AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರ ಸಿಡಿಲಬ್ಬರ… ಮೊದಲ ಓವರ್​ನಲ್ಲೇ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Yashasvi jaiswal Record: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 32 ಎಸೆತಗಳಲ್ಲಿ ಅಜೇಯ 77 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಆರ್​ಆರ್​ ತಂಡ ನಿಗದಿತ 11 ಓವರ್​ಗಳಲ್ಲಿ 150 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ 27 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Apr 08, 2026 | 8:59 AM

Share
IPL 2026: ಐಪಿಎಲ್​ನ 13ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಯಶಸ್ವಿ ಜೈಸ್ವಾಲ್ (Yashasvi jaiswal) ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಮೊದಲ ಓವರ್​ನಲ್ಲೇ 22 ರನ್​ ಚಚ್ಚುವ ಮೂಲಕ ಎಂಬುದು ವಿಶೇಷ.

IPL 2026: ಐಪಿಎಲ್​ನ 13ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಯಶಸ್ವಿ ಜೈಸ್ವಾಲ್ (Yashasvi jaiswal) ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಮೊದಲ ಓವರ್​ನಲ್ಲೇ 22 ರನ್​ ಚಚ್ಚುವ ಮೂಲಕ ಎಂಬುದು ವಿಶೇಷ.

1 / 5
ಅಂದರೆ ಐಪಿಎಲ್ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಓವರ್​ನಲ್ಲಿ ಮೂರು ಬಾರಿ 20+ ಸ್ಕೋರ್​ಗಳಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ದೀಪಕ್ ಚಹರ್ ಎಸೆದ ಮೊದಲ ಓವರ್​ನಲ್ಲೇ 22 ರನ್ ಬಾರಿಸುವ ಮೂಲಕ ಈ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಅಂದರೆ ಐಪಿಎಲ್ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಓವರ್​ನಲ್ಲಿ ಮೂರು ಬಾರಿ 20+ ಸ್ಕೋರ್​ಗಳಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ದೀಪಕ್ ಚಹರ್ ಎಸೆದ ಮೊದಲ ಓವರ್​ನಲ್ಲೇ 22 ರನ್ ಬಾರಿಸುವ ಮೂಲಕ ಈ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

2 / 5
ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ 2023 ರಲ್ಲಿ ನಿತೀಶ್ ರಾಣಾ (ಕೊಲ್ಕತ್ತಾ ನೈಟ್ ರೈಡರ್ಸ್​) ಎಸೆದ ಮೊದಲ ಓವರ್​ನಲ್ಲಿ 6,6,4,4,2,4 ಬಾರಿಸುವ ಮೂಲಕ 26 ರನ್ ಚಚ್ಚಿದ್ದರು. ಇದು ಐಪಿಎಲ್​ ಇತಿಹಾಸದಲ್ಲಿ ಮೊದಲ ಓವರ್​ನಲ್ಲಿ ಬ್ಯಾಟರ್​ರೊಬ್ಬರು ಕಲೆಹಾಕಿದ ಗರಿಷ್ಠ ಸ್ಕೋರ್ ಎಮಬುದು ವಿಶೇಷ.

ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ 2023 ರಲ್ಲಿ ನಿತೀಶ್ ರಾಣಾ (ಕೊಲ್ಕತ್ತಾ ನೈಟ್ ರೈಡರ್ಸ್​) ಎಸೆದ ಮೊದಲ ಓವರ್​ನಲ್ಲಿ 6,6,4,4,2,4 ಬಾರಿಸುವ ಮೂಲಕ 26 ರನ್ ಚಚ್ಚಿದ್ದರು. ಇದು ಐಪಿಎಲ್​ ಇತಿಹಾಸದಲ್ಲಿ ಮೊದಲ ಓವರ್​ನಲ್ಲಿ ಬ್ಯಾಟರ್​ರೊಬ್ಬರು ಕಲೆಹಾಕಿದ ಗರಿಷ್ಠ ಸ್ಕೋರ್ ಎಮಬುದು ವಿಶೇಷ.

3 / 5
ಇದಾದ ಬಳಿಕ ಐಪಿಎಲ್ 2025 ರಲ್ಲಿ ಅರ್ಷದೀಪ್ ಸಿಂಗ್ (ಪಂಜಾಬ್ ಕಿಂಗ್ಸ್​) ಎಸೆದ ಮೊದಲ ಓವರ್​ನಲ್ಲಿ ಬರೋಬ್ಬರಿ 22 ರನ್​ ಚಚ್ಚಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ 2 ಬಾರಿ ಮೊದಲ ಓವರ್​ನಲ್ಲೇ 20 ಕ್ಕಿಂತ ಅಧಿಕ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.

ಇದಾದ ಬಳಿಕ ಐಪಿಎಲ್ 2025 ರಲ್ಲಿ ಅರ್ಷದೀಪ್ ಸಿಂಗ್ (ಪಂಜಾಬ್ ಕಿಂಗ್ಸ್​) ಎಸೆದ ಮೊದಲ ಓವರ್​ನಲ್ಲಿ ಬರೋಬ್ಬರಿ 22 ರನ್​ ಚಚ್ಚಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ 2 ಬಾರಿ ಮೊದಲ ಓವರ್​ನಲ್ಲೇ 20 ಕ್ಕಿಂತ ಅಧಿಕ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ದೀಪಕ್ ಚಹರ್ ಎಸೆದ ಮೊದಲ ಓವರ್​ನಲ್ಲಿ 4, 6, 4, 0, 4, 4 ರನ್ ಬಾರಿಸಿದ್ದಾರೆ. ಈ ಮೂಲಕ 22 ರನ್ ಕಲೆಹಾಕಿ, ಪ್ರಥಮ ಓವರ್​ನಲ್ಲಿ ಮೂರು ಬಾರಿ 20+ ರನ್​ ಬಾರಿಸಿದ ಐಪಿಎಲ್​ನ ಏಕೈಕ ಬ್ಯಾಟರ್ ಎಂಬ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ದೀಪಕ್ ಚಹರ್ ಎಸೆದ ಮೊದಲ ಓವರ್​ನಲ್ಲಿ 4, 6, 4, 0, 4, 4 ರನ್ ಬಾರಿಸಿದ್ದಾರೆ. ಈ ಮೂಲಕ 22 ರನ್ ಕಲೆಹಾಕಿ, ಪ್ರಥಮ ಓವರ್​ನಲ್ಲಿ ಮೂರು ಬಾರಿ 20+ ರನ್​ ಬಾರಿಸಿದ ಐಪಿಎಲ್​ನ ಏಕೈಕ ಬ್ಯಾಟರ್ ಎಂಬ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ