AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಶ್ರೀಲಂಕಾ ಕೈಯಲ್ಲಿ ಟೀಮ್ ಇಂಡಿಯಾದ ಫೈನಲ್ ಭವಿಷ್ಯ

WTC final scenarios: WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಜೂನ್ 11 ರಿಂದ 15 ರವರಗೆ ನಡೆಯಲಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಸೌತ್ ಆಫ್ರಿಕಾ ತಂಡ ಅರ್ಹತೆ ಪಡೆದುಕೊಂಡಿದೆ. ಇದೀಗ ಫೈನಲ್​ಗೇರುವ 2ನೇ ತಂಡದ ರೇಸ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿದ್ದು, ಉಭಯ ತಂಡಗಳಲ್ಲಿ ಒಂದು ಟೀಮ್ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಲಿದೆ.

TV9 Web
| Edited By: |

Updated on: Dec 31, 2024 | 7:21 AM

Share
ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಹಾದಿ ಮತ್ತಷ್ಟು ಕಠಿಣವಾಗಿದೆ. ಮೆಲ್ಬೋರ್ನ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸೋತಿರುವ ಭಾರತ ತಂಡಕ್ಕೆ WTC ಫೈನಲ್​ಗೆ ಪ್ರವೇಶಿಸಲು ಇದೀಗ ಶ್ರೀಲಂಕಾವನ್ನು ಆಶ್ರಯಿಸಬೇಕಾದ ಪರಿಸ್ಥಿತಿಗೆ ಎದುರಾಗಿದೆ. ಆದರೆ ಅದಕ್ಕೂ ಮುನ್ನ ಸಿಡ್ನಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕು.

ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಹಾದಿ ಮತ್ತಷ್ಟು ಕಠಿಣವಾಗಿದೆ. ಮೆಲ್ಬೋರ್ನ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸೋತಿರುವ ಭಾರತ ತಂಡಕ್ಕೆ WTC ಫೈನಲ್​ಗೆ ಪ್ರವೇಶಿಸಲು ಇದೀಗ ಶ್ರೀಲಂಕಾವನ್ನು ಆಶ್ರಯಿಸಬೇಕಾದ ಪರಿಸ್ಥಿತಿಗೆ ಎದುರಾಗಿದೆ. ಆದರೆ ಅದಕ್ಕೂ ಮುನ್ನ ಸಿಡ್ನಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕು.

1 / 5
ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ 52.78% ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, 61.46% ಪಾಯಿಂಟ್ಸ್​ನೊಂದಿಗೆ ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಇನ್ನು 66.67% ಅಂಕಗಳಿಸಿರುವ ಸೌತ್ ಆಫ್ರಿಕಾ ತಂಡವು ಈಗಾಗಲೇ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್ ರೇಸ್ ಮುಂದುವರೆದಿದ್ದು, ಇಲ್ಲಿ ಉಭಯ ತಂಡಗಳ ಪಾಲಿಗೆ ಸಿಡ್ನಿ ಟೆಸ್ಟ್ ನಿರ್ಣಾಯಕ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ 52.78% ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, 61.46% ಪಾಯಿಂಟ್ಸ್​ನೊಂದಿಗೆ ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಇನ್ನು 66.67% ಅಂಕಗಳಿಸಿರುವ ಸೌತ್ ಆಫ್ರಿಕಾ ತಂಡವು ಈಗಾಗಲೇ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್ ರೇಸ್ ಮುಂದುವರೆದಿದ್ದು, ಇಲ್ಲಿ ಉಭಯ ತಂಡಗಳ ಪಾಲಿಗೆ ಸಿಡ್ನಿ ಟೆಸ್ಟ್ ನಿರ್ಣಾಯಕ.

2 / 5
ಏಕೆಂದರೆ ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ತಂಡದ ಅಂಕ 57.84% ಕ್ಕೆ ಕುಸಿಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಎದುರು ನೋಡಬೇಕು.

ಏಕೆಂದರೆ ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ತಂಡದ ಅಂಕ 57.84% ಕ್ಕೆ ಕುಸಿಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಎದುರು ನೋಡಬೇಕು.

3 / 5
ಈ ಸರಣಿಯ ಎರಡು ಪಂದ್ಯಗಳಲ್ಲಿ ಶ್ರೀಲಂಕಾ ತಂಡವು ಒಂದು ಜಯ ಹಾಗೂ ಒಂದು ಡ್ರಾ ಅಥವಾ ಎರಡು ಪಂದ್ಯಗಳಲ್ಲೂ ಗೆಲುವು ದಾಖಲಿಸಿದರೆ ಟೀಮ್ ಇಂಡಿಯಾ ಫೈನಲ್​ಗೇರುವುದು ಖಚಿತ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ 1-0 ಅಥವಾ 2-0 ಅಂತರದಿಂದ ಸರಣಿ ಗೆದ್ದರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಇತ್ತ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಈ ಸರಣಿಯ ಎರಡು ಪಂದ್ಯಗಳಲ್ಲಿ ಶ್ರೀಲಂಕಾ ತಂಡವು ಒಂದು ಜಯ ಹಾಗೂ ಒಂದು ಡ್ರಾ ಅಥವಾ ಎರಡು ಪಂದ್ಯಗಳಲ್ಲೂ ಗೆಲುವು ದಾಖಲಿಸಿದರೆ ಟೀಮ್ ಇಂಡಿಯಾ ಫೈನಲ್​ಗೇರುವುದು ಖಚಿತ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ 1-0 ಅಥವಾ 2-0 ಅಂತರದಿಂದ ಸರಣಿ ಗೆದ್ದರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಇತ್ತ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಅರ್ಹತೆ ಪಡೆಯಲಿದೆ.

4 / 5
ಹೀಗಾಗಿಯೇ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಭವಿಷ್ಯ ಶ್ರೀಲಂಕಾ ತಂಡದ ಕೈಯಲ್ಲಿದೆ ಎನ್ನಬಹುದು. ಆದರೆ ಅದಕ್ಕೂ ಮುನ್ನ ಭಾರತ ತಂಡವು ಸಿಡ್ನಿ ಟೆಸ್ಟ್​ನಲ್ಲಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ. ಒಂದು ವೇಳೆ ಟೀಮ್ ಇಂಡಿಯಾ ಸಿಡ್ನಿ ಟೆಸ್ಟ್​ನಲ್ಲಿ ಸೋತರೆ ಅಥವಾ ಡ್ರಾ ಮಾಡಿಕೊಂಡರೆ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ.

ಹೀಗಾಗಿಯೇ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಭವಿಷ್ಯ ಶ್ರೀಲಂಕಾ ತಂಡದ ಕೈಯಲ್ಲಿದೆ ಎನ್ನಬಹುದು. ಆದರೆ ಅದಕ್ಕೂ ಮುನ್ನ ಭಾರತ ತಂಡವು ಸಿಡ್ನಿ ಟೆಸ್ಟ್​ನಲ್ಲಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ. ಒಂದು ವೇಳೆ ಟೀಮ್ ಇಂಡಿಯಾ ಸಿಡ್ನಿ ಟೆಸ್ಟ್​ನಲ್ಲಿ ಸೋತರೆ ಅಥವಾ ಡ್ರಾ ಮಾಡಿಕೊಂಡರೆ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ