AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 10 ರನ್​… ಯಶಸ್ವಿ ಜೈಸ್ವಾಲ್ ಪಾಲಿಗೆ ದ್ರಾವಿಡ್ ದಾಖಲೆ ಜಸ್ಟ್​ ಮಿಸ್

Yashasvi Jaiswal: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 107 ಎಸೆತಗಳನ್ನು ಎದುರಿಸಿ 13 ಫೋರ್​ಗಳೊಂದಿಗೆ 87 ರನ್​ ಕಲೆಹಾಕಿದ್ದರು. ಆದರೆ ಶತಕದಂಚಿನಲ್ಲಿ ಎಡವಿದ ಯುವ ದಾಂಡಿಗ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಮುರಿಯುವ ಅವಕಾಶವನ್ನು ಕೈ ತಪ್ಪಿಸಿಕೊಂಡರು.

ಝಾಹಿರ್ ಯೂಸುಫ್
|

Updated on: Jul 03, 2025 | 2:54 PM

Share
ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಅಬ್ಬರಿಸಿದ್ದಾರೆ. ಹೆಡಿಂಗ್ಲೆ ಟೆಸ್ಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಜೈಸ್ವಾಲ್ ಎಡ್ಜ್​ಬಾಸ್ಟನ್​ನಲ್ಲಿ 87 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 13 ರನ್​ಗಳಿಂದ ಮತ್ತೊಂದು ಸೆಂಚುರಿ ಸಿಡಿಸುವ ಅವಕಾಶವನ್ನು ತಪ್ಪಿಸಿಕೊಂಡರು.

ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಅಬ್ಬರಿಸಿದ್ದಾರೆ. ಹೆಡಿಂಗ್ಲೆ ಟೆಸ್ಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಜೈಸ್ವಾಲ್ ಎಡ್ಜ್​ಬಾಸ್ಟನ್​ನಲ್ಲಿ 87 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 13 ರನ್​ಗಳಿಂದ ಮತ್ತೊಂದು ಸೆಂಚುರಿ ಸಿಡಿಸುವ ಅವಕಾಶವನ್ನು ತಪ್ಪಿಸಿಕೊಂಡರು.

1 / 5
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ದಾಖಲೆ ಮುರಿಯುವ ಅವಕಾಶವನ್ನು ಸಹ ಕೈ ಚೆಲ್ಲಿಕೊಂಡರು. ಅಂದರೆ ಇಂಗ್ಲೆಂಡ್ ವಿರುದ್ಧದ ಮೊದಲ ಇನಿಂಗ್ಸ್​ನಲ್ಲಿ 97 ರನ್​ಗಳಿಸಿದ್ದರೆ, ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಪಾಲಾಗುತ್ತಿತ್ತು.

ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ದಾಖಲೆ ಮುರಿಯುವ ಅವಕಾಶವನ್ನು ಸಹ ಕೈ ಚೆಲ್ಲಿಕೊಂಡರು. ಅಂದರೆ ಇಂಗ್ಲೆಂಡ್ ವಿರುದ್ಧದ ಮೊದಲ ಇನಿಂಗ್ಸ್​ನಲ್ಲಿ 97 ರನ್​ಗಳಿಸಿದ್ದರೆ, ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಪಾಲಾಗುತ್ತಿತ್ತು.

2 / 5
ಸದ್ಯ ಈ ದಾಖಲೆ ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಆಡಿದ ಮೊದಲ 40 ಇನಿಂಗ್ಸ್​ಗಳ ಮೂಲಕ ದ್ರಾವಿಡ್ 2000 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಸದ್ಯ ಈ ದಾಖಲೆ ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಆಡಿದ ಮೊದಲ 40 ಇನಿಂಗ್ಸ್​ಗಳ ಮೂಲಕ ದ್ರಾವಿಡ್ 2000 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

3 / 5
ಈ ದಾಖಲೆಯನ್ನು ಮುರಿಯಲು ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 97 ರನ್​ ಕಲೆಹಾಕಬೇಕಿತ್ತು. ಆದರೆ 87 ರನ್​ಗಳಿಸಿ ಔಟಾಗುವ ಮೂಲಕ ಜೈಸ್ವಾಲ್ ಅಗ್ರಸ್ಥಾನಕ್ಕೇರುವ ಅವಕಾಶವನ್ನು ತಪ್ಪಿಸಿಕೊಂಡಿದ್ದಾರೆ. ಇದಾಗ್ಯೂ ಮುಂದಿನ ಇನಿಂಗ್ಸ್​ನ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಬಹುದು.

ಈ ದಾಖಲೆಯನ್ನು ಮುರಿಯಲು ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 97 ರನ್​ ಕಲೆಹಾಕಬೇಕಿತ್ತು. ಆದರೆ 87 ರನ್​ಗಳಿಸಿ ಔಟಾಗುವ ಮೂಲಕ ಜೈಸ್ವಾಲ್ ಅಗ್ರಸ್ಥಾನಕ್ಕೇರುವ ಅವಕಾಶವನ್ನು ತಪ್ಪಿಸಿಕೊಂಡಿದ್ದಾರೆ. ಇದಾಗ್ಯೂ ಮುಂದಿನ ಇನಿಂಗ್ಸ್​ನ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಬಹುದು.

4 / 5
ಟೀಮ್ ಇಂಡಿಯಾ ಪರ ಈವರೆಗೆ 21 ಟೆಸ್ಟ್ ಪಂದ್ಯಗಳನ್ನಾಡಿರುವ ಯಶಸ್ವಿ ಜೈಸ್ವಾಲ್ 39 ಇನಿಂಗ್ಸ್​ಗಳ ಮೂಲಕ 1990 ರನ್ ಕಲೆಹಾಕಿದ್ದಾರೆ. ಮುಂದಿನ ಇನಿಂಗ್ಸ್​ನಲ್ಲಿ 10 ರನ್​ ಗಳಿಸಿದರೆ, ರಾಹುಲ್ ದ್ರಾವಿಡ್ ಹೆಸರಿನಲ್ಲಿರುವ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಗಳಿಸಿದ ದಾಖಲೆಯನ್ನು ಸರಿಗಟ್ಟಬಹುದು.

ಟೀಮ್ ಇಂಡಿಯಾ ಪರ ಈವರೆಗೆ 21 ಟೆಸ್ಟ್ ಪಂದ್ಯಗಳನ್ನಾಡಿರುವ ಯಶಸ್ವಿ ಜೈಸ್ವಾಲ್ 39 ಇನಿಂಗ್ಸ್​ಗಳ ಮೂಲಕ 1990 ರನ್ ಕಲೆಹಾಕಿದ್ದಾರೆ. ಮುಂದಿನ ಇನಿಂಗ್ಸ್​ನಲ್ಲಿ 10 ರನ್​ ಗಳಿಸಿದರೆ, ರಾಹುಲ್ ದ್ರಾವಿಡ್ ಹೆಸರಿನಲ್ಲಿರುವ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಗಳಿಸಿದ ದಾಖಲೆಯನ್ನು ಸರಿಗಟ್ಟಬಹುದು.

5 / 5
Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು