AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಜೈಸ್ವಾಲ್ ಬ್ಯಾಟ್​ನಿಂದ ಬರುತ್ತಾ ದ್ವಿಶತಕ?: ರೋಚಕತೆ ಸೃಷ್ಟಿಸಿದ ಇಂದಿನ ಎರಡನೇ ದಿನದಾಟ

India vs England Second Test: ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 336 ರನ್ ಕಲೆಹಾಕಿದೆ. ಯಶಸ್ವಿ ಜೈಸ್ವಾಲ್ ಅಜೇಯ 179 ರನ್ ಕಲೆಹಾಕಿ ದ್ವಿಶತಕದ ಅಂಚಿನಲ್ಲಿದ್ದು, ಇಂದಿನ ಎರಡನೇ ದಿನದಾಟದ ಮೇಲೆ ಎಲ್ಲರ ಕಣ್ಣಿದೆ. ಇವರ ಜೊತೆ ಆರ್. ಅಶ್ವಿನ್ (5) ಕ್ರೀಸ್​ನಲ್ಲಿದ್ದಾರೆ.

Vinay Bhat
|

Updated on: Feb 03, 2024 | 6:41 AM

Share
ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ. ಟಾಪ್ ಆರ್ಡರ್​ಗಳ ವೈಫಲ್ಯದ ನಡುವೆ ಟೊಂಕ ಕಟ್ಟಿ ಬ್ಯಾಟಿಂಗ್ ನಡೆಸುತ್ತಿರುವ ಯಶಸ್ವಿ ಜೈಸ್ವಾಲ್ ಭರವಸೆ ಮೂಡಿಸಿದ್ದಾರೆ.

ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ. ಟಾಪ್ ಆರ್ಡರ್​ಗಳ ವೈಫಲ್ಯದ ನಡುವೆ ಟೊಂಕ ಕಟ್ಟಿ ಬ್ಯಾಟಿಂಗ್ ನಡೆಸುತ್ತಿರುವ ಯಶಸ್ವಿ ಜೈಸ್ವಾಲ್ ಭರವಸೆ ಮೂಡಿಸಿದ್ದಾರೆ.

1 / 6
ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 336 ರನ್ ಕಲೆಹಾಕಿದೆ. ಯಶಸ್ವಿ ಜೈಸ್ವಾಲ್ ಅಜೇಯ 179 ರನ್ ಕಲೆಹಾಕಿ ದ್ವಿಶತಕದ ಅಂಚಿನಲ್ಲಿದ್ದು, ಇಂದಿನ ಎರಡನೇ ದಿನದಾಟದ ಮೇಲೆ ಎಲ್ಲರ ಕಣ್ಣಿದೆ. ಇವರ ಜೊತೆ ಆರ್. ಅಶ್ವಿನ್ (5) ಕ್ರೀಸ್​ನಲ್ಲಿದ್ದಾರೆ.

ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 336 ರನ್ ಕಲೆಹಾಕಿದೆ. ಯಶಸ್ವಿ ಜೈಸ್ವಾಲ್ ಅಜೇಯ 179 ರನ್ ಕಲೆಹಾಕಿ ದ್ವಿಶತಕದ ಅಂಚಿನಲ್ಲಿದ್ದು, ಇಂದಿನ ಎರಡನೇ ದಿನದಾಟದ ಮೇಲೆ ಎಲ್ಲರ ಕಣ್ಣಿದೆ. ಇವರ ಜೊತೆ ಆರ್. ಅಶ್ವಿನ್ (5) ಕ್ರೀಸ್​ನಲ್ಲಿದ್ದಾರೆ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಓಪನರ್​ಗಳಾಗಿ ಕಣಕ್ಕಿಳಿದ ಜೈಸ್ವಾಲ್ ಹಾಗೂ ರೋಹಿತ್ ಮೊದಲ ವಿಕೆಟ್​ಗೆ 40 ರನ್​ಗಳ ಜೊತೆಯಾಟ ಆಡಿದರು. ಚೆನ್ನಾಗಿಯೆ ಆಡುತ್ತಿದ್ದ ಹಿಟ್​ಮ್ಯಾನ್ 14 ರನ್ ಗಳಿಸಿ ಔಟಾದರೆ ಶುಭ್​ಮನ್ ಗಿಲ್ (34) ಆಟ ಹೆಚ್ಚುಹೊತ್ತು ನಡೆಯಲಿಲ್ಲ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಓಪನರ್​ಗಳಾಗಿ ಕಣಕ್ಕಿಳಿದ ಜೈಸ್ವಾಲ್ ಹಾಗೂ ರೋಹಿತ್ ಮೊದಲ ವಿಕೆಟ್​ಗೆ 40 ರನ್​ಗಳ ಜೊತೆಯಾಟ ಆಡಿದರು. ಚೆನ್ನಾಗಿಯೆ ಆಡುತ್ತಿದ್ದ ಹಿಟ್​ಮ್ಯಾನ್ 14 ರನ್ ಗಳಿಸಿ ಔಟಾದರೆ ಶುಭ್​ಮನ್ ಗಿಲ್ (34) ಆಟ ಹೆಚ್ಚುಹೊತ್ತು ನಡೆಯಲಿಲ್ಲ.

3 / 6
ಬಳಿಕ ಜೈಸ್ವಾಲ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ಆಡಿದರು. ಜೈಸ್ವಾಲ್ ಬಿರುಸಿನ ಆಟಕ್ಕೆ ಅಯ್ಯರ್ (27) ಉತ್ತಮ ಸಾಥ್ ನೀಡಿದರು. ಅಯ್ಯರ್ ನಿರ್ಗಮನದ ಬಳಿಕ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ ರಜತ್ ಪಟಿದಾರ್ 32 ರನ್ ಕಲೆಹಾಕಿ ದುರಾದೃಷ್ಟಕರ ರೀತಿಯಲ್ಲಿ ವಿಕೆಟ್ ಒಪ್ಪಿಸಿದರು.

ಬಳಿಕ ಜೈಸ್ವಾಲ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ಆಡಿದರು. ಜೈಸ್ವಾಲ್ ಬಿರುಸಿನ ಆಟಕ್ಕೆ ಅಯ್ಯರ್ (27) ಉತ್ತಮ ಸಾಥ್ ನೀಡಿದರು. ಅಯ್ಯರ್ ನಿರ್ಗಮನದ ಬಳಿಕ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ ರಜತ್ ಪಟಿದಾರ್ 32 ರನ್ ಕಲೆಹಾಕಿ ದುರಾದೃಷ್ಟಕರ ರೀತಿಯಲ್ಲಿ ವಿಕೆಟ್ ಒಪ್ಪಿಸಿದರು.

4 / 6
ನಂತರ ಬಂದ ಅಕ್ಷರ್ ಪಟೇಲ್ 27 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ವಿಕೆಟ್ ಕೀಪರ್ ಬ್ಯಾಟ್ಸನ್ ಶ್ರೀಕರ್ ಭರತ್ ಬೇಡದ ಶಾಟ್ ಆಡಿ 17 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸುತ್ತಿರುವ ಜೈಸ್ವಾಲ್ ದ್ವಿಶತಕದಂಚಿನಲ್ಲಿದ್ದು, 179 ರನ್ ಕಲೆಹಾಕಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ನಂತರ ಬಂದ ಅಕ್ಷರ್ ಪಟೇಲ್ 27 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ವಿಕೆಟ್ ಕೀಪರ್ ಬ್ಯಾಟ್ಸನ್ ಶ್ರೀಕರ್ ಭರತ್ ಬೇಡದ ಶಾಟ್ ಆಡಿ 17 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸುತ್ತಿರುವ ಜೈಸ್ವಾಲ್ ದ್ವಿಶತಕದಂಚಿನಲ್ಲಿದ್ದು, 179 ರನ್ ಕಲೆಹಾಕಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

5 / 6
ಇಂಗ್ಲೆಂಡ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಶೋಯೆಬ್ ಬಸೀರ್ ಹಾಗೂ ರೆಹಾನ್ ಅಹ್ಮದ್ ತಲಾ 2 ವಿಕೆಟ್ ಪಡೆದರೆ, ಅನುಭವಿ ಬೇಗಿ ಜೇಮ್ಸ್ ಅಂಡರ್ಸನ್ ಹಾಗೂ ಕಳೆದ ಪಂದ್ಯದ ಹೀರೋ ಟಾಮ್ ಹಾರ್ಟ್ಲಿ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇಂಗ್ಲೆಂಡ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಶೋಯೆಬ್ ಬಸೀರ್ ಹಾಗೂ ರೆಹಾನ್ ಅಹ್ಮದ್ ತಲಾ 2 ವಿಕೆಟ್ ಪಡೆದರೆ, ಅನುಭವಿ ಬೇಗಿ ಜೇಮ್ಸ್ ಅಂಡರ್ಸನ್ ಹಾಗೂ ಕಳೆದ ಪಂದ್ಯದ ಹೀರೋ ಟಾಮ್ ಹಾರ್ಟ್ಲಿ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!