Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Dayal: ಕೋಮು ದ್ವೇಷ ಹರಡಿ, ಬಳಿಕ ಕ್ಷಮೆ ಕೇಳಿದ ಯಶ್ ದಯಾಳ್

Yash Dayal Instagram Post: ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Jun 05, 2023 | 5:29 PM

ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದ ಫೋಟೋವೊಂದು ಇದೀಗ ವಿವಾದಕ್ಕೀಡಾಗಿದೆ.

ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದ ಫೋಟೋವೊಂದು ಇದೀಗ ವಿವಾದಕ್ಕೀಡಾಗಿದೆ.

1 / 8
ಇತ್ತೀಚೆಗೆ ದೆಹಲಿಯಲ್ಲಿ ಸಾಹಿಲ್ ಖಾನ್ ಎಂಬಾತ 16 ವರ್ಷದ ಬಾಲಕಿ ಸಾಕ್ಷಿಯನ್ನು 20 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದ. ಈ ಕೊಲೆಗೆ ಸಂಬಂಧಿಸಿದಂತೆ ದ್ವೇಷ ಹರಡುವ ಫೋಟೋವೊಂದನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಯಶ್ ದಯಾಳ್ ಹಂಚಿಕೊಂಡಿದ್ದರು.

ಇತ್ತೀಚೆಗೆ ದೆಹಲಿಯಲ್ಲಿ ಸಾಹಿಲ್ ಖಾನ್ ಎಂಬಾತ 16 ವರ್ಷದ ಬಾಲಕಿ ಸಾಕ್ಷಿಯನ್ನು 20 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದ. ಈ ಕೊಲೆಗೆ ಸಂಬಂಧಿಸಿದಂತೆ ದ್ವೇಷ ಹರಡುವ ಫೋಟೋವೊಂದನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಯಶ್ ದಯಾಳ್ ಹಂಚಿಕೊಂಡಿದ್ದರು.

2 / 8
ಸಮಾಜದಲ್ಲಿ ಕೋಮು ದ್ವೇಷ ಬಿತ್ತುವಂತಹ ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಆಟಗಾರನ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಯಶ್ ದಯಾಳ್ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯನ್ನು ಡಿಲೀಟ್ ಮಾಡಿದ್ದಾರೆ.

ಸಮಾಜದಲ್ಲಿ ಕೋಮು ದ್ವೇಷ ಬಿತ್ತುವಂತಹ ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಆಟಗಾರನ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಯಶ್ ದಯಾಳ್ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯನ್ನು ಡಿಲೀಟ್ ಮಾಡಿದ್ದಾರೆ.

3 / 8
ಇದೀಗ ಈ ಫೋಟೋಗೆ ಸಂಬಂಧಿಸಿದಂತೆ ಯಶ್ ದಯಾಳ್ ಕ್ಷಮೆಯಾಚಿಸಿದ್ದಾರೆ. ಗೆಳೆಯರೇ, ಈ ಸ್ಟೋರಿಗಾಗಿ ಕ್ಷಮಾಪಣೆ. ತಪ್ಪಾಗಿ ಈ ಪೋಸ್ಟ್ ಮಾಡಲಾಗಿದ್ದು, ದಯವಿಟ್ಟು ಯಾರು ಕೂಡ ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ಪ್ರತಿ ಸಮುದಾಯ ಮತ್ತು ಸಮಾಜದ ಬಗ್ಗೆ ನನಗೆ ಗೌರವವಿದೆ" ಎಂದು ದಯಾಳ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದೀಗ ಈ ಫೋಟೋಗೆ ಸಂಬಂಧಿಸಿದಂತೆ ಯಶ್ ದಯಾಳ್ ಕ್ಷಮೆಯಾಚಿಸಿದ್ದಾರೆ. ಗೆಳೆಯರೇ, ಈ ಸ್ಟೋರಿಗಾಗಿ ಕ್ಷಮಾಪಣೆ. ತಪ್ಪಾಗಿ ಈ ಪೋಸ್ಟ್ ಮಾಡಲಾಗಿದ್ದು, ದಯವಿಟ್ಟು ಯಾರು ಕೂಡ ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ಪ್ರತಿ ಸಮುದಾಯ ಮತ್ತು ಸಮಾಜದ ಬಗ್ಗೆ ನನಗೆ ಗೌರವವಿದೆ" ಎಂದು ದಯಾಳ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

4 / 8
ಅಂದಹಾಗೆ ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ. ಅದು ಕೂಡ ರಿಂಕು ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದ ಎಂಬುದು ಮತ್ತೊಂದು ವಿಶೇಷ.

ಅಂದಹಾಗೆ ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ. ಅದು ಕೂಡ ರಿಂಕು ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದ ಎಂಬುದು ಮತ್ತೊಂದು ವಿಶೇಷ.

5 / 8
ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 204 ರನ್ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು.

ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 204 ರನ್ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು.

6 / 8
ಇತ್ತ 20ನೇ ಓವರ್​ನಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಉಮೇಶ್ ಯಾದವ್ ಸಿಂಗಲ್ ತೆಗೆದಿದ್ದರು. ಉಳಿದ 5 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿದ್ದರು.

ಇತ್ತ 20ನೇ ಓವರ್​ನಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಉಮೇಶ್ ಯಾದವ್ ಸಿಂಗಲ್ ತೆಗೆದಿದ್ದರು. ಉಳಿದ 5 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿದ್ದರು.

7 / 8
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಹೊಡೆಸಿಕೊಂಡ ಬಳಿಕ ಖಿನ್ನತೆಗೆ ಒಳಗಾಗಿದ್ದ ಯಶ್ ದಯಾಳ್ 8 ಕೆ.ಜಿಗಳನ್ನು ಕಳೆದುಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಒಂದು ಪಂದ್ಯದಲ್ಲಿ ಮಾತ್ರ ಅವರು ಕಣಕ್ಕಿಳಿದಿದ್ದರು. ಇದೀಗ ಕೋಮು ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳುವ ಮೂಲಕ ಯಶ್ ದಯಾಳ್ ಮತ್ತೆ ಸುದ್ದಿಯಾಗಿದ್ದಾರೆ.

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಹೊಡೆಸಿಕೊಂಡ ಬಳಿಕ ಖಿನ್ನತೆಗೆ ಒಳಗಾಗಿದ್ದ ಯಶ್ ದಯಾಳ್ 8 ಕೆ.ಜಿಗಳನ್ನು ಕಳೆದುಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಒಂದು ಪಂದ್ಯದಲ್ಲಿ ಮಾತ್ರ ಅವರು ಕಣಕ್ಕಿಳಿದಿದ್ದರು. ಇದೀಗ ಕೋಮು ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳುವ ಮೂಲಕ ಯಶ್ ದಯಾಳ್ ಮತ್ತೆ ಸುದ್ದಿಯಾಗಿದ್ದಾರೆ.

8 / 8
Follow us
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು