AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Dayal: ಕೋಮು ದ್ವೇಷ ಹರಡಿ, ಬಳಿಕ ಕ್ಷಮೆ ಕೇಳಿದ ಯಶ್ ದಯಾಳ್

Yash Dayal Instagram Post: ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Jun 05, 2023 | 5:29 PM

Share
ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದ ಫೋಟೋವೊಂದು ಇದೀಗ ವಿವಾದಕ್ಕೀಡಾಗಿದೆ.

ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದ ಫೋಟೋವೊಂದು ಇದೀಗ ವಿವಾದಕ್ಕೀಡಾಗಿದೆ.

1 / 8
ಇತ್ತೀಚೆಗೆ ದೆಹಲಿಯಲ್ಲಿ ಸಾಹಿಲ್ ಖಾನ್ ಎಂಬಾತ 16 ವರ್ಷದ ಬಾಲಕಿ ಸಾಕ್ಷಿಯನ್ನು 20 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದ. ಈ ಕೊಲೆಗೆ ಸಂಬಂಧಿಸಿದಂತೆ ದ್ವೇಷ ಹರಡುವ ಫೋಟೋವೊಂದನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಯಶ್ ದಯಾಳ್ ಹಂಚಿಕೊಂಡಿದ್ದರು.

ಇತ್ತೀಚೆಗೆ ದೆಹಲಿಯಲ್ಲಿ ಸಾಹಿಲ್ ಖಾನ್ ಎಂಬಾತ 16 ವರ್ಷದ ಬಾಲಕಿ ಸಾಕ್ಷಿಯನ್ನು 20 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದ. ಈ ಕೊಲೆಗೆ ಸಂಬಂಧಿಸಿದಂತೆ ದ್ವೇಷ ಹರಡುವ ಫೋಟೋವೊಂದನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಯಶ್ ದಯಾಳ್ ಹಂಚಿಕೊಂಡಿದ್ದರು.

2 / 8
ಸಮಾಜದಲ್ಲಿ ಕೋಮು ದ್ವೇಷ ಬಿತ್ತುವಂತಹ ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಆಟಗಾರನ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಯಶ್ ದಯಾಳ್ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯನ್ನು ಡಿಲೀಟ್ ಮಾಡಿದ್ದಾರೆ.

ಸಮಾಜದಲ್ಲಿ ಕೋಮು ದ್ವೇಷ ಬಿತ್ತುವಂತಹ ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಆಟಗಾರನ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಯಶ್ ದಯಾಳ್ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯನ್ನು ಡಿಲೀಟ್ ಮಾಡಿದ್ದಾರೆ.

3 / 8
ಇದೀಗ ಈ ಫೋಟೋಗೆ ಸಂಬಂಧಿಸಿದಂತೆ ಯಶ್ ದಯಾಳ್ ಕ್ಷಮೆಯಾಚಿಸಿದ್ದಾರೆ. ಗೆಳೆಯರೇ, ಈ ಸ್ಟೋರಿಗಾಗಿ ಕ್ಷಮಾಪಣೆ. ತಪ್ಪಾಗಿ ಈ ಪೋಸ್ಟ್ ಮಾಡಲಾಗಿದ್ದು, ದಯವಿಟ್ಟು ಯಾರು ಕೂಡ ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ಪ್ರತಿ ಸಮುದಾಯ ಮತ್ತು ಸಮಾಜದ ಬಗ್ಗೆ ನನಗೆ ಗೌರವವಿದೆ" ಎಂದು ದಯಾಳ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದೀಗ ಈ ಫೋಟೋಗೆ ಸಂಬಂಧಿಸಿದಂತೆ ಯಶ್ ದಯಾಳ್ ಕ್ಷಮೆಯಾಚಿಸಿದ್ದಾರೆ. ಗೆಳೆಯರೇ, ಈ ಸ್ಟೋರಿಗಾಗಿ ಕ್ಷಮಾಪಣೆ. ತಪ್ಪಾಗಿ ಈ ಪೋಸ್ಟ್ ಮಾಡಲಾಗಿದ್ದು, ದಯವಿಟ್ಟು ಯಾರು ಕೂಡ ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ಪ್ರತಿ ಸಮುದಾಯ ಮತ್ತು ಸಮಾಜದ ಬಗ್ಗೆ ನನಗೆ ಗೌರವವಿದೆ" ಎಂದು ದಯಾಳ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

4 / 8
ಅಂದಹಾಗೆ ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ. ಅದು ಕೂಡ ರಿಂಕು ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದ ಎಂಬುದು ಮತ್ತೊಂದು ವಿಶೇಷ.

ಅಂದಹಾಗೆ ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ. ಅದು ಕೂಡ ರಿಂಕು ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದ ಎಂಬುದು ಮತ್ತೊಂದು ವಿಶೇಷ.

5 / 8
ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 204 ರನ್ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು.

ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 204 ರನ್ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು.

6 / 8
ಇತ್ತ 20ನೇ ಓವರ್​ನಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಉಮೇಶ್ ಯಾದವ್ ಸಿಂಗಲ್ ತೆಗೆದಿದ್ದರು. ಉಳಿದ 5 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿದ್ದರು.

ಇತ್ತ 20ನೇ ಓವರ್​ನಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಉಮೇಶ್ ಯಾದವ್ ಸಿಂಗಲ್ ತೆಗೆದಿದ್ದರು. ಉಳಿದ 5 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿದ್ದರು.

7 / 8
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಹೊಡೆಸಿಕೊಂಡ ಬಳಿಕ ಖಿನ್ನತೆಗೆ ಒಳಗಾಗಿದ್ದ ಯಶ್ ದಯಾಳ್ 8 ಕೆ.ಜಿಗಳನ್ನು ಕಳೆದುಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಒಂದು ಪಂದ್ಯದಲ್ಲಿ ಮಾತ್ರ ಅವರು ಕಣಕ್ಕಿಳಿದಿದ್ದರು. ಇದೀಗ ಕೋಮು ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳುವ ಮೂಲಕ ಯಶ್ ದಯಾಳ್ ಮತ್ತೆ ಸುದ್ದಿಯಾಗಿದ್ದಾರೆ.

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಹೊಡೆಸಿಕೊಂಡ ಬಳಿಕ ಖಿನ್ನತೆಗೆ ಒಳಗಾಗಿದ್ದ ಯಶ್ ದಯಾಳ್ 8 ಕೆ.ಜಿಗಳನ್ನು ಕಳೆದುಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಒಂದು ಪಂದ್ಯದಲ್ಲಿ ಮಾತ್ರ ಅವರು ಕಣಕ್ಕಿಳಿದಿದ್ದರು. ಇದೀಗ ಕೋಮು ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳುವ ಮೂಲಕ ಯಶ್ ದಯಾಳ್ ಮತ್ತೆ ಸುದ್ದಿಯಾಗಿದ್ದಾರೆ.

8 / 8
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ