಯಿಸಬೇಕಾದ ಜವಬ್ದಾರಿವಹಿಸಿಕೊಳ್ಳಬೇಕಾಗಿದ್ದ ರೋಹಿತ್ ಶರ್ಮಾ ಕೇವಲ 15 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಎಸೆದ ಇನ್​ಸ್ವಿಂಗ್ ಎಸೆತವನ್ನು ಅರ್ಥಮಾಡಿಕೊಳ್ಳದ ರೋಹಿತ್ ಕ್ಲಿನ್ ಎಲ್​ಬಿಗೆ ಬಲಿಯಾದರು. ಹೀಗಾಗಿ ಕೇವಲ 30 ರನ್​ಗಳಿಗೆ ಭಾರತದ ಮೊದಲ ವಿಕೆಟ್ ಪತನವಾಯಿತು.

4 / 7
ಇನ್ನು ಈ ಆವೃತ್ತಿಯ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಅತ್ಯಧಿಕ ರನ್ ಬಾರಿಸುವುದರೊಂದಿಗೆ ಅತ್ಯಧಿಕ ರನ್ ಕಲೆಹಾಕುವುದರೊಂದಿಗೆ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್​ ಗಿಲ್ ಕೂಡ ಈ ಪಂದ್ಯದಲ್ಲಿ ವಿಶೇಷವಾದುದ್ದನ್ನು ಮಾಡಲಿಲ್ಲ. ಈ ಪಂದ್ಯಕ್ಕೂ ಮುನ್ನ ಗಿಲ್ ಮೇಲೆ ಅಪಾರ ನಿರೀಕ್ಷೆ ಇಡಲಾಗಿತ್ತು. ಆದರೆ ಈ ನಿರೀಕ್ಷೆಯನ್ನು ಹುಸಿಗೊಳಿಸಿದ ಗಿಲ್, ಬೋಲ್ಯಾಂಡ್ ಎಸೆದ ಇನ್ಸ್​ವಿಂಗ್ ಎಸೆತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಕೇವಲ 13 ರನ್​ಗಳಿಗೆ ಕ್ಲೀನ್ ಬೌಲ್ಡ್ ಆದರು.

ಇನ್ನು ಈ ಆವೃತ್ತಿಯ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಅತ್ಯಧಿಕ ರನ್ ಬಾರಿಸುವುದರೊಂದಿಗೆ ಅತ್ಯಧಿಕ ರನ್ ಕಲೆಹಾಕುವುದರೊಂದಿಗೆ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್​ ಗಿಲ್ ಕೂಡ ಈ ಪಂದ್ಯದಲ್ಲಿ ವಿಶೇಷವಾದುದ್ದನ್ನು ಮಾಡಲಿಲ್ಲ. ಈ ಪಂದ್ಯಕ್ಕೂ ಮುನ್ನ ಗಿಲ್ ಮೇಲೆ ಅಪಾರ ನಿರೀಕ್ಷೆ ಇಡಲಾಗಿತ್ತು. ಆದರೆ ಈ ನಿರೀಕ್ಷೆಯನ್ನು ಹುಸಿಗೊಳಿಸಿದ ಗಿಲ್, ಬೋಲ್ಯಾಂಡ್ ಎಸೆದ ಇನ್ಸ್​ವಿಂಗ್ ಎಸೆತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಕೇವಲ 13 ರನ್​ಗಳಿಗೆ ಕ್ಲೀನ್ ಬೌಲ್ಡ್ ಆದರು.

5 / 7
ಆರಂಭಿಕರಿಬ್ಬರ ವಿಕೆಟ್ ಬಳಿಕ ಇನ್ನಿಂಗ್ಸ್ ಜವಬ್ದಾರಿ ಹೊರಬೇಕಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಕೂಡ ಸೈಲೆಂಟ್ ಆಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಪೂಜಾರ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿತ್ತು. ಏಕೆಂದರೆ, ಭಾರತದ ಉಳಿದ ಆಟಗಾರರು ಐಪಿಎಲ್ ಆಡುತ್ತಿದ್ದರೆ, ಪೂಜಾರ ಮಾತ್ರ ಈ ಫೈನಲ್ ಗಮನದಲ್ಲಿಟ್ಟುಕೊಂಡು ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಆಡಲು ಆರಂಭಿಸಿದ್ದರು. ಕೌಂಟಿ ಕ್ರಿಕೆಟ್​ನಲ್ಲಿ ರನ್​ಗಳ ಶಿಖರ ಕಟ್ಟಿದ ಪೂಜಾರ ಆಸೀಸ್ ವಿರುದ್ಧದ ಫೈನಲ್​ ಪಂದ್ಯದಲ್ಲಿ 14 ರನ್​ಗಳಿಗೆ ಪೆವಿಲಿಯನ್ ಅತ್ತ ಮುಖ ಮಾಡಿದರು.

ಆರಂಭಿಕರಿಬ್ಬರ ವಿಕೆಟ್ ಬಳಿಕ ಇನ್ನಿಂಗ್ಸ್ ಜವಬ್ದಾರಿ ಹೊರಬೇಕಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಕೂಡ ಸೈಲೆಂಟ್ ಆಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಪೂಜಾರ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿತ್ತು. ಏಕೆಂದರೆ, ಭಾರತದ ಉಳಿದ ಆಟಗಾರರು ಐಪಿಎಲ್ ಆಡುತ್ತಿದ್ದರೆ, ಪೂಜಾರ ಮಾತ್ರ ಈ ಫೈನಲ್ ಗಮನದಲ್ಲಿಟ್ಟುಕೊಂಡು ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಆಡಲು ಆರಂಭಿಸಿದ್ದರು. ಕೌಂಟಿ ಕ್ರಿಕೆಟ್​ನಲ್ಲಿ ರನ್​ಗಳ ಶಿಖರ ಕಟ್ಟಿದ ಪೂಜಾರ ಆಸೀಸ್ ವಿರುದ್ಧದ ಫೈನಲ್​ ಪಂದ್ಯದಲ್ಲಿ 14 ರನ್​ಗಳಿಗೆ ಪೆವಿಲಿಯನ್ ಅತ್ತ ಮುಖ ಮಾಡಿದರು.

6 / 7
ಇನ್ನು ಮಾಜಿ ನಾಯಕ ಕೊಹ್ಲಿ ಕೂಡ ಈ ಮೂವರಿಗಿಂತ ವಿಭಿನ್ನವಾಗಿಲ್ಲ. ಆಸೀಸ್ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸುವ ಚಾಣಾಕ್ಷತೆ ಹೊಂದಿದ್ದ ಕೊಹ್ಲಿ ಕೂಡ ಕೇವಲ 14 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಈ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸುತ್ತಾರೆ ಎಂಬುದು ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯಾಗಿತ್ತು. ಏಕೆಂದರೆ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕದೊಂದಿಗೆ ಕೊಹ್ಲಿ ಈ ಫೈನಲ್​ಗೆ ಎಂಟ್ರಿಕೊಟ್ಟಿದ್ದರು. ಆದರೆ ಈ ಪಂದ್ಯದಲ್ಲಿ ಕೊಹ್ಲಿಗೆ ವಿಶೇಷವಾಗಿ ಏನ್ನನ್ನು ಮಾಡಲು ಸಾಧ್ಯವಾಗಲಿಲ್ಲ.

ಇನ್ನು ಮಾಜಿ ನಾಯಕ ಕೊಹ್ಲಿ ಕೂಡ ಈ ಮೂವರಿಗಿಂತ ವಿಭಿನ್ನವಾಗಿಲ್ಲ. ಆಸೀಸ್ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸುವ ಚಾಣಾಕ್ಷತೆ ಹೊಂದಿದ್ದ ಕೊಹ್ಲಿ ಕೂಡ ಕೇವಲ 14 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಈ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸುತ್ತಾರೆ ಎಂಬುದು ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯಾಗಿತ್ತು. ಏಕೆಂದರೆ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕದೊಂದಿಗೆ ಕೊಹ್ಲಿ ಈ ಫೈನಲ್​ಗೆ ಎಂಟ್ರಿಕೊಟ್ಟಿದ್ದರು. ಆದರೆ ಈ ಪಂದ್ಯದಲ್ಲಿ ಕೊಹ್ಲಿಗೆ ವಿಶೇಷವಾಗಿ ಏನ್ನನ್ನು ಮಾಡಲು ಸಾಧ್ಯವಾಗಲಿಲ್ಲ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ