AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಮೆಲ್ಬೋರ್ನ್​ನಲ್ಲಿ ಸೋತರೆ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ

WTC final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2025ರ ಫೈನಲ್ ಪಂದ್ಯಕ್ಕೆ ಸೌತ್ ಆಫ್ರಿಕಾ ತಂಡ ಅರ್ಹತೆ ಪಡೆದುಕೊಂಡಿದೆ. ಇದೀಗ ಫೈನಲ್ ಸುತ್ತಿಗೆ ಪ್ರವೇಶಿಸಲು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿ ನಡುವೆ ಭಾರತ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸಬೇಕಿದ್ದರೆ ಮೆಲ್ಬೋರ್ನ್ ಹಾಗೂ ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಝಾಹಿರ್ ಯೂಸುಫ್
|

Updated on: Dec 30, 2024 | 7:31 AM

ಮೆಲ್ಬೋರ್ನ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​ಗಳನ್ನು ಕಲೆಹಾಕಬೇಕು. ಅದು ಕೂಡ ಕೊನೆಯ ದಿನದಾಟದೊಳಗೆ. ಅಂದರೆ ಸೋಮವಾರದ ದಿನದಾಟದೊಳಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 340 ರನ್​ಗಳಿಸಿದರೆ ಮಾತ್ರ ವಿಜಯಿಶಾಲಿಯಾಗಬಹುದು.

ಮೆಲ್ಬೋರ್ನ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​ಗಳನ್ನು ಕಲೆಹಾಕಬೇಕು. ಅದು ಕೂಡ ಕೊನೆಯ ದಿನದಾಟದೊಳಗೆ. ಅಂದರೆ ಸೋಮವಾರದ ದಿನದಾಟದೊಳಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 340 ರನ್​ಗಳಿಸಿದರೆ ಮಾತ್ರ ವಿಜಯಿಶಾಲಿಯಾಗಬಹುದು.

1 / 6
ಒಂದು ವೇಳೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಟೀಮ್ ಇಂಡಿಯಾದ ಶೇಕಡಾವಾರು ಅಂಕ 52.78 ಕ್ಕೆ ಇಳಿಯುತ್ತದೆ. ಅತ್ತ ಆಸ್ಟ್ರೇಲಿಯಾ ತಂಡವು 61.45% ಅಂಕಗಳನ್ನು ಪಡೆಯಲಿದೆ.

ಒಂದು ವೇಳೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಟೀಮ್ ಇಂಡಿಯಾದ ಶೇಕಡಾವಾರು ಅಂಕ 52.78 ಕ್ಕೆ ಇಳಿಯುತ್ತದೆ. ಅತ್ತ ಆಸ್ಟ್ರೇಲಿಯಾ ತಂಡವು 61.45% ಅಂಕಗಳನ್ನು ಪಡೆಯಲಿದೆ.

2 / 6
ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​ ರೇಸ್​ನಿಂದ ಟೀಮ್ ಇಂಡಿಯಾ ಹೊರಬೀಳುವುದಿಲ್ಲ. ಬದಲಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಫೈನಲ್ ಆಸೆಯನ್ನು ಜೀವಂತವರಿಸಿಕೊಳ್ಳಬಹುದು. ಆದರೆ ಸಿಡ್ನಿ ಟೆಸ್ಟ್ ಗೆಲುವಿನ ಬಳಿಕ ಟೀಮ್ ಇಂಡಿಯಾದ ಫೈನಲ್ ಭವಿಷ್ಯವನ್ನು ನಿರ್ಧರಿಸಿರುವುದು ಶ್ರೀಲಂಕಾ ತಂಡ.

ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​ ರೇಸ್​ನಿಂದ ಟೀಮ್ ಇಂಡಿಯಾ ಹೊರಬೀಳುವುದಿಲ್ಲ. ಬದಲಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಫೈನಲ್ ಆಸೆಯನ್ನು ಜೀವಂತವರಿಸಿಕೊಳ್ಳಬಹುದು. ಆದರೆ ಸಿಡ್ನಿ ಟೆಸ್ಟ್ ಗೆಲುವಿನ ಬಳಿಕ ಟೀಮ್ ಇಂಡಿಯಾದ ಫೈನಲ್ ಭವಿಷ್ಯವನ್ನು ನಿರ್ಧರಿಸಿರುವುದು ಶ್ರೀಲಂಕಾ ತಂಡ.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಂದ್ಯಗಳು ಮುಗಿಯಲಿದೆ. ಆದರೆ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ಇನ್ನೂ ಎರಡು ಟೆಸ್ಟ್​ ಪಂದ್ಯಗಳನ್ನಾಡಬೇಕಿದೆ. ಟೀಮ್ ಇಂಡಿಯಾ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಸೋತರೆ, ಶ್ರೀಲಂಕಾ ತಂಡದ ಫಲಿತಾಂಶ ನಿರ್ಣಾಯಕವಾಗಲಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಂದ್ಯಗಳು ಮುಗಿಯಲಿದೆ. ಆದರೆ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ಇನ್ನೂ ಎರಡು ಟೆಸ್ಟ್​ ಪಂದ್ಯಗಳನ್ನಾಡಬೇಕಿದೆ. ಟೀಮ್ ಇಂಡಿಯಾ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಸೋತರೆ, ಶ್ರೀಲಂಕಾ ತಂಡದ ಫಲಿತಾಂಶ ನಿರ್ಣಾಯಕವಾಗಲಿದೆ.

4 / 6
ಭಾರತ ತಂಡವು ಮೆಲ್ಬೋರ್ನ್​ನಲ್ಲಿ ಸೋತು, ಸಿಡ್ನಿ ಟೆಸ್ಟ್​ನಲ್ಲಿ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಅಂಕ 57.84% ಆಗಿರಲಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 0-1 ಅಂತರದಿಂದ ಸರಣಿ ಸೋತರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಈ ಮೂಲಕ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಬಹುದು.

ಭಾರತ ತಂಡವು ಮೆಲ್ಬೋರ್ನ್​ನಲ್ಲಿ ಸೋತು, ಸಿಡ್ನಿ ಟೆಸ್ಟ್​ನಲ್ಲಿ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಅಂಕ 57.84% ಆಗಿರಲಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 0-1 ಅಂತರದಿಂದ ಸರಣಿ ಸೋತರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಈ ಮೂಲಕ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಬಹುದು.

5 / 6
ಒಂದು ವೇಳೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು 1-1 ಅಂತರದಲ್ಲಿ ಡ್ರಾಗೊಂಡರೆ, 57.01% ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸರಣಿ ಗೆದ್ದರೆ 57% ಅಂಕಗಳೊಂದಿಗೆ ಆಸೀಸ್ ಪಡೆ ಫೈನಲ್​ಗೆ ಪ್ರವೇಶಿಸುವುದು ಖಚಿತವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಫೈನಲ್​​ಗೆ ಪ್ರವೇಶಿಸಬೇಕಿದ್ದರೆ, ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಒಂದು ವೇಳೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು 1-1 ಅಂತರದಲ್ಲಿ ಡ್ರಾಗೊಂಡರೆ, 57.01% ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸರಣಿ ಗೆದ್ದರೆ 57% ಅಂಕಗಳೊಂದಿಗೆ ಆಸೀಸ್ ಪಡೆ ಫೈನಲ್​ಗೆ ಪ್ರವೇಶಿಸುವುದು ಖಚಿತವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಫೈನಲ್​​ಗೆ ಪ್ರವೇಶಿಸಬೇಕಿದ್ದರೆ, ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

6 / 6
Follow us
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್