AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 10 ರನ್​… ಯಶಸ್ವಿ ಜೈಸ್ವಾಲ್ ಪಾಲಿಗೆ ದ್ರಾವಿಡ್ ದಾಖಲೆ ಜಸ್ಟ್​ ಮಿಸ್

Yashasvi Jaiswal: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 107 ಎಸೆತಗಳನ್ನು ಎದುರಿಸಿ 13 ಫೋರ್​ಗಳೊಂದಿಗೆ 87 ರನ್​ ಕಲೆಹಾಕಿದ್ದರು. ಆದರೆ ಶತಕದಂಚಿನಲ್ಲಿ ಎಡವಿದ ಯುವ ದಾಂಡಿಗ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಮುರಿಯುವ ಅವಕಾಶವನ್ನು ಕೈ ತಪ್ಪಿಸಿಕೊಂಡರು.

ಝಾಹಿರ್ ಯೂಸುಫ್
|

Updated on: Jul 03, 2025 | 2:54 PM

Share
ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಅಬ್ಬರಿಸಿದ್ದಾರೆ. ಹೆಡಿಂಗ್ಲೆ ಟೆಸ್ಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಜೈಸ್ವಾಲ್ ಎಡ್ಜ್​ಬಾಸ್ಟನ್​ನಲ್ಲಿ 87 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 13 ರನ್​ಗಳಿಂದ ಮತ್ತೊಂದು ಸೆಂಚುರಿ ಸಿಡಿಸುವ ಅವಕಾಶವನ್ನು ತಪ್ಪಿಸಿಕೊಂಡರು.

ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಅಬ್ಬರಿಸಿದ್ದಾರೆ. ಹೆಡಿಂಗ್ಲೆ ಟೆಸ್ಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಜೈಸ್ವಾಲ್ ಎಡ್ಜ್​ಬಾಸ್ಟನ್​ನಲ್ಲಿ 87 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 13 ರನ್​ಗಳಿಂದ ಮತ್ತೊಂದು ಸೆಂಚುರಿ ಸಿಡಿಸುವ ಅವಕಾಶವನ್ನು ತಪ್ಪಿಸಿಕೊಂಡರು.

1 / 5
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ದಾಖಲೆ ಮುರಿಯುವ ಅವಕಾಶವನ್ನು ಸಹ ಕೈ ಚೆಲ್ಲಿಕೊಂಡರು. ಅಂದರೆ ಇಂಗ್ಲೆಂಡ್ ವಿರುದ್ಧದ ಮೊದಲ ಇನಿಂಗ್ಸ್​ನಲ್ಲಿ 97 ರನ್​ಗಳಿಸಿದ್ದರೆ, ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಪಾಲಾಗುತ್ತಿತ್ತು.

ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ದಾಖಲೆ ಮುರಿಯುವ ಅವಕಾಶವನ್ನು ಸಹ ಕೈ ಚೆಲ್ಲಿಕೊಂಡರು. ಅಂದರೆ ಇಂಗ್ಲೆಂಡ್ ವಿರುದ್ಧದ ಮೊದಲ ಇನಿಂಗ್ಸ್​ನಲ್ಲಿ 97 ರನ್​ಗಳಿಸಿದ್ದರೆ, ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಪಾಲಾಗುತ್ತಿತ್ತು.

2 / 5
ಸದ್ಯ ಈ ದಾಖಲೆ ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಆಡಿದ ಮೊದಲ 40 ಇನಿಂಗ್ಸ್​ಗಳ ಮೂಲಕ ದ್ರಾವಿಡ್ 2000 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಸದ್ಯ ಈ ದಾಖಲೆ ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಆಡಿದ ಮೊದಲ 40 ಇನಿಂಗ್ಸ್​ಗಳ ಮೂಲಕ ದ್ರಾವಿಡ್ 2000 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

3 / 5
ಈ ದಾಖಲೆಯನ್ನು ಮುರಿಯಲು ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 97 ರನ್​ ಕಲೆಹಾಕಬೇಕಿತ್ತು. ಆದರೆ 87 ರನ್​ಗಳಿಸಿ ಔಟಾಗುವ ಮೂಲಕ ಜೈಸ್ವಾಲ್ ಅಗ್ರಸ್ಥಾನಕ್ಕೇರುವ ಅವಕಾಶವನ್ನು ತಪ್ಪಿಸಿಕೊಂಡಿದ್ದಾರೆ. ಇದಾಗ್ಯೂ ಮುಂದಿನ ಇನಿಂಗ್ಸ್​ನ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಬಹುದು.

ಈ ದಾಖಲೆಯನ್ನು ಮುರಿಯಲು ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 97 ರನ್​ ಕಲೆಹಾಕಬೇಕಿತ್ತು. ಆದರೆ 87 ರನ್​ಗಳಿಸಿ ಔಟಾಗುವ ಮೂಲಕ ಜೈಸ್ವಾಲ್ ಅಗ್ರಸ್ಥಾನಕ್ಕೇರುವ ಅವಕಾಶವನ್ನು ತಪ್ಪಿಸಿಕೊಂಡಿದ್ದಾರೆ. ಇದಾಗ್ಯೂ ಮುಂದಿನ ಇನಿಂಗ್ಸ್​ನ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಬಹುದು.

4 / 5
ಟೀಮ್ ಇಂಡಿಯಾ ಪರ ಈವರೆಗೆ 21 ಟೆಸ್ಟ್ ಪಂದ್ಯಗಳನ್ನಾಡಿರುವ ಯಶಸ್ವಿ ಜೈಸ್ವಾಲ್ 39 ಇನಿಂಗ್ಸ್​ಗಳ ಮೂಲಕ 1990 ರನ್ ಕಲೆಹಾಕಿದ್ದಾರೆ. ಮುಂದಿನ ಇನಿಂಗ್ಸ್​ನಲ್ಲಿ 10 ರನ್​ ಗಳಿಸಿದರೆ, ರಾಹುಲ್ ದ್ರಾವಿಡ್ ಹೆಸರಿನಲ್ಲಿರುವ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಗಳಿಸಿದ ದಾಖಲೆಯನ್ನು ಸರಿಗಟ್ಟಬಹುದು.

ಟೀಮ್ ಇಂಡಿಯಾ ಪರ ಈವರೆಗೆ 21 ಟೆಸ್ಟ್ ಪಂದ್ಯಗಳನ್ನಾಡಿರುವ ಯಶಸ್ವಿ ಜೈಸ್ವಾಲ್ 39 ಇನಿಂಗ್ಸ್​ಗಳ ಮೂಲಕ 1990 ರನ್ ಕಲೆಹಾಕಿದ್ದಾರೆ. ಮುಂದಿನ ಇನಿಂಗ್ಸ್​ನಲ್ಲಿ 10 ರನ್​ ಗಳಿಸಿದರೆ, ರಾಹುಲ್ ದ್ರಾವಿಡ್ ಹೆಸರಿನಲ್ಲಿರುವ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಗಳಿಸಿದ ದಾಖಲೆಯನ್ನು ಸರಿಗಟ್ಟಬಹುದು.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು