AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Dayal: ಕೋಮು ದ್ವೇಷ ಹರಡಿ, ಬಳಿಕ ಕ್ಷಮೆ ಕೇಳಿದ ಯಶ್ ದಯಾಳ್

Yash Dayal Instagram Post: ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Jun 05, 2023 | 5:29 PM

Share
ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದ ಫೋಟೋವೊಂದು ಇದೀಗ ವಿವಾದಕ್ಕೀಡಾಗಿದೆ.

ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದ ಫೋಟೋವೊಂದು ಇದೀಗ ವಿವಾದಕ್ಕೀಡಾಗಿದೆ.

1 / 8
ಇತ್ತೀಚೆಗೆ ದೆಹಲಿಯಲ್ಲಿ ಸಾಹಿಲ್ ಖಾನ್ ಎಂಬಾತ 16 ವರ್ಷದ ಬಾಲಕಿ ಸಾಕ್ಷಿಯನ್ನು 20 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದ. ಈ ಕೊಲೆಗೆ ಸಂಬಂಧಿಸಿದಂತೆ ದ್ವೇಷ ಹರಡುವ ಫೋಟೋವೊಂದನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಯಶ್ ದಯಾಳ್ ಹಂಚಿಕೊಂಡಿದ್ದರು.

ಇತ್ತೀಚೆಗೆ ದೆಹಲಿಯಲ್ಲಿ ಸಾಹಿಲ್ ಖಾನ್ ಎಂಬಾತ 16 ವರ್ಷದ ಬಾಲಕಿ ಸಾಕ್ಷಿಯನ್ನು 20 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದ. ಈ ಕೊಲೆಗೆ ಸಂಬಂಧಿಸಿದಂತೆ ದ್ವೇಷ ಹರಡುವ ಫೋಟೋವೊಂದನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಯಶ್ ದಯಾಳ್ ಹಂಚಿಕೊಂಡಿದ್ದರು.

2 / 8
ಸಮಾಜದಲ್ಲಿ ಕೋಮು ದ್ವೇಷ ಬಿತ್ತುವಂತಹ ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಆಟಗಾರನ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಯಶ್ ದಯಾಳ್ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯನ್ನು ಡಿಲೀಟ್ ಮಾಡಿದ್ದಾರೆ.

ಸಮಾಜದಲ್ಲಿ ಕೋಮು ದ್ವೇಷ ಬಿತ್ತುವಂತಹ ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಆಟಗಾರನ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಯಶ್ ದಯಾಳ್ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯನ್ನು ಡಿಲೀಟ್ ಮಾಡಿದ್ದಾರೆ.

3 / 8
ಇದೀಗ ಈ ಫೋಟೋಗೆ ಸಂಬಂಧಿಸಿದಂತೆ ಯಶ್ ದಯಾಳ್ ಕ್ಷಮೆಯಾಚಿಸಿದ್ದಾರೆ. ಗೆಳೆಯರೇ, ಈ ಸ್ಟೋರಿಗಾಗಿ ಕ್ಷಮಾಪಣೆ. ತಪ್ಪಾಗಿ ಈ ಪೋಸ್ಟ್ ಮಾಡಲಾಗಿದ್ದು, ದಯವಿಟ್ಟು ಯಾರು ಕೂಡ ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ಪ್ರತಿ ಸಮುದಾಯ ಮತ್ತು ಸಮಾಜದ ಬಗ್ಗೆ ನನಗೆ ಗೌರವವಿದೆ" ಎಂದು ದಯಾಳ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದೀಗ ಈ ಫೋಟೋಗೆ ಸಂಬಂಧಿಸಿದಂತೆ ಯಶ್ ದಯಾಳ್ ಕ್ಷಮೆಯಾಚಿಸಿದ್ದಾರೆ. ಗೆಳೆಯರೇ, ಈ ಸ್ಟೋರಿಗಾಗಿ ಕ್ಷಮಾಪಣೆ. ತಪ್ಪಾಗಿ ಈ ಪೋಸ್ಟ್ ಮಾಡಲಾಗಿದ್ದು, ದಯವಿಟ್ಟು ಯಾರು ಕೂಡ ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ಪ್ರತಿ ಸಮುದಾಯ ಮತ್ತು ಸಮಾಜದ ಬಗ್ಗೆ ನನಗೆ ಗೌರವವಿದೆ" ಎಂದು ದಯಾಳ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

4 / 8
ಅಂದಹಾಗೆ ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ. ಅದು ಕೂಡ ರಿಂಕು ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದ ಎಂಬುದು ಮತ್ತೊಂದು ವಿಶೇಷ.

ಅಂದಹಾಗೆ ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ. ಅದು ಕೂಡ ರಿಂಕು ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದ ಎಂಬುದು ಮತ್ತೊಂದು ವಿಶೇಷ.

5 / 8
ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 204 ರನ್ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು.

ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 204 ರನ್ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು.

6 / 8
ಇತ್ತ 20ನೇ ಓವರ್​ನಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಉಮೇಶ್ ಯಾದವ್ ಸಿಂಗಲ್ ತೆಗೆದಿದ್ದರು. ಉಳಿದ 5 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿದ್ದರು.

ಇತ್ತ 20ನೇ ಓವರ್​ನಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಉಮೇಶ್ ಯಾದವ್ ಸಿಂಗಲ್ ತೆಗೆದಿದ್ದರು. ಉಳಿದ 5 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿದ್ದರು.

7 / 8
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಹೊಡೆಸಿಕೊಂಡ ಬಳಿಕ ಖಿನ್ನತೆಗೆ ಒಳಗಾಗಿದ್ದ ಯಶ್ ದಯಾಳ್ 8 ಕೆ.ಜಿಗಳನ್ನು ಕಳೆದುಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಒಂದು ಪಂದ್ಯದಲ್ಲಿ ಮಾತ್ರ ಅವರು ಕಣಕ್ಕಿಳಿದಿದ್ದರು. ಇದೀಗ ಕೋಮು ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳುವ ಮೂಲಕ ಯಶ್ ದಯಾಳ್ ಮತ್ತೆ ಸುದ್ದಿಯಾಗಿದ್ದಾರೆ.

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಹೊಡೆಸಿಕೊಂಡ ಬಳಿಕ ಖಿನ್ನತೆಗೆ ಒಳಗಾಗಿದ್ದ ಯಶ್ ದಯಾಳ್ 8 ಕೆ.ಜಿಗಳನ್ನು ಕಳೆದುಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಒಂದು ಪಂದ್ಯದಲ್ಲಿ ಮಾತ್ರ ಅವರು ಕಣಕ್ಕಿಳಿದಿದ್ದರು. ಇದೀಗ ಕೋಮು ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳುವ ಮೂಲಕ ಯಶ್ ದಯಾಳ್ ಮತ್ತೆ ಸುದ್ದಿಯಾಗಿದ್ದಾರೆ.

8 / 8
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ