AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಮೆಲ್ಬೋರ್ನ್​ನಲ್ಲಿ ಸೋತರೆ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ

WTC final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2025ರ ಫೈನಲ್ ಪಂದ್ಯಕ್ಕೆ ಸೌತ್ ಆಫ್ರಿಕಾ ತಂಡ ಅರ್ಹತೆ ಪಡೆದುಕೊಂಡಿದೆ. ಇದೀಗ ಫೈನಲ್ ಸುತ್ತಿಗೆ ಪ್ರವೇಶಿಸಲು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿ ನಡುವೆ ಭಾರತ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸಬೇಕಿದ್ದರೆ ಮೆಲ್ಬೋರ್ನ್ ಹಾಗೂ ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಝಾಹಿರ್ ಯೂಸುಫ್
|

Updated on: Dec 30, 2024 | 7:31 AM

Share
ಮೆಲ್ಬೋರ್ನ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​ಗಳನ್ನು ಕಲೆಹಾಕಬೇಕು. ಅದು ಕೂಡ ಕೊನೆಯ ದಿನದಾಟದೊಳಗೆ. ಅಂದರೆ ಸೋಮವಾರದ ದಿನದಾಟದೊಳಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 340 ರನ್​ಗಳಿಸಿದರೆ ಮಾತ್ರ ವಿಜಯಿಶಾಲಿಯಾಗಬಹುದು.

ಮೆಲ್ಬೋರ್ನ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​ಗಳನ್ನು ಕಲೆಹಾಕಬೇಕು. ಅದು ಕೂಡ ಕೊನೆಯ ದಿನದಾಟದೊಳಗೆ. ಅಂದರೆ ಸೋಮವಾರದ ದಿನದಾಟದೊಳಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 340 ರನ್​ಗಳಿಸಿದರೆ ಮಾತ್ರ ವಿಜಯಿಶಾಲಿಯಾಗಬಹುದು.

1 / 6
ಒಂದು ವೇಳೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಟೀಮ್ ಇಂಡಿಯಾದ ಶೇಕಡಾವಾರು ಅಂಕ 52.78 ಕ್ಕೆ ಇಳಿಯುತ್ತದೆ. ಅತ್ತ ಆಸ್ಟ್ರೇಲಿಯಾ ತಂಡವು 61.45% ಅಂಕಗಳನ್ನು ಪಡೆಯಲಿದೆ.

ಒಂದು ವೇಳೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಟೀಮ್ ಇಂಡಿಯಾದ ಶೇಕಡಾವಾರು ಅಂಕ 52.78 ಕ್ಕೆ ಇಳಿಯುತ್ತದೆ. ಅತ್ತ ಆಸ್ಟ್ರೇಲಿಯಾ ತಂಡವು 61.45% ಅಂಕಗಳನ್ನು ಪಡೆಯಲಿದೆ.

2 / 6
ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​ ರೇಸ್​ನಿಂದ ಟೀಮ್ ಇಂಡಿಯಾ ಹೊರಬೀಳುವುದಿಲ್ಲ. ಬದಲಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಫೈನಲ್ ಆಸೆಯನ್ನು ಜೀವಂತವರಿಸಿಕೊಳ್ಳಬಹುದು. ಆದರೆ ಸಿಡ್ನಿ ಟೆಸ್ಟ್ ಗೆಲುವಿನ ಬಳಿಕ ಟೀಮ್ ಇಂಡಿಯಾದ ಫೈನಲ್ ಭವಿಷ್ಯವನ್ನು ನಿರ್ಧರಿಸಿರುವುದು ಶ್ರೀಲಂಕಾ ತಂಡ.

ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​ ರೇಸ್​ನಿಂದ ಟೀಮ್ ಇಂಡಿಯಾ ಹೊರಬೀಳುವುದಿಲ್ಲ. ಬದಲಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಫೈನಲ್ ಆಸೆಯನ್ನು ಜೀವಂತವರಿಸಿಕೊಳ್ಳಬಹುದು. ಆದರೆ ಸಿಡ್ನಿ ಟೆಸ್ಟ್ ಗೆಲುವಿನ ಬಳಿಕ ಟೀಮ್ ಇಂಡಿಯಾದ ಫೈನಲ್ ಭವಿಷ್ಯವನ್ನು ನಿರ್ಧರಿಸಿರುವುದು ಶ್ರೀಲಂಕಾ ತಂಡ.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಂದ್ಯಗಳು ಮುಗಿಯಲಿದೆ. ಆದರೆ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ಇನ್ನೂ ಎರಡು ಟೆಸ್ಟ್​ ಪಂದ್ಯಗಳನ್ನಾಡಬೇಕಿದೆ. ಟೀಮ್ ಇಂಡಿಯಾ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಸೋತರೆ, ಶ್ರೀಲಂಕಾ ತಂಡದ ಫಲಿತಾಂಶ ನಿರ್ಣಾಯಕವಾಗಲಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಂದ್ಯಗಳು ಮುಗಿಯಲಿದೆ. ಆದರೆ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ಇನ್ನೂ ಎರಡು ಟೆಸ್ಟ್​ ಪಂದ್ಯಗಳನ್ನಾಡಬೇಕಿದೆ. ಟೀಮ್ ಇಂಡಿಯಾ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಸೋತರೆ, ಶ್ರೀಲಂಕಾ ತಂಡದ ಫಲಿತಾಂಶ ನಿರ್ಣಾಯಕವಾಗಲಿದೆ.

4 / 6
ಭಾರತ ತಂಡವು ಮೆಲ್ಬೋರ್ನ್​ನಲ್ಲಿ ಸೋತು, ಸಿಡ್ನಿ ಟೆಸ್ಟ್​ನಲ್ಲಿ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಅಂಕ 57.84% ಆಗಿರಲಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 0-1 ಅಂತರದಿಂದ ಸರಣಿ ಸೋತರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಈ ಮೂಲಕ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಬಹುದು.

ಭಾರತ ತಂಡವು ಮೆಲ್ಬೋರ್ನ್​ನಲ್ಲಿ ಸೋತು, ಸಿಡ್ನಿ ಟೆಸ್ಟ್​ನಲ್ಲಿ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಅಂಕ 57.84% ಆಗಿರಲಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 0-1 ಅಂತರದಿಂದ ಸರಣಿ ಸೋತರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಈ ಮೂಲಕ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಬಹುದು.

5 / 6
ಒಂದು ವೇಳೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು 1-1 ಅಂತರದಲ್ಲಿ ಡ್ರಾಗೊಂಡರೆ, 57.01% ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸರಣಿ ಗೆದ್ದರೆ 57% ಅಂಕಗಳೊಂದಿಗೆ ಆಸೀಸ್ ಪಡೆ ಫೈನಲ್​ಗೆ ಪ್ರವೇಶಿಸುವುದು ಖಚಿತವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಫೈನಲ್​​ಗೆ ಪ್ರವೇಶಿಸಬೇಕಿದ್ದರೆ, ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಒಂದು ವೇಳೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು 1-1 ಅಂತರದಲ್ಲಿ ಡ್ರಾಗೊಂಡರೆ, 57.01% ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸರಣಿ ಗೆದ್ದರೆ 57% ಅಂಕಗಳೊಂದಿಗೆ ಆಸೀಸ್ ಪಡೆ ಫೈನಲ್​ಗೆ ಪ್ರವೇಶಿಸುವುದು ಖಚಿತವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಫೈನಲ್​​ಗೆ ಪ್ರವೇಶಿಸಬೇಕಿದ್ದರೆ, ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್