AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಟೀಮ್ ಇಂಡಿಯಾ ಬಳಗಕ್ಕೆ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್

WTC Final 2023: ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್.

TV9 Web
| Edited By: |

Updated on:May 29, 2023 | 2:57 AM

Share
WTC Final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಟೀಮ್ ಇಂಡಿಯಾಗೆ ಯುವ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮೀಸಲು ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ. ಇಂಗ್ಲೆಂಡ್​ನ ಓವಲ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈ ಹಿಂದೆ ರುತುರಾಜ್ ಗಾಯಕ್ವಾಡ್ ಅವರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು.

WTC Final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಟೀಮ್ ಇಂಡಿಯಾಗೆ ಯುವ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮೀಸಲು ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ. ಇಂಗ್ಲೆಂಡ್​ನ ಓವಲ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈ ಹಿಂದೆ ರುತುರಾಜ್ ಗಾಯಕ್ವಾಡ್ ಅವರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು.

1 / 8
ಆದರೀಗ ರುತುರಾಜ್ ಗಾಯಕ್ವಾಡ್ ವೈಯುಕ್ತಿಕ ಕಾರಣಗಳಿಂದಾಗಿ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬದಲಿ ಮೀಸಲು ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಆದರೀಗ ರುತುರಾಜ್ ಗಾಯಕ್ವಾಡ್ ವೈಯುಕ್ತಿಕ ಕಾರಣಗಳಿಂದಾಗಿ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬದಲಿ ಮೀಸಲು ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

2 / 8
ಜೂನ್ 7 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಫೈನಲ್ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಪ್ರಮುಖ ಆಟಗಾರರು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಇನ್ನು ಐಪಿಎಲ್​ ಫೈನಲ್ ಪಂದ್ಯದ ಬಳಿಕ ಇತರೆ ಆಟಗಾರರು ತೆರಳಲಿದ್ದಾರೆ.

ಜೂನ್ 7 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಫೈನಲ್ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಪ್ರಮುಖ ಆಟಗಾರರು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಇನ್ನು ಐಪಿಎಲ್​ ಫೈನಲ್ ಪಂದ್ಯದ ಬಳಿಕ ಇತರೆ ಆಟಗಾರರು ತೆರಳಲಿದ್ದಾರೆ.

3 / 8
ಹಾಗೆಯೇ ಮೀಸಲು ಆಟಗಾರರಾಗಿ ಸೂರ್ಯಕುಮಾರ್ ಯಾದವ್, ಮುಖೇಶ್ ಕುಮಾರ್ ಹಾಗೂ ರುತುರಾಜ್ ಗಾಯಕ್ವಾಡ್ ತಂಡವನ್ನು ಸೇರಿಕೊಳ್ಳಬೇಕಿತ್ತು. ಆದರೀಗ ವೈಯುಕ್ತಿಕ ಕಾರಣಗಳಿಂದಾಗಿ ರುತುರಾಜ್ ಹಿಂದೆ ಸರಿದಿದ್ದಾರೆ.

ಹಾಗೆಯೇ ಮೀಸಲು ಆಟಗಾರರಾಗಿ ಸೂರ್ಯಕುಮಾರ್ ಯಾದವ್, ಮುಖೇಶ್ ಕುಮಾರ್ ಹಾಗೂ ರುತುರಾಜ್ ಗಾಯಕ್ವಾಡ್ ತಂಡವನ್ನು ಸೇರಿಕೊಳ್ಳಬೇಕಿತ್ತು. ಆದರೀಗ ವೈಯುಕ್ತಿಕ ಕಾರಣಗಳಿಂದಾಗಿ ರುತುರಾಜ್ ಹಿಂದೆ ಸರಿದಿದ್ದಾರೆ.

4 / 8
ಇತ್ತ ರುತುರಾಜ್ ಗಾಯಕ್ವಾಡ್ ಹೊರಗುಳಿಯುತ್ತಿದ್ದಂತೆ ಕೋಚ್ ರಾಹುಲ್ ದ್ರಾವಿಡ್ ಅವರು ಬದಲಿ ಆಟಗಾರನನ್ನು ಆಯ್ಕೆ ಮಾಡುವಂತೆ ಆಯ್ಕೆದಾರರಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅದೃಷ್ಟ ಖುಲಾಯಿಸಿದ್ದು, ಶೀಘ್ರದಲ್ಲೇ ಅವರು ಲಂಡನ್​ಗೆ ತೆರಳಲಿದ್ದಾರೆ ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತ ರುತುರಾಜ್ ಗಾಯಕ್ವಾಡ್ ಹೊರಗುಳಿಯುತ್ತಿದ್ದಂತೆ ಕೋಚ್ ರಾಹುಲ್ ದ್ರಾವಿಡ್ ಅವರು ಬದಲಿ ಆಟಗಾರನನ್ನು ಆಯ್ಕೆ ಮಾಡುವಂತೆ ಆಯ್ಕೆದಾರರಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅದೃಷ್ಟ ಖುಲಾಯಿಸಿದ್ದು, ಶೀಘ್ರದಲ್ಲೇ ಅವರು ಲಂಡನ್​ಗೆ ತೆರಳಲಿದ್ದಾರೆ ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

5 / 8
ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬೈ ಮೂಲದ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 48.08 ಸರಾಸರಿಯಲ್ಲಿ 625 ರನ್ ಗಳಿಸಿ ಮಿಂಚಿದ್ದರು.

ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬೈ ಮೂಲದ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 48.08 ಸರಾಸರಿಯಲ್ಲಿ 625 ರನ್ ಗಳಿಸಿ ಮಿಂಚಿದ್ದರು.

6 / 8
ಹಾಗೆಯೇ ಕಳೆದ ಸೀಸನ್ ರಣಜಿ ಟ್ರೋಫಿಯಲ್ಲಿ ಜೈಸ್ವಾಲ್ 5 ಪಂದ್ಯಗಳಲ್ಲಿ 404 ರನ್ ಗಳಿಸಿ ಅಬ್ಬರಿಸಿದ್ದರು. ಹೀಗಾಗಿ ಎಡಗೈ ದಾಂಡಿಗನನ್ನು ಮೀಸಲು ಆಟಗಾರನಾಗಿ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ.

ಹಾಗೆಯೇ ಕಳೆದ ಸೀಸನ್ ರಣಜಿ ಟ್ರೋಫಿಯಲ್ಲಿ ಜೈಸ್ವಾಲ್ 5 ಪಂದ್ಯಗಳಲ್ಲಿ 404 ರನ್ ಗಳಿಸಿ ಅಬ್ಬರಿಸಿದ್ದರು. ಹೀಗಾಗಿ ಎಡಗೈ ದಾಂಡಿಗನನ್ನು ಮೀಸಲು ಆಟಗಾರನಾಗಿ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ.

7 / 8
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

8 / 8

Published On - 3:08 pm, Sun, 28 May 23

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ