AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill Controversial catch: ಐಪಿಎಲ್ ಉದಾಹರಣೆ ನೀಡಿ ಐಸಿಸಿ ವಿರುದ್ಧ ಗರಂ ಆದ ರೋಹಿತ್ ಶರ್ಮಾ!

Shubman Gill Controversial catch: ಮೊದಲನೇಯದಾಗಿ ಡಬ್ಲ್ಯುಟಿಸಿ ಫೈನಲ್ ಆಯೋಜನೆ, ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿರುವ ರೋಹಿತ್ ಆ ಬಳಿಕ ಈ ಪಂದ್ಯದಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಶುಭ್​ಮನ್ ಗಿಲ್ ಅವರ ವಿವಾದಾತ್ಮಕ ಕ್ಯಾಚ್ ಕುರಿತು ಐಸಿಸಿ ವಿರುದ್ಧ ಗರಂ ಆಗಿದ್ದಾರೆ.

ಪೃಥ್ವಿಶಂಕರ
|

Updated on: Jun 12, 2023 | 8:19 AM

Share
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಭಾರತ ಕಾಲಿ ಕೈಯಲ್ಲಿ ತವರಿಗೆ ವಾಪಸ್ಸಾಗುತ್ತಿದೆ. ಟೆಸ್ಟ್ ಆರಂಭವಾದ ಮೊದಲ ದಿನದಿಂದಲೂ ಆಸೀಸ್ ವಿರುದ್ಧ ಹಿನ್ನಡೆ ಅನುಭವಿಸಿದ್ದ ಭಾರತದ ಸೋಲಿಗೆ ಇದೀಗ ನಾಯಕ ರೋಹಿತ್ ಶರ್ಮಾ ಐಸಿಸಿಯನ್ನು ನೇರ ಹೊಣೆ ಮಾಡುತ್ತಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಭಾರತ ಕಾಲಿ ಕೈಯಲ್ಲಿ ತವರಿಗೆ ವಾಪಸ್ಸಾಗುತ್ತಿದೆ. ಟೆಸ್ಟ್ ಆರಂಭವಾದ ಮೊದಲ ದಿನದಿಂದಲೂ ಆಸೀಸ್ ವಿರುದ್ಧ ಹಿನ್ನಡೆ ಅನುಭವಿಸಿದ್ದ ಭಾರತದ ಸೋಲಿಗೆ ಇದೀಗ ನಾಯಕ ರೋಹಿತ್ ಶರ್ಮಾ ಐಸಿಸಿಯನ್ನು ನೇರ ಹೊಣೆ ಮಾಡುತ್ತಿದ್ದಾರೆ.

1 / 7
ಮೊದಲನೇಯದಾಗಿ ಡಬ್ಲ್ಯುಟಿಸಿ ಫೈನಲ್ ಆಯೋಜನೆ, ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿರುವ ರೋಹಿತ್ ಆ ಬಳಿಕ ಈ ಪಂದ್ಯದಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಶುಭ್​ಮನ್ ಗಿಲ್ ಅವರ ವಿವಾದಾತ್ಮಕ ಕ್ಯಾಚ್ ಕುರಿತು ಐಸಿಸಿ ವಿರುದ್ಧ ಗರಂ ಆಗಿದ್ದಾರೆ.

ಮೊದಲನೇಯದಾಗಿ ಡಬ್ಲ್ಯುಟಿಸಿ ಫೈನಲ್ ಆಯೋಜನೆ, ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿರುವ ರೋಹಿತ್ ಆ ಬಳಿಕ ಈ ಪಂದ್ಯದಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಶುಭ್​ಮನ್ ಗಿಲ್ ಅವರ ವಿವಾದಾತ್ಮಕ ಕ್ಯಾಚ್ ಕುರಿತು ಐಸಿಸಿ ವಿರುದ್ಧ ಗರಂ ಆಗಿದ್ದಾರೆ.

2 / 7
ಆಸ್ಟ್ರೇಲಿಯಾ ನೀಡಿದ 444 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತಕ್ಕೆ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಬಿರುಸಿನ ಆರಂಭ ನೀಡಿದರು. ಇವರಿಬ್ಬರ ನಡುವೆ ಉತ್ತಮ ಜೊತೆಯಾಟವಿದ್ದಂತೆ ತೋರುತ್ತಿತ್ತು. ಆದರೆ ನಂತರ ಗಿಲ್ ಅಂಪೈರ್ ಅವರ ವಿವಾದಾತ್ಮಕ ತೀರ್ಪಿಗೆ ಬಲಿಯಾದರು. ಇದು ಟೀಂ ಇಂಡಿಯಾ ಫ್ಯಾನ್ಸ್ ಹಾಗೂ ನಾಯಕ ರೋಹಿತ್​ ಅವರ ಕಣ್ಣನ್ನು ಕೆಂಪಗಾಗಿಸಿದೆ.

ಆಸ್ಟ್ರೇಲಿಯಾ ನೀಡಿದ 444 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತಕ್ಕೆ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಬಿರುಸಿನ ಆರಂಭ ನೀಡಿದರು. ಇವರಿಬ್ಬರ ನಡುವೆ ಉತ್ತಮ ಜೊತೆಯಾಟವಿದ್ದಂತೆ ತೋರುತ್ತಿತ್ತು. ಆದರೆ ನಂತರ ಗಿಲ್ ಅಂಪೈರ್ ಅವರ ವಿವಾದಾತ್ಮಕ ತೀರ್ಪಿಗೆ ಬಲಿಯಾದರು. ಇದು ಟೀಂ ಇಂಡಿಯಾ ಫ್ಯಾನ್ಸ್ ಹಾಗೂ ನಾಯಕ ರೋಹಿತ್​ ಅವರ ಕಣ್ಣನ್ನು ಕೆಂಪಗಾಗಿಸಿದೆ.

3 / 7
ಸ್ಕಾಟ್ ಬೋಲ್ಯಾಂಡ್ ಎಸೆತದಲ್ಲಿ ಗಿಲ್ ಬ್ಯಾಟ್ ಸವರಿ ಚೆಂಡು ಸ್ಲಿಪ್​ನತ್ತ ಸಾಗಿತು. ತಕ್ಷಣವೇ ಅತ್ಯುತ್ತಮ ಡೈವಿಂಗ್ ಮೂಲಕ ಕ್ಯಾಮರೋನ್ ಗ್ರೀನ್ ಎಡಗೈಯಲ್ಲಿ ಕ್ಯಾಚ್ ಹಿಡಿದರು. ಇದಾಗ್ಯೂ ಫೀಲ್ಡ್ ಅಂಪೈರ್ ಕ್ಯಾಚ್ ಅನ್ನು ಪರಿಶೀಲಿಸುವಂತೆ ಮೂರನೇ ಅಂಪೈರ್​ಗೆ ಮನವಿ ಮಾಡಿದರು. ಹಲವು ಬಾರಿ ರೀಪ್ಲೆ ಮಾಡಿದ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿದರು. ಆದರೆ ರೀಪ್ಲೆ ವೇಳೆಯಲ್ಲೇ ಚೆಂಡು ಮೈದಾನಕ್ಕೆ ತಾಗಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಇದಾಗ್ಯೂ ಮೂರನೇ ಅಂಪೈರ್ ಔಟ್ ಎಂದಿರುವುದು ಅಚ್ಚರಿಗೆ ಕಾರಣವಾಯಿತು.

ಸ್ಕಾಟ್ ಬೋಲ್ಯಾಂಡ್ ಎಸೆತದಲ್ಲಿ ಗಿಲ್ ಬ್ಯಾಟ್ ಸವರಿ ಚೆಂಡು ಸ್ಲಿಪ್​ನತ್ತ ಸಾಗಿತು. ತಕ್ಷಣವೇ ಅತ್ಯುತ್ತಮ ಡೈವಿಂಗ್ ಮೂಲಕ ಕ್ಯಾಮರೋನ್ ಗ್ರೀನ್ ಎಡಗೈಯಲ್ಲಿ ಕ್ಯಾಚ್ ಹಿಡಿದರು. ಇದಾಗ್ಯೂ ಫೀಲ್ಡ್ ಅಂಪೈರ್ ಕ್ಯಾಚ್ ಅನ್ನು ಪರಿಶೀಲಿಸುವಂತೆ ಮೂರನೇ ಅಂಪೈರ್​ಗೆ ಮನವಿ ಮಾಡಿದರು. ಹಲವು ಬಾರಿ ರೀಪ್ಲೆ ಮಾಡಿದ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿದರು. ಆದರೆ ರೀಪ್ಲೆ ವೇಳೆಯಲ್ಲೇ ಚೆಂಡು ಮೈದಾನಕ್ಕೆ ತಾಗಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಇದಾಗ್ಯೂ ಮೂರನೇ ಅಂಪೈರ್ ಔಟ್ ಎಂದಿರುವುದು ಅಚ್ಚರಿಗೆ ಕಾರಣವಾಯಿತು.

4 / 7
ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೈದಾನದಲ್ಲೇ ಆಕ್ರೋಶ ಹೊರಹಾಕಿದ್ದರು. ಟಿವಿಯಲ್ಲಿ ಪುನಃ ಪರಿಶೀಲಿಸಿದ ಬಳಿಕ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ಬಗ್ಗೆ ನಾಯಕ ರೋಹಿತ್ ಅಸಮಾಧಾನ ಹೊರಹಾಕಿದ್ದಾರೆ.

ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೈದಾನದಲ್ಲೇ ಆಕ್ರೋಶ ಹೊರಹಾಕಿದ್ದರು. ಟಿವಿಯಲ್ಲಿ ಪುನಃ ಪರಿಶೀಲಿಸಿದ ಬಳಿಕ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ಬಗ್ಗೆ ನಾಯಕ ರೋಹಿತ್ ಅಸಮಾಧಾನ ಹೊರಹಾಕಿದ್ದಾರೆ.

5 / 7
ಪಂದ್ಯ ಸೋತ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ, ತುಂಬಾ ನಿರಾಸೆಯಾಗಿದೆ. ಮೂರನೇ ಅಂಪೈರ್ ಹೆಚ್ಚು ರಿವ್ಯೂವ್​ಗಳನ್ನು ನೋಡಬೇಕಾಗಿತ್ತು. ಆದರೆ ಮೂರನೇ ಅಂಪೈರ್ ನಿರ್ಧಾರವನ್ನು ಬಹಳ ಬೇಗನೆ ತೆಗೆದುಕೊಂಡರು.

ಪಂದ್ಯ ಸೋತ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ, ತುಂಬಾ ನಿರಾಸೆಯಾಗಿದೆ. ಮೂರನೇ ಅಂಪೈರ್ ಹೆಚ್ಚು ರಿವ್ಯೂವ್​ಗಳನ್ನು ನೋಡಬೇಕಾಗಿತ್ತು. ಆದರೆ ಮೂರನೇ ಅಂಪೈರ್ ನಿರ್ಧಾರವನ್ನು ಬಹಳ ಬೇಗನೆ ತೆಗೆದುಕೊಂಡರು.

6 / 7
ಅಲ್ಲದೆ ಇಂತಹ ಫೈನಲ್‌ ಪಂದ್ಯಗಳಲ್ಲಿ ಕ್ಯಾಮೆರಾ ಆ್ಯಂಗಲ್‌ಗಳು ಹೆಚ್ಚು ಇರಬೇಕು. ಐಪಿಎಲ್‌ನಲ್ಲಿ 10 ಕ್ಕೂ ಹೆಚ್ಚು ಕ್ಯಾಮೆರಾ ಆ್ಯಂಗಲ್‌ಗಳಿರುತ್ತವೆ. ಆದರೆ ಐಸಿಸಿ ಈವೆಂಟ್‌ಗಳಲ್ಲಿ ಅಷ್ಟು ವ್ಯವಸ್ಥೆ ಮಾಡಲಾಗಿಲ್ಲ ಎಂದು ಐಸಿಸಿ ವಿರುದ್ಧ ರೋಹಿತ್ ಅಸಮಾಧಾನ ಹೊರಹಾಕಿದ್ದಾರೆ.

ಅಲ್ಲದೆ ಇಂತಹ ಫೈನಲ್‌ ಪಂದ್ಯಗಳಲ್ಲಿ ಕ್ಯಾಮೆರಾ ಆ್ಯಂಗಲ್‌ಗಳು ಹೆಚ್ಚು ಇರಬೇಕು. ಐಪಿಎಲ್‌ನಲ್ಲಿ 10 ಕ್ಕೂ ಹೆಚ್ಚು ಕ್ಯಾಮೆರಾ ಆ್ಯಂಗಲ್‌ಗಳಿರುತ್ತವೆ. ಆದರೆ ಐಸಿಸಿ ಈವೆಂಟ್‌ಗಳಲ್ಲಿ ಅಷ್ಟು ವ್ಯವಸ್ಥೆ ಮಾಡಲಾಗಿಲ್ಲ ಎಂದು ಐಸಿಸಿ ವಿರುದ್ಧ ರೋಹಿತ್ ಅಸಮಾಧಾನ ಹೊರಹಾಕಿದ್ದಾರೆ.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ