AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಫೈನಲ್​ ಪಂದ್ಯಕ್ಕೆ ಗ್ರೀನ್ ಪಿಚ್: ಬ್ಯಾಟರ್​ಗಳಿಗೆ ನಡುಕ ಶುರು..!

WTC Final 2023: ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ವೇಗಿಗಳು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಹೀಗಾಗಿಯೇ ಗ್ರೀನ್ ಪಿಚ್​ನಲ್ಲಿ ಆಸ್ಟ್ರೇಲಿಯಾ ವೇಗಿಗಳನ್ನು ಎದುರಿಸುವುದು ಟೀಮ್ ಇಂಡಿಯಾ ಬ್ಯಾಟರ್​ಗಳಿಗೆ ಸವಾಲಾಗಿರಲಿದೆ.

TV9 Web
| Edited By: |

Updated on: Jun 06, 2023 | 7:30 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಾಳೆಯಿಂದ (ಜೂ.7) ಆರಂಭವಾಗಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಾಳೆಯಿಂದ (ಜೂ.7) ಆರಂಭವಾಗಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

1 / 7
ಇದೀಗ ಓವಲ್​ ಸ್ಟೇಡಿಯಂನಲ್ಲಿ ಫೈನಲ್​ ಪಂದ್ಯಕ್ಕಾಗಿ ಸಜ್ಜುಗೊಳಿಸಲಾಗಿರುವ ಪಿಚ್​ನ ಮೇಲ್ಮೈ ಅನಾವರಣಗೊಂಡಿದೆ. ಹಸಿರು ಹುಲ್ಲಿನಿಂದ ಕೂಡಿರುವ ಪಿಚ್​ ಇದೀಗ ಟೀಮ್ ಇಂಡಿಯಾ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

ಇದೀಗ ಓವಲ್​ ಸ್ಟೇಡಿಯಂನಲ್ಲಿ ಫೈನಲ್​ ಪಂದ್ಯಕ್ಕಾಗಿ ಸಜ್ಜುಗೊಳಿಸಲಾಗಿರುವ ಪಿಚ್​ನ ಮೇಲ್ಮೈ ಅನಾವರಣಗೊಂಡಿದೆ. ಹಸಿರು ಹುಲ್ಲಿನಿಂದ ಕೂಡಿರುವ ಪಿಚ್​ ಇದೀಗ ಟೀಮ್ ಇಂಡಿಯಾ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

2 / 7
ಏಕೆಂದರೆ ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

ಏಕೆಂದರೆ ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

3 / 7
ಹಾಗೆಯೇ ಅನಿರೀಕ್ಷಿತ ಬೌನ್ಸರ್​ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್​ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ.

ಹಾಗೆಯೇ ಅನಿರೀಕ್ಷಿತ ಬೌನ್ಸರ್​ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್​ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ.

4 / 7
ಇತ್ತ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳನ್ನೇ ನೆಚ್ಚಿಕೊಂಡಿರುವ ತಂಡ. ಏಕೆಂದರೆ ತಂಡದಲ್ಲಿ ಅತ್ಯುತ್ತಮ ವೇಗಿಗಳಾಗಿರುವುದು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್. ಇನ್ನು ಪ್ರಮುಖ ವೇಗಿ ಜಸ್​​ಪ್ರೀತ್ ಬುಮ್ರಾ ಗಾಯದ ಕಾರಣ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಇತ್ತ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳನ್ನೇ ನೆಚ್ಚಿಕೊಂಡಿರುವ ತಂಡ. ಏಕೆಂದರೆ ತಂಡದಲ್ಲಿ ಅತ್ಯುತ್ತಮ ವೇಗಿಗಳಾಗಿರುವುದು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್. ಇನ್ನು ಪ್ರಮುಖ ವೇಗಿ ಜಸ್​​ಪ್ರೀತ್ ಬುಮ್ರಾ ಗಾಯದ ಕಾರಣ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

5 / 7
ಆದರೆ ಅತ್ತ ಎಡಗೈ ವೇಗಿಯಾಗಿ ಮಿಚೆಲ್ ಸ್ಟಾರ್ಕ್ ಇದ್ದು, ಬಲಗೈ ವೇಗಿ ಪ್ಯಾಟ್ ಕಮಿನ್ಸ್ ಸಾಥ್ ನೀಡಲಿದ್ದಾರೆ. ಇದರ ಜೊತೆಗೆ ಸ್ಕಾಟ್ ಬೋಲ್ಯಾಂಡ್​ ಕೂಡ ಕಣಕ್ಕಿಳಿಯುವುದು ಖಚಿತ. ಹಾಗೆಯೇ ಆಲ್​ರೌಂಡರ್​ ಆಗಿ ಕಾಣಿಸಿಕೊಳ್ಳಲಿರುವ ಕ್ಯಾಮರೋನ್ ಗ್ರೀನ್ ಕೂಡ ವೇಗದ ಬೌಲರ್.

ಆದರೆ ಅತ್ತ ಎಡಗೈ ವೇಗಿಯಾಗಿ ಮಿಚೆಲ್ ಸ್ಟಾರ್ಕ್ ಇದ್ದು, ಬಲಗೈ ವೇಗಿ ಪ್ಯಾಟ್ ಕಮಿನ್ಸ್ ಸಾಥ್ ನೀಡಲಿದ್ದಾರೆ. ಇದರ ಜೊತೆಗೆ ಸ್ಕಾಟ್ ಬೋಲ್ಯಾಂಡ್​ ಕೂಡ ಕಣಕ್ಕಿಳಿಯುವುದು ಖಚಿತ. ಹಾಗೆಯೇ ಆಲ್​ರೌಂಡರ್​ ಆಗಿ ಕಾಣಿಸಿಕೊಳ್ಳಲಿರುವ ಕ್ಯಾಮರೋನ್ ಗ್ರೀನ್ ಕೂಡ ವೇಗದ ಬೌಲರ್.

6 / 7
ಅಂದರೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ವೇಗಿಗಳು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಹೀಗಾಗಿಯೇ ಗ್ರೀನ್ ಪಿಚ್​ನಲ್ಲಿ ಆಸ್ಟ್ರೇಲಿಯಾ ವೇಗಿಗಳನ್ನು ಎದುರಿಸುವುದು ಟೀಮ್ ಇಂಡಿಯಾ ಬ್ಯಾಟರ್​ಗಳಿಗೆ ಸವಾಲಾಗಿರಲಿದೆ. ಈ ಸವಾಲನ್ನು ಮೆಟ್ಟಿ ನಿಂತು ಭಾರತ ತಂಡ ವಿಶ್ವ ಚಾಂಪಿಯನ್ ಆಗಲಿದೆಯಾ ಕಾದು ನೋಡಬೇಕಿದೆ.

ಅಂದರೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ವೇಗಿಗಳು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಹೀಗಾಗಿಯೇ ಗ್ರೀನ್ ಪಿಚ್​ನಲ್ಲಿ ಆಸ್ಟ್ರೇಲಿಯಾ ವೇಗಿಗಳನ್ನು ಎದುರಿಸುವುದು ಟೀಮ್ ಇಂಡಿಯಾ ಬ್ಯಾಟರ್​ಗಳಿಗೆ ಸವಾಲಾಗಿರಲಿದೆ. ಈ ಸವಾಲನ್ನು ಮೆಟ್ಟಿ ನಿಂತು ಭಾರತ ತಂಡ ವಿಶ್ವ ಚಾಂಪಿಯನ್ ಆಗಲಿದೆಯಾ ಕಾದು ನೋಡಬೇಕಿದೆ.

7 / 7
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು