AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿಯೊಂದಿಗೆ ಹೊಸ ಇತಿಹಾಸ ರಚಿಸಿದ ಐಡೆನ್ ಮಾರ್ಕ್ರಾಮ್ 

Aiden Markram Record: ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡದ ಆರಂಭಿಕ ದಾಂಡಿಗ ಐಡೆನ್ ಮಾರ್ಕ್ರಾಮ್ 158 ಎಸೆತಗಳಲ್ಲಿ ಅಜೇಯ 102 ರನ್ ಬಾರಿಸಿದ್ದಾರೆ. ಈ ಭರ್ಜರಿ ಸೆಂಚುರಿಯೊಂದಿಗೆ ಮಾರ್ಕ್ರಾಮ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 14, 2025 | 8:04 AM

Share
ಸೌತ್ ಆಫ್ರಿಕಾ ತಂಡವು ಐಸಿಸಿ ಟೂರ್ನಿಯಲ್ಲಿ ಫೈನಲ್ ಆಡಿರುವುದು ಕೇವಲ ಮೂರು ಬಾರಿ. ಕಳೆದ ಎರಡು ಬಾರಿಯ ಫೈನಲ್ ಫೈಟ್​ನಲ್ಲಿ ಸಾಧ್ಯವಾಗದ ಸಾಧನೆಯನ್ನು ಈ ಬಾರಿ ಐಡೆನ್ ಮಾರ್ಕ್ರಾಮ್ ಮಾಡಿದ್ದಾರೆ. ಆದು ಕೂಡ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

ಸೌತ್ ಆಫ್ರಿಕಾ ತಂಡವು ಐಸಿಸಿ ಟೂರ್ನಿಯಲ್ಲಿ ಫೈನಲ್ ಆಡಿರುವುದು ಕೇವಲ ಮೂರು ಬಾರಿ. ಕಳೆದ ಎರಡು ಬಾರಿಯ ಫೈನಲ್ ಫೈಟ್​ನಲ್ಲಿ ಸಾಧ್ಯವಾಗದ ಸಾಧನೆಯನ್ನು ಈ ಬಾರಿ ಐಡೆನ್ ಮಾರ್ಕ್ರಾಮ್ ಮಾಡಿದ್ದಾರೆ. ಆದು ಕೂಡ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

1 / 5
ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ ಐಡೆನ್ ಮಾರ್ಕ್ರಾಮ್ ಆಕರ್ಷಕ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಐಸಿಸಿ ಟೂರ್ನಿಯ ಫೈನಲ್​ನಲ್ಲಿ ಸೆಂಚುರಿ ಸಿಡಿಸಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ ಐಡೆನ್ ಮಾರ್ಕ್ರಾಮ್ ಆಕರ್ಷಕ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಐಸಿಸಿ ಟೂರ್ನಿಯ ಫೈನಲ್​ನಲ್ಲಿ ಸೆಂಚುರಿ ಸಿಡಿಸಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ 1998 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ ವಿರುದ್ಧದ ಸೌತ್ ಆಫ್ರಿಕಾದ ಮಾಜಿ ನಾಯಕ ಹ್ಯಾನ್ಸಿ ಕ್ರೋನಿಯೆ ಅಜೇಯ 61 ರನ್​ ಬಾರಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಇದಾದ ಬಳಿಕ 2024ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಹೆನ್ರಿಕ್ ಕ್ಲಾಸೆನ್ 52 ರನ್ ಬಾರಿಸಿದ್ದರು.

ಇದಕ್ಕೂ ಮುನ್ನ 1998 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ ವಿರುದ್ಧದ ಸೌತ್ ಆಫ್ರಿಕಾದ ಮಾಜಿ ನಾಯಕ ಹ್ಯಾನ್ಸಿ ಕ್ರೋನಿಯೆ ಅಜೇಯ 61 ರನ್​ ಬಾರಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಇದಾದ ಬಳಿಕ 2024ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಹೆನ್ರಿಕ್ ಕ್ಲಾಸೆನ್ 52 ರನ್ ಬಾರಿಸಿದ್ದರು.

3 / 5
ಇದೀಗ ಐಸಿಸಿ ಫೈನಲ್ ಪಂದ್ಯದಲ್ಲಿ ಮೂರಂಕಿ ಮೊತ್ತ ಕಲೆಹಾಕುವ ಮೂಲಕ ಐಡೆನ್ ಮಾರ್ಕ್ರಾಮ್ ಹೊಸ ಇತಿಹಾಸ ರಚಿಸಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದ ನಾಲ್ಕನೇ ಇನಿಂಗ್ಸ್​ನಲ್ಲಿ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಸಹ ಮಾರ್ಕ್ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಐಸಿಸಿ ಫೈನಲ್ ಪಂದ್ಯದಲ್ಲಿ ಮೂರಂಕಿ ಮೊತ್ತ ಕಲೆಹಾಕುವ ಮೂಲಕ ಐಡೆನ್ ಮಾರ್ಕ್ರಾಮ್ ಹೊಸ ಇತಿಹಾಸ ರಚಿಸಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದ ನಾಲ್ಕನೇ ಇನಿಂಗ್ಸ್​ನಲ್ಲಿ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಸಹ ಮಾರ್ಕ್ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 212 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು 138 ರನ್​ಗಳಿಸಿ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು 207 ರನ್​ಗಳಿಸಿ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿನ 74 ರನ್​ಗಳ ಹಿನ್ನಡೆಯೊಂದಿಗೆ ಸೌತ್ ಆಫ್ರಿಕಾ ತಂಡವು ಕೊನೆಯ ಇನಿಂಗ್ಸ್​ನಲ್ಲಿ 282 ರನ್​ ಗುರಿ ಪಡೆದಿದ್ದು, ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 213 ರನ್​ ಕಲೆಹಾಕಿದೆ. ಇನ್ನು 69 ರನ್​ಗಳಿಸಿ ಸೌತ್ ಆಫ್ರಿಕಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 212 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು 138 ರನ್​ಗಳಿಸಿ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು 207 ರನ್​ಗಳಿಸಿ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿನ 74 ರನ್​ಗಳ ಹಿನ್ನಡೆಯೊಂದಿಗೆ ಸೌತ್ ಆಫ್ರಿಕಾ ತಂಡವು ಕೊನೆಯ ಇನಿಂಗ್ಸ್​ನಲ್ಲಿ 282 ರನ್​ ಗುರಿ ಪಡೆದಿದ್ದು, ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 213 ರನ್​ ಕಲೆಹಾಕಿದೆ. ಇನ್ನು 69 ರನ್​ಗಳಿಸಿ ಸೌತ್ ಆಫ್ರಿಕಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

5 / 5
Follow Us
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು