AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ​ ಫೈನಲ್​ಗೇರಬಹುದು..!

WTC Final Qualification Scenario: ಇಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಂಡರೆ ಅಥವಾ 2-1 ಅಂತರದಿಂದ ಗೆದ್ದುಕೊಂಡರೆ, ಟೀಮ್ ಇಂಡಿಯಾಗೆ ನೇರವಾಗಿ ಫೈನಲ್​ಗೇರಲು ಸಾಧ್ಯವಾಗುವುದಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Mar 04, 2023 | 3:58 PM

WTC Final Qualification Scenario: ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸೀಸ್ ಬಳಗವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಿದೆ. ಇದಾಗ್ಯೂ ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್​ನಲ್ಲಿ ಕಣಕ್ಕಿಳಿಯುವ 2ನೇ ತಂಡ ಯಾವುದೆಂದು ಇನ್ನೂ ಕೂಡ ನಿರ್ಧಾರವಾಗಿಲ್ಲ.

WTC Final Qualification Scenario: ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸೀಸ್ ಬಳಗವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಿದೆ. ಇದಾಗ್ಯೂ ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್​ನಲ್ಲಿ ಕಣಕ್ಕಿಳಿಯುವ 2ನೇ ತಂಡ ಯಾವುದೆಂದು ಇನ್ನೂ ಕೂಡ ನಿರ್ಧಾರವಾಗಿಲ್ಲ.

1 / 9
ಇಲ್ಲಿ ಫೈನಲ್​ಗೇರಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶವಿದ್ದರೂ, ಅತ್ತ ಶ್ರೀಲಂಕಾ ತಂಡ ಕೂಡ ಫೈನಲ್​ ರೇಸ್​ನಲ್ಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದರೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಒಂದು ವೇಳೆ ಭಾರತ ತಂಡ ಸೋತರೆ ಮುಂದಿನ ದಾರಿಗಳೇನು? ಶ್ರೀಲಂಕಾಗೆ ಹೇಗೆ ಅವಕಾಶ ಸಿಗಲಿದೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಇಲ್ಲಿ ಫೈನಲ್​ಗೇರಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶವಿದ್ದರೂ, ಅತ್ತ ಶ್ರೀಲಂಕಾ ತಂಡ ಕೂಡ ಫೈನಲ್​ ರೇಸ್​ನಲ್ಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದರೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಒಂದು ವೇಳೆ ಭಾರತ ತಂಡ ಸೋತರೆ ಮುಂದಿನ ದಾರಿಗಳೇನು? ಶ್ರೀಲಂಕಾಗೆ ಹೇಗೆ ಅವಕಾಶ ಸಿಗಲಿದೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

2 / 9
ಅಹಮದಾಬಾದ್​ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದರೆ ಟೀಮ್ ಇಂಡಿಯಾ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೆ ಅರ್ಹತೆ ಪಡೆಯಲಿದೆ. ಅದರಂತೆ ಫೈನಲ್ ಫೈಟ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಬಹುದು.

ಅಹಮದಾಬಾದ್​ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದರೆ ಟೀಮ್ ಇಂಡಿಯಾ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೆ ಅರ್ಹತೆ ಪಡೆಯಲಿದೆ. ಅದರಂತೆ ಫೈನಲ್ ಫೈಟ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಬಹುದು.

3 / 9
ಒಂದು ವೇಳೆ ಸೋತರೆ?...ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನು ಸೋತರೆ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಸರಣಿ ಗೆಲ್ಲುವುದನ್ನು ಎದುರು ನೋಡಬೇಕು. ಅಂದರೆ ಇಲ್ಲಿ ಶ್ರೀಲಂಕಾ ತಂಡಕ್ಕೆ ಅವಕಾಶ ಹೆಚ್ಚಾಗಲಿದೆ.

ಒಂದು ವೇಳೆ ಸೋತರೆ?...ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನು ಸೋತರೆ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಸರಣಿ ಗೆಲ್ಲುವುದನ್ನು ಎದುರು ನೋಡಬೇಕು. ಅಂದರೆ ಇಲ್ಲಿ ಶ್ರೀಲಂಕಾ ತಂಡಕ್ಕೆ ಅವಕಾಶ ಹೆಚ್ಚಾಗಲಿದೆ.

4 / 9
ಭಾರತ-ಆಸ್ಟ್ರೇಲಿಯಾ ನಡುವಣ ಕೊನೆಯ ಟೆಸ್ಟ್ ಪಂದ್ಯ ಡ್ರಾ ಆದರೆ?...ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಡ್ರಾ ಆದರೂ ಟೀಮ್ ಇಂಡಿಯಾದ ಪಾಲಿಗೆ ಮುಳುವಾಗಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದರೂ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡದ ಗೆಲುವಿನ ಮೇಲೆ ಫೈನಲ್​ಗೇರುವ ಅವಕಾಶ ಅವಲಂಭಿತವಾಗಲಿದೆ.

ಭಾರತ-ಆಸ್ಟ್ರೇಲಿಯಾ ನಡುವಣ ಕೊನೆಯ ಟೆಸ್ಟ್ ಪಂದ್ಯ ಡ್ರಾ ಆದರೆ?...ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಡ್ರಾ ಆದರೂ ಟೀಮ್ ಇಂಡಿಯಾದ ಪಾಲಿಗೆ ಮುಳುವಾಗಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದರೂ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡದ ಗೆಲುವಿನ ಮೇಲೆ ಫೈನಲ್​ಗೇರುವ ಅವಕಾಶ ಅವಲಂಭಿತವಾಗಲಿದೆ.

5 / 9
ಅಂದರೆ ಇಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಂಡರೆ ಅಥವಾ 2-1 ಅಂತರದಿಂದ ಗೆದ್ದುಕೊಂಡರೆ, ಟೀಮ್ ಇಂಡಿಯಾಗೆ ನೇರವಾಗಿ ಫೈನಲ್​ಗೇರಲು ಸಾಧ್ಯವಾಗುವುದಿಲ್ಲ. ಬದಲಾಗಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು 2-0 ಅಂತರದಿಂದ ಸೋಲಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಎಂಟ್ರಿ ಕೊಡಬಹುದು.

ಅಂದರೆ ಇಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಂಡರೆ ಅಥವಾ 2-1 ಅಂತರದಿಂದ ಗೆದ್ದುಕೊಂಡರೆ, ಟೀಮ್ ಇಂಡಿಯಾಗೆ ನೇರವಾಗಿ ಫೈನಲ್​ಗೇರಲು ಸಾಧ್ಯವಾಗುವುದಿಲ್ಲ. ಬದಲಾಗಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು 2-0 ಅಂತರದಿಂದ ಸೋಲಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಎಂಟ್ರಿ ಕೊಡಬಹುದು.

6 / 9
ಇನ್ನು ಭಾರತ ತಂಡವು 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೆ, ಟೀಮ್ ಇಂಡಿಯಾದ ಫೈನಲ್​ ಎಂಟ್ರಿ ಖಚಿತವಾಗಲಿದೆ. ಇಲ್ಲಿ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್​ ಸರಣಿಯನ್ನು ಡ್ರಾ ಮಾಡಿಕೊಂಡರೆ ಅಥವಾ 1-0, 2-0, 1-1 ಅಂತರದಿಂದ ಗೆದ್ದು ಕೊಂಡರೂ ಟೀಮ್ ಇಂಡಿಯಾ ಫೈನಲ್​ ಆಡುವುದು ಖಚಿತ.

ಇನ್ನು ಭಾರತ ತಂಡವು 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೆ, ಟೀಮ್ ಇಂಡಿಯಾದ ಫೈನಲ್​ ಎಂಟ್ರಿ ಖಚಿತವಾಗಲಿದೆ. ಇಲ್ಲಿ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್​ ಸರಣಿಯನ್ನು ಡ್ರಾ ಮಾಡಿಕೊಂಡರೆ ಅಥವಾ 1-0, 2-0, 1-1 ಅಂತರದಿಂದ ಗೆದ್ದು ಕೊಂಡರೂ ಟೀಮ್ ಇಂಡಿಯಾ ಫೈನಲ್​ ಆಡುವುದು ಖಚಿತ.

7 / 9
ಅಂದರೆ ಭಾರತ ತಂಡವು 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಮಾತ್ರ ಶ್ರೀಲಂಕಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೇರಲು ಅವಕಾಶ ದೊರೆಯಲಿದೆ. ಇಲ್ಲಿ ಟೀಮ್ ಇಂಡಿಯಾ 2-2 ಅಥವಾ 2-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಅಂತ್ಯಗೊಳಿಸಿದರೆ, ಶ್ರೀಲಂಕಾ ತಂಡವು ನ್ಯೂಜಿಲೆಂಡ್ ಅನ್ನು 2-0 ಅಂತರದಿಂದ ಸೋಲಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

ಅಂದರೆ ಭಾರತ ತಂಡವು 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಮಾತ್ರ ಶ್ರೀಲಂಕಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೇರಲು ಅವಕಾಶ ದೊರೆಯಲಿದೆ. ಇಲ್ಲಿ ಟೀಮ್ ಇಂಡಿಯಾ 2-2 ಅಥವಾ 2-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಅಂತ್ಯಗೊಳಿಸಿದರೆ, ಶ್ರೀಲಂಕಾ ತಂಡವು ನ್ಯೂಜಿಲೆಂಡ್ ಅನ್ನು 2-0 ಅಂತರದಿಂದ ಸೋಲಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

8 / 9
ಹೀಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಹಮದಾಬಾದ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಮಹತ್ವದ್ದು. ಒಂದು ವೇಳೆ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಡ್ರಾ ಮಾಡಿಕೊಂಡರೆ ಅಥವಾ ಸೋತರೆ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡದ ಸರಣಿ ಗೆಲುವು ಅಥವಾ ಡ್ರಾ ಅನ್ನು ಎದುರು ನೋಡಬೇಕಾಗುತ್ತದೆ.

ಹೀಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಹಮದಾಬಾದ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಮಹತ್ವದ್ದು. ಒಂದು ವೇಳೆ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಡ್ರಾ ಮಾಡಿಕೊಂಡರೆ ಅಥವಾ ಸೋತರೆ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡದ ಸರಣಿ ಗೆಲುವು ಅಥವಾ ಡ್ರಾ ಅನ್ನು ಎದುರು ನೋಡಬೇಕಾಗುತ್ತದೆ.

9 / 9
Follow us
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್