AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಡಬ್ಲ್ಯುಟಿಸಿ ಫೈನಲ್ ಬಗ್ಗೆ ಅಸಮಾಧಾನ ಹೊರಹಾಕಿದ ಡೇವಿಡ್ ವಾರ್ನರ್

WTC Final 2023: ಬರೋಬ್ಬರಿ 2 ವರ್ಷಗಳ ಕಾಲ ನಡೆಯುವ ಈ ಚಾಂಪಿಯನ್​ಶಿಪ್​ನ ಫೈನಲ್ ಮಾತ್ರ ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗಿರುವುದು ವಾರ್ನರ್ ಅಸಮಾಧಾನಕ್ಕೆ ಕಾರಣವಾಗಿದೆ.

ಪೃಥ್ವಿಶಂಕರ
|

Updated on: Jun 04, 2023 | 4:55 PM

Share
ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಘಟಕ್ಕೆ ಬಂದು ನಿಂತಿದೆ. ಜೂನ್ 7 ರಿಂದ ಲಂಡನ್‌ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪ್ರಶಸ್ತಿ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಗೆದ್ದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ. ಇನ್ನು ಟೀಂ ಇಂಡಿಯಾ ಈಗಾಗಲೇ ಒಮ್ಮೆ ಫೈನಲ್ ಆಡಿದ್ದು, ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿತ್ತು. ಆದರೆ ಆಸ್ಟ್ರೇಲಿಯ ತಂಡ ಚೊಚ್ಚಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಸಜ್ಜಾಗಿದ್ದು, ಟೆಸ್ಟ್ ವಿಶ್ವಕಪ್ ಗೆಲ್ಲಲು ಸಜ್ಜಾಗಿದೆ.

ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಘಟಕ್ಕೆ ಬಂದು ನಿಂತಿದೆ. ಜೂನ್ 7 ರಿಂದ ಲಂಡನ್‌ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪ್ರಶಸ್ತಿ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಗೆದ್ದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ. ಇನ್ನು ಟೀಂ ಇಂಡಿಯಾ ಈಗಾಗಲೇ ಒಮ್ಮೆ ಫೈನಲ್ ಆಡಿದ್ದು, ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿತ್ತು. ಆದರೆ ಆಸ್ಟ್ರೇಲಿಯ ತಂಡ ಚೊಚ್ಚಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಸಜ್ಜಾಗಿದ್ದು, ಟೆಸ್ಟ್ ವಿಶ್ವಕಪ್ ಗೆಲ್ಲಲು ಸಜ್ಜಾಗಿದೆ.

1 / 5
ಎರಡು ವರ್ಷಗಳ ಸರಣಿಯಲ್ಲಿ ಆಸ್ಟ್ರೇಲಿಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಫೈನಲ್‌ಗೆ ಪ್ರಯಾಣ ಬೆಳೆಸಿದೆ.

ಎರಡು ವರ್ಷಗಳ ಸರಣಿಯಲ್ಲಿ ಆಸ್ಟ್ರೇಲಿಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಫೈನಲ್‌ಗೆ ಪ್ರಯಾಣ ಬೆಳೆಸಿದೆ.

2 / 5
ಆದರೆ ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಓಪನರ್​ ಡೇವಿಡ್ ವಾರ್ನರ ಗೆ ಮಾತ್ರ ಡಬ್ಲ್ಯುಟಿಸಿ ಫೈನಲ್​ ಆಡಿಸುವ ವಿಧಾನದ ಬಗ್ಗೆ ಅಸಮಾಧಾನವಿದ್ದಂತೆ ತೋರುತ್ತ್ತಿದೆ. ಬರೋಬ್ಬರಿ 2 ವರ್ಷಗಳ ಕಾಲ ನಡೆಯುವ ಈ ಚಾಂಪಿಯನ್​ಶಿಪ್​ನ ಫೈನಲ್ ಮಾತ್ರ ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗಿರುವುದು ವಾರ್ನರ್ ಅಸಮಾಧಾನಕ್ಕೆ ಕಾರಣವಾಗಿದೆ.

ಆದರೆ ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಓಪನರ್​ ಡೇವಿಡ್ ವಾರ್ನರ ಗೆ ಮಾತ್ರ ಡಬ್ಲ್ಯುಟಿಸಿ ಫೈನಲ್​ ಆಡಿಸುವ ವಿಧಾನದ ಬಗ್ಗೆ ಅಸಮಾಧಾನವಿದ್ದಂತೆ ತೋರುತ್ತ್ತಿದೆ. ಬರೋಬ್ಬರಿ 2 ವರ್ಷಗಳ ಕಾಲ ನಡೆಯುವ ಈ ಚಾಂಪಿಯನ್​ಶಿಪ್​ನ ಫೈನಲ್ ಮಾತ್ರ ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗಿರುವುದು ವಾರ್ನರ್ ಅಸಮಾಧಾನಕ್ಕೆ ಕಾರಣವಾಗಿದೆ.

3 / 5
ಇಂಗ್ಲೆಂಡ್‌ನಲ್ಲಿ ತಮ್ಮ ಸಿದ್ಧತೆಗಳ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಎರಡು ವರ್ಷಗಳ ಕಾಲ ನಡೆಯುವ ಇಂತಹ ಶ್ರೇಷ್ಠ ಟೂರ್ನಿಯ ಫೈನಲ್ ಪಂದ್ಯವನ್ನು ಮೂರು ಪಂದ್ಯಗಳ ಟೆಸ್ಟ್ ಸರಣಿಯಂತೆ ಆಡಬೇಕೆಂದು ಹೇಳುವ ಮೂಲಕ ವಾರ್ನರ್, ಡಬ್ಲ್ಯುಟಿಸಿ ಫೈನಲ್ ವಿಧಾನದಲ್ಲಿ ಬದಲಾವಣೆ ತರಬೇಕು ಎಂದಿದ್ದಾರೆ.

ಇಂಗ್ಲೆಂಡ್‌ನಲ್ಲಿ ತಮ್ಮ ಸಿದ್ಧತೆಗಳ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಎರಡು ವರ್ಷಗಳ ಕಾಲ ನಡೆಯುವ ಇಂತಹ ಶ್ರೇಷ್ಠ ಟೂರ್ನಿಯ ಫೈನಲ್ ಪಂದ್ಯವನ್ನು ಮೂರು ಪಂದ್ಯಗಳ ಟೆಸ್ಟ್ ಸರಣಿಯಂತೆ ಆಡಬೇಕೆಂದು ಹೇಳುವ ಮೂಲಕ ವಾರ್ನರ್, ಡಬ್ಲ್ಯುಟಿಸಿ ಫೈನಲ್ ವಿಧಾನದಲ್ಲಿ ಬದಲಾವಣೆ ತರಬೇಕು ಎಂದಿದ್ದಾರೆ.

4 / 5
ಅಂದಹಾಗೆ, ಡಬ್ಲ್ಯುಟಿಸಿ ಫೈನಲ್ ವಿಧಾನದ ಬಗ್ಗೆ ಈ ರೀತಿ ಹೇಳಿಕೆ ನೀಡಿದ ಮೊದಲ ವ್ಯಕ್ತಿ ವಾರ್ನರ್ ಅಲ್ಲ. 2021 ರಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ಫೈನಲ್ ಪಂದ್ಯ ನಡೆದಾಗ, ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಮತ್ತು ಆ ಸಮಯದಲ್ಲಿ ಟೀಂ ಇಂಡಿಯಾದ ನಾಯಕರಾಗಿದ್ದ ವಿರಾಟ್ ಕೊಹ್ಲಿ ಕೂಡ ಫೈನಲ್‌ಗೆ ಒಂದು ಪಂದ್ಯ ಸಾಕಾಗುವುದಿಲ್ಲ ಎಂದಿದ್ದರು. ಆದರೆ, ಬಿಡುವಿಲ್ಲದ ಅಂತಾರಾಷ್ಟ್ರೀಯ ಕ್ಯಾಲೆಂಡರ್‌ನಿಂದಾಗಿ ಮೂರು ಪಂದ್ಯಗಳ ಸರಣಿಗೆ ಸ್ಥಳಾವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂಬ ಉತ್ತರವನ್ನು ಐಸಿಸಿ ನೀಡಿತ್ತು.

ಅಂದಹಾಗೆ, ಡಬ್ಲ್ಯುಟಿಸಿ ಫೈನಲ್ ವಿಧಾನದ ಬಗ್ಗೆ ಈ ರೀತಿ ಹೇಳಿಕೆ ನೀಡಿದ ಮೊದಲ ವ್ಯಕ್ತಿ ವಾರ್ನರ್ ಅಲ್ಲ. 2021 ರಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ಫೈನಲ್ ಪಂದ್ಯ ನಡೆದಾಗ, ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಮತ್ತು ಆ ಸಮಯದಲ್ಲಿ ಟೀಂ ಇಂಡಿಯಾದ ನಾಯಕರಾಗಿದ್ದ ವಿರಾಟ್ ಕೊಹ್ಲಿ ಕೂಡ ಫೈನಲ್‌ಗೆ ಒಂದು ಪಂದ್ಯ ಸಾಕಾಗುವುದಿಲ್ಲ ಎಂದಿದ್ದರು. ಆದರೆ, ಬಿಡುವಿಲ್ಲದ ಅಂತಾರಾಷ್ಟ್ರೀಯ ಕ್ಯಾಲೆಂಡರ್‌ನಿಂದಾಗಿ ಮೂರು ಪಂದ್ಯಗಳ ಸರಣಿಗೆ ಸ್ಥಳಾವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂಬ ಉತ್ತರವನ್ನು ಐಸಿಸಿ ನೀಡಿತ್ತು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!