AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಡಬ್ಲ್ಯುಟಿಸಿ ಫೈನಲ್​ನಲ್ಲಿ ಈ ಆಟಗಾರನ ಬದಲು ರಾಹುಲ್​ಗೆ ಅವಕಾಶ ಕೊಡಿ; ಗವಾಸ್ಕರ್

WTC Final: ಳೆದ ವರ್ಷ ರಾಹುಲ್ ಇಂಗ್ಲೆಂಡ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ್ದರು. ಹೀಗಾಗಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡವನ್ನು ಕಟ್ಟುವಾಗ ರಾಹುಲ್​ರನ್ನು ನೆನಪಿನಲ್ಲಿಡುವುದು ಮುಖ್ಯ ಎಂದಿದ್ದಾರೆ.

ಪೃಥ್ವಿಶಂಕರ
|

Updated on:Mar 15, 2023 | 1:41 PM

Share
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ಈ ಪ್ರಶಸ್ತಿಯ ಪಂದ್ಯದಲ್ಲಿ ರೋಹಿತ್ ಪಡೆ ನ್ಯೂಜಿಲೆಂಡ್​ನ ಓವಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟಿರುವುದು ಇದು ಸತತ ಎರಡನೇ ಬಾರಿ. ಕಳೆದ ಬಾರಿ ನ್ಯೂಜಿಲೆಂಡ್ ಎದುರು ಮುಗ್ಗರಿಸಿದ್ದ ಭಾರತಕ್ಕೆ ಪ್ರಶಸ್ತಿ ಗೆಲ್ಲಲು ಮತ್ತೊಂದು ಅವಕಾಶ ಸಿಕ್ಕಿದೆ. ಆದರೆ ತಂಡದಲ್ಲಿ ಅದೊಂದು ನ್ಯೂನತೆ ಬಿಸಿಸಿಐಗೆ ತಲೆನೋವು ತಂದ್ದೊಡ್ಡಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ಈ ಪ್ರಶಸ್ತಿಯ ಪಂದ್ಯದಲ್ಲಿ ರೋಹಿತ್ ಪಡೆ ನ್ಯೂಜಿಲೆಂಡ್​ನ ಓವಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟಿರುವುದು ಇದು ಸತತ ಎರಡನೇ ಬಾರಿ. ಕಳೆದ ಬಾರಿ ನ್ಯೂಜಿಲೆಂಡ್ ಎದುರು ಮುಗ್ಗರಿಸಿದ್ದ ಭಾರತಕ್ಕೆ ಪ್ರಶಸ್ತಿ ಗೆಲ್ಲಲು ಮತ್ತೊಂದು ಅವಕಾಶ ಸಿಕ್ಕಿದೆ. ಆದರೆ ತಂಡದಲ್ಲಿ ಅದೊಂದು ನ್ಯೂನತೆ ಬಿಸಿಸಿಐಗೆ ತಲೆನೋವು ತಂದ್ದೊಡ್ಡಿದೆ.

1 / 8
ಕಾರು ಅಪಘಾತದಲ್ಲಿ ಇಂಜುರಿಗೊಂಡು ತಂಡದಿಂದ ಹೊರಗುಳಿದಿರುವ ಪಂತ್ ಅನುಪಸ್ಥಿತಿಯಲ್ಲಿ ಯುವ ಆಟಗಾರ ಕೆ. ಎಸ್ ಭರತ್​ಗೆ ಟೆಸ್ಟ್ ತಂಡದಲ್ಲಿ ಕೀಪರ್ ಆಗಿ ಅವಕಾಶ ನೀಡಲಾಗಿದೆ. ಆದರೆ ಆಸೀಸ್ ವಿರುದ್ಧ ಭರತ್ ಕೀಪಿಂಗ್ ಹಾಗೂ ಬ್ಯಾಟಿಂಗ್, ಎರಡರಲ್ಲೂ ಯಶಸ್ಸು ಗಳಿಸಲಿಲ್ಲ.

ಕಾರು ಅಪಘಾತದಲ್ಲಿ ಇಂಜುರಿಗೊಂಡು ತಂಡದಿಂದ ಹೊರಗುಳಿದಿರುವ ಪಂತ್ ಅನುಪಸ್ಥಿತಿಯಲ್ಲಿ ಯುವ ಆಟಗಾರ ಕೆ. ಎಸ್ ಭರತ್​ಗೆ ಟೆಸ್ಟ್ ತಂಡದಲ್ಲಿ ಕೀಪರ್ ಆಗಿ ಅವಕಾಶ ನೀಡಲಾಗಿದೆ. ಆದರೆ ಆಸೀಸ್ ವಿರುದ್ಧ ಭರತ್ ಕೀಪಿಂಗ್ ಹಾಗೂ ಬ್ಯಾಟಿಂಗ್, ಎರಡರಲ್ಲೂ ಯಶಸ್ಸು ಗಳಿಸಲಿಲ್ಲ.

2 / 8
ಅಲ್ಲದೆ ಡಬ್ಲ್ಯುಟಿಸಿ ಫೈನಲ್ ವಿದೇಶಿ ನೆಲದಲ್ಲಿ ನಡೆಯುತ್ತಿರುವುದರಿಂದ ಭರತ್​ಗೆ ವಿದೇಶದಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ವಿಕೆಟ್ ಕೀಪಿಂಗ್ ಜವಬ್ದಾರಿ ಬಿಸಿಸಿಐಗೆ ದೊಡ್ಡ ತಲೆನೋವು ತಂದಿದೆ. ಆದರೆ ಇದಕ್ಕೆ ಪರಿಹಾರ ಹೇಳಿರುವ ಟೀಂ ಇಂಡಿಯಾ ಮಾಜಿ ಆಟಗಾರ ಸುನೀಲ್ ಗವಾಸ್ಕರ್, ಭರತ್ ಬದಲಿಗೆ ಕನ್ನಡಿಗ ರಾಹುಲ್ ಅವರನ್ನು ಆಡಿಸಿ ಎಂದಿದ್ದಾರೆ.

ಅಲ್ಲದೆ ಡಬ್ಲ್ಯುಟಿಸಿ ಫೈನಲ್ ವಿದೇಶಿ ನೆಲದಲ್ಲಿ ನಡೆಯುತ್ತಿರುವುದರಿಂದ ಭರತ್​ಗೆ ವಿದೇಶದಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ವಿಕೆಟ್ ಕೀಪಿಂಗ್ ಜವಬ್ದಾರಿ ಬಿಸಿಸಿಐಗೆ ದೊಡ್ಡ ತಲೆನೋವು ತಂದಿದೆ. ಆದರೆ ಇದಕ್ಕೆ ಪರಿಹಾರ ಹೇಳಿರುವ ಟೀಂ ಇಂಡಿಯಾ ಮಾಜಿ ಆಟಗಾರ ಸುನೀಲ್ ಗವಾಸ್ಕರ್, ಭರತ್ ಬದಲಿಗೆ ಕನ್ನಡಿಗ ರಾಹುಲ್ ಅವರನ್ನು ಆಡಿಸಿ ಎಂದಿದ್ದಾರೆ.

3 / 8
ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಭರತ್ ಅವರನ್ನು ಆಡಿಸಬಾರದು. ಅವರ ಬದಲಿಗೆ ವಿಕೆಟ್ ಕೀಪಿಂಗ್ ಮಾಡಬಲ್ಲ ರಾಹುಲ್​ಗೆ ಅವಕಾಶ ನೀಡಬೇಕೆಂದು ಗವಾಸ್ಕರ್ ಹೇಳಿದ್ದಾರೆ. ಸದ್ಯ ರಾಹುಲ್ ಏಕದಿನ ಪಂದ್ಯಗಳಲ್ಲಿ ಈ ಜವಬ್ದಾರಿ ನಿರ್ವಹಿಸುತ್ತಿದ್ದಾರೆ. ಐಪಿಎಲ್​ನಲ್ಲೂ ಈ ಕೆಲಸ ಮಾಡಿದ್ದಾರೆ. ಅದಕ್ಕಾಗಿಯೇ ಗವಾಸ್ಕರ್, ರಾಹುಲ್ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಕೀಪರ್ ಆಗಿ ಆಡಬೇಕು ಎಂದಿದ್ದಾರೆ.

ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಭರತ್ ಅವರನ್ನು ಆಡಿಸಬಾರದು. ಅವರ ಬದಲಿಗೆ ವಿಕೆಟ್ ಕೀಪಿಂಗ್ ಮಾಡಬಲ್ಲ ರಾಹುಲ್​ಗೆ ಅವಕಾಶ ನೀಡಬೇಕೆಂದು ಗವಾಸ್ಕರ್ ಹೇಳಿದ್ದಾರೆ. ಸದ್ಯ ರಾಹುಲ್ ಏಕದಿನ ಪಂದ್ಯಗಳಲ್ಲಿ ಈ ಜವಬ್ದಾರಿ ನಿರ್ವಹಿಸುತ್ತಿದ್ದಾರೆ. ಐಪಿಎಲ್​ನಲ್ಲೂ ಈ ಕೆಲಸ ಮಾಡಿದ್ದಾರೆ. ಅದಕ್ಕಾಗಿಯೇ ಗವಾಸ್ಕರ್, ರಾಹುಲ್ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಕೀಪರ್ ಆಗಿ ಆಡಬೇಕು ಎಂದಿದ್ದಾರೆ.

4 / 8
ಸ್ಪೋರ್ಟ್ಸ್ ಟಾಕ್ ಜೊತೆ ಮಾತನಾಡಿದ ಗವಾಸ್ಕರ್, ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬಹುದು. ರಾಹುಲ್, ಓವಲ್‌ನಲ್ಲಿ ನಡೆಯುವ ಈ ಫೈನಲ್ ಪಂದ್ಯದಲ್ಲಿ 5 ಅಥವಾ 6 ರ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ, ನಮ್ಮ ಬ್ಯಾಟಿಂಗ್ ವಿಭಾಗ ಬಲವಾಗಿರುತ್ತದೆ.

ಸ್ಪೋರ್ಟ್ಸ್ ಟಾಕ್ ಜೊತೆ ಮಾತನಾಡಿದ ಗವಾಸ್ಕರ್, ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬಹುದು. ರಾಹುಲ್, ಓವಲ್‌ನಲ್ಲಿ ನಡೆಯುವ ಈ ಫೈನಲ್ ಪಂದ್ಯದಲ್ಲಿ 5 ಅಥವಾ 6 ರ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ, ನಮ್ಮ ಬ್ಯಾಟಿಂಗ್ ವಿಭಾಗ ಬಲವಾಗಿರುತ್ತದೆ.

5 / 8
ಅಲ್ಲದೆ ಕಳೆದ ವರ್ಷ ರಾಹುಲ್ ಇಂಗ್ಲೆಂಡ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ್ದರು. ಹೀಗಾಗಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡವನ್ನು ಕಟ್ಟುವಾಗ ರಾಹುಲ್​ರನ್ನು ನೆನಪಿನಲ್ಲಿಡುವುದು ಮುಖ್ಯ ಎಂದಿದ್ದಾರೆ.

ಅಲ್ಲದೆ ಕಳೆದ ವರ್ಷ ರಾಹುಲ್ ಇಂಗ್ಲೆಂಡ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ್ದರು. ಹೀಗಾಗಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಂಡವನ್ನು ಕಟ್ಟುವಾಗ ರಾಹುಲ್​ರನ್ನು ನೆನಪಿನಲ್ಲಿಡುವುದು ಮುಖ್ಯ ಎಂದಿದ್ದಾರೆ.

6 / 8
ವಾಸ್ತವ ಹೇಳಬೇಕೆಂದರೆ ರಾಹುಲ್ ದೀರ್ಘ ಕಾಲದಿಂದ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಈ ಹಿಂದೆ ಟೆಸ್ಟ್ ತಂಡದ ಉಪನಾಯಕರಾಗಿದ್ದ ರಾಹುಲ್, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಬಾಂಗ್ಲಾದೇಶದಲ್ಲಿ ಟೆಸ್ಟ್ ಸರಣಿಯ ನಾಯಕತ್ವವನ್ನೂ ವಹಿಸಿದ್ದರು. ಆದರೆ ಆ ಸರಣಿಯಲ್ಲೂ ರಾಹುಲ್ ಬ್ಯಾಟ್ ಶಾಂತವಾಗಿತ್ತು.

ವಾಸ್ತವ ಹೇಳಬೇಕೆಂದರೆ ರಾಹುಲ್ ದೀರ್ಘ ಕಾಲದಿಂದ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಈ ಹಿಂದೆ ಟೆಸ್ಟ್ ತಂಡದ ಉಪನಾಯಕರಾಗಿದ್ದ ರಾಹುಲ್, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಬಾಂಗ್ಲಾದೇಶದಲ್ಲಿ ಟೆಸ್ಟ್ ಸರಣಿಯ ನಾಯಕತ್ವವನ್ನೂ ವಹಿಸಿದ್ದರು. ಆದರೆ ಆ ಸರಣಿಯಲ್ಲೂ ರಾಹುಲ್ ಬ್ಯಾಟ್ ಶಾಂತವಾಗಿತ್ತು.

7 / 8
ಆ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳಲ್ಲಿಯೂ ರಾಹುಲ್ ಬ್ಯಾಟ್ ಕೆಲಸ ಮಾಡಲಿಲ್ಲ. ಇದರ ನಂತರ, ಮುಂದಿನ ಎರಡು ಟೆಸ್ಟ್ ಪಂದ್ಯಗಳಿಗೆ ರಾಹುಲ್ ಅವರನ್ನು ಉಪನಾಯಕ ಸ್ಥಾನದಿಂದ ತೆಗೆದುಹಾಕಿದಲ್ಲದೆ, ಆಡುವ ಹನ್ನೊಂದರ ಬಳಗದಿಂದಲೂ ಕೈಬಿಡಲಾಯಿತು.

ಆ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳಲ್ಲಿಯೂ ರಾಹುಲ್ ಬ್ಯಾಟ್ ಕೆಲಸ ಮಾಡಲಿಲ್ಲ. ಇದರ ನಂತರ, ಮುಂದಿನ ಎರಡು ಟೆಸ್ಟ್ ಪಂದ್ಯಗಳಿಗೆ ರಾಹುಲ್ ಅವರನ್ನು ಉಪನಾಯಕ ಸ್ಥಾನದಿಂದ ತೆಗೆದುಹಾಕಿದಲ್ಲದೆ, ಆಡುವ ಹನ್ನೊಂದರ ಬಳಗದಿಂದಲೂ ಕೈಬಿಡಲಾಯಿತು.

8 / 8

Published On - 1:41 pm, Wed, 15 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ