AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾದಿಂದ ಗಂಭೀರ್ ಶಿಷ್ಯ ಔಟ್; ಬದಲಿ ಆಟಗಾರನನ್ನು ಘೋಷಿಸಿದ ಬಿಸಿಸಿಐ

ಗಾಯದಿಂದಾಗಿ ಹರ್ಷಿತ್ ರಾಣಾ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಮತ್ತು ಏಷ್ಯನ್ ಗೇಮ್ಸ್‌ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಯುವ ವೇಗಿ ಯಶ್ ಠಾಕೂರ್ ಭಾರತ ತಂಡ ಸೇರಿಕೊಂಡಿದ್ದಾರೆ. ಯಶ್, ಜಿಂಬಾಬ್ವೆ ವಿರುದ್ಧ ಟಿ20ಗೆ ಪಾದಾರ್ಪಣೆ ಮಾಡಿದ್ದರು. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ತಂಡ ಸೆಪ್ಟೆಂಬರ್ 13 ರಿಂದ ಟಿ20 ಸರಣಿ ಮತ್ತು ಸೆಪ್ಟೆಂಬರ್ 19 ರಿಂದ ಏಷ್ಯನ್ ಗೇಮ್ಸ್ ಆಡಲಿದೆ.

ಪೃಥ್ವಿಶಂಕರ
|

Updated on: Sep 10, 2026 | 3:39 PM

Share
ಗಾಯದಿಂದಾಗಿ ಇನ್ನು ಸಂಪೂರ್ಣವಾಗಿ ಚೇತರಿಸಿಕೊಳ್ಳದ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿದೆ. ಹರ್ಷಿತ್ ರಾಣಾ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಹಾಗೂ ಅದಾದ ಬಳಿಕ ನಡೆಯಲಿರುವ ಏಷ್ಯನ್ ಕ್ರೀಡಾಕೂಟದಲ್ಲಿಯೂ ಆಡುವುದಿಲ್ಲ. ಹೀಗಾಗಿ ಅವರ ಬದಲಿಯಾಗಿ ಬಿಸಿಸಿಐ ಯಶ್ ಠಾಕೂರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ(PC-PTI).

ಗಾಯದಿಂದಾಗಿ ಇನ್ನು ಸಂಪೂರ್ಣವಾಗಿ ಚೇತರಿಸಿಕೊಳ್ಳದ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿದೆ. ಹರ್ಷಿತ್ ರಾಣಾ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಹಾಗೂ ಅದಾದ ಬಳಿಕ ನಡೆಯಲಿರುವ ಏಷ್ಯನ್ ಕ್ರೀಡಾಕೂಟದಲ್ಲಿಯೂ ಆಡುವುದಿಲ್ಲ. ಹೀಗಾಗಿ ಅವರ ಬದಲಿಯಾಗಿ ಬಿಸಿಸಿಐ ಯಶ್ ಠಾಕೂರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ(PC-PTI).

1 / 5
ಹರ್ಷಿತ್ ರಾಣಾ ಅವರನ್ನು ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಮತ್ತು 2026 ರ ಏಷ್ಯನ್ ಕ್ರೀಡಾಕೂಟಕ್ಕೆ ಟೀಂ ಇಂಡಿಯಾದಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಅವರು ತಂಡದಲ್ಲಿ ಆಡುವುದು ಅವರ ಫಿಟ್ನೆಸ್‌ ಮೇಲೆ ಅವಲಂಬಿತವಾಗಿರುತ್ತದೆ ಎಂದು ಬಿಸಿಸಿಐ ಅಂದೇ ತಿಳಿಸಿತ್ತು. ಆದರೀಗ ಅವರನ್ನು ತಂಡದಿಂದ ಹೊರಗಿಟ್ಟಿರುವುದಾಗಿ ಬಿಸಿಸಿಐ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ದೃಢಪಡಿಸಿದೆ(PC-PTI).

ಹರ್ಷಿತ್ ರಾಣಾ ಅವರನ್ನು ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಮತ್ತು 2026 ರ ಏಷ್ಯನ್ ಕ್ರೀಡಾಕೂಟಕ್ಕೆ ಟೀಂ ಇಂಡಿಯಾದಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಅವರು ತಂಡದಲ್ಲಿ ಆಡುವುದು ಅವರ ಫಿಟ್ನೆಸ್‌ ಮೇಲೆ ಅವಲಂಬಿತವಾಗಿರುತ್ತದೆ ಎಂದು ಬಿಸಿಸಿಐ ಅಂದೇ ತಿಳಿಸಿತ್ತು. ಆದರೀಗ ಅವರನ್ನು ತಂಡದಿಂದ ಹೊರಗಿಟ್ಟಿರುವುದಾಗಿ ಬಿಸಿಸಿಐ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ದೃಢಪಡಿಸಿದೆ(PC-PTI).

2 / 5
ಹರ್ಷಿತ್ ರಾಣಾ ಬದಲಿಗೆ ವಿದರ್ಭದ 27 ವರ್ಷದ ವೇಗದ ಬೌಲರ್ ಯಶ್ ಠಾಕೂರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷದ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಯಶ್ ಭಾರತ ಪರ ಪಾದಾರ್ಪಣೆ ಮಾಡಿದ್ದರು. ಅವರು ಇಲ್ಲಿಯವರೆಗೆ ಎರಡು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ, ಯಶ್ ಠಾಕೂರ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ 50 ಪಂದ್ಯಗಳನ್ನು ಆಡಿದ್ದು, 7.04 ರ ಎಕಾನಮಿ ದರದಲ್ಲಿ 81 ವಿಕೆಟ್‌ಗಳನ್ನು ಕಬಳಿಸಿದ್ದಾರೆ(PC-BCCI).

ಹರ್ಷಿತ್ ರಾಣಾ ಬದಲಿಗೆ ವಿದರ್ಭದ 27 ವರ್ಷದ ವೇಗದ ಬೌಲರ್ ಯಶ್ ಠಾಕೂರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷದ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಯಶ್ ಭಾರತ ಪರ ಪಾದಾರ್ಪಣೆ ಮಾಡಿದ್ದರು. ಅವರು ಇಲ್ಲಿಯವರೆಗೆ ಎರಡು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ, ಯಶ್ ಠಾಕೂರ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ 50 ಪಂದ್ಯಗಳನ್ನು ಆಡಿದ್ದು, 7.04 ರ ಎಕಾನಮಿ ದರದಲ್ಲಿ 81 ವಿಕೆಟ್‌ಗಳನ್ನು ಕಬಳಿಸಿದ್ದಾರೆ(PC-BCCI).

3 / 5
ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯಶ್ ಠಾಕೂರ್(PC-BCCI).

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯಶ್ ಠಾಕೂರ್(PC-BCCI).

4 / 5
ಅಫ್ಘಾನಿಸ್ತಾನ ವಿರುದ್ಧ ಆಡಿದ ಅದೇ ಟಿ20 ತಂಡ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಏಷ್ಯನ್ ಕ್ರೀಡಾಕೂಟದಲ್ಲಿಯೂ ಆಡಲಿದೆ. ಶ್ರೇಯಸ್ ಅಯ್ಯರ್ ಎರಡೂ ಪಂದ್ಯಾವಳಿಗಳಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಮತ್ತು ತಿಲಕ್ ವರ್ಮಾ ಉಪನಾಯಕರಾಗಿರುತ್ತಾರೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13 ರಂದು ಪ್ರಾರಂಭವಾಗುತ್ತದೆ(PC-BCCI).

ಅಫ್ಘಾನಿಸ್ತಾನ ವಿರುದ್ಧ ಆಡಿದ ಅದೇ ಟಿ20 ತಂಡ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಏಷ್ಯನ್ ಕ್ರೀಡಾಕೂಟದಲ್ಲಿಯೂ ಆಡಲಿದೆ. ಶ್ರೇಯಸ್ ಅಯ್ಯರ್ ಎರಡೂ ಪಂದ್ಯಾವಳಿಗಳಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಮತ್ತು ತಿಲಕ್ ವರ್ಮಾ ಉಪನಾಯಕರಾಗಿರುತ್ತಾರೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13 ರಂದು ಪ್ರಾರಂಭವಾಗುತ್ತದೆ(PC-BCCI).

5 / 5
Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್