AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶಸ್ವಿ ಜೈಸ್ವಾಲ್ ಆರ್ಭಟಕ್ಕೆ ದ್ರಾವಿಡ್, ಸೆಹ್ವಾಗ್ ದಾಖಲೆಗಳೇ ಧೂಳೀಪಟ

India vs England 2nd Test: ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 587 ರನ್ ಕಲೆಹಾಕಿದೆ. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್ ತಂಡವು 407 ರನ್​ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on:Jul 05, 2025 | 9:54 AM

Share
ಟೆಸ್ಟ್ ಕ್ರಿಕೆಟ್​ನ ಆರಂಭಿಕ ಹಂತದಲ್ಲಿರುವ ಯಶಸ್ವಿ ಜೈಸ್ವಾಲ್ ಭರ್ಜರಿ (Yashasvi Jaiswal) ದಾಖಲೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಅದು ಕೂಡ 21 ಟೆಸ್ಟ್ ಪಂದ್ಯಗಳ ಮೂಲಕ. ಈ ಮ್ಯಾಚ್​ಗಳ ಮೂಲಕ ಯಶಸ್ವಿ ಜೈಸ್ವಾಲ್ ಮುರಿದಿರುವುದು ಲೆಜೆಂಡ್ ರಾಹುಲ್ ದ್ರಾವಿಡ್ ಹಾಗೂ ವಿರೇಂದ್ರ ಸೆಹ್ವಾಗ್ ಅವರ ದಾಖಲೆಗಳನ್ನು ಎಂಬುದು ವಿಶೇಷ.

ಟೆಸ್ಟ್ ಕ್ರಿಕೆಟ್​ನ ಆರಂಭಿಕ ಹಂತದಲ್ಲಿರುವ ಯಶಸ್ವಿ ಜೈಸ್ವಾಲ್ ಭರ್ಜರಿ (Yashasvi Jaiswal) ದಾಖಲೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಅದು ಕೂಡ 21 ಟೆಸ್ಟ್ ಪಂದ್ಯಗಳ ಮೂಲಕ. ಈ ಮ್ಯಾಚ್​ಗಳ ಮೂಲಕ ಯಶಸ್ವಿ ಜೈಸ್ವಾಲ್ ಮುರಿದಿರುವುದು ಲೆಜೆಂಡ್ ರಾಹುಲ್ ದ್ರಾವಿಡ್ ಹಾಗೂ ವಿರೇಂದ್ರ ಸೆಹ್ವಾಗ್ ಅವರ ದಾಖಲೆಗಳನ್ನು ಎಂಬುದು ವಿಶೇಷ.

1 / 5
ಎಡ್ಜ್​ಬಾಸ್ಟನ್​​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 115 ರನ್​ ಕಲೆಹಾಕಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 87 ರನ್ ಬಾರಿಸಿದ್ದ ಯಶಸ್ವಿ ದ್ವಿತೀಯ ಇನಿಂಗ್ಸ್​ನಲ್ಲಿ 28 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಅದರಂತೆ ಒಟ್ಟು 115 ರನ್​ಗಳಿಸುವ ಮೂಲಕ ಜೈಸ್ವಾಲ್ ಟೆಸ್ಟ್ ಕ್ರಿಕೆಟ್​ನಲ್ಲಿ 2000 ರನ್ ಪೂರೈಸಿದ್ದಾರೆ.

ಎಡ್ಜ್​ಬಾಸ್ಟನ್​​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 115 ರನ್​ ಕಲೆಹಾಕಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 87 ರನ್ ಬಾರಿಸಿದ್ದ ಯಶಸ್ವಿ ದ್ವಿತೀಯ ಇನಿಂಗ್ಸ್​ನಲ್ಲಿ 28 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಅದರಂತೆ ಒಟ್ಟು 115 ರನ್​ಗಳಿಸುವ ಮೂಲಕ ಜೈಸ್ವಾಲ್ ಟೆಸ್ಟ್ ಕ್ರಿಕೆಟ್​ನಲ್ಲಿ 2000 ರನ್ ಪೂರೈಸಿದ್ದಾರೆ.

2 / 5
ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಅತೀ ಕಡಿಮೆ ಪಂದ್ಯದ ಮೂಲಕ 2 ಸಾವಿರ ರನ್ ಕಲೆಹಾಕಿದ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆಗಳು ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹಾಗೂ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.

ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಅತೀ ಕಡಿಮೆ ಪಂದ್ಯದ ಮೂಲಕ 2 ಸಾವಿರ ರನ್ ಕಲೆಹಾಕಿದ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆಗಳು ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹಾಗೂ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.

3 / 5
ರಾಹುಲ್ ದ್ರಾವಿಡ್ ಹಾಗೂ ವೀರೇಂದ್ರ ಸೆಹ್ವಾಗ್ ಕ್ರಮವಾಗಿ 25 ಟೆಸ್ಟ್ ಪಂದ್ಯಗಳಲ್ಲಿ 40 ಇನಿಂಗ್ಸ್ ಆಡಿ 2000 ಸಾವಿರ ರನ್ ಕಲೆಹಾಕಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳಲ್ಲಿ ಹಾಗೂ ಕನಿಷ್ಠ ಇನಿಂಗ್ಸ್​ಗಳ ಮೂಲಕ 2000 ರನ್ ಗಳಿಸಿದ ಬ್ಯಾಟರ್​ಗಳು ಎನಿಸಿಕೊಂಡಿದ್ದರು.

ರಾಹುಲ್ ದ್ರಾವಿಡ್ ಹಾಗೂ ವೀರೇಂದ್ರ ಸೆಹ್ವಾಗ್ ಕ್ರಮವಾಗಿ 25 ಟೆಸ್ಟ್ ಪಂದ್ಯಗಳಲ್ಲಿ 40 ಇನಿಂಗ್ಸ್ ಆಡಿ 2000 ಸಾವಿರ ರನ್ ಕಲೆಹಾಕಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳಲ್ಲಿ ಹಾಗೂ ಕನಿಷ್ಠ ಇನಿಂಗ್ಸ್​ಗಳ ಮೂಲಕ 2000 ರನ್ ಗಳಿಸಿದ ಬ್ಯಾಟರ್​ಗಳು ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ 2000 ರನ್ ಪೂರೈಸಲು ತೆಗೆದುಕೊಂಡಿರುವುದು ಕೇವಲ 21 ಟೆಸ್ಟ್ ಪಂದ್ಯಗಳನ್ನು ಮಾತ್ರ. ಈ 21 ಟೆಸ್ಟ್ ಪಂದ್ಯಗಳಲ್ಲಿ 40 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ ಭಾರತದ ಪರ ಅತೀ ಕಡಿಮೆ ಟೆಸ್ಟ್ ಮ್ಯಾಚ್​ ಆಡಿ, ಕನಿಷ್ಠ ಇನಿಂಗ್ಸ್​ನೊಂದಿಗೆ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ 2000 ರನ್ ಪೂರೈಸಲು ತೆಗೆದುಕೊಂಡಿರುವುದು ಕೇವಲ 21 ಟೆಸ್ಟ್ ಪಂದ್ಯಗಳನ್ನು ಮಾತ್ರ. ಈ 21 ಟೆಸ್ಟ್ ಪಂದ್ಯಗಳಲ್ಲಿ 40 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ ಭಾರತದ ಪರ ಅತೀ ಕಡಿಮೆ ಟೆಸ್ಟ್ ಮ್ಯಾಚ್​ ಆಡಿ, ಕನಿಷ್ಠ ಇನಿಂಗ್ಸ್​ನೊಂದಿಗೆ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 9:54 am, Sat, 5 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ