AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

Yashasvi Jaiswal health update: ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ವೇಳೆ ಅನಾರೋಗ್ಯಕ್ಕೀಡಾಗಿದ್ದ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತೀವ್ರ ಗ್ಯಾಸ್ಟ್ರೋಎಂಟರೈಟಿಸ್‌ನಿಂದ ಬಳಲಿದ್ದ ಜೈಸ್ವಾಲ್, ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದು, ಶೀಘ್ರದಲ್ಲೇ ಮೈದಾನಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಸದ್ಯಕ್ಕೆ ಟೆಸ್ಟ್ ಸರಣಿಗಳಿಲ್ಲದ ಕಾರಣ, ಐಪಿಎಲ್ ಮೂಲಕ ಅವರು ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಿದೆ.

ಪೃಥ್ವಿಶಂಕರ
|

Updated on: Dec 19, 2025 | 6:07 PM

Share
ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಜೈಸ್ವಾಲ್ ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಜೈಸ್ವಾಲ್ ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

1 / 5
ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿದ್ದ ಹರಿಯಾಣ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ಜೈಸ್ವಾಲ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ತಪಾಸಣೆಯ ಬಳಿಕ ಜೈಸ್ವಾಲ್ ಅವರಿಗೆ ತೀವ್ರವಾದ ಗ್ಯಾಸ್ಟ್ರೋಎಂಟರೈಟಿಸ್ ಇರುವುದು ಪತ್ತೆಯಾಯಿತು.

ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿದ್ದ ಹರಿಯಾಣ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ಜೈಸ್ವಾಲ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ತಪಾಸಣೆಯ ಬಳಿಕ ಜೈಸ್ವಾಲ್ ಅವರಿಗೆ ತೀವ್ರವಾದ ಗ್ಯಾಸ್ಟ್ರೋಎಂಟರೈಟಿಸ್ ಇರುವುದು ಪತ್ತೆಯಾಯಿತು.

2 / 5
ಹೀಗಾಗಿ ವೈದ್ಯರು ಯಶಸ್ವಿ ಜೈಸ್ವಾಲ್ ಅವರಿಗೆ ಸಂಪೂರ್ಣ ಫಿಟ್ ಆಗುವವರೆಗೆ ಕ್ರಿಕೆಟ್ ಆಡದಂತೆ ಮತ್ತು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಇದೀಗ ತಮ್ಮ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದ ಯಶಸ್ವಿ ಜೈಸ್ವಾಲ್, ಆಸ್ಪತ್ರೆಯಲ್ಲಿ ತಮಗೆ ದೊರೆತ ಸೌಲಭ್ಯಗಳು ಮತ್ತು ಚಿಕಿತ್ಸೆಯನ್ನು ಶ್ಲಾಘಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಮತ್ತು ತಮಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಹೀಗಾಗಿ ವೈದ್ಯರು ಯಶಸ್ವಿ ಜೈಸ್ವಾಲ್ ಅವರಿಗೆ ಸಂಪೂರ್ಣ ಫಿಟ್ ಆಗುವವರೆಗೆ ಕ್ರಿಕೆಟ್ ಆಡದಂತೆ ಮತ್ತು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಇದೀಗ ತಮ್ಮ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದ ಯಶಸ್ವಿ ಜೈಸ್ವಾಲ್, ಆಸ್ಪತ್ರೆಯಲ್ಲಿ ತಮಗೆ ದೊರೆತ ಸೌಲಭ್ಯಗಳು ಮತ್ತು ಚಿಕಿತ್ಸೆಯನ್ನು ಶ್ಲಾಘಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಮತ್ತು ತಮಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

3 / 5
ಇನ್ನು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಜೈಸ್ವಾಲ್ ಆಡಿದ ಮೂರು ಪಂದ್ಯಗಳಲ್ಲಿ 48.33 ಸರಾಸರಿ ಮತ್ತು 168.6 ಸ್ಟ್ರೈಕ್ ರೇಟ್‌ನಲ್ಲಿ 145 ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಮೂರು ಪಂದ್ಯಗಳಲ್ಲಿ 78 ರ ಸರಾಸರಿಯಲ್ಲಿ 156 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ತಮ್ಮ ಮೊದಲ ಏಕದಿನ ಶತಕವನ್ನೂ ಬಾರಿಸಿದ್ದರು.

ಇನ್ನು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಜೈಸ್ವಾಲ್ ಆಡಿದ ಮೂರು ಪಂದ್ಯಗಳಲ್ಲಿ 48.33 ಸರಾಸರಿ ಮತ್ತು 168.6 ಸ್ಟ್ರೈಕ್ ರೇಟ್‌ನಲ್ಲಿ 145 ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಮೂರು ಪಂದ್ಯಗಳಲ್ಲಿ 78 ರ ಸರಾಸರಿಯಲ್ಲಿ 156 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ತಮ್ಮ ಮೊದಲ ಏಕದಿನ ಶತಕವನ್ನೂ ಬಾರಿಸಿದ್ದರು.

4 / 5
ಈ ವರ್ಷ ಟೀಂ ಇಂಡಿಯಾ ಯಾವುದೇ ಟೆಸ್ಟ್ ಸರಣಿಯನ್ನು ಆಡದ ಕಾರಣ ಯಶಸ್ವಿ ಜೈಸ್ವಾಲ್ ಚೇತರಿಕೆಗೆ ಸಾಕಷ್ಟು ಸಮಯ ಸಿಗಲಿದೆ. ಭಾರತ ತಂಡ ಮುಂದಿನ ವರ್ಷ ಆಗಸ್ಟ್​ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಆ ಸರಣಿಯೊಂದಿಗೆ ಜೈಸ್ವಾಲ್ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅದಕ್ಕೂ ಮುನ್ನ ಅವರು ಐಪಿಎಲ್​ನಲ್ಲಿ ಮಿಂಚಲಿದ್ದಾರೆ.

ಈ ವರ್ಷ ಟೀಂ ಇಂಡಿಯಾ ಯಾವುದೇ ಟೆಸ್ಟ್ ಸರಣಿಯನ್ನು ಆಡದ ಕಾರಣ ಯಶಸ್ವಿ ಜೈಸ್ವಾಲ್ ಚೇತರಿಕೆಗೆ ಸಾಕಷ್ಟು ಸಮಯ ಸಿಗಲಿದೆ. ಭಾರತ ತಂಡ ಮುಂದಿನ ವರ್ಷ ಆಗಸ್ಟ್​ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಆ ಸರಣಿಯೊಂದಿಗೆ ಜೈಸ್ವಾಲ್ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅದಕ್ಕೂ ಮುನ್ನ ಅವರು ಐಪಿಎಲ್​ನಲ್ಲಿ ಮಿಂಚಲಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ