AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: 2 ವರ್ಷ 18 ಪಂದ್ಯ; ಹೀಗಿತ್ತು ಟೀಂ ಇಂಡಿಯಾದ ಡಬ್ಲ್ಯುಟಿಸಿ ಫೈನಲ್ ಪ್ರಯಾಣ

WTC Final 2023: ಭಾರತ ತಂಡ ಈ ಆವೃತ್ತಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಿದೆ. ಈ 18 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ 5ಪಂದ್ಯಗಳಲ್ಲಿ ಸೋತಿದೆ.

ಪೃಥ್ವಿಶಂಕರ
|

Updated on: Jun 01, 2023 | 4:52 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಮೊದಲ ಆವೃತ್ತಿಯ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದ್ದ ಟೀಂ ಇಂಡಿಯಾ ಇದೀಗ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಅಂದಹಾಗೆ ಟೀಂ ಇಂಡಿಯಾದ ಈ ಫೈನಲ್ ಜರ್ನಿ ಅಷ್ಟು ಸುಲಭವಾಗಿರಲಿಲ್ಲ. ಹಲವು ಬಲಿಷ್ಠ ತಂಡಗಳಿಗೆ ಮಣ್ಣು ಮುಕ್ಕಿಸಿದ ರೋಹಿತ್ ಪಡೆ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಟ್ಟಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಮೊದಲ ಆವೃತ್ತಿಯ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದ್ದ ಟೀಂ ಇಂಡಿಯಾ ಇದೀಗ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಅಂದಹಾಗೆ ಟೀಂ ಇಂಡಿಯಾದ ಈ ಫೈನಲ್ ಜರ್ನಿ ಅಷ್ಟು ಸುಲಭವಾಗಿರಲಿಲ್ಲ. ಹಲವು ಬಲಿಷ್ಠ ತಂಡಗಳಿಗೆ ಮಣ್ಣು ಮುಕ್ಕಿಸಿದ ರೋಹಿತ್ ಪಡೆ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಟ್ಟಿದೆ.

1 / 9
ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡ ಒಟ್ಟು 6 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಪೈಕಿ ತಂಡ ಕೇವಲ ಒಂದು ಬಾರಿ ಸರಣಿ ಸೋತಿದ್ದು, ಒಂದು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇದಲ್ಲದೇ ನಾಲ್ಕು ಸರಣಿಗಳನ್ನು ಟೀಂ ಇಂಡಿಯಾ ಗೆದ್ದಿದೆ.

ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡ ಒಟ್ಟು 6 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಪೈಕಿ ತಂಡ ಕೇವಲ ಒಂದು ಬಾರಿ ಸರಣಿ ಸೋತಿದ್ದು, ಒಂದು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇದಲ್ಲದೇ ನಾಲ್ಕು ಸರಣಿಗಳನ್ನು ಟೀಂ ಇಂಡಿಯಾ ಗೆದ್ದಿದೆ.

2 / 9
ಭಾರತ ತಂಡ ಈ ಆವೃತ್ತಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಿದೆ. ಈ 18 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ 5ಪಂದ್ಯಗಳಲ್ಲಿ ಸೋತಿದೆ. ಇನ್ನುಳಿದಂತೆ 3 ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾದ ಪ್ರಯಾಣ ಹೇಗಿತ್ತು ಎಂಬುದನ್ನು ನೋಡುವುದಾದರೆ..

ಭಾರತ ತಂಡ ಈ ಆವೃತ್ತಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಿದೆ. ಈ 18 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ 5ಪಂದ್ಯಗಳಲ್ಲಿ ಸೋತಿದೆ. ಇನ್ನುಳಿದಂತೆ 3 ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾದ ಪ್ರಯಾಣ ಹೇಗಿತ್ತು ಎಂಬುದನ್ನು ನೋಡುವುದಾದರೆ..

3 / 9
ನ್ಯೂಜಿಲೆಂಡ್ ವಿರುದ್ಧದ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸೋತ ನಂತರ, ಅಂದರೆ ಆಗಸ್ಟ್ 2021 ರಲ್ಲಿ, ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿತು. ಎರಡೂ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯಬೇಕಿತ್ತು. ಆದರೆ ಅಲ್ಲಿ 4 ಟೆಸ್ಟ್‌ಗಳು ಮಾತ್ರ ನಡೆದವು. ಸರಣಿಯ 5 ನೇ ಮತ್ತು ಕೊನೆಯ ಟೆಸ್ಟ್ ಜುಲೈ 2022 ಕ್ಕೆ ಮುಂದೂಡಲಾಯಿತು. ಅಂತಿಮವಾಗಿ 5 ಪಂದ್ಯಗಳ ಈ ಸರಣಿ 2-2ರಲ್ಲಿ ಸಮಬಲಗೊಂಡಿತು.

ನ್ಯೂಜಿಲೆಂಡ್ ವಿರುದ್ಧದ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸೋತ ನಂತರ, ಅಂದರೆ ಆಗಸ್ಟ್ 2021 ರಲ್ಲಿ, ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿತು. ಎರಡೂ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯಬೇಕಿತ್ತು. ಆದರೆ ಅಲ್ಲಿ 4 ಟೆಸ್ಟ್‌ಗಳು ಮಾತ್ರ ನಡೆದವು. ಸರಣಿಯ 5 ನೇ ಮತ್ತು ಕೊನೆಯ ಟೆಸ್ಟ್ ಜುಲೈ 2022 ಕ್ಕೆ ಮುಂದೂಡಲಾಯಿತು. ಅಂತಿಮವಾಗಿ 5 ಪಂದ್ಯಗಳ ಈ ಸರಣಿ 2-2ರಲ್ಲಿ ಸಮಬಲಗೊಂಡಿತು.

4 / 9
ನಂತರ ಡಿಸೆಂಬರ್ 2021 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ 2 ಪಂದ್ಯಗಳನ್ನು ಆಡಿದ್ದ ಟೀಂ ಇಂಡಿಯಾ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು.

ನಂತರ ಡಿಸೆಂಬರ್ 2021 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ 2 ಪಂದ್ಯಗಳನ್ನು ಆಡಿದ್ದ ಟೀಂ ಇಂಡಿಯಾ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು.

5 / 9
ಡಿಸೆಂಬರ್ 2021 ಮತ್ತು ಜನವರಿ 2022 ರ ನಡುವೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ ಟೀಂ ಇಂಡಿಯಾ ಆತಿಥೇಯರ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 1-2 ರ ಅಂತರದಲ್ಲಿ ಕಳೆದುಕೊಂಡಿತು.

ಡಿಸೆಂಬರ್ 2021 ಮತ್ತು ಜನವರಿ 2022 ರ ನಡುವೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ ಟೀಂ ಇಂಡಿಯಾ ಆತಿಥೇಯರ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 1-2 ರ ಅಂತರದಲ್ಲಿ ಕಳೆದುಕೊಂಡಿತು.

6 / 9
ಮಾರ್ಚ್ 2022 ರಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ 2ಟೆಸ್ಟ್ ಪಂದ್ಯಗಳ ಸರಣಿಯನ್ನಾಡಿದ ಭಾರತ, ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು.

ಮಾರ್ಚ್ 2022 ರಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ 2ಟೆಸ್ಟ್ ಪಂದ್ಯಗಳ ಸರಣಿಯನ್ನಾಡಿದ ಭಾರತ, ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು.

7 / 9
ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿದ ಭಾರತ, ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತು.

ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿದ ಭಾರತ, ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತು.

8 / 9
ಫೆಬ್ರವರಿ-ಮಾರ್ಚ್ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 4 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಿದ ಭಾರತ, ಸರಣಿಯನ್ನ 2-1 ರಿಂದ ಗೆದ್ದುಕೊಂಡಿತು.

ಫೆಬ್ರವರಿ-ಮಾರ್ಚ್ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 4 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಿದ ಭಾರತ, ಸರಣಿಯನ್ನ 2-1 ರಿಂದ ಗೆದ್ದುಕೊಂಡಿತು.

9 / 9
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ