AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವೇಗಿ ಯಶ್ ದಯಾಳ್​ಗೆ ನಿಷೇಧ..!

Yash Dayal: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಲೈಂಗಿಕ ದೌರ್ಜನ್ಯದ ಆರೋಪದಡಿಯಲ್ಲಿ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Aug 10, 2025 | 11:54 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಟಿ20 ಲೀಗ್​ನಿಂದ ನಿಷೇಧಿಸಲಾಗಿದೆ ಎಂದು ವರದಿಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಯಶ್ ದಯಾಳ್ ಅವರನ್ನು UPT20 2025 ಲೀಗ್​ನಿಂದ ಕೈ ಬಿಡಲಾಗಿದ್ದು, ಹೀಗಾಗಿ ಮುಂಬರುವ ಟೂರ್ನಿಯಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಟಿ20 ಲೀಗ್​ನಿಂದ ನಿಷೇಧಿಸಲಾಗಿದೆ ಎಂದು ವರದಿಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಯಶ್ ದಯಾಳ್ ಅವರನ್ನು UPT20 2025 ಲೀಗ್​ನಿಂದ ಕೈ ಬಿಡಲಾಗಿದ್ದು, ಹೀಗಾಗಿ ಮುಂಬರುವ ಟೂರ್ನಿಯಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ.

1 / 5
ಯಶ್ ದಯಾಳ್ ಮೇಲೆ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವಿದೆ. ಈ ಪ್ರಕರಣ ಸಂಬಂಧ ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿ ಯುಪಿ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಉತ್ತರ ಪ್ರದೇಶ ಟಿ20 ಲೀಗ್​ನಲ್ಲಿ ಕಣಕ್ಕಿಳಿಯದಂತೆ ಯಶ್ ದಯಾಳ್​ಗೆ ಸೂಚಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯಶ್ ದಯಾಳ್ ಮೇಲೆ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವಿದೆ. ಈ ಪ್ರಕರಣ ಸಂಬಂಧ ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿ ಯುಪಿ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಉತ್ತರ ಪ್ರದೇಶ ಟಿ20 ಲೀಗ್​ನಲ್ಲಿ ಕಣಕ್ಕಿಳಿಯದಂತೆ ಯಶ್ ದಯಾಳ್​ಗೆ ಸೂಚಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 5
ಈ ಬಾರಿಯ ಉತ್ತರ ಪ್ರದೇಶ ಟಿ20 ಲೀಗ್​ನಲ್ಲಿ ಯಶ್ ದಯಾಳ್  ಗೋರಖ್‌ಪುರ ಲಯನ್ಸ್ ಪರ ಕಣಕ್ಕಿಳಿಯಬೇಕಿತ್ತು. ಕಳೆದ ಬಾರಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಆರ್​ಸಿಬಿ ವೇಗಿಯನ್ನು ಗೋರಖ್​ಪುರ್ ಲಯನ್ಸ್ ಫ್ರಾಂಚೈಸಿಯು 7 ಲಕ್ಷ ರೂ. ನೀಡಿ ಖರೀದಿಸಿದ್ದರು. ಆದರೀಗ ದಯಾಳ್ ಅವರನ್ನು ಕೈ ಬಿಡುವಂತೆ ಗೋರಖ್​ಪುರ್ ಲಯನ್ಸ್ ಫ್ರಾಂಚೈಸಿಗೆ ಯುಪಿಸಿಎ ತಿಳಿಸಿದೆ.

ಈ ಬಾರಿಯ ಉತ್ತರ ಪ್ರದೇಶ ಟಿ20 ಲೀಗ್​ನಲ್ಲಿ ಯಶ್ ದಯಾಳ್  ಗೋರಖ್‌ಪುರ ಲಯನ್ಸ್ ಪರ ಕಣಕ್ಕಿಳಿಯಬೇಕಿತ್ತು. ಕಳೆದ ಬಾರಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಆರ್​ಸಿಬಿ ವೇಗಿಯನ್ನು ಗೋರಖ್​ಪುರ್ ಲಯನ್ಸ್ ಫ್ರಾಂಚೈಸಿಯು 7 ಲಕ್ಷ ರೂ. ನೀಡಿ ಖರೀದಿಸಿದ್ದರು. ಆದರೀಗ ದಯಾಳ್ ಅವರನ್ನು ಕೈ ಬಿಡುವಂತೆ ಗೋರಖ್​ಪುರ್ ಲಯನ್ಸ್ ಫ್ರಾಂಚೈಸಿಗೆ ಯುಪಿಸಿಎ ತಿಳಿಸಿದೆ.

3 / 5
ಇದಕ್ಕೂ ಮುನ್ನ ಯಶ್ ದಯಾಳ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 15 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಜೋಶ್ ಹೇಝಲ್​ವುಡ್ ಜೊತೆ ದಾಳಿ ಸಂಘಟಿಸಿದ್ದ ಎಡಗೈ ವೇಗಿ ಒಟ್ಟು 13 ವಿಕೆಟ್​ಗಳನ್ನು ಸಹ ಕಬಳಿಸಿದ್ದರು. ಈ ಮೂಲಕ ಆರ್​ಸಿಬಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದಕ್ಕೂ ಮುನ್ನ ಯಶ್ ದಯಾಳ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 15 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಜೋಶ್ ಹೇಝಲ್​ವುಡ್ ಜೊತೆ ದಾಳಿ ಸಂಘಟಿಸಿದ್ದ ಎಡಗೈ ವೇಗಿ ಒಟ್ಟು 13 ವಿಕೆಟ್​ಗಳನ್ನು ಸಹ ಕಬಳಿಸಿದ್ದರು. ಈ ಮೂಲಕ ಆರ್​ಸಿಬಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

4 / 5
ಈ ಗೆಲುವಿನ ಸಂಭ್ರಮದ ಬೆನ್ನಲ್ಲೇ ಯಶ್ ದಯಾಳ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿತ್ತು. ಅಲ್ಲದೆ ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿದೆ. ಈ ಸಂಬಂಧ ಬಂಧನವನ್ನು ತಡೆ ಹಿಡಿಯುವಂತೆ ಯಶ್ ದಯಾಳ್ ಅವರಿಗೆ ರಾಜಸ್ಥಾನ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಪ್ರಕರಣದಲ್ಲಿ ಅವರ ಬಂಧನ ಮತ್ತು ಪೊಲೀಸ್ ಕ್ರಮಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಹೀಗಾಗಿ ಯುಪಿ ಟಿ20 ಲೀಗ್​ನಲ್ಲಿ ಕಣಕ್ಕಿಳಿಯದಂತೆ ಯಶ್ ದಯಾಳ್ ಅವರ ಮೇಲೆ ಯುಪಿಸಿಎ ನಿಷೇಧ ಹೇರಿದೆ.

ಈ ಗೆಲುವಿನ ಸಂಭ್ರಮದ ಬೆನ್ನಲ್ಲೇ ಯಶ್ ದಯಾಳ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿತ್ತು. ಅಲ್ಲದೆ ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿದೆ. ಈ ಸಂಬಂಧ ಬಂಧನವನ್ನು ತಡೆ ಹಿಡಿಯುವಂತೆ ಯಶ್ ದಯಾಳ್ ಅವರಿಗೆ ರಾಜಸ್ಥಾನ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಪ್ರಕರಣದಲ್ಲಿ ಅವರ ಬಂಧನ ಮತ್ತು ಪೊಲೀಸ್ ಕ್ರಮಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಹೀಗಾಗಿ ಯುಪಿ ಟಿ20 ಲೀಗ್​ನಲ್ಲಿ ಕಣಕ್ಕಿಳಿಯದಂತೆ ಯಶ್ ದಯಾಳ್ ಅವರ ಮೇಲೆ ಯುಪಿಸಿಎ ನಿಷೇಧ ಹೇರಿದೆ.

5 / 5

Published On - 11:53 am, Sun, 10 August 25

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ