AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ವರ್ಷಗಳ ಹಳೆಯ ದಾಖಲೆ ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿ

India vs England 1st Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ 58 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 21, 2025 | 9:04 AM

Share
ಆಂಗ್ಲರ ನಾಡಿನಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi jaiswal)ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 58 ವರ್ಷಗಳ ಬಳಿಕ ಎಂಬುದು ವಿಶೇಷ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ಆಂಗ್ಲರ ನಾಡಿನಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi jaiswal)ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 58 ವರ್ಷಗಳ ಬಳಿಕ ಎಂಬುದು ವಿಶೇಷ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

1 / 5
ಈ ಪಂದ್ಯದಲ್ಲಿ 159 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 1 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ ಒಟ್ಟು 101 ರನ್ ಬಾರಿಸಿದ್ದಾರೆ. ಈ ಮೂಲಕ ಹೆಡಿಂಗ್ಲೆ ಮೈದಾನದಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ 159 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 1 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ ಒಟ್ಟು 101 ರನ್ ಬಾರಿಸಿದ್ದಾರೆ. ಈ ಮೂಲಕ ಹೆಡಿಂಗ್ಲೆ ಮೈದಾನದಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆಯಿದ್ದದ್ದು ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಫಾರೂಖ್ ಇಂಜಿನಿಯರ್ ಹೆಸರಿನಲ್ಲಿ. 1967 ರಲ್ಲಿ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ್ದ ಫಾರೂಖ್ ಇಂಜಿನಿಯರ್ 87 ರನ್ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆಯಿದ್ದದ್ದು ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಫಾರೂಖ್ ಇಂಜಿನಿಯರ್ ಹೆಸರಿನಲ್ಲಿ. 1967 ರಲ್ಲಿ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ್ದ ಫಾರೂಖ್ ಇಂಜಿನಿಯರ್ 87 ರನ್ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

3 / 5
ಅಷ್ಟೇ ಅಲ್ಲದೆ ಹೆಡಿಂಗ್ಲೆ ಮೈದಾನದಲ್ಲಿ ಮೂರಂಕಿ ರನ್​ಗಳಿಸಿದ ಭಾರತದ ಮೊದಲ ಆರಂಭಿಕ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ಈ ಮೈದಾನದಲ್ಲಿ ಸೆಂಚುರಿ ಬಾರಿಸಿದ ಟೀಮ್ ಇಂಡಿಯಾ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅದರಲ್ಲೂ 2002 ರಲ್ಲಿ ಈ ಮೈದಾನದಲ್ಲಿ ಸಚಿನ್ ತೆಂಡೂಲ್ಕರ್ ಶತಕ ಬಾರಿಸಿದ ಬಳಿಕ ಭಾರತದ ಯಾವುದೇ ಬ್ಯಾಟರ್ ಲೀಡ್ಸ್​ನಲ್ಲಿ ಮೂರಂಕಿ ರನ್​ಗಳ ಗಡಿದಾಟಿರಲಿಲ್ಲ. 

ಅಷ್ಟೇ ಅಲ್ಲದೆ ಹೆಡಿಂಗ್ಲೆ ಮೈದಾನದಲ್ಲಿ ಮೂರಂಕಿ ರನ್​ಗಳಿಸಿದ ಭಾರತದ ಮೊದಲ ಆರಂಭಿಕ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ಈ ಮೈದಾನದಲ್ಲಿ ಸೆಂಚುರಿ ಬಾರಿಸಿದ ಟೀಮ್ ಇಂಡಿಯಾ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅದರಲ್ಲೂ 2002 ರಲ್ಲಿ ಈ ಮೈದಾನದಲ್ಲಿ ಸಚಿನ್ ತೆಂಡೂಲ್ಕರ್ ಶತಕ ಬಾರಿಸಿದ ಬಳಿಕ ಭಾರತದ ಯಾವುದೇ ಬ್ಯಾಟರ್ ಲೀಡ್ಸ್​ನಲ್ಲಿ ಮೂರಂಕಿ ರನ್​ಗಳ ಗಡಿದಾಟಿರಲಿಲ್ಲ. 

4 / 5
ಇದೀಗ ಫಾರೂಖ್ ಇಂಜಿನಿಯರ್ ಅವರ 58 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ಯಶಸ್ವಿ ಜೈಸ್ವಾಲ್ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಭಾರತ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 359 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಶುಭ್​ಮನ್ ಗಿಲ್ (127) ಹಾಗೂ ರಿಷಭ್ ಪಂತ್ (65) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇದೀಗ ಫಾರೂಖ್ ಇಂಜಿನಿಯರ್ ಅವರ 58 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ಯಶಸ್ವಿ ಜೈಸ್ವಾಲ್ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಭಾರತ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 359 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಶುಭ್​ಮನ್ ಗಿಲ್ (127) ಹಾಗೂ ರಿಷಭ್ ಪಂತ್ (65) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

5 / 5
‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
ಪ್ರವಾಹದಲ್ಲಿ ಸಿಲುಕಿದ ಶಾಲಾ ವಾಹನ; ಮರ ಹತ್ತಿ ಅಳುತ್ತಿರುವ ಮಕ್ಕಳು
ಪ್ರವಾಹದಲ್ಲಿ ಸಿಲುಕಿದ ಶಾಲಾ ವಾಹನ; ಮರ ಹತ್ತಿ ಅಳುತ್ತಿರುವ ಮಕ್ಕಳು
7000 ಕೋಟಿ ಒಡೆಯ KGF ಬಾಬು ಬಳಿ ಯಾವೆಲ್ಲಾ ಕಾರುಗಳಿವೆ ನೋಡಿ
7000 ಕೋಟಿ ಒಡೆಯ KGF ಬಾಬು ಬಳಿ ಯಾವೆಲ್ಲಾ ಕಾರುಗಳಿವೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ
ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ